ಕರಾವಳಿ

ದುರ್ಗದ ಕೋಟೆ ಏರಿದ ಮಂಗಳೂರು ಕಮಿಷನರ್| ಶಶಿಕುಮಾರ್ ಸಾಹಸಕ್ಕೆ ಅಭಿಮಾನಿಗಳು ಫಿದಾ

ಸಮಗ್ರ ನ್ಯೂಸ್: ಹಾಡು, ಡ್ಯಾನ್ಸ್‌ ಮಾಡೋ ಮೂಲಕ ಖಾಕಿ ತೊಟ್ಟರೂ ಸ್ವಲ್ಪ ಡಿಫರೆಂಟ್‌ ಆಗಿರುವ ಮಂಗಳೂರಿನ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಚಿತ್ರದುರ್ಗದ ಐತಿಹಾಸಿಕ ಏಳು ಸುತ್ತಿನ ಕೋಟೆ ಏರುವ ಮೂಲಕ ಸಾಹಸಕ್ಕೂ ಸೈ ಎಂದು ತೋರಿಸಿದ್ದಾರೆ. ಚಿತ್ರದುರ್ಗ ಕೋಟೆ ಎಂದರೆ ಥಟ್ಟನೆ ಎಲ್ಲರಿಗೂ ಮಂಕಿ ಮ್ಯಾನ್‌ ಎಂದೇ ಕರೆಸಿಕೊಳ್ಳುವ ಜ್ಯೋತಿರಾಜ್‌( ಕೋತಿರಾಜ್‌) ನೆನಪಾಗುತ್ತಾರೆ. ಕೋಟೆಯ ಗೋಡೆ, ಬಂಡೆಗಳನ್ನೆಲ್ಲ ಸರಸರನೇ ಏರುವ ಇವರ ಸಾಹಸ ಮೆಚ್ಚದವರಿಲ್ಲ. ಈಗ ಜ್ಯೋತಿರಾಜ್‌ ಅವರಂತೆಯೇ ಚಿತ್ರದುರ್ಗ ಮೂಲದ ಐಪಿಎಸ್‌ ಅಧಿಕಾರಿ, ಸದ್ಯ ಮಂಗಳೂರಿನಲ್ಲಿ […]

ದುರ್ಗದ ಕೋಟೆ ಏರಿದ ಮಂಗಳೂರು ಕಮಿಷನರ್| ಶಶಿಕುಮಾರ್ ಸಾಹಸಕ್ಕೆ ಅಭಿಮಾನಿಗಳು ಫಿದಾ Read More »

ಸುಳ್ಯ: ಮರ್ಕಂಜದಲಲ್ಲಿ ಗಣಿಗಾರಿಕೆ ತಕ್ಷಣ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿಯ ಮುಂಭಾಗ ಧರಣಿ

ಸುಳ್ಯ: ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿಗಣಿಗಾರಿಕೆ ನಡೆಯುತ್ತಿದೆ ಇದನ್ನು ತಕ್ಷಣ ನಿಲ್ಲಿಸಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಯವರಿಗೆ ಸುಳ್ಯ ತಹಶೀಲ್ದಾರ್ ಅವರಿಗೆ ಮತ್ತು ಸಂಬಂಧಪಟ್ಟ ಇಲಾಖೆಯವರಿಗೆ ದಿನಾಂಕ 28/4/2022 ರಂದು ಮನವಿ ಪತ್ರ ಕೊಟ್ಟು ಮನವಿ ಮಾಡಲಾಯಿತು. ಮನವಿ ಮಾಡಿ ಇಷ್ಟು ದಿನ ಕಳೆದರು ಯಾವುದೇ ಒಂದು ಕ್ರಮ ಕೈಗೊಂಡಿಲ್ಲ ಇವತ್ತು ಸುಳ್ಯ ತಾಲೂಕಿನ ಎಲ್ಲಾ ಕಡೆ ಭೂಕಂಪದ ಅನುಭವ ಎರಡು ಬಾರಿ ಆಗಿದೆ ಇದೆಲ್ಲ ಆಗಲು ಕಾರಣ ಈ ಗಣಿಗಾರಿಕೆ ಈ ಗಣಿಗಾರಿಕೆಗೆ

ಸುಳ್ಯ: ಮರ್ಕಂಜದಲಲ್ಲಿ ಗಣಿಗಾರಿಕೆ ತಕ್ಷಣ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿಯ ಮುಂಭಾಗ ಧರಣಿ Read More »

ಸುಳ್ಯ: ಗಣಿಗಾರಿಕೆ ಸ್ಫೋಟಕಗಳಿಂದ ಭೂಮಿ ಕಂಪನ| ಮರ್ಕಂಜ ಗ್ರಾಮಸ್ಥರ ದೂರಿಗೆ ಸುಳ್ಯ ತಹಶಿಲ್ದಾರರಿಂದ ಸ್ಪಂದನೆ

ಸಮಗ್ರ ನ್ಯೂಸ್: ಮರ್ಕಂಜ ಗ್ರಾಮದ ವ್ಯಾಪ್ತಿಯಲ್ಲಿ ಇದೀಗ ಕೆಲವು ದಿನಗಳಿಂದ ಭೂಮಿ ಕಂಪನಗೊಳ್ಳುತ್ತಿದ್ದು, ಜೂ.28ರಂದು ಮುಂಜಾನೆ ಸುಮಾರು 7-45 ಸಮಯದಲ್ಲಿ ಭಾರೀ ಶಬ್ಧದೊಂದಿಗೆ ಭೂಮಿ ಕಂಪನಗೊಂಡಿದೆ. ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ಸುಮಾರು ಸಮಯದಿಂದ ಕರಿಗಲ್ಲು ಗಣಿಗಾರಿಕೆ ಕೂಡಾ ನಡೆದುಕೊಂಡು ಬರುತ್ತಿದೆ. ಈ ಗ್ರಾಮದಲ್ಲಿ ಬಂಡೆಕಲ್ಲುಗಳನ್ನು ಒಡೆಯುವ ಸಲುವಾಗಿ ಅಪಾಯಕಾರಿ ಸ್ಫೋಟಕಗಳನ್ನು ಬಳಸುತ್ತಿದ್ದಾರೆ. ಈ ಸ್ಫೋಟಕವನ್ನು ಉಪಯೋಗಿಸಿ ಬಂಡೆಕಲ್ಲುಗಳನ್ನು ಒಡೆಯುವಾಗ ಕಟ್ಟಡದೊಂದಿಗೆ ಭೂಮಿಯು ಕಂಪನಗೊಳ್ಳುತ್ತಿದ್ದು, ಸುತ್ತಮುತ್ತಲಿನ ನಾಗರಿಕರು ಭಯಭೀತರಾಗಿರುತ್ತಾರೆ. ಇದರಿಂದಾಗಿ ಮನೆಯಲ್ಲಿ ವಾಸವಿರಲು ಜನತೆ ಭಯಪಡುತ್ತಿದ್ದು, ಇಂದು

ಸುಳ್ಯ: ಗಣಿಗಾರಿಕೆ ಸ್ಫೋಟಕಗಳಿಂದ ಭೂಮಿ ಕಂಪನ| ಮರ್ಕಂಜ ಗ್ರಾಮಸ್ಥರ ದೂರಿಗೆ ಸುಳ್ಯ ತಹಶಿಲ್ದಾರರಿಂದ ಸ್ಪಂದನೆ Read More »

ಶೌಚಾಲಯ ಕಟ್ಟಡ ನಿರ್ಮಾಣ ಸ್ಥಳ ಬದಲಾವಣೆ ಆರೋಪ| ಅಂಬೇಡ್ಕರ್ ರಕ್ಷಣಾ ವೇದಿಕೆ ಪ್ರತಿಭಟನೆ

ಸಮಗ್ರ ನ್ಯೂಸ್: ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯ ತಾ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಸರಕಾರದಿಂದ ದಲಿತ ಸಮುದಾಯದ ಕಾಲೋನಿಗೆ ಬಂದಿರುವಂತಹ ಅನುದಾನ ಬೇರೆಡೆ ವರ್ಗಾಯಿಸಿ ನಮ್ಮ ಸಮುದಾಯದವರಿಗೆ

ಶೌಚಾಲಯ ಕಟ್ಟಡ ನಿರ್ಮಾಣ ಸ್ಥಳ ಬದಲಾವಣೆ ಆರೋಪ| ಅಂಬೇಡ್ಕರ್ ರಕ್ಷಣಾ ವೇದಿಕೆ ಪ್ರತಿಭಟನೆ Read More »

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅವಸ್ಥೆ ಕಂಡು ಹೋಂ ಮಿನಿಸ್ಟರ್ ಗರಂ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದು ಈ ವೇಳೆ ಪೊಲೀಸ್ ಠಾಣೆಗೆ ಟರ್ಪಾಲ್ ಹೊದಿಕೆ ಕಂಡು ಗೃಹ ಸಚಿವರು ಗರಂ ಆದರು. ಹೊಸ ಠಾಣೆ ಕಟ್ಟಡ ಕಾಮಗಾರಿ ವಿಳಂಬಕ್ಕೆ ಆರಗ ಜ್ಞಾನೇಂದ್ರ ಕೋಪಗೊಂಡು ನೂತನ ‌ಕಟ್ಟಡ ನಿರ್ಮಾಣ ಇಂಜಿನಿಯರ್ ಗೆ ಕರೆ ಮಾಡಿ ತರಾಟೆ ತೆಗೆದುಕೊಂಡರು. ಜ್ಞಾನೇಂದ್ರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು. 2017ರಲ್ಲೇ ಸರ್ಕಾರ ಹೊಸ ಠಾಣೆ ಕಟ್ಟಡ

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅವಸ್ಥೆ ಕಂಡು ಹೋಂ ಮಿನಿಸ್ಟರ್ ಗರಂ Read More »

“ನಳಿನ್ ಕುಮಾರ್ ಓರ್ವ ಬೆಸ್ಟ್ ಕಾಮಿಡಿಯನ್, ಡಾಲರ್, ಮರಳಿನ ರೇಟ್ ಕಡಿಮೆ ಮಾಡಿ ಸಕ್ಸಸ್ ಆಗಿದ್ದಾರೆ” – ರಮಾನಾಥ ರೈ

ಸಮಗ್ರ ನ್ಯೂಸ್: ಅಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ.‌ ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲಿಗೆ ಈಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ

“ನಳಿನ್ ಕುಮಾರ್ ಓರ್ವ ಬೆಸ್ಟ್ ಕಾಮಿಡಿಯನ್, ಡಾಲರ್, ಮರಳಿನ ರೇಟ್ ಕಡಿಮೆ ಮಾಡಿ ಸಕ್ಸಸ್ ಆಗಿದ್ದಾರೆ” – ರಮಾನಾಥ ರೈ Read More »

600 ವರ್ಷಗಳ ಹಳೆಯ ಅಶ್ವತ್ಥ ಮರ ಉರುಳಿ ಬಿದ್ದು ನಿಲ್ಲಿಸಿದ ಕಾರು ಜಖಂ

ಬಂಟ್ವಾಳ: ತಾಲೂಕಿನ ಸಜೀಪನಡುವಿನ ಲಕ್ಷ್ಮಣಕಟ್ಟೆ ಎಂಬಲ್ಲಿ ಸುಮಾರು 600 ವರ್ಷಗಳಷ್ಟು ಹಳೆಯ ಅಶ್ವತ್ಥ ಮರ ಉರುಳಿಬಿದ್ದಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. ಲುಕ್ಮಾನ್ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರನ್ನು ಮರದ ಬಳಿ ನಿಲ್ಲಿಸಿ ಕಾರಿನೊಳಗಿದ್ದ ತನ್ನ ಸಂಬಂಧಿ ಮಹಿಳೆಯರಿಬ್ಬರನ್ನು ಇಳಿಸಿ ತಾನೂ ಇಳಿಯಲು ಹೊರಟಾಗ ಈ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

600 ವರ್ಷಗಳ ಹಳೆಯ ಅಶ್ವತ್ಥ ಮರ ಉರುಳಿ ಬಿದ್ದು ನಿಲ್ಲಿಸಿದ ಕಾರು ಜಖಂ Read More »

ಕರಾಮುವಿಯಲ್ಲಿ ಏಕಕಾಲಕ್ಕೆ ದ್ವಿಪದವಿ ಪಡೆಯುವ ಅವಕಾಶ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಇದೇ ಪ್ರಥಮ ಬಾರಿಗೆ ಯುಜಿಸಿ ನಿಯಮಾವಳಿಯಂತೆ ಏಕಕಾಲಕ್ಕೆ ದ್ವಿಪದವಿ ಪಡೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ. ಎಸ್.ವಿದ್ಯಾಶಂಕರ್ ತಿಳಿಸಿದ್ದಾರೆ. ಮುಕ್ತ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಯಾವುದೇ ಪದವಿಯನ್ನು ಅಧ್ಯಯನ ಮಾಡುತ್ತಲೇ ಮತ್ತೊಂದು ಪದವಿ ಪಡೆಯುವಂತೆ ಯುಜಿಸಿ ಅನುಕೂಲ ಮಾಡಿ ಕೊಟ್ಟಿದೆ. ಬಿಎ, ಬಿ.ಕಾಂ, ಬಿಎಸ್ಸಿ ಪದವಿಯನ್ನು ಪ್ರತ್ಯೇಕವಾಗಿ ವ್ಯಾಸಂಗ ಮಾಡುತ್ತಿರುವವರು ಜೊತೆಯಲ್ಲೇ ಇನ್ನೊಂದು ಪದವಿಯನ್ನೂ ಅಧ್ಯಯನ ಮಾಡಬಹುದು. ಯಾವುದೇ ಸ್ನಾತಕೋತ್ತರ ಪದವಿ ಪಡೆಯುತ್ತಲೇ

ಕರಾಮುವಿಯಲ್ಲಿ ಏಕಕಾಲಕ್ಕೆ ದ್ವಿಪದವಿ ಪಡೆಯುವ ಅವಕಾಶ Read More »

ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟ ಆಡಳಿತ ಸಮಿತಿ ಸಾಮಾನ್ಯ ಸಭೆ

ಸಮಗ್ರ ನ್ಯೂಸ್: ಅರೆಭಾಷೆ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿ ಮತ್ತು ಭಾಷಾ ಬೆಳವಣಿಗೆಗೆ ಕಲಾವಿದರ ಕೊಡುಗೆ ಅಪಾರ, ಇತ್ತೀಚಿನ ದಿನಗಳಲ್ಲಿ ಅರೆಭಾಷೆ ರಂಗಭೂಮಿ ಮತ್ತು ಸಿನಿಮಾ ರಂಗ ಶ್ರೀಮಂತಿಕೆಯನ್ನು ಕಂಡು ಕೊಳ್ಳುತಿದ್ದು ಅರೆಭಾಷೆಯ ಗೌರವ ಮತ್ತು ಹಿರಿಮೆಯನ್ನು ಇಮ್ಮಡಿ ಗೊಳಿಸುತ್ತಿದೆ. ಅರೆಭಾಷೆ ಕಲಾವಿದರ ಒಗ್ಗಟ್ಟು ಮತ್ತು ಅರೆಭಾಷೆ ಕಲಾ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟ ಇದರ ಆಡಳಿತ ಮಂಡಳಿಯ ಸಾಮಾನ್ಯ ಸಭೆ ದಿನಾಂಕ 25 ಜೂನ್ 2022 ಶನಿವಾರ ಸಮಯ ಬೆಳಿಗ್ಗೆ 10

ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟ ಆಡಳಿತ ಸಮಿತಿ ಸಾಮಾನ್ಯ ಸಭೆ Read More »

ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ರವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪ್ರಶಂಸನಾ ಪತ್ರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಅಭಿಯೋಜಕ ಅಧಿಕಾರಿಗಳ ಸಮನ್ವಯ ಸಭೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ವನ್ನು ನೀಡಿ ಗೌರವಿಸಲಾಗಿದೆ. ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ರವರು ಜನಾರ್ಧನ್ ರವರಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಸರ್ಕಾರಿ ಅಭಿಯೋಜಕರು, ಸಹಾಯಕ

ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ರವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪ್ರಶಂಸನಾ ಪತ್ರ Read More »