ಕರಾವಳಿ

ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು|

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ. ಕೊಲೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಖದೀಮರ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿ ಬಂಧಿಸಿದೆ. ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಬಂಧಿತರು. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಲ್ಕಿಯ ಗ್ಲೋಬಲ್ ಹೆರಿಟೇಜ್ ಲೇಔಟ್​ಗೆ ಹೋದಾಗ ಘಟನೆ ನಡೆದಿದೆ. ಆರೋಪಿಗಳನ್ನ ಬಂಧಿಸಲು ಮುಂದಾದ ಪೊಲೀಸರ

ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು| Read More »

ಸಾವರ್ಕರ್ ಫೋಟೋ ತೆರವು ವಿಚಾರ| ಮಂಗಳೂರು ವಿವಿ ಕಾಲೇಜಿನಲ್ಲಿ ಇತ್ತಂಡಗಳ ನಡುವೆ ಘರ್ಷಣೆ|

ಸಮಗ್ರ ನ್ಯೂಸ್: ತರಗತಿಯಲ್ಲಿ ಸಾವರ್ಕರ್‌ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಲಭ್ಯ ಮಾಹಿತಿಯಂತೆ ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದನ್ನು ಆಕ್ಷೇಪಿಸಿದ್ದಾರೆ. ಇಂದು ಈ ವಿಚಾರವಾಗಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದೆ.

ಸಾವರ್ಕರ್ ಫೋಟೋ ತೆರವು ವಿಚಾರ| ಮಂಗಳೂರು ವಿವಿ ಕಾಲೇಜಿನಲ್ಲಿ ಇತ್ತಂಡಗಳ ನಡುವೆ ಘರ್ಷಣೆ| Read More »

ಸುರತ್ಕಲ್: ಕೆನರಾ ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಬ್ಯಾಂಕ್ ಗ್ರಾಹಕಿಯಿಂದ ಬ್ಯಾಂಕ್ ಎದುರು ಗಲಾಟೆ

ಸಮಗ್ರ ನ್ಯೂಸ್: ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಗ್ರಾಹಕಿಯೊಬ್ಬರು ಬ್ಯಾಂಕ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುರತ್ಕಲ್ ನ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ಬ್ಯಾಂಕ್ ಸಿಬ್ಬಂದಿ ಗ್ರಾಹಕರನ್ನು ಸತಾಯಿಸಿ ನಂತರ ಕೆಲಸ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ಬ್ಯಾಂಕ್ ಗೆ ಕಲ್ಲೆಸೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ನೂರಾರು ಜನ ಜಮಾಯಿಸಿದ್ದು, ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬ್ಯಾಂಕ್ ಅಧಿಕಾರಿಗಳು ಸಮಜಾಯಿಷಿ ನೀಡಿದರೂ ಗ್ರಾಹಕರು ಒಪ್ಪದೆ ಪ್ರತಿಭಟನೆ ನಡೆಸಿದರು.

ಸುರತ್ಕಲ್: ಕೆನರಾ ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಬ್ಯಾಂಕ್ ಗ್ರಾಹಕಿಯಿಂದ ಬ್ಯಾಂಕ್ ಎದುರು ಗಲಾಟೆ Read More »

ಪ್ರತೀಬಾರಿಯೂ ಕಾಂಗ್ರೆಸ್ ಮಾತ್ರವೇ ಯಾಕೆ ಬೆಂಬಲಿಸಬೇಕು? ಜೆಡಿಎಸ್ ಗೆ ಸಿದ್ದರಾಮಯ್ಯ ಪ್ರಶ್ನೆ

ಸಮಗ್ರ ನ್ಯೂಸ್: ಕೋಮುವಾದಿ ಪಕ್ಷವನ್ನು ಸೋಲಿಸುವ ಬದ್ಧತೆ ಇದ್ದರೆ ಜೆಡಿಎಸ್ ಅಭ್ಯರ್ಥಿ ನಿವೃತ್ತಗೊಳಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಬಾರಿ ಕಾಂಗ್ರೆಸ್ ಪಕ್ಷವೇ ಏಕೆ ಬೆಂಬಲ ನೀಡಬೇಕು. ಜೆಡಿಎಸ್‍ನವರು ಕಣಕ್ಕಿಳಿಸಲಾಗಿರುವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಬೆಂಬಲ ನೀಡಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಏಕೆ ಸಹಕರಿಸಬಾರದು ಎಂದು ಪ್ರಶ್ನಿಸಿದರು. ಈ ಮೊದಲು ಕಾಂಗ್ರೆಸ್ ಬೆಂಬಲದಿಂದ ದೇವೇಗೌಡರು ಪ್ರಧಾನಿಯಾಗಿದ್ದರು. ಜೆಡಿಎಸ್‍ನಲ್ಲಿ 37 ಶಾಸಕರಿದ್ದರು. 80 ಶಾಸಕರಿದ್ದ ಕಾಂಗ್ರೆಸ್ ಪಕ್ಷ ಬೇಷರತ್ ಬೆಂಬಲ ನೀಡಿ

ಪ್ರತೀಬಾರಿಯೂ ಕಾಂಗ್ರೆಸ್ ಮಾತ್ರವೇ ಯಾಕೆ ಬೆಂಬಲಿಸಬೇಕು? ಜೆಡಿಎಸ್ ಗೆ ಸಿದ್ದರಾಮಯ್ಯ ಪ್ರಶ್ನೆ Read More »

ತಮಿಳುನಾಡಿನಲ್ಲಿ ಅರಳಿತೇ ಕಮಲ!? ಎಡಿಟ್ ಮಾಡಿ‌ ಮಾನ ಕಳೆದುಕೊಂಡ ಬಿಜೆಪಿ

ಸಮಗ್ರ ನ್ಯೂಸ್: ಕೆಲವು ಯುವಕರು ವಿದ್ಯುತ್ ಕಂಬಗಳ ಮೇಲೆ ಬಿಜೆಪಿ ಧ್ವಜಗಳನ್ನು ಹಾಕುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ತಮಿಳುನಾಡಿನ ಚಿತ್ರ ಎಂದು ಪ್ರತಿಪಾದಿಸಿ ಹಂಚಲಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುತ್ತಿದೆ ಎಂಬರ್ಥದ ಹಲವಾರು ಪೋಸ್ಟ್‌ ಗಳು ಈ ಚಿತ್ರದೊಂದಿಗೆ ವೈರಲ್‌ ಆಗಿತ್ತು. ಆದರೆ, ಇದು ತಮಿಳುನಾಡಿನ ಚಿತ್ರ ಅಲ್ಲ ಎಂದು Altnews.in ವರದಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಈ ಚಿತ್ರವನ್ನು ಟ್ವೀಟ್ ಮಾಡಿ ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ

ತಮಿಳುನಾಡಿನಲ್ಲಿ ಅರಳಿತೇ ಕಮಲ!? ಎಡಿಟ್ ಮಾಡಿ‌ ಮಾನ ಕಳೆದುಕೊಂಡ ಬಿಜೆಪಿ Read More »

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಮತ್ತು ಕಾರ್ಯಕರ್ತನ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಮುಖಂಡ ಹಾಗೂ ಕಾರ್ಯಕರ್ತ ನಡು ಬೀದಿಯಲ್ಲಿ ರಾತ್ರಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ. ವೈಯುಕ್ತಿಕ ವಿಷಯಕ್ಕೆ ಇಬ್ಬರೂ ಅವಾಚ್ಯ ಶಬ್ದಗಳಿಂದ ಬೈಯ್ದು ಕೊನೆಗೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋವನ್ನು ಸ್ಥಳದಲ್ಲಿದ್ದವರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.ಸದ್ಯ ಈ ವೀಡಿಯೋ ವೈರಲ್‌ ಆಗಿದೆ.

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಮತ್ತು ಕಾರ್ಯಕರ್ತನ ನಡುವೆ ಮಾರಾಮಾರಿ Read More »

ಸುಳ್ಯ ಕಾಲೇಜು: ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ

ಸುಳ್ಯ: ಸ.ಪ್ರ.ದ. ಕಾಲೇಜು, ಸುಳ್ಯ ಇಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ““MATHS SHORT CUT TRICKS & TIPS FOR COMPETITIVE EXAMS” ” ಎಂಬ ವಿಷಯದ ಬಗ್ಗೆ ತರಬೇತಿ ಕರ‍್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಸತೀಶ್ ಕುಮಾರ್ ಕೆ. ಆರ್ ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುತ್ತೂರು ಮತ್ತು ಸುಳ್ಯ ಐಆರ್‌ಸಿಎಂಡಿ ಎಜ್ಯುಕೇಷನ್ ಸೆಂಟರ್‌ನ ಮುಖ್ಯಸ್ಥೆ ಶ್ರೀಮತಿ

ಸುಳ್ಯ ಕಾಲೇಜು: ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ Read More »

ಸುಳ್ಯ: ಅನುದಾನಿತ ಶಾಲೆಯಲ್ಲಿ ಅಕ್ಕಿ ಬದಲಾಯಿಸಿದ ಪ್ರಕರಣ| ಸ್ಪಷ್ಟನೆ ನೀಡಿದ ಶಾಲಾ ಮುಖ್ಯಸ್ಥರು

ಸಮಗ್ರ ನ್ಯೂಸ್: ಅನುದಾನಿತ ವಿದ್ಯಾಸಂಸ್ಥೆಗೆ ಸರ್ಕಾರದಿಂದ ಬಂದ ಬೆಳ್ತಿಗೆ ಅಕ್ಕಿಯನ್ನು ಕುಚ್ಚಲಕ್ಕಿ ಜೊತೆ ಬದಲಾವಣೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಅಕ್ಷರ ದಾಸೋಹ ಅಧಿಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೂ. 8 ರಂದು ಬಿ.ಇ.ಒ. ಎಸ್.ಪಿ.ಮಹಾದೇವ್ ಹಾಗೂ ಅಕ್ಷರ ದಾಸೋಹ ಅಧಿಕಾರಿ ಶ್ರೀಮತಿ ವೀಣಾರವರು ಶಾಲೆಗೆ ಬಂದು ಅಕ್ಕಿ ದಾಸ್ತಾನು ಪರಿಶೀಲಿಸಿ ಸರಿಯಿದೆಯೆಂದು ಮನವರಿಕೆ ಮಾಡಿಕೊಂಡು ಹೋದರೆಂದು ತಿಳಿದು ಬಂದಿದೆ. ಬೆಳ್ತಿಗೆ ಅಕ್ಕಿಯ ಅನ್ನ

ಸುಳ್ಯ: ಅನುದಾನಿತ ಶಾಲೆಯಲ್ಲಿ ಅಕ್ಕಿ ಬದಲಾಯಿಸಿದ ಪ್ರಕರಣ| ಸ್ಪಷ್ಟನೆ ನೀಡಿದ ಶಾಲಾ ಮುಖ್ಯಸ್ಥರು Read More »

ಶಾಂತಿನಗರ ಕ್ರೀಡಾಂಗಣಕ್ಕೆ ಟಾರ್ಪಲ್ ಹೊದಿಕೆ ಸ್ಥಳ ಪರಿಶೀಲನೆ ನಡೆಸಿದ ನಿರ್ಮಿತಿ ಕೇಂದ್ರದ ಅಧಿಕಾರಿ

ಸುಳ್ಯದ ಶಾಂತಿನಗರದಲ್ಲಿ ನಿರ್ಮಾಣ ಹಂತದಲ್ಲಿರುವ ತಾಲೂಕು ಕ್ರೀಡಾಂಗಣದ ಮಣ್ಣು ಕುಸಿಯುವ ಜಾಗಕ್ಕೆ ಟಾರ್ಪಲ್ ಹೊದಿಕೆಯನ್ನು ಹಾಕಲಾಗಿದ್ದು, ಇದರ ವೀಕ್ಷಣೆಯನ್ನು ಇಂದು ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ವೀಕ್ಷಣೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಸುಂದರ ಕೇನಾಜೆ, ಹಾಗೂ ನವನೀತ್ ಬೆಟ್ಟಂಪಾಡಿ ಸ್ಥಳ ಪರಿಶೀಲನೆಗೆ ಬಂದ ಅಧಿಕಾರಿ ಅವರೊಂದಿಗೆ ಕ್ರೀಡಾಂಗಣಕ್ಕೆ ಹೊದಿಸಿದ ಟಾರ್ಪಲ್ ಮೇಲ್ಭಾಗದಲ್ಲಿ ವಿಸ್ತೀರ್ಣ ಕಡಿಮೆಯಾಗಿದ್ದು ಇನ್ನು ಸ್ವಲ್ಪ ಹೆಚ್ಚಿಸುವಂತೆ ಕೇಳಿಕೊಂಡರು.ಕ್ರೀಡಾಂಗಣದ ಮಣ್ಣು ತುಂಬಿರುವ ಜಾಗದ ಮೇಲ್ಭಾಗದಲ್ಲಿ ಮಳೆ ನೀರು ನಿಲ್ಲುವ ಸಾಧ್ಯತೆಯಿದ್ದು ಆ

ಶಾಂತಿನಗರ ಕ್ರೀಡಾಂಗಣಕ್ಕೆ ಟಾರ್ಪಲ್ ಹೊದಿಕೆ ಸ್ಥಳ ಪರಿಶೀಲನೆ ನಡೆಸಿದ ನಿರ್ಮಿತಿ ಕೇಂದ್ರದ ಅಧಿಕಾರಿ Read More »

ಉಪ್ಪಿನಂಗಡಿ: ಹಿಜಾಬ್ ಬದಿಗಿಟ್ಟು ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು

ಸಮಗ್ರ ನ್ಯೂಸ್: ಹೈಕೋರ್ಟ್‌ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂ ಸಿ ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶಿಸಲು ಯತ್ನಿಸುತ್ತಿದ್ದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್‌ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ. ಸೋಮವಾರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರೂ ಅಮಾನತಾಗಿರುವ ವಿದ್ಯಾರ್ಥಿನಿಯರ ಪೈಕಿ ಹಲವರು ಮಂಗಳವಾರ ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಘಟನೆಯ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ

ಉಪ್ಪಿನಂಗಡಿ: ಹಿಜಾಬ್ ಬದಿಗಿಟ್ಟು ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು Read More »