ಕರಾವಳಿ

ಮಂಗಳೂರು: ಹೋಂ‌‌ ಸ್ಟೇ ದಾಳಿ ಪ್ರಕರಣದ ತೀರ್ಪು ಪ್ರಕಟ| 11 ವರ್ಷಗಳ ಬಳಿಕ ಪ್ರಕರಣ ಖುಲಾಸೆ

ಸಮಗ್ರ ನ್ಯೂಸ್: ದೇಶಾದ್ಯಂತ ಸುದ್ದಿ ಮಾಡಿದ್ದ 2012ರ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಮಹತ್ವದ ತೀರ್ಪನ್ನು ನ್ಯಾಯಾಲಯ ಮಂಗಳವಾರ (ಆ.6) ಪ್ರಕಟಿಸಿದೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಆದೇಶ ಹೊರಡಿಸಿದ್ದಾರೆ. 2009ರ ಪಬ್ ದಾಳಿ ನಂತರ 2012ರಲ್ಲಿ ನಡೆದ ಹೋಂ ಸ್ಟೇ ದಾಳಿಯೂ ಬಾರಿ ಸುದ್ದಿಯಾಗಿತ್ತು. ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಈ ದಾಳಿ […]

ಮಂಗಳೂರು: ಹೋಂ‌‌ ಸ್ಟೇ ದಾಳಿ ಪ್ರಕರಣದ ತೀರ್ಪು ಪ್ರಕಟ| 11 ವರ್ಷಗಳ ಬಳಿಕ ಪ್ರಕರಣ ಖುಲಾಸೆ Read More »

ಮಂಗಳೂರು: ಬಿಜೈನಿಂದ‌ ಕಾಣೆಯಾಗಿದ್ದ ಹುಡುಗಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ| ಮಕ್ಕಳ ಕೈಗೆ ಮೊಬೈಲ್ ಕೊಟ್ರೆ‌ ಹೀಗೆಲ್ಲಾ ಆಗುತ್ತೆ ಜೋಪಾನ…

ಸಮಗ್ರ ನ್ಯೂಸ್: ಬಿಜೈನ ನಿವಾಸಿಯಾಗಿರುವ 18 ವರ್ಷದ ಯುವತಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಯುವತಿಯನ್ನು ಕಾರ್ಕಳದಲ್ಲಿ ಪತ್ತೆ ಹಚ್ಚಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ ಹೇಳದೆ ನಾಪತ್ತೆಯಾಗಿದ್ದಳು. ಈ ವೇಳೆ ಸಿಮ್ ಇಲ್ಲದ ಮೊಬೈಲ್ ನ್ನು ತೆಗೆದುಕೊಂಡು ಹೋಗಿದ್ದಳು. ಈ ಕುರಿತಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ತನಿಖೆ ಕೈಗೊಂಡ ಬರ್ಕೆ ಪೊಲೀಸ್ ಇನ್ಸ್ಪೆಕ್ಟರ್ ತಂಡ, CC TV ದೃಶ್ಯಾವಳಿಗಳನ್ನು ಆಧರಿಸಿ

ಮಂಗಳೂರು: ಬಿಜೈನಿಂದ‌ ಕಾಣೆಯಾಗಿದ್ದ ಹುಡುಗಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ| ಮಕ್ಕಳ ಕೈಗೆ ಮೊಬೈಲ್ ಕೊಟ್ರೆ‌ ಹೀಗೆಲ್ಲಾ ಆಗುತ್ತೆ ಜೋಪಾನ… Read More »

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್ ಕುಟುಂಬ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಇಂದು ನಟ ಯಶ್ ಅವರು ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಬಳಿಕ

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್ ಕುಟುಂಬ Read More »

ಮಂಗಳೂರು: ಪಬ್‌ನಲ್ಲಿ ಮಹಿಳೆಗೆ ಕಿರುಕುಳ| ಪುತ್ತೂರಿನ ನಾಲ್ಕು ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಪಾಂಡೇಶ್ವರದ ಪಬ್‌ ಒಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್‌ (28), ವಿನಯ್‌ (30), ನಿತೇಶ್‌ (32) ಮತ್ತು ಪ್ರಿತೇಶ್‌ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರ ಗೆಳತಿಯರ ಜೊತೆ ಮಹಿಳೆ ಪಬ್ ಗೆ ಭೇಟಿ ನೀಡಿದ್ದರು. ಇದೇ ಪಬ್‌ಗ ಪುತ್ತೂರಿನ ಯುವಕರ ತಂಡ ಬಂದಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಮಹಿಳೆಗೆ ಕಿರುಕುಳ ನೀಡಿದ್ದು, ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅನಂತರವೂ ಯುವಕರು ಮಹಿಳೆಯ ಜತೆ ಅಸಭ್ಯವಾಗಿ

ಮಂಗಳೂರು: ಪಬ್‌ನಲ್ಲಿ ಮಹಿಳೆಗೆ ಕಿರುಕುಳ| ಪುತ್ತೂರಿನ ನಾಲ್ಕು ಮಂದಿ ಅರೆಸ್ಟ್ Read More »

ಪುತ್ತೂರು: ಮುಳಿಯ ಜ್ಯುವೆಲ್ಸ್ ವತಿಯಿಂದ ಆ.11 ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಸಮಗ್ರ ನ್ಯೂಸ್: ಪುತ್ತೂರಿನ ಮುಳಿಯ ಜ್ಯುವೆಲ್ಸ್ ನವರು ಸ್ವಾತಂತ್ರ್ಯ ದಿನದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ರ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಛದ್ಮವೇಷ ಸ್ಪರ್ಧೆಯಲ್ಲಿ 3ರಿಂದ 7 ವರ್ಷ ಮತ್ತು 8ರಿಂದ 12ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆಪ್ ಮೂಲಕ ನಡೆಸಲಾಗುತ್ತದೆ. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬಹುದು. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು,

ಪುತ್ತೂರು: ಮುಳಿಯ ಜ್ಯುವೆಲ್ಸ್ ವತಿಯಿಂದ ಆ.11 ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ಛದ್ಮವೇಷ ಸ್ಪರ್ಧೆ Read More »

ಸಂಪಾಜೆ: ಮೋರಿಗೆ ಬೈಕ್ ಗುದ್ದಿ ಸವಾರರು ಸಾವನ್ನಪ್ಪಿದ ಪ್ರಕರಣ| ಧರ್ಮಸ್ಥಳಕ್ಕೆ ಹೊರಟವರು ಮಸಣಕ್ಕೆ

ಸಮಗ್ರ ನ್ಯೂಸ್: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಯುವಕರಾದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಳೆದ ರಾತ್ರಿ ವೇಳೆ ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ತಲುಪಿದಾಗ ನಿಯಂತ್ರಣ ತಪ್ಪಿದ

ಸಂಪಾಜೆ: ಮೋರಿಗೆ ಬೈಕ್ ಗುದ್ದಿ ಸವಾರರು ಸಾವನ್ನಪ್ಪಿದ ಪ್ರಕರಣ| ಧರ್ಮಸ್ಥಳಕ್ಕೆ ಹೊರಟವರು ಮಸಣಕ್ಕೆ Read More »

ಕರಾವಳಿಯಲ್ಲಿ ಆಟಿ‌ ಅಮಾವಾಸ್ಯೆ ಸಂಭ್ರಮ| ಪುಣ್ಯ‌ ಸ್ನಾನಗೈದು ಪುಳಕಿತರಾದ ಭಕ್ತರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರಸಿದ್ಧ ಪರ್ವತ ಪುಣ್ಯ ಕ್ಷೇತ್ರಗಳಾದ ಕಾರಿಂಜ ಕಾರಿಂಜೇಶ್ವರ ಸನ್ನಿಧಿ ಹಾಗೂ ನರಹರಿ ಸದಾಶಿವ ರುದ್ರ ಸನ್ನಿಧಿಯಲ್ಲಿ ಇಂದು (ಆಗಸ್ಟ್ 4) ನಸುಕಿನ ಜಾವ ಭಕ್ತರ ಗಡಣವಿತ್ತು. ವೈದಿಕರು ವೇದಮಂತ್ರಗಳ ಪಠಣವನ್ನು ಮಾಡುತ್ತಿದ್ದರೆ, ಭಕ್ತರು, ತೀರ್ಥಸ್ನಾನ ಮಾಡಿ ಪುನೀತರಾದರು. ಆಟಿಯ ಅಮಾವಾಸ್ಯೆ ಅಥವಾ ಆಟಿ ಅಮಾಸೆ ಎಂಬುದು ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡಿರುವ ತುಳುನಾಡಿನ ಆಚರಣೆ ಈ ಅಮಾವಾಸ್ಯೆ ಆಷಾಡ ಅಮಾವಾಸ್ಯೆ. ಆಟಿ ತಿಂಗಳಿನ ಅಮಾವಾಸ್ಯೆಯ ದಿನ ಕರಾವಳಿಯ ನಾನಾ

ಕರಾವಳಿಯಲ್ಲಿ ಆಟಿ‌ ಅಮಾವಾಸ್ಯೆ ಸಂಭ್ರಮ| ಪುಣ್ಯ‌ ಸ್ನಾನಗೈದು ಪುಳಕಿತರಾದ ಭಕ್ತರು Read More »

ಪದವಿ ಮಕ್ಕಳಿಗೆ ಮಳೆ ಕಾರಣ ರಜೆ ಯಾಕೆ ನೀಡಲ್ಲ? ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೀಡಿದ್ದಾರೆ ಬೆಸ್ಟ್ ಆನ್ಸರ್!

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಈ ರಜೆಯ ಆದೇಶವನ್ನು ಜಿಲ್ಲಾಧಿಕಾರಿಗಳ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹೊರಡಿಸಲಾಗುತ್ತದೆ. ಉದಾಹರಣೆಗೆ ಜಿಲ್ಲಾದ್ಯಂತ ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (ನಿಗದಿತ ದಿನಾಂಕ ನಮೂದಿಸಿ) ಈ ದಿನ ರಜೆ ಇರುತ್ತದೆ ಎಂದು ಆದೇಶ ಪ್ರತಿ ಹೊರಡಿಸಲಾಗುತ್ತದೆ. ಈ ಆದೇಶದಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದಿಲ್ಲ ಎನ್ನುವುದು ಸದ್ಯದ ಆರೋಪವಾಗಿದೆ ಜೊತೆಗೆ ವಿದ್ಯಾರ್ಥಿಗಳ ಪ್ರಶ್ನೆ

ಪದವಿ ಮಕ್ಕಳಿಗೆ ಮಳೆ ಕಾರಣ ರಜೆ ಯಾಕೆ ನೀಡಲ್ಲ? ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೀಡಿದ್ದಾರೆ ಬೆಸ್ಟ್ ಆನ್ಸರ್! Read More »

ಉಪ್ಪಿನಂಗಡಿ: ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿ

ಸಮಗ್ರ ನ್ಯೂಸ್: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ಈತ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದ ಎಂದು ತಿಳಿದುಬಂದಿದೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ಈತ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದ್ದು ಜೊತೆಗಿದ್ದ ಸ್ನೇಹಿತರು ಈತನನ್ನು

ಉಪ್ಪಿನಂಗಡಿ: ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿ Read More »

ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ “ಬ್ರೈಟ್ ಭಾರತ್” ಇದೀಗ ನಿಮ್ಮ ಮುಂದೆ| 6 ಮನೆಗಳು, 4 ಐಶಾರಾಮಿ ಕಾರು, 4 ಸುಸಜ್ಜಿತ Land ಸೇರಿದಂತೆ, ಚಿನ್ನ, ಡೈಮಂಡ್, ಬೈಕ್,ಆಕ್ಟಿವಾ, ನಗದನ್ನು ನಿಮ್ಮದಾಗಿಸಿಕೊಳ್ಳಬಹುದು| ಮತ್ತೇಕೆ ತಡ ಈಗಲೇ ರಿಜಿಸ್ಟರ್ ಮಾಡಿಕೊಳ್ಳಿ|ಇಲ್ಲಿದೆ ಸಂಪೂರ್ಣ ಮಾಹಿತಿ

ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್ ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್ ಯೋಜನೆ, ಬಡ ಸಾಮಾನ್ಯ ಜನರಿಗೆ ಖಂಡಿತಾವಾಗಿಯೂ ಇದು ಉಪಯೋಗಿ ಯೋಜನೆಯಾಗಲಿದೆ. ಹಾಗಾದರೆ ಈ ಸ್ಕೀಮ್ ಯಾವ ರೀತಿ ಇರಲಿದೆ?ಮೇಲೆ ಪೋಸ್ಟರ್

ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ “ಬ್ರೈಟ್ ಭಾರತ್” ಇದೀಗ ನಿಮ್ಮ ಮುಂದೆ| 6 ಮನೆಗಳು, 4 ಐಶಾರಾಮಿ ಕಾರು, 4 ಸುಸಜ್ಜಿತ Land ಸೇರಿದಂತೆ, ಚಿನ್ನ, ಡೈಮಂಡ್, ಬೈಕ್,ಆಕ್ಟಿವಾ, ನಗದನ್ನು ನಿಮ್ಮದಾಗಿಸಿಕೊಳ್ಳಬಹುದು| ಮತ್ತೇಕೆ ತಡ ಈಗಲೇ ರಿಜಿಸ್ಟರ್ ಮಾಡಿಕೊಳ್ಳಿ|ಇಲ್ಲಿದೆ ಸಂಪೂರ್ಣ ಮಾಹಿತಿ Read More »