ಕರಾವಳಿ

ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು

ಸಮಗ್ರ ನ್ಯೂಸ್: ಬಾಲಕಿಯೊಬ್ಬಳು ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು, ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮಹಮ್ಮದ್ ಇಂತಯಾಜ್ ಅವರ ಪುತ್ರಿ ಸೆಹರ್ ಇಂತಿಯಾಜ್ (15) ಮೃತಪಟ್ಟ ಬಾಲಕಿ. ಮನೆಯ ಬಾಲ್ಕನಿಯ ಸೈಡ್ ಕರ್ಟನ್ ಅನ್ನು ಕುರ್ಚಿಯ ಮೇಲೆ ಹತ್ತಿ ಸರಿಪಡಿಸುವಾಗ ಆಯತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನಳಾಗಿದ್ದಳು. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಗಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈಕೆ ಬಿಜೈ ಲೂರ್ಡ್ಸ್ ಸೆಂಟ್ರಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು Read More »

ಬೆಳ್ತಂಗಡಿ: ಶಿಕ್ಷಕಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತ್ಯು

ಬೆಳ್ತಂಗಡಿ: ತಾಲೂಕಿನ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟ ಘಟನೆ ಜೂ. 13ರಂದು ನಡೆದಿದೆ. ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ, ಭಾರತಿ ಎಸ್‌. (42) ಮೃತರು. ಇವರು ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದಾಗ ಹೃದಯಾಘಾತ ಕ್ಕೊಳಗಾಗಿದ್ದರು. ತತ್‌ಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೇಲಂತಬೆಟ್ಟು ಕಾಲೇಜಿನ ಉಪನ್ಯಾಸಕ ಡಾ| ಕುಶಾಲಪ್ಪ ಎಸ್‌. ಅವರ ಪತ್ನಿಯಾಗಿರುವ ಭಾರತಿ ಅವರು ಕಳೆದ 8 ವರ್ಷಗಳಿಂದ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲ

ಬೆಳ್ತಂಗಡಿ: ಶಿಕ್ಷಕಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತ್ಯು Read More »

ಸುಳ್ಯ : ಮಹಿಯೊಬ್ಬರ ಮನೆ ಬೀಳುವ ಹಂತಕ್ಕೆ

ಅಧಿಕಾರಿಗಳ ನಿರ್ಲಕ್ಷ್ಯ, ಅಂಬೇಡ್ಕರ್ ರಕ್ಷಣಾ ವೇದಿಕೆ ಹೋರಾಟದ ಎಚ್ಚರಿಕೆ ಆಲೆಟ್ಟಿ ಗ್ರಾಮದ ಬಡ ದಲಿತ ಮಹಿಯೊಬ್ಬರು ಸರಕಾರದ ಸವಲತ್ತಿಗಾಗಿ ಅಲೆದಾಡಿದಾಡಿದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಬೀಳುವ ಸ್ಥಿತಿಯಲ್ಲಿರುವ ಮನೆಯಲ್ಲಿಯೇ ಜೀವನ ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಲೆಟ್ಟಿ ಗ್ರಾಮದ ಮೊರಂಗಲ್ಲು ದಲಿತ ಮಹಿಳೆ ಭಾಗೀರಥಿ ಎಂಬವರು ಸುಮಾರು 40 ವರ್ಷಗಳಿಂದ ಸರ್ವೇ ನಂಬರ್ 121 ರಲ್ಲಿ ಸಣ್ಣದೊಂದು ಮನೆಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಈ ಜಾಗಕ್ಕೆ 94ಸಿಗೆ ಅರ್ಜಿ ಕೊಟ್ಟು ಹಲವು ವರ್ಷಗಳಾದರೂ ಅವರಿಗೆ ಇದುವರೆಗೂ ಹಕ್ಕು

ಸುಳ್ಯ : ಮಹಿಯೊಬ್ಬರ ಮನೆ ಬೀಳುವ ಹಂತಕ್ಕೆ Read More »

ಮಂಗಳೂರು: ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಕಳವು

ಮಂಗಳೂರು: ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್‌ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟೇಟ್‌ಬ್ಯಾಂಕ್ ಬಸ್‌ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್‌ ಇದಾಗಿದ್ದು, ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ ಮತ್ತು ನಿರ್ವಾಹಕ ಊಟಕ್ಕಾಗಿ ಹೊರಗೆ ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬಸ್‌ನೊಳಗೆ ಆಗಮಿಸಿ ಬಸ್‌ನಲ್ಲಿ ಕಂಡಕ್ಟರ್ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಹಣವನ್ನು ಕದ್ದಿದ್ದಾನೆ. ಈ ವೇಳೆ ಯಾವುದೇ ಪ್ರಯಾಣಿಕರು ಬಸ್‌ನಲ್ಲಿ ಇರಲಿಲ್ಲ. ಬಸ್‌ನಿಂದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಮಂಗಳೂರು: ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಕಳವು Read More »

ನೆಲ್ಯಾಡಿ: ಟ್ರಾವೆಲ್ಲರ್ ಮೇಲೆ ಉರುಳಿದ ಮರ| ವಾಹನ ಜಖಂ

ಸಮಗ್ರ ನ್ಯೂಸ್: ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ: ಟ್ರಾವೆಲ್ಲರ್ ಮೇಲೆ ಉರುಳಿದ ಮರ| ವಾಹನ ಜಖಂ Read More »

ಗುಂಡ್ಯ: ಬಸ್ ಮೇಲೆ ಬಿದ್ದ ಮರ; ಅದೃಷ್ಟವಶಾತ್ ತಪ್ಪಿದ ಅಪಾಯ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಮೇಲೆ ಮರವೊಂದು ಉರುಳಿಬಿದ್ದ ಘಟನೆ ಗುಂಡ್ಯ – ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ಅನಿಲ ಬಳಿ ನಡೆದಿದೆ. ಅದೃಷ್ಟವಶಾತ್ ಸಂಭಾವ್ಯ ಅಪಾಯ ತಪ್ಪಿದ್ದು, ಪ್ರಯಾಣಿಕರು ಬಚಾವಾಗಿದ್ದಾರೆ. ಈ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗಾಳಿ ಕಾರಣದಿಂದ ಈ ಘಟನೆ ಸಂಭವಿಸಿದೆ. ಅಪಾಯಕಾರಿ ಮರಗಳನ್ನು ತೆರವುಗೊಳಿಸದ ಅರಣ್ಯ ಇಲಾಖೆಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು

ಗುಂಡ್ಯ: ಬಸ್ ಮೇಲೆ ಬಿದ್ದ ಮರ; ಅದೃಷ್ಟವಶಾತ್ ತಪ್ಪಿದ ಅಪಾಯ Read More »

ಮಂಗಳೂರು: ವಿವಿ ಕಾಲೇಜಿನಲ್ಲಿ ಗುಂಪು ಘರ್ಷಣೆ ಪ್ರಕರಣ| 6 ವಿದ್ಯಾರ್ಥಿಗಳ ಮೇಲೆ ದೂರು ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಬಗೆಹರಿಯುವ ಮೊದಲೇ ಇನ್ನೊಂದು ವಿವಾದ ಶುರುವಾಗಿದೆ. ನಿನ್ನೆ ಸಾವರ್ಕರ್‌ ಫೋಟೋ ವಿವಾದ ಸಂಬಂಧಿಸಿದ ಜಗಳವಾಡಿಕೊಂಡ ಮಂಗಳೂರು ವಿಶ್ವವಿದ್ಯಾಲಯ 6 ವಿದ್ಯಾರ್ಥಿಗಳ ಮೇಲೆ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರ್ಕಝ್‌, ಅಬೂಬುಕ್ಕರ್‌ ಸಿದ್ದಿಕ್‌, ಮಹಮ್ಮದ್‌ ಅಫಾಜ್‌,ಪ್ರಜನ್‌, ಸ್ವಸ್ತಿಕ್ ಮತ್ತು ಗುರುಕಿರಣ್‌ ಎಂದು ಗುರುತಿಸಲಾಗಿದೆ. ಕಾಲೇಜಿನ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲಿ ಸಾವರ್ಕರ್‌ ಫೋಟೊ ಹಾಕಿದ್ದು, ಬಳಿಕ ತೆರವುಗೊಳಿಸಲಾಗಿದೆ. ಕಾಲೇಜಿನ ಕಾಮರ್ಸ್‌ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು

ಮಂಗಳೂರು: ವಿವಿ ಕಾಲೇಜಿನಲ್ಲಿ ಗುಂಪು ಘರ್ಷಣೆ ಪ್ರಕರಣ| 6 ವಿದ್ಯಾರ್ಥಿಗಳ ಮೇಲೆ ದೂರು ದಾಖಲಿಸಿದ ಪೊಲೀಸರು Read More »

ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು|

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ. ಕೊಲೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಖದೀಮರ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿ ಬಂಧಿಸಿದೆ. ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಬಂಧಿತರು. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಲ್ಕಿಯ ಗ್ಲೋಬಲ್ ಹೆರಿಟೇಜ್ ಲೇಔಟ್​ಗೆ ಹೋದಾಗ ಘಟನೆ ನಡೆದಿದೆ. ಆರೋಪಿಗಳನ್ನ ಬಂಧಿಸಲು ಮುಂದಾದ ಪೊಲೀಸರ

ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು| Read More »

ಸಾವರ್ಕರ್ ಫೋಟೋ ತೆರವು ವಿಚಾರ| ಮಂಗಳೂರು ವಿವಿ ಕಾಲೇಜಿನಲ್ಲಿ ಇತ್ತಂಡಗಳ ನಡುವೆ ಘರ್ಷಣೆ|

ಸಮಗ್ರ ನ್ಯೂಸ್: ತರಗತಿಯಲ್ಲಿ ಸಾವರ್ಕರ್‌ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಲಭ್ಯ ಮಾಹಿತಿಯಂತೆ ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದನ್ನು ಆಕ್ಷೇಪಿಸಿದ್ದಾರೆ. ಇಂದು ಈ ವಿಚಾರವಾಗಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದೆ.

ಸಾವರ್ಕರ್ ಫೋಟೋ ತೆರವು ವಿಚಾರ| ಮಂಗಳೂರು ವಿವಿ ಕಾಲೇಜಿನಲ್ಲಿ ಇತ್ತಂಡಗಳ ನಡುವೆ ಘರ್ಷಣೆ| Read More »

ಸುರತ್ಕಲ್: ಕೆನರಾ ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಬ್ಯಾಂಕ್ ಗ್ರಾಹಕಿಯಿಂದ ಬ್ಯಾಂಕ್ ಎದುರು ಗಲಾಟೆ

ಸಮಗ್ರ ನ್ಯೂಸ್: ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಗ್ರಾಹಕಿಯೊಬ್ಬರು ಬ್ಯಾಂಕ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುರತ್ಕಲ್ ನ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ಬ್ಯಾಂಕ್ ಸಿಬ್ಬಂದಿ ಗ್ರಾಹಕರನ್ನು ಸತಾಯಿಸಿ ನಂತರ ಕೆಲಸ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ಬ್ಯಾಂಕ್ ಗೆ ಕಲ್ಲೆಸೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ನೂರಾರು ಜನ ಜಮಾಯಿಸಿದ್ದು, ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬ್ಯಾಂಕ್ ಅಧಿಕಾರಿಗಳು ಸಮಜಾಯಿಷಿ ನೀಡಿದರೂ ಗ್ರಾಹಕರು ಒಪ್ಪದೆ ಪ್ರತಿಭಟನೆ ನಡೆಸಿದರು.

ಸುರತ್ಕಲ್: ಕೆನರಾ ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಬ್ಯಾಂಕ್ ಗ್ರಾಹಕಿಯಿಂದ ಬ್ಯಾಂಕ್ ಎದುರು ಗಲಾಟೆ Read More »