ಕರಾವಳಿ

ಮಂಗಳೂರು: ಸಂಘಟನೆಗಳ ಮುತ್ತಿಗೆ ಸಾಧ್ಯತೆ ಹಿನ್ನಲೆ| ರೋಹಿತ್ ಚಕ್ರತೀರ್ಥರ ಸನ್ಮಾನ ಕಾರ್ಯಕ್ರಮ ದಿಢೀರ್ ರದ್ದು

ಸಮಗ್ರ ನ್ಯೂಸ್: ಚಿಂತಕ ಹಾಗೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥರಿಗೆ ಮಂಗಳೂರಿನಲ್ಲಿ ಜೂನ್ 25ರ ಶನಿವಾರದಂದು ಆಯೋಜಿಸಲಾಗಿದ್ದ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮದ ಸಂಘಟಕ ನಾಗೇಶ್ ಶೆಣೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು […]

ಮಂಗಳೂರು: ಸಂಘಟನೆಗಳ ಮುತ್ತಿಗೆ ಸಾಧ್ಯತೆ ಹಿನ್ನಲೆ| ರೋಹಿತ್ ಚಕ್ರತೀರ್ಥರ ಸನ್ಮಾನ ಕಾರ್ಯಕ್ರಮ ದಿಢೀರ್ ರದ್ದು Read More »

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ನಗರ ಹೊರವಲಯದ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಜೂ.23 ರ ಶುಕ್ರವಾರ ನಡೆದಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಶೋರೂಮ್‌ನಲ್ಲಿ ಹೊಗೆ ಕಾಣಿಸಿದೆ. ಶೋರೂಮ್‌ನ ಮೇಲೇ ಇದ್ದ ಮನೆಯವರು ಹೊಗೆಯಾಡುತ್ತಿರುವುದನ್ನು ಕಂಡ ಮನೆ ಮಂದಿ ಕೆಳಗಿಳಿದು ಬಂದಾಗ ಪರಿಶೀಲಿಸಿದಾಗ ಅಗ್ನಿ ಅವಘಡ ಗಮನಕ್ಕೆ ಬಂದಿದೆ. ಅಗ್ನಿ ಅವಘಡದಿಂದ ಹಲವು ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ Read More »

ಮಂಗಳೂರು: ಪೂರ್ತಿ ಜಲಸಮಾದಿಯಾದ ಪ್ರಿನ್ಸೆಸ್ ಮಿರಾಲ್

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ಬಟ್ಟಪ್ಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ತಳತಾಗಿ ನಿಂತಿದ್ದ ಪ್ರಿನ್ಸೆಸ್‌ ಮಿರಾಲ್‌ ಸರಕಿನ ಹಡಗು ಬಹುತೇಕ ಪೂರ್ತಿಯಾಗಿ ಮುಳುಗಿದೆ. ಸಮುದ್ರ ತೀರಾ ಪ್ರಕ್ಷುಬ್ಧ ಸ್ಥಿತಿಯಲ್ಲಿ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಹಡಗಿನ ರಂಧ್ರ ಮುಚ್ಚುವ ಯಾವುದೇ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿಲ್ಲ. ಹಡಗಿನ ಮಾಲಕರು ನಿಯೋಜಿಸಿರುವ ಸ್ಮಿತ್‌ ಸಾಲ್ವೇಜ್‌ ಏಜೆನ್ಸಿಯವರು ಮಂಗಳೂರಿಗೆ ಗುರುವಾರ ಆಗಮಿಸಿದ್ದು ಹಡಗಿನ ಪ್ರಾಥಮಿಕ ತಪಾಸಣೆ ನಡೆಸಿದ್ದಾರೆ. ಜಿಲ್ಲಾಡಳಿತದ ಪರವಾಗಿ ಮಂಗಳೂರು ಸಹಾಯಕ ಆಯುಕ್ತರು ಮತ್ತು ಕೋಸ್ಟ್‌ಗಾರ್ಡ್‌ ಡಿಐಜಿ ಏಜೆನ್ಸಿಯವರೊಂದಿಗೆ ಹಡಗು ಮುಳುಗಿರುವ ಜಾಗಕ್ಕೆ

ಮಂಗಳೂರು: ಪೂರ್ತಿ ಜಲಸಮಾದಿಯಾದ ಪ್ರಿನ್ಸೆಸ್ ಮಿರಾಲ್ Read More »

ಸುಳ್ಯ: ನ.ಪಂ. ಅನುದಾನದಲ್ಲಿ ನಿರ್ಮಿಸಿದ ಶೌಚಾಲಯ ಕಟ್ಟಡ ಧ್ವಂಸ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹ

ಸಮಗ್ರ ನ್ಯೂಸ್: ಸುಳ್ಯ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಆದಿಮೊಗೇರ್ಕಳ ದೈವಸ್ಥಾನದ ರೆಕಾರ್ಡ್ ಜಾಗದಲ್ಲಿ ನ.ಪಂ ನಿಂದ ನಿರ್ಮಿಸಿದ ಶೌಚಾಲಯವನ್ನು ದ್ವಂಸ ಗೊಳಿಸಿದವರ ಮೇಲೆ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹಿಸಿದೆ. ವೇದಿಕೆ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ‘ ನಗರಪಂಚಾಯಿತಿ ನವರು ದೇವಸ್ಥಾನಕ್ಕೆ ರೆಕಾರ್ಡ್ ಆಗಿ ಇದ್ದಂತ ಜಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಿದ್ದಾರೆ. ಸಾರ್ವಜನಿಕ ಶೌಚಾಲಯ ಸರಕಾರಿ ಜಾಗದಲ್ಲಿ ನಿರ್ಮಾಣ ಮಾಡಬೇಕು ಮತ್ತು ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ನಿರ್ಮಾಣ ಮಾಡಬೇಕು ಮತ್ತು ಸರಕಾರದಿಂದ ಶೌಚಾಲಯ ನಿರ್ಮಾಣಕ್ಕೆ

ಸುಳ್ಯ: ನ.ಪಂ. ಅನುದಾನದಲ್ಲಿ ನಿರ್ಮಿಸಿದ ಶೌಚಾಲಯ ಕಟ್ಟಡ ಧ್ವಂಸ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹ Read More »

ಸುಳ್ಯ: ಶ್ರೀ ಗಣಪತಿ ಕಲಾಕೇಂದ್ರದಲ್ಲಿ ಯೋಗ ದಿನಾಚರಣೆ

ಸಮಗ್ರ ನ್ಯೂಸ್: ಸುಳ್ಯ ಎ.ಪಿ.ಎಂ.ಸಿ.ವಾಣಿಜ್ಯ ಸಂಕೀರ್ಣ ದಲ್ಲಿರುವ ಶ್ರೀ ಗಣಪತಿ ಕಲಾ ಕೇಂದ್ರದಲ್ಲಿ ಡಿ-ಯುನೈಟೆಡ್ ಡಾನ್ಸ್ ಸ್ಟುಡಿಯೋ ಸುಳ್ಯ ಇದರ ಸಹಯೋಗದಲ್ಲಿ 8ನೇ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯು ಜೂ.21 ರಂದು ನಡೆಯಿತು. ಯೋಗ ಗುರು ಶರತ್ ಮರ್ಗಿಲಡ್ಕ ಮತ್ತು ಮೋನಿಶ್ ತಂಟೆಪ್ಪಾಡಿ ಯೋಗ ತರಬೇತಿ ನೀಡಿದರು. ಕಲಾ ಕೇಂದ್ರದ ಹಾಗೂ ಡಿ-ಯುನೈಟೆಡ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಯೋಗ ಗುರು ಶರತ್ ಮರ್ಗಿಲಡ್ಕ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.ಕಲಾ ಕೇಂದ್ರದ ವಿನೋದ್ ಅರಂಬೂರು,ಶ್ರೀಮತಿ ವಿಧ್ಯಾಶ್ರೀ ವಿನೋದ್,ಡಿ-ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋದ ಅಭಿಜಿತ್

ಸುಳ್ಯ: ಶ್ರೀ ಗಣಪತಿ ಕಲಾಕೇಂದ್ರದಲ್ಲಿ ಯೋಗ ದಿನಾಚರಣೆ Read More »

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್

ಸಮಗ್ರ ನ್ಯೂಸ್: ತಾಂತ್ರಿಕ ದೋಷದಿಂದ ಸರಕು ಸಾಗಾಟದ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗುವ ಭೀತಿ ಎದುರಿಸುತ್ತಿರುವ ಘಟನೆ ಮಂಗಳೂರಿನ 5.6 ನಾಟೆಕಲ್ ಮೈಲ್ ದೂರದ ಆಳ ಸಮುದ್ರದಲ್ಲಿ ನಡೆದಿದೆ. ಮಲೇಷ್ಯಾದಿಂ‌ದ ಲೆಬನಾಲ್‌ಗೆ ಸಾಗುತ್ತಿದ್ದ ಪ್ರಿನ್ಸೆಸ್ ಮಿರಾಲ್ ಎಂಬ ಹೆಸರಿನ ಹಡಗು ಇದಾಗಿದ್ದು, ಹಡಗಿನಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವಘಢ ಸಂಭವಿಸಿದೆ. ಹಡಗಿನಲ್ಲಿದ್ದ 15 ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ಈ ನೌಕೆ ಲೆಬನಾಲ್ ದೇಶದಿಂದ ಮಲೇಶ್ಯಾದಿಂದ ಉಕ್ಕಿನ ಕಾಯಿಲ್ ಗಳನ್ನು ಸಾಗಿಸುತಿತ್ತು. ಉಳ್ಳಾಲ ಕಡಲಕಿನಾರೆಯಿಂದ

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್ Read More »

ಬೆಳ್ತಂಗಡಿ: ಮುಸ್ಲಿಂಮರ ಮತ ಬೇಡ ಎಂದಿದ್ದ ಶಾಸಕ ಹರೀಶ್ ಪೂಂಜಾರಿಂದ ಅಲ್ಪಸಂಖ್ಯಾತ ಸಮಾವೇಶ

ಸಮಗ್ರ ನ್ಯೂಸ್: ತನಗೆ ಗೆಲ್ಲಲು ಮುಸ್ಲಿಮರ ಮತ ಬೇಡ, ಕೇವಲ ಹಿಂದೂ ಮತಗಳಷ್ಟೇ ಸಾಕು ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಇಂದು ಅಲ್ಪಸಂಖ್ಯಾತ ಸಮಾವೇಶ ನಡೆಯಲಿದೆ. ಈ ಸಮಾವೇಶ ಕುರಿತಂತೆ ಕಮ್ಯುನಿಸ್ಟ್ ಪಕ್ಷದ ಶೇಖರ್ ಲಾಯಿಲ ‘ ಮುಸ್ಲಿಂ ಮತಗಿಟ್ಟಿಸಲು ಹರೀಶ್ ಪೂಂಜಾ ಅಲ್ಪಸಂಖ್ಯಾತ ಸಮಾವೇಶ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಅಲ್ಲದೇ ಅವರು‌ ಶಾಸಕರ ಕಚೇರಿಗೆ ಶಾಲು, ಟೋಪಿ ರವಾನಿಸಿದ್ದಾರೆ. ಒಂದು ಸಮಾಜವನ್ನು ಓಲೈಕೆ ಮಾಡಲು ಧಾರ್ಮಿಕ ಸಭೆಗಳಲ್ಲಿ ಮುಸ್ಲಿಂ ಮತ ಬೇಡ ಎನ್ನುವ

ಬೆಳ್ತಂಗಡಿ: ಮುಸ್ಲಿಂಮರ ಮತ ಬೇಡ ಎಂದಿದ್ದ ಶಾಸಕ ಹರೀಶ್ ಪೂಂಜಾರಿಂದ ಅಲ್ಪಸಂಖ್ಯಾತ ಸಮಾವೇಶ Read More »

ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು| 3 ದಿನ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಉತ್ತಮ ಮಳೆಯಾಗಿದೆ. ದ.ಕ, ಉಡುಪಿ ಜಿಲ್ಲೆಯ ಅಲ್ಲಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ಕೆಲವೊಂದು ಸಣ್ಣಪುಟ್ಟ ಘಟನೆ ಹೊರತು ಪಡಿಸಿದರೆ ಉಳಿದಂತೆ ಉಭಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೊಷಿಸಿದೆ. ಜೂ. 22ರಿಂದ 24ರ ವರೆಗೆ

ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು| 3 ದಿನ ಆರೆಂಜ್ ಅಲರ್ಟ್ Read More »

ಸುಳ್ಯ: ಪೊಲೀಸ್ ಠಾಣೆಯಲ್ಲಿ ಯೋಗ ದಿನಾಚರಣೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಸುಳ್ಯ ಪೊಲೀಸ್ ಠಾಣೆಯಲ್ಲಿ ಯೋಗ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಈ ವೇಳೆ ಸುಳ್ಯ ಪೊಲೀಸ್ ಠಾಣೆ ನಿರೀಕ್ಷಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

ಸುಳ್ಯ: ಪೊಲೀಸ್ ಠಾಣೆಯಲ್ಲಿ ಯೋಗ ದಿನಾಚರಣೆ Read More »

ಮಂಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ; ಮೂವರು ಅಂದರ್

ಸಮಗ್ರ ನ್ಯೂಸ್: ಬೀಟ್ ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೊಲೀಸರ ಮೇಲೆ ತಂಡವೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳೂರು ನಗರದ ಚಿಲಿಂಬಿಗುಡ್ಡೆಯ ಉರ್ವದಲ್ಲಿ ರವಿವಾರ ತಡರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಚಿಲಿಂಬಿಗುಡ್ಡೆ ನಿವಾಸಿಗಳಾದ ದುರ್ಗೇಶ್, ಪ್ರಜ್ವಿತ್, ರಕ್ಷಿತ್ ಬಂಧಿತರು. ಆರೋಪಿಗಳು ಶ್ರೀರಾಮ ಸೇನೆಯ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ವೆಂಕಟೇಶ್ ಮತ್ತು ಧನಂಜಯ್ ಘಟನೆಯಲ್ಲಿ ಗಾಯಗೊಂಡವರು. ಉರ್ವ ಪೊಲೀಸ್ ಠಾಣೆಯ ಸಿಬ್ವಂದಿ ತಡರಾತ್ರಿ 1.30ರ ವೇಳೆಗೆ ಚಿಲಿಂಬಿಗುಡ್ಡೆ

ಮಂಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ; ಮೂವರು ಅಂದರ್ Read More »