ಕರಾವಳಿ

ಸುಳ್ಯ: ಅನುದಾನಿತ ಶಾಲೆಯಲ್ಲಿನ ಬಿಸಿಯೂಟದ‌ ಅಕ್ಕಿ ಪಡಿತರ ಕೇಂದ್ರಕ್ಕೆ ಶಿಪ್ಟ್!? ಜಾಲತಾಣಗಳಲ್ಲಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬಿಸಿಯೂಟಕ್ಕೆ ಎಂದು ತಂದಿರಿಸಿರುವ ಹಳೆಯ ಅಕ್ಕಿ ಮೂಟೆಗಳನ್ನು ಅನುದಾನಿತ ಶಾಲೆಯೊಂದರ ಅಧ್ಯಾಪಕರು ಸ್ಥಳೀಯವಾಗಿ ಇದ್ದ ಪಡಿತರ ಅಂಗಡಿಗೆ ವರ್ಗಾಯಿಸಿರುವ ಮತ್ತು ವರ್ಗಾಯಿಸುವ ಸಂದರ್ಭದಲ್ಲಿ ಅಕ್ಕಿ ಮೂಟೆಯನ್ನು ಎತ್ತಲು ವಿದ್ಯಾರ್ಥಿಗಳ ಬಳಕೆ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋ ವೈರಲ್ ಮಾಡಿರುವವರು ಅಡ್ಕಾರು ಪಡಿತರ ಕೇಂದ್ರದಲ್ಲಿ ಶಾಲೆಯಲ್ಲಿ ಉಳಿದಿರುವ ಹುಳು ತುಂಬಿದ ಅಕ್ಕಿಯನ್ನು ಸಾರ್ವಜನಿಕರಿಗೆ ವಿತರಿಸಿ ಶಾಲೆಗೆ ಉತ್ತಮ ಅಕ್ಕಿಯನ್ನು ನೀಡಿ ಪಡಿತರಿಗೆ ಅನ್ಯಾಯವೆಸಗುತ್ತಿದ್ದಾರೆ ಎಂದು ಆರೋಪಿಸಿದ ಸಂದೇಶ […]

ಸುಳ್ಯ: ಅನುದಾನಿತ ಶಾಲೆಯಲ್ಲಿನ ಬಿಸಿಯೂಟದ‌ ಅಕ್ಕಿ ಪಡಿತರ ಕೇಂದ್ರಕ್ಕೆ ಶಿಪ್ಟ್!? ಜಾಲತಾಣಗಳಲ್ಲಿ ವಿಡಿಯೋ ವೈರಲ್ Read More »

ಮಂಗಳೂರು: ನಿಲ್ಲದ ಹಿಜಾಬ್ ದಂಗಲ್| ಹಿಜಾಬ್ ಧರಿಸಿ ಬಂದ 27 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿ ನಿರ್ಬಂಧ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಕೆಲದಿನಗಳಿಂದ ಹಿಜಾಬ್ ವಿವಾದ ಶುರುವಾಗಿದ್ದು, ಮಂಗಳೂರು ವಿವಿ ಘಟಕ ಕಾಲೇಜು ಮತ್ತು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಮವಾರವೂ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಿಜಾಬ್ ಧರಿಸಿ ಬಂದ ಹಲವು ವಿದ್ಯಾರ್ಥಿನಿಯರಿಗೆ ಈಗಾಗಲೇ ಅಮಾನತು ಮಾಡಲಾಗಿತ್ತು. ಇದೀಗ ಮತ್ತೆ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಮೂವರು ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ನೋಟಿಸ್ ನೀಡಿದ್ದಾರೆ. ಉಪ್ಪಿನಂಗಡಿ ಕಾಲೇಜಿನ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ತರಗತಿ ನಿರ್ಬಂಧಿಸಿ ಆದೇಶ

ಮಂಗಳೂರು: ನಿಲ್ಲದ ಹಿಜಾಬ್ ದಂಗಲ್| ಹಿಜಾಬ್ ಧರಿಸಿ ಬಂದ 27 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿ ನಿರ್ಬಂಧ Read More »

ಮಂಗಳೂರು: ಚಾರ್ಜಿಂಗ್ ಗೆ ಇರಿಸಿದ್ದ ಸ್ಕೂಟರ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಮಂಗಳೂರಿನಲ್ಲೂ ಚಾರ್ಚ್ ಗೆ ಇಟ್ಟಿದ್ದ ಎಲೆಕ್ಟಿಕ್ ಸ್ಕೂಟರ್ ಬೆಂಕಿಗಾಹುತಿಯಾಗಿದೆ. ನಗರದ ಬೋಂದೆಲ್ ಸಮೀಪದ ಕೆ.ಎಚ್. ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ಸ್ಕೂಟರ್ ಮಾಲಕ ಅದನ್ನು ಚಾರ್ಚ್ ಗೆ ಇಟ್ಟಿದ್ದರು, ಆದರೆ ಸ್ವಲ್ಪ ಸಮಯದಲ್ಲೇ ಸ್ಕೂಟರ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತತ್‌ಕ್ಷಣ ಸ್ಕೂಟರ್‌ ಸ್ಪೋಟಗೊಂಡಿದೆ. ಸ್ಕೂಟರ್‌ನ ಯಂತ್ರಗಳು, ಬಿಡಿಭಾಗಗಳು ಸೇರಿದಂತೆ ಸಂಪೂರ್ಣ ಸ್ಕೂಟರ್‌ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ

ಮಂಗಳೂರು: ಚಾರ್ಜಿಂಗ್ ಗೆ ಇರಿಸಿದ್ದ ಸ್ಕೂಟರ್ ಬೆಂಕಿಗಾಹುತಿ Read More »

ಬೆಳ್ತಂಗಡಿ : ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಬಿಡಿಸಲು ಹೋದವ ಗಂಭೀರ

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಾಗಿದ್ದ ವಿಚಾರ ತಿಳಿದು ಹೊರಗಿನ ವ್ಯಕ್ತಿಗಳು ಗಲಾಟೆ ಬಿಡಿಸಲು ಬಂದಾಗ ಅವರಿಗೂ ಹಲ್ಲೆ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಶಾಂತಯ್ಯ ಎಂಬ ವಿದ್ಯಾರ್ಥಿ ಮತ್ತು ಇನ್ನೊಂದು ಗುಂಪಿನ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ನಡೆದಿದ್ದು ಈ ವೇಳೆ ಗಲಾಟೆ ವಿಚಾರ ತಿಳಿದು ಬಿಡಿಸಲು ಬಂದ ಆಟೋ ಚಾಲಕರಿಬ್ಬರಿಗೆ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಹಲ್ಲೆ ಮಾಡಿ ಕೆಳಗೆ ಹಾಕಿ ಕಾಲಿನಿಂದ ಒದ್ದು ಗಂಭೀರ ಹಲ್ಲೆ ಮಾಡಲಾಗಿದೆ.

ಬೆಳ್ತಂಗಡಿ : ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಬಿಡಿಸಲು ಹೋದವ ಗಂಭೀರ Read More »

ಮಂಗಳೂರು : ಹಿಜಾಬ್ ಕುರಿತ ಸುಳ್ಳು ಪ್ರಕರಣ ದಾಖಲು ಆರೋಪಿಸಿ ಪೊಲೀಸರ ವಿರುದ್ದ ಪತ್ರಕರ್ತರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಹಿಜಾಬ್ ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಶನಿವಾರ ನಗರದ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ನಡೆಸಿದರು. ಎಸ್ಪಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪತ್ರಕರ್ತರು, ನ್ಯಾಯ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಋಷಿಕೇಶ್ ಸೋನಾವಣೆ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿದ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಹರೀಶ್ ರೈ,

ಮಂಗಳೂರು : ಹಿಜಾಬ್ ಕುರಿತ ಸುಳ್ಳು ಪ್ರಕರಣ ದಾಖಲು ಆರೋಪಿಸಿ ಪೊಲೀಸರ ವಿರುದ್ದ ಪತ್ರಕರ್ತರಿಂದ ಪ್ರತಿಭಟನೆ Read More »

ಕಾರ್ಕಳ: ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಏಳು ಮಂದಿಯ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ರಸ್ತೆಯ ಮನೆಯೊಂದರಲ್ಲಿ ಮೇ 30 ರಂದು ರಂದು ಹುಟ್ಟುಹಬ್ಬದ ಆಚರಣೆ ವೇಳೆ ತಲವಾರಿನಿಂದ ಕೇಕ್ ಕತ್ತರಿಸಿ ಮತ್ತು ಕೊಡಲಿಗಳನ್ನು ಇಟ್ಟುಕೊಂಡು ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪಡುಬಿದ್ರಿ ನಿವಾಸಿಗಳಾದ ರೌಡಿಶೀಟರ್ ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಮತ್ತು ಶರತ್ ಶೆಟ್ಟಿಯನ್ನು ಬಂಧಿಸಲಾಗಿದೆ. ಕಾಪು ಸಿಐ ಪ್ರಕಾಶ

ಕಾರ್ಕಳ: ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರು ಪೊಲೀಸ್ ವಶಕ್ಕೆ Read More »

ಪುತ್ತೂರು: ಹಿಜಾಬ್ ಧರಿಸಿ ಬಂದ ಮತ್ತೋರ್ವ ವಿದ್ಯಾರ್ಥಿನಿ ಅಮಾನತು

ಸಮಗ್ರ ನ್ಯೂಸ್: ಇಲ್ಲಿನ ಉಪ್ಪಿನಂಗಡಿ ಸರಕಾರಿ ಪ್ರ.ದ. ಕಾಲೇಜಿನಲ್ಲಿ ಶುಕ್ರವಾರ ಮತ್ತೆ ಹಿಜಾಬ್‌ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತುಗೊಳಿಸಲಾಗಿದೆ. ಕಾನೂನು ಉಲ್ಲಂಘನೆ ಪದೇಪದೆ ಇಲ್ಲಿ ನಡೆಯುತ್ತಿದ್ದು, ಈ ಹಿಂದಿನ ಪ್ರಾಂಶುಪಾಲರ ನಿರ್ಗಮನದ ಬಳಿಕ ಹೆಚ್ಚಿದೆ. ಶುಕ್ರವಾರ ತರಗತಿಯಲ್ಲಿ ಹಿಜಾಬ್‌ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶು ಪಾಲರು ವಾರದ ಮಟ್ಟಿಗೆ ಅಮಾನತು ಗೊಳಿಸಿದ್ದಾರೆ.

ಪುತ್ತೂರು: ಹಿಜಾಬ್ ಧರಿಸಿ ಬಂದ ಮತ್ತೋರ್ವ ವಿದ್ಯಾರ್ಥಿನಿ ಅಮಾನತು Read More »

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ‌ ಯತ್ನ ಪ್ರಕರಣ| ತಪ್ಪಿತಸ್ಥರ ವಿರುದ್ಧ ಕ್ರಮ – ಡಿಸಿ

ಸಮಗ್ರ ನ್ಯೂಸ್: ಪುತ್ತೂರು ಸಮೀಪದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದರು. ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಮತ್ತು ದುಷ್ಕರ್ಮಿಗಳನ್ನು ಬಂಧಿಸುಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು. ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ಪತ್ರಕರ್ತರನ್ನು

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ‌ ಯತ್ನ ಪ್ರಕರಣ| ತಪ್ಪಿತಸ್ಥರ ವಿರುದ್ಧ ಕ್ರಮ – ಡಿಸಿ Read More »

ಸುಳ್ಯ ನ.ಪಂಗೆ ಕಸ ವಿಲೇ’ವರಿ’| ಸುಳ್ಯದ ಕಸ ಸಾಗಾಟ ಮತ್ತೆ ಸುಳ್ಳಾಯ್ತೇ!?

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್‌ನ ಕಸದ ಸಮಸ್ಯೆ ರಾಜ್ಯದಾದ್ಯಂತ ಬಹುದೊಡ್ಡ ಸುದ್ದಿಯಾಗಿದ್ದು ಅದರ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಈ ವಿಚಾರ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪರಸ್ಪರ ವಾಗ್ವಾದ, ಕೆಸರೆರೆಚಾಟಕ್ಕೆ ಎಡೆಮಾಡಿ, ಸಾರ್ವಜನಿಕರು ನಗರ ಪಂಚಾಯತ್ ನ್ನು ನರಕ ಪಂಚಾಯತ್ ಎಂದು ಹೇಳುವ ಸ್ಥಿತಿಗೆ ಬಂದು ತಲುಪಿತ್ತು. ಈ ನಡುವೆ ಚಿತ್ರನಟ ಅನಿರುದ್ಧ್‌ರವರು ಸುಳ್ಯದ ಕಸದ ಸಮಸ್ಯೆಯ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದು ಆಡಳಿತ ಪಕ್ಷದ

ಸುಳ್ಯ ನ.ಪಂಗೆ ಕಸ ವಿಲೇ’ವರಿ’| ಸುಳ್ಯದ ಕಸ ಸಾಗಾಟ ಮತ್ತೆ ಸುಳ್ಳಾಯ್ತೇ!? Read More »

“ಹಿಜಾಬ್ ಧರಿಸಿದವರ ಅಮಾನತು ಮಾಡೋದಾದ್ರೆ ಕೇಸರಿ ಶಾಲು ಧಾರಕರ ಅಮಾನತು ಯಾಕಿಲ್ಲ? ಪತ್ರಕರ್ತರ ಮೇಲೆ ಹಲ್ಲೆ ನಡೆಸಿಲ್ಲ, ಹೆಣ್ಮಕ್ಕಳ ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿದ್ದೇವೆ”

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬುಧವಾರ ಹಿಜಾಬ್ ಧರಿಸಿ ಬಂದ 6 ಮಂದಿ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತು ಮಾಡಿದ್ದು, ಈ ವಿಚಾರವಾಗಿ ಒಂದು ಕೋಮಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಘಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಯೋರ್ವರ ಮೇಲೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದ್ದು, ಈ ವಿಚಾರವಾಗಿ ವಿಧ್ಯಾರ್ಥಿಗಳು ಸ್ಪಷ್ಟನೆ ನೀಡಿದ್ದಾರೆ. ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳ ವಿರುದ್ಧ ಯಾವುದೇ

“ಹಿಜಾಬ್ ಧರಿಸಿದವರ ಅಮಾನತು ಮಾಡೋದಾದ್ರೆ ಕೇಸರಿ ಶಾಲು ಧಾರಕರ ಅಮಾನತು ಯಾಕಿಲ್ಲ? ಪತ್ರಕರ್ತರ ಮೇಲೆ ಹಲ್ಲೆ ನಡೆಸಿಲ್ಲ, ಹೆಣ್ಮಕ್ಕಳ ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿದ್ದೇವೆ” Read More »