ಕರಾವಳಿ

ರಾಜ್ಯಸಭಾ ಚುನಾವಣೆ; ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಗೆ ಬಿಜೆಪಿ ಟಿಕೆಟ್

ಸಮಗ್ರ ನ್ಯೂಸ್: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೂ ಮೂರು ದಿನ ಬಾಕಿ ಇರುವಂತೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು […]

ರಾಜ್ಯಸಭಾ ಚುನಾವಣೆ; ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಗೆ ಬಿಜೆಪಿ ಟಿಕೆಟ್ Read More »

ಪುತ್ತೂರು: ತವರು ಮನೆಗೆ ಹೋದ ತಾಯಿ ಮಗು ನಾಪತ್ತೆ

ಸಮಗ್ರ ನ್ಯೂಸ್: ತವರು ಮನೆಗೆ ಹೋಗಿದ್ದ ಮಹಿಳೆಯೊಬ್ಬರು ತನ್ನ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪುಳಿತ್ತಡಿ ನಿವಾಸಿ ನೆಲ್ಯಾಡಿ ಅಲ್ತಾ ಎಂಬವರ ಪತ್ನಿ ಇರ್ಶಾನಾ (25) ಹಾಗೂ ಅವರ ಒಂದೂವರೆ ವರ್ಷದ ಮಗ ಮೊಹಮ್ಮದ್ ಆದಿಲ್ ನಾಪತ್ತೆಯಾಗಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ವಾರದ ಹಿಂದೆ ಇರ್ಶಾನಾ ಪುಳಿತ್ತಡಿಯಲ್ಲಿರುವ ತನ್ನ ತವರು ಮನೆಗೆ ಹೋಗಿದ್ದು, ಮದುವೆಗೆಂದು ಕೇರಳಕ್ಕೆ ತೆರಳಿದ್ದ ಆಕೆಯ ಪೋಷಕರು ಮೇ 20 ರಂದು ಮನೆಗೆ ಹಿಂದಿರುಗಿದಾಗ

ಪುತ್ತೂರು: ತವರು ಮನೆಗೆ ಹೋದ ತಾಯಿ ಮಗು ನಾಪತ್ತೆ Read More »

ಬೆಳ್ತಂಗಡಿ: ಬಚ್ಚಲು ಕೋಣೆಯಲ್ಲಿ ಅಡಗಿದ್ದ ಕಾಳಿಂಗ!!

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲ್ಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಬಳಿಯ ಬನತ್ತಕೋಡಿ ಎಂಬಲ್ಲಿ ಕಂಡುಬಂದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ಲೀಲಾವತಿಯವರ ಮನೆಯ ಬಚ್ಚಲು ಕೋಣೆಗೆ ನುಗ್ಗಿದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು‌ ಉರಗ ತಜ್ಞರಾದ ಪುತ್ತೂರಿನ ತೇಜಸ್ ಮತ್ತು ಪುನೀತ್ ರವರು ರಕ್ಷಣೆ ಮಾಡಿದ್ದು, ಕಾಡಿಗೆ ಬಿಟ್ಟ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ: ಬಚ್ಚಲು ಕೋಣೆಯಲ್ಲಿ ಅಡಗಿದ್ದ ಕಾಳಿಂಗ!! Read More »

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು| ಪ್ರವೇಶ ನಿರಾಕರಿಸಿದ ಪ್ರಾಂಶುಪಾಲೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೂ ಇಂದು ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದು, ಅವರನ್ನು ವಾಪಸ್​​ ಕಳುಹಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ವಿವಿ ಕಾಲೇಜಿನಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯ ನಿರ್ಣಯದಂತೆ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿತ್ತು. ಇದನ್ನು ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪಾಲಿಸಿದ್ದು,12 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಪಟ್ಟು ಹಿಡಿದಿದ್ದರು. ಆ ಬಳಿಕ ಸಭೆ

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು| ಪ್ರವೇಶ ನಿರಾಕರಿಸಿದ ಪ್ರಾಂಶುಪಾಲೆ Read More »

ಬಂಟ್ವಾಳ: ‘ಬಾವಿ ಕಾಣೆಯಾಗಿದೆ’ – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ

ಸಮಗ್ರ ನ್ಯೂಸ್: ವ್ಯಕ್ತಿ ಕಾಣೆಯಾಗುವುದು, ವಸ್ತುಗಳು ಕಾಣೆಯಾಗುವುದು ,ವಾಹನಗಳು ಕಾಣೆಯಾಗುವುದು ಇದೆಲ್ಲಾ ಮಾಮೂಲಿ ಸುದ್ದಿಯಾದರೆ, ಇಲ್ಲೊಂದು ವಿಚಿತ್ರ ಪ್ರಕರಣ ದಾಖಲಾಗಿದೆ. ನರಿಕೊಂಬು ಗ್ರಾಮದ ಬಾವಿ ಕಾಣೆ ಹುಡುಕಿ ಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ ಒಬ್ಬರು ಠಾಣೆ ಮೆಟ್ಟಿಲೇರಿದ್ದಾರೆ. ನರಿಕೊಂಬು ಗ್ರಾಮದ ವ್ಯಾಪ್ತಿಯ ನೇಲ್ಯಡ್ಕ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿದ ಬಾವಿ ಕಾಣೆಯಾಗಿದ್ದು, ಇದನ್ನು ಹುಡುಕಿಕೊಡುವಂತೆ ನರಿಕೊಂಬು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಗೊಂಡಪ್ಪ ಬಿರಾದರ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ

ಬಂಟ್ವಾಳ: ‘ಬಾವಿ ಕಾಣೆಯಾಗಿದೆ’ – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ Read More »

ಸುಳ್ಯ: ದಲಿತ ಕಾಲೋನಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಂದ 30 ಲಕ್ಷ ರೂ. ದುರ್ಬಳಕೆ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ ಎಚ್ಚರಿಕೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನಗರದ ಹೊರವಲಯದಲ್ಲಿನ ಕೊಡಿಯಾಲಬೈಲು ದಲಿತರ ಕಾಲೋನಿ ಅಭಿವೃದ್ಧಿಯ ಅನುದಾನ ದಡಿಯಲ್ಲಿ ಮಂಜೂರಾದ ಶೌಚಾಲಯ ಮತ್ತು ಸ್ನಾನ ಗೃಹದ ಕಟ್ಟಡವನ್ನು ಬೇರೆಡೆ ನಿರ್ಮಿಸಿ ದಲಿತ ಸಮುದಾಯದವರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿ ಸಂಬಂಧಪಟ್ಟ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ದೂರು ನೀಡಲಾಗಿದೆ. ದೂರಿನಲ್ಲಿ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ದಲಿತ ಕಾಲೋನಿ ಅಭಿವೃದ್ಧಿಗೆ ಬಂದಂತಹ ಅನುದಾನವನ್ನು ದಲಿತ ಕಾಲೋನಿಯಲ್ಲಿ

ಸುಳ್ಯ: ದಲಿತ ಕಾಲೋನಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಂದ 30 ಲಕ್ಷ ರೂ. ದುರ್ಬಳಕೆ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ ಎಚ್ಚರಿಕೆ Read More »

ನೆಲ್ಯಾಡಿ: ಟಿಪ್ಪರ್ ಮತ್ತು ಕಾರು ಅಪಘಾತ| ಓರ್ವ ಸಾವು

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಾರು ಮತ್ತು ಟಿಪ್ಪರ್‌ ಢಿಕ್ಕಿ ಹೊಡೆದು ಕಾರು ಚಾಲಕ ನೆಲ್ಸನ್‌ (42) ಸಾವನ್ನಪ್ಪಿ ಇನ್ನೋರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಪೆರಿಯಶಾಂತಿ ಕಡೆಯಿಂದ ನೆಲ್ಯಾಡಿಯತ್ತ ಸಂಚರಿಸುತ್ತಿದ್ದ ಕಾರು ಕಲ್ಲಿದ್ದಲು ಸಾಗಾಟದ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಎದುರುಗಡೆಯಿಂದ ಬಂದ ಟಿಪ್ಪರ್‌ ಲಾರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರು ಚಾಲಕ ನೆಲ್ಸನ್‌ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದರು. ಕಾರಿನಲ್ಲಿದ್ದ ಪ್ರಯಾಣಿಕ ಫೆಲಿಕ್ಸ್‌ ಅವರಿಗೂ

ನೆಲ್ಯಾಡಿ: ಟಿಪ್ಪರ್ ಮತ್ತು ಕಾರು ಅಪಘಾತ| ಓರ್ವ ಸಾವು Read More »

ಮಂಗಳೂರು: ಅಡ್ಯಾರ್ ನಲ್ಲಿ ಎಸ್ಡಿಪಿಐ ಬೃಹತ್ ಜನಾಧಿಕಾರ ಸಮಾವೇಶ| ಸರ್ಕಾರ, ಹಿಂದೂ ಸಂಘಟನೆಗಳ ಮೇಲೆ ಮುಗಿಬಿದ್ದ ನಾಯಕರು|

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ (ಮೇ.27) ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಸಂಘಪರಿವಾರದ ಚಡ್ಡಿಗಳೇ ಧಂ ಇದ್ರೆ, ತಾಕತ್ತಿದ್ರೆ ಬಳ್ಳಾರಿಯಲ್ಲಿ ನಿಮ್ಮದೇ ನಾಯಕ ಜನಾರ್ದನ ರೆಡ್ಡಿ 200 ವರ್ಷ ಹಳೆಯದಾದ ದೇವಸ್ಥಾನ ಒಡೆದ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಕೇಳಿ. ಇಲ್ಲಿ ವ್ಯಾಪಾರ ಬಹಿಷ್ಕಾರ ಮಾಡಿ, ನಿಮ್ಮ ಗುರು ಬೊಮ್ಮಾಯಿ

ಮಂಗಳೂರು: ಅಡ್ಯಾರ್ ನಲ್ಲಿ ಎಸ್ಡಿಪಿಐ ಬೃಹತ್ ಜನಾಧಿಕಾರ ಸಮಾವೇಶ| ಸರ್ಕಾರ, ಹಿಂದೂ ಸಂಘಟನೆಗಳ ಮೇಲೆ ಮುಗಿಬಿದ್ದ ನಾಯಕರು| Read More »

ಬೆಳ್ತಂಗಡಿ: ಮುಸ್ಲಿಂ ಯುವಕನ ಮೇಲೆ ಹಲ್ಲೆ; ಕೊಕ್ಕಡ ಉದ್ವಿಗ್ನ

ಸಮಗ್ರ ನ್ಯೂಸ್: ಅನ್ಯಧರ್ಮೀಯ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ವಿಚಾರಕ್ಕೆ ಸಂಬಂಧಿಸಿದಂತೆ ಆತನ ಸಹೋದರನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಘಟನೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು ಫೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದ್ದು, ಸದ್ಯ ಕೊಕ್ಕಡ ಬೂದಿ ಮುಚ್ಚಿದ ಕೆಂಡದಂತಿದೆ. ಕೊಕ್ಕಡದ ಮಲ್ಲಿಗೆ ಮಜಲಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯನ್ನು ಮದುವೆಯಾಗಿದ್ದು, ಹಿಂದೂ ಸಂಘಟನೆಗಳ ಮುಖಂಡರು ಲವ್ ಜಿಹಾದ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ

ಬೆಳ್ತಂಗಡಿ: ಮುಸ್ಲಿಂ ಯುವಕನ ಮೇಲೆ ಹಲ್ಲೆ; ಕೊಕ್ಕಡ ಉದ್ವಿಗ್ನ Read More »

ಬೆಳ್ತಂಗಡಿ: ಸಿನಿಮೀಯ ರೀತಿಯಲ್ಲಿ ಮುರಿದುಬಿತ್ತು ಮದುವೆ| ವರನ ಕೈ ತಾಗಿದ್ದಕ್ಕೆ ಕೋಪಗೊಂಡ ವಧು, ತಾಳಿ ಕಟ್ಟಿಸಿಕೊಳ್ಳಲು ನಕಾರ

ಸಮಗ್ರ ನ್ಯೂಸ್: ಮದುವೆ ಛತ್ರದಲ್ಲಿ ಅದ್ದೂರಿ ವಿವಾಹವೊಂದು ಕ್ಷುಲ್ಲಕ ಕಾರಣಕ್ಕೆ ಮುರಿದು ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ. ಗುರು ಹಿರಿಯರು ನಿಶ್ಚಯಿಸಿದ ಮುಹೂರ್ತಕ್ಕೆ ಕ್ಷಣಗಣನೆ ಆರಂಭವಾಗಿತ್ತು. ಮಂಗಳ ವಾಧ್ಯಗಳ ನಿನಾದ ಮೊಳಗುತಿತ್ತು. ಇನ್ನೇನು ಮದುಮಗ ವಧುವಿನ ಕೊರಳಿಗೆ ಹೂವಿನ ಹಾರ ಹಾಕಬೇಕು, ಆಮೇಲೆ ಒಂದಾಗಿ ಬಾಳುವ ವಚನದೊಂದಿಗೆ ಸಪ್ತಪದಿ ತುಳಿಯಬೇಕು. ಅಷ್ಟರಲ್ಲಿ ಸಿನಿಮೀಯ ಘಟನೆಯೊಂದು ಅಲ್ಲಿ ನಡೆದು ಬಿಟ್ಟಿತ್ತು. ವರ ಕೈಯಲ್ಲಿ ಹಾರ ಹಿಡಿದು ಬಾಗಿ ವಧುವಿನ ಕೊರಳಿಗೆ ಹಾಕಬೇಕು, ಅಷ್ಟರಲ್ಲಿ ಜಮದಗ್ನಿಯ ರೂಪತಾಳಿದ

ಬೆಳ್ತಂಗಡಿ: ಸಿನಿಮೀಯ ರೀತಿಯಲ್ಲಿ ಮುರಿದುಬಿತ್ತು ಮದುವೆ| ವರನ ಕೈ ತಾಗಿದ್ದಕ್ಕೆ ಕೋಪಗೊಂಡ ವಧು, ತಾಳಿ ಕಟ್ಟಿಸಿಕೊಳ್ಳಲು ನಕಾರ Read More »