ಕರಾವಳಿ

ಪ್ರತೀಬಾರಿಯೂ ಕಾಂಗ್ರೆಸ್ ಮಾತ್ರವೇ ಯಾಕೆ ಬೆಂಬಲಿಸಬೇಕು? ಜೆಡಿಎಸ್ ಗೆ ಸಿದ್ದರಾಮಯ್ಯ ಪ್ರಶ್ನೆ

ಸಮಗ್ರ ನ್ಯೂಸ್: ಕೋಮುವಾದಿ ಪಕ್ಷವನ್ನು ಸೋಲಿಸುವ ಬದ್ಧತೆ ಇದ್ದರೆ ಜೆಡಿಎಸ್ ಅಭ್ಯರ್ಥಿ ನಿವೃತ್ತಗೊಳಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಬಾರಿ ಕಾಂಗ್ರೆಸ್ ಪಕ್ಷವೇ ಏಕೆ ಬೆಂಬಲ ನೀಡಬೇಕು. ಜೆಡಿಎಸ್‍ನವರು ಕಣಕ್ಕಿಳಿಸಲಾಗಿರುವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಬೆಂಬಲ ನೀಡಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಏಕೆ ಸಹಕರಿಸಬಾರದು ಎಂದು ಪ್ರಶ್ನಿಸಿದರು. ಈ ಮೊದಲು ಕಾಂಗ್ರೆಸ್ ಬೆಂಬಲದಿಂದ ದೇವೇಗೌಡರು ಪ್ರಧಾನಿಯಾಗಿದ್ದರು. ಜೆಡಿಎಸ್‍ನಲ್ಲಿ 37 ಶಾಸಕರಿದ್ದರು. 80 ಶಾಸಕರಿದ್ದ ಕಾಂಗ್ರೆಸ್ ಪಕ್ಷ ಬೇಷರತ್ ಬೆಂಬಲ ನೀಡಿ […]

ಪ್ರತೀಬಾರಿಯೂ ಕಾಂಗ್ರೆಸ್ ಮಾತ್ರವೇ ಯಾಕೆ ಬೆಂಬಲಿಸಬೇಕು? ಜೆಡಿಎಸ್ ಗೆ ಸಿದ್ದರಾಮಯ್ಯ ಪ್ರಶ್ನೆ Read More »

ತಮಿಳುನಾಡಿನಲ್ಲಿ ಅರಳಿತೇ ಕಮಲ!? ಎಡಿಟ್ ಮಾಡಿ‌ ಮಾನ ಕಳೆದುಕೊಂಡ ಬಿಜೆಪಿ

ಸಮಗ್ರ ನ್ಯೂಸ್: ಕೆಲವು ಯುವಕರು ವಿದ್ಯುತ್ ಕಂಬಗಳ ಮೇಲೆ ಬಿಜೆಪಿ ಧ್ವಜಗಳನ್ನು ಹಾಕುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ತಮಿಳುನಾಡಿನ ಚಿತ್ರ ಎಂದು ಪ್ರತಿಪಾದಿಸಿ ಹಂಚಲಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುತ್ತಿದೆ ಎಂಬರ್ಥದ ಹಲವಾರು ಪೋಸ್ಟ್‌ ಗಳು ಈ ಚಿತ್ರದೊಂದಿಗೆ ವೈರಲ್‌ ಆಗಿತ್ತು. ಆದರೆ, ಇದು ತಮಿಳುನಾಡಿನ ಚಿತ್ರ ಅಲ್ಲ ಎಂದು Altnews.in ವರದಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಈ ಚಿತ್ರವನ್ನು ಟ್ವೀಟ್ ಮಾಡಿ ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ

ತಮಿಳುನಾಡಿನಲ್ಲಿ ಅರಳಿತೇ ಕಮಲ!? ಎಡಿಟ್ ಮಾಡಿ‌ ಮಾನ ಕಳೆದುಕೊಂಡ ಬಿಜೆಪಿ Read More »

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಮತ್ತು ಕಾರ್ಯಕರ್ತನ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಮುಖಂಡ ಹಾಗೂ ಕಾರ್ಯಕರ್ತ ನಡು ಬೀದಿಯಲ್ಲಿ ರಾತ್ರಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ. ವೈಯುಕ್ತಿಕ ವಿಷಯಕ್ಕೆ ಇಬ್ಬರೂ ಅವಾಚ್ಯ ಶಬ್ದಗಳಿಂದ ಬೈಯ್ದು ಕೊನೆಗೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋವನ್ನು ಸ್ಥಳದಲ್ಲಿದ್ದವರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.ಸದ್ಯ ಈ ವೀಡಿಯೋ ವೈರಲ್‌ ಆಗಿದೆ.

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಮತ್ತು ಕಾರ್ಯಕರ್ತನ ನಡುವೆ ಮಾರಾಮಾರಿ Read More »

ಸುಳ್ಯ ಕಾಲೇಜು: ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ

ಸುಳ್ಯ: ಸ.ಪ್ರ.ದ. ಕಾಲೇಜು, ಸುಳ್ಯ ಇಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ““MATHS SHORT CUT TRICKS & TIPS FOR COMPETITIVE EXAMS” ” ಎಂಬ ವಿಷಯದ ಬಗ್ಗೆ ತರಬೇತಿ ಕರ‍್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಸತೀಶ್ ಕುಮಾರ್ ಕೆ. ಆರ್ ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುತ್ತೂರು ಮತ್ತು ಸುಳ್ಯ ಐಆರ್‌ಸಿಎಂಡಿ ಎಜ್ಯುಕೇಷನ್ ಸೆಂಟರ್‌ನ ಮುಖ್ಯಸ್ಥೆ ಶ್ರೀಮತಿ

ಸುಳ್ಯ ಕಾಲೇಜು: ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ Read More »

ಸುಳ್ಯ: ಅನುದಾನಿತ ಶಾಲೆಯಲ್ಲಿ ಅಕ್ಕಿ ಬದಲಾಯಿಸಿದ ಪ್ರಕರಣ| ಸ್ಪಷ್ಟನೆ ನೀಡಿದ ಶಾಲಾ ಮುಖ್ಯಸ್ಥರು

ಸಮಗ್ರ ನ್ಯೂಸ್: ಅನುದಾನಿತ ವಿದ್ಯಾಸಂಸ್ಥೆಗೆ ಸರ್ಕಾರದಿಂದ ಬಂದ ಬೆಳ್ತಿಗೆ ಅಕ್ಕಿಯನ್ನು ಕುಚ್ಚಲಕ್ಕಿ ಜೊತೆ ಬದಲಾವಣೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಅಕ್ಷರ ದಾಸೋಹ ಅಧಿಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೂ. 8 ರಂದು ಬಿ.ಇ.ಒ. ಎಸ್.ಪಿ.ಮಹಾದೇವ್ ಹಾಗೂ ಅಕ್ಷರ ದಾಸೋಹ ಅಧಿಕಾರಿ ಶ್ರೀಮತಿ ವೀಣಾರವರು ಶಾಲೆಗೆ ಬಂದು ಅಕ್ಕಿ ದಾಸ್ತಾನು ಪರಿಶೀಲಿಸಿ ಸರಿಯಿದೆಯೆಂದು ಮನವರಿಕೆ ಮಾಡಿಕೊಂಡು ಹೋದರೆಂದು ತಿಳಿದು ಬಂದಿದೆ. ಬೆಳ್ತಿಗೆ ಅಕ್ಕಿಯ ಅನ್ನ

ಸುಳ್ಯ: ಅನುದಾನಿತ ಶಾಲೆಯಲ್ಲಿ ಅಕ್ಕಿ ಬದಲಾಯಿಸಿದ ಪ್ರಕರಣ| ಸ್ಪಷ್ಟನೆ ನೀಡಿದ ಶಾಲಾ ಮುಖ್ಯಸ್ಥರು Read More »

ಶಾಂತಿನಗರ ಕ್ರೀಡಾಂಗಣಕ್ಕೆ ಟಾರ್ಪಲ್ ಹೊದಿಕೆ ಸ್ಥಳ ಪರಿಶೀಲನೆ ನಡೆಸಿದ ನಿರ್ಮಿತಿ ಕೇಂದ್ರದ ಅಧಿಕಾರಿ

ಸುಳ್ಯದ ಶಾಂತಿನಗರದಲ್ಲಿ ನಿರ್ಮಾಣ ಹಂತದಲ್ಲಿರುವ ತಾಲೂಕು ಕ್ರೀಡಾಂಗಣದ ಮಣ್ಣು ಕುಸಿಯುವ ಜಾಗಕ್ಕೆ ಟಾರ್ಪಲ್ ಹೊದಿಕೆಯನ್ನು ಹಾಕಲಾಗಿದ್ದು, ಇದರ ವೀಕ್ಷಣೆಯನ್ನು ಇಂದು ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ವೀಕ್ಷಣೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಸುಂದರ ಕೇನಾಜೆ, ಹಾಗೂ ನವನೀತ್ ಬೆಟ್ಟಂಪಾಡಿ ಸ್ಥಳ ಪರಿಶೀಲನೆಗೆ ಬಂದ ಅಧಿಕಾರಿ ಅವರೊಂದಿಗೆ ಕ್ರೀಡಾಂಗಣಕ್ಕೆ ಹೊದಿಸಿದ ಟಾರ್ಪಲ್ ಮೇಲ್ಭಾಗದಲ್ಲಿ ವಿಸ್ತೀರ್ಣ ಕಡಿಮೆಯಾಗಿದ್ದು ಇನ್ನು ಸ್ವಲ್ಪ ಹೆಚ್ಚಿಸುವಂತೆ ಕೇಳಿಕೊಂಡರು.ಕ್ರೀಡಾಂಗಣದ ಮಣ್ಣು ತುಂಬಿರುವ ಜಾಗದ ಮೇಲ್ಭಾಗದಲ್ಲಿ ಮಳೆ ನೀರು ನಿಲ್ಲುವ ಸಾಧ್ಯತೆಯಿದ್ದು ಆ

ಶಾಂತಿನಗರ ಕ್ರೀಡಾಂಗಣಕ್ಕೆ ಟಾರ್ಪಲ್ ಹೊದಿಕೆ ಸ್ಥಳ ಪರಿಶೀಲನೆ ನಡೆಸಿದ ನಿರ್ಮಿತಿ ಕೇಂದ್ರದ ಅಧಿಕಾರಿ Read More »

ಉಪ್ಪಿನಂಗಡಿ: ಹಿಜಾಬ್ ಬದಿಗಿಟ್ಟು ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು

ಸಮಗ್ರ ನ್ಯೂಸ್: ಹೈಕೋರ್ಟ್‌ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂ ಸಿ ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶಿಸಲು ಯತ್ನಿಸುತ್ತಿದ್ದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್‌ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ. ಸೋಮವಾರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರೂ ಅಮಾನತಾಗಿರುವ ವಿದ್ಯಾರ್ಥಿನಿಯರ ಪೈಕಿ ಹಲವರು ಮಂಗಳವಾರ ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಘಟನೆಯ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ

ಉಪ್ಪಿನಂಗಡಿ: ಹಿಜಾಬ್ ಬದಿಗಿಟ್ಟು ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು Read More »

ಅಕ್ಕಿ ಮೂಟೆ ಎತ್ತಲು‌ ವಿದ್ಯಾರ್ಥಿಗಳ ಬಳಸಿದ ಶಾಲಾ ಅಧ್ಯಾಪಕ ಹಾಗೂ ಸೊಸೈಟಿ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ದೂರು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅಡ್ಕಾರು ಅನುದಾನಿತ ಶಾಲೆಯೊಂದರ ಅಧ್ಯಾಪಕರು ಪಡಿತರ ಕೇಂದ್ರದಲ್ಲಿ ಶಾಲೆಯ ಅಕ್ಕಿಯನ್ನು ಬದಲಾಯಿಸಲು ವಿದ್ಯಾರ್ಥಿಗಳನ್ನು ಬಳಸಿರುವ ವಿಡಿಯೋ ಚಿತ್ರಣ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಇಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ದೂರು ನೀಡಿದ್ದು ದೂರಿನಲ್ಲಿ ವಿದ್ಯಾರ್ಥಿಗಳನ್ನು ಅಕ್ಕಿ ಚೀಲ ಎತ್ತಲು ಬಳಸಿದ ಅಧ್ಯಾಪಕರು ಮತ್ತು ಸೊಸೈಟಿ ಸಿಬ್ಬಂದಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಉಲ್ಲೇಖಿಸಲಾಗಿದೆ.

ಅಕ್ಕಿ ಮೂಟೆ ಎತ್ತಲು‌ ವಿದ್ಯಾರ್ಥಿಗಳ ಬಳಸಿದ ಶಾಲಾ ಅಧ್ಯಾಪಕ ಹಾಗೂ ಸೊಸೈಟಿ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ದೂರು Read More »

ಮಂಗಳೂರು: ವಿವಿ ಕಾಲೇಜಿನಲ್ಲಿ ಸಾವರ್ಕರ್ ಭಾವಚಿತ್ರ| ಪ್ರಾಂಶುಪಾಲರಿಂದ ಸೂಚನೆ ಮೇರೆಗೆ ತೆರವು

ಸಮಗ್ರ ನ್ಯೂಸ್: ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಘಟಕ ಕಾಲೇಜಿನ ತರಗತಿಯೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ಮಂಗಳವಾರ ಅಳವಡಿಸಲಾಗಿದೆ. ಇದನ್ನು ಕಾಲೇಜಿನ ಇತರ ವಿದ್ಯಾರ್ಥಿಗಳು ತಕ್ಷಣ ಪ್ರಾಂಶುಪಾಲೆಯ ಗಮನಕ್ಕೆ ತಂದಿದ್ದು, ಬಳಿಕ ಅದನ್ನು ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ತರಗತಿಯಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಮಧ್ಯೆಯೇ ಇಬ್ಬರು ವಿದ್ಯಾರ್ಥಿಗಳು ತರಗತಿಯೊಳಗೆ ಸಾವರ್ಕರ್ ಫೋಟೋವನ್ನು ಅಳವಡಿಸಿದ್ದರು

ಮಂಗಳೂರು: ವಿವಿ ಕಾಲೇಜಿನಲ್ಲಿ ಸಾವರ್ಕರ್ ಭಾವಚಿತ್ರ| ಪ್ರಾಂಶುಪಾಲರಿಂದ ಸೂಚನೆ ಮೇರೆಗೆ ತೆರವು Read More »

ಸುಳ್ಯ: ಅನುದಾನಿತ ಶಾಲೆಯಲ್ಲಿನ ಬಿಸಿಯೂಟದ‌ ಅಕ್ಕಿ ಪಡಿತರ ಕೇಂದ್ರಕ್ಕೆ ಶಿಪ್ಟ್!? ಜಾಲತಾಣಗಳಲ್ಲಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬಿಸಿಯೂಟಕ್ಕೆ ಎಂದು ತಂದಿರಿಸಿರುವ ಹಳೆಯ ಅಕ್ಕಿ ಮೂಟೆಗಳನ್ನು ಅನುದಾನಿತ ಶಾಲೆಯೊಂದರ ಅಧ್ಯಾಪಕರು ಸ್ಥಳೀಯವಾಗಿ ಇದ್ದ ಪಡಿತರ ಅಂಗಡಿಗೆ ವರ್ಗಾಯಿಸಿರುವ ಮತ್ತು ವರ್ಗಾಯಿಸುವ ಸಂದರ್ಭದಲ್ಲಿ ಅಕ್ಕಿ ಮೂಟೆಯನ್ನು ಎತ್ತಲು ವಿದ್ಯಾರ್ಥಿಗಳ ಬಳಕೆ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋ ವೈರಲ್ ಮಾಡಿರುವವರು ಅಡ್ಕಾರು ಪಡಿತರ ಕೇಂದ್ರದಲ್ಲಿ ಶಾಲೆಯಲ್ಲಿ ಉಳಿದಿರುವ ಹುಳು ತುಂಬಿದ ಅಕ್ಕಿಯನ್ನು ಸಾರ್ವಜನಿಕರಿಗೆ ವಿತರಿಸಿ ಶಾಲೆಗೆ ಉತ್ತಮ ಅಕ್ಕಿಯನ್ನು ನೀಡಿ ಪಡಿತರಿಗೆ ಅನ್ಯಾಯವೆಸಗುತ್ತಿದ್ದಾರೆ ಎಂದು ಆರೋಪಿಸಿದ ಸಂದೇಶ

ಸುಳ್ಯ: ಅನುದಾನಿತ ಶಾಲೆಯಲ್ಲಿನ ಬಿಸಿಯೂಟದ‌ ಅಕ್ಕಿ ಪಡಿತರ ಕೇಂದ್ರಕ್ಕೆ ಶಿಪ್ಟ್!? ಜಾಲತಾಣಗಳಲ್ಲಿ ವಿಡಿಯೋ ವೈರಲ್ Read More »