ಕರಾವಳಿ

ಹವಾಮಾನ ವರದಿ| ಜು.25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ‌ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಬೆಳಗಾವಿ, ಬೀದರ್‌, ಕಲಬುರಗಿ […]

ಹವಾಮಾನ ವರದಿ| ಜು.25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ‌ಮಳೆ ಸಾಧ್ಯತೆ Read More »

ಕಾಣಿಯೂರು: ಕಾಣೆಯಾಗಿದ್ದ ಯುವಕನ ಶವ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಸರ್ವೆ ಎಂಬಲ್ಲಿ ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ. ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್‌ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹಕ್ಕಾಗಿ ಗೌರಿ

ಕಾಣಿಯೂರು: ಕಾಣೆಯಾಗಿದ್ದ ಯುವಕನ ಶವ ನದಿಯಲ್ಲಿ ಪತ್ತೆ Read More »

ಉಡುಪಿ: ಸತ್ತ ನಾಯಿಯ ಕಳೇಬರವನ್ನು ಬೈಕ್ ಗೆ ಕಟ್ಟಿ‌ ಎಳೆದೊಯ್ದು ವಿಕೃತಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಕಾಪು ತಾಲೂಕಿನ ಶಿರ್ವದಲ್ಲಿ ನಾಯಿಯ ಕಳೇಬರವನ್ನು ಸ್ಕೂಟರ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ ವಿರುದ್ಧ ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿರ್ವಾ ಪಟ್ಟಣದಲ್ಲಿ ಈ ಕ್ರೂರ ಘಟನೆ ನಡೆದಿದೆ. ಕಿಲೋಮೀಟರ್ ಗಟ್ಟಲೆ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ಹಾಕಿ ಎಳೆದೊಯ್ಯಲಾಗಿದೆ. ಮಲ್ಲರ್ ನಿವಾಸಿಯಾಗಿರುವ ಈತ ನಾಯಿ ಮೇಲೆ ಕ್ರೂರವಾಗಿ ವರ್ತಿಸಿದ್ದಾನೆ. ನಾಯಿ ಕೊರಳಿಗೆ ಚೈನ್ ಕಟ್ಟಲಾಗಿದೆ. ಬಳಿಕ ನಾಯಿ ಚೈನ್‌ನ್ನು ಸ್ಕೂಟರ್ ಹಿಂಭಾಗಕ್ಕೆ ಕಟ್ಟಿ ಎಳೆದೊಯ್ಯಲಾಗಿದೆ. ಕೊಂಬಗುಡ್ಡೆಯ ನಿವಾಸಿ ಖಾದ‌ರ್, ಮೃತಪಟ್ಟ ನಾಯಿಯ ಕೊರಳಿಗೆ ಸರಪಳಿ

ಉಡುಪಿ: ಸತ್ತ ನಾಯಿಯ ಕಳೇಬರವನ್ನು ಬೈಕ್ ಗೆ ಕಟ್ಟಿ‌ ಎಳೆದೊಯ್ದು ವಿಕೃತಿ Read More »

ಪುತ್ತೂರು: ಕುದ್ಮಾರು ಗ್ರಾಮದ ಯುವಕ ನಾಪತ್ತೆ|ಗೌರಿ ಹೊಳೆಗೆ ಹಾರಿರುವ ಶಂಕೆ

ಸಮಗ್ರ ನ್ಯೂಸ್: ಕುದ್ಮಾರು ಗ್ರಾಮದ ಯುವಕನೊಬ್ಬ ನಾಪತ್ತೆಯಾಗಿದ್ದು, ಆತನ ದ್ವಿಚಕ್ರ ವಾಹನ ಸರ್ವೆ ಗೌರಿ ಸೇತುವೆ ಬಳಿ ಪತ್ತೆಯಾಗಿದೆ. ಈತ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ. ಪೊಲೀಸರು ನಿನ್ನೆ (ಜು.19) ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಸರ್ವೆ ಸೇತವೆ ಹಾಗೂ ರೈಲ್ವೇ ಸೇತುವೆಯ ಮೇಲೆ ಸಾರ್ವಜನಿಕರು ಸೇರಿದ್ದು, ಟ್ರಾಫಿಕ್ ದಟ್ಟನೆ

ಪುತ್ತೂರು: ಕುದ್ಮಾರು ಗ್ರಾಮದ ಯುವಕ ನಾಪತ್ತೆ|ಗೌರಿ ಹೊಳೆಗೆ ಹಾರಿರುವ ಶಂಕೆ Read More »

ಕಡಬ: ನಾಪತ್ತೆಯಾಗಿದ್ದ ಯುವಕನ ಶವ ಕುಮಾರಧಾರ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿಂದ ನಾಪತ್ತೆಯಾಗಿದ್ದ ಸುರೇಶ್ (40ವ.) ಅವರ ಶವ ಶುಕ್ರವಾರ ಸಂಜೆ ಕುಮಾರಾಧಾರ ನದಿಯಲ್ಲಿ ಪತ್ತೆಯಾಗಿದೆ. ಜು.15ರ ರಾತ್ರಿ ಮನೆಯಿಂದ ಹೊರಟು ಹೋದವರು ನಾಪತ್ತೆಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಮೃತನ ಸಹೋದರ ಚಿದಾನಂದ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿತ್ತು ನಾಪತ್ತೆಯಾದ ಸುರೇಶ್ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಅವರ ಶರ್ಟ್ ಹಾಗೂ ಛತ್ರಿ ಕಾಪಜಾಲು ಹೊಳೆ ಬದಿಯಲ್ಲಿ

ಕಡಬ: ನಾಪತ್ತೆಯಾಗಿದ್ದ ಯುವಕನ ಶವ ಕುಮಾರಧಾರ ನದಿಯಲ್ಲಿ ಪತ್ತೆ Read More »

ಬೆಳ್ತಂಗಡಿ: ಕೋಳಿಗೂಡೊಳಗೆ ಬೃಹತ್ ಹೆಬ್ಬಾವು ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ಶ್ರೀಮತಿ ರೂಪಾ ರವರ ಮನೆಯ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.ಹಾಗೂ 1 ಕಿ.ಲೋ ತೂಕದ 5 ಕೋಳಿಗಳನ್ನು ರಾತ್ರಿ ವೇಳೆಯಲ್ಲಿ ನುಂಗಿ ಗೂಡಿನಲ್ಲಿಯೇ ಪತ್ತೆಯಾದ ಘಟನೆ ಜು.19 ರಂದು ನಡೆಯಿತು. ಕಳೆದ 6 ತಿಂಗಳಿಂದ ಉಪ ಕಸುಬಾಗಿ ನಾಟಿ ಕೋಳಿ ಸಾಕಾಣಿಕೆ ಮಾಡಿ ಮಾಡಿಕೊಂಡು ಬರುತ್ತಿದ್ದಾರೆ. ಕೋಳಿ ಗೂಡಿಗೆ ಕಬ್ಬಿಣದ ಮೇಸ್ ಅಳವಡಿಸಿದ ಭದ್ರತೆಯ ಮಧ್ಯೆಯೂ ಸುಮಾರು 35 ಕಿ.ಲೋ ತೂಕದ ಹೆಬ್ಬಾವು ಪತ್ತೆಯಾಗಿದೆ.

ಬೆಳ್ತಂಗಡಿ: ಕೋಳಿಗೂಡೊಳಗೆ ಬೃಹತ್ ಹೆಬ್ಬಾವು ಪತ್ತೆ Read More »

ಹವಾಮಾನ ವರದಿ|ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ| ವಾರಂತ್ಯದಲ್ಲೂ ಭಾರೀ ಗಾಳಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ.ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನೂ

ಹವಾಮಾನ ವರದಿ|ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ| ವಾರಂತ್ಯದಲ್ಲೂ ಭಾರೀ ಗಾಳಿ ಮಳೆ ಸಾಧ್ಯತೆ Read More »

ರೆಡ್ ಅಲರ್ಟ್, ಭಾರೀ ಮಳೆ‌ ಹಿನ್ನೆಲೆ| ಜು.20ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 20ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ.

ರೆಡ್ ಅಲರ್ಟ್, ಭಾರೀ ಮಳೆ‌ ಹಿನ್ನೆಲೆ| ಜು.20ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ‌ ಹಿನ್ನಲೆ| ಜು. 20ರಂದು ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.20ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ‌ ಹಿನ್ನಲೆ| ಜು. 20ರಂದು ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಸುಳ್ಯ: ಕಳಪೆ ಗುಣಮಟ್ಟದ ಕಾಮಗಾರಿಯಿಂದ ಕುಸಿದ ಮೋರಿ

ಸಮಗ್ರ ನ್ಯೂಸ್: ಈ ಬಾರಿಯ ಮಳೆಗೆ ಕೆಮನಬಳ್ಳಿಯ ಹೊಸ ಮೋರಿ ಕುಸಿದು ಹೋಗಿದ್ದು, ಒಂದೂವರೆ ವರ್ಷದ ಹಿಂದೆ ಈ ಮೋರಿಯನ್ನು ಕಳಪೆ ಗುಣಮಟ್ಟದ ಕಾಮಗಾರಿಯಾಗಿ ಮಾಡಿದ್ದು ಇದೀಗ ರಸ್ತೆಯನ್ನು ನಂಬಿದಂತಹ ಐದು ಮನೆಗಳಿಗೆ ಸಂಕಷ್ಟ ಎದುರಾಗಿದೆ. ಯಾವುದೇ ರೀತಿಯ ವಾಹನದಲ್ಲಿ ಸಂಚಾರ ಮಾಡಲು ಜೀವ ಕೈಯಲ್ಲಿಟ್ಟುಕೊಂಡು ಹೋಗುವಂತಾಗಿದೆ. ಅದೇ ರಸ್ತೆಯ ಇನ್ನೊಂದು ಭಾಗದಲ್ಲಿರುವ ದೊಡ್ಡ ಕಾಲು ಸೇತುವೆಯ ಅಪಾಯ ಮಟ್ಟದಲ್ಲಿದೆ.ಇದೀಗ ಅದರ ಒಂದು ಬದಿ ಕುಸಿದು ಬಿದ್ದು ಹೋಗಿದೆ. ಈ ಎರಡು ಸೇತುವೆಗಳು ಅಪಾಯದಲ್ಲಿದ್ದು ಇಲ್ಲಿನ ಜನರು

ಸುಳ್ಯ: ಕಳಪೆ ಗುಣಮಟ್ಟದ ಕಾಮಗಾರಿಯಿಂದ ಕುಸಿದ ಮೋರಿ Read More »