ಕರಾವಳಿ

ಮಂಗಳೂರು: ಕ್ಯಾಂಪಸ್ ನೊಳಗೂ ಹಿಜಾಬ್ ಗೆ ಅವಕಾಶವಿಲ್ಲ| ಆದೇಶ‌ ಹೊರಡಿಸಿದ ಕಾಲೇಜು ಪ್ರಾಂಶುಪಾಲರು

ಸಮಗ್ರ ನ್ಯೂಸ್: ಕೆಲ ತಿಂಗಳ ಹಿಂದೆ ಕರಾವಳಿ ಹೊತ್ತಿಕೊಂಡ ಹಿಜಾಬ್ ದಂಗಲ್ ರಾಜ್ಯಾದ್ಯಂತ ಧಗಧಗಿಸಿತ್ತು. ಕೋರ್ಟ್ ಆದೇಶದ ಬಳಿಕ ಬೂದಿ ಮುಚ್ಚಿದ ಕೆಂಡದಂತಾಗಿದ್ದ ಕೇಸ್ ಈಗ ಮತ್ತೆ ಉರಿಯಲು ಆರಂಭಿಸಿದೆ. ಮತ್ತದೇ ಕರಾವಳಿಯಲ್ಲಿ ಹಿಜಾಬ್ ವಿವಾದ ಶುರುವಾಗಿದೆ. ಮೇ 10ರಂದು ಮಂಗಳೂರಿನ ವಿವಿ ಘಟಕ ಡಿಗ್ರಿ ಕಾಲೇಜಿನಲ್ಲಿ ಹಿಜಾಬ್ ವಿವಾದದ ಕಿಡಿ ಹೊತ್ತಿಕೊಂಡಿತ್ತು. ಪೋಷಕರ ಸಭೆಯಲ್ಲಿ ಹಿಜಾಬ್ ಧರಿಸದಂತೆ ಮೌಖಿಕವಾಗಿ ಸೂಚಿಸಲಾಗಿತ್ತಾದರೂ, ಕಾಲೇಜು ಆಡಳಿತ ಮಂಡಳಿ ಯಾವುದೇ ಆದೇಶ ಜಾರಿ ಮಾಡಿರಲಿಲ್ಲ. ಇದ್ರಿಂದ ರೊಚ್ಚಿಗೆದ್ದ ಹಿಂದೂ ವಿದ್ಯಾರ್ಥಿಗಳು […]

ಮಂಗಳೂರು: ಕ್ಯಾಂಪಸ್ ನೊಳಗೂ ಹಿಜಾಬ್ ಗೆ ಅವಕಾಶವಿಲ್ಲ| ಆದೇಶ‌ ಹೊರಡಿಸಿದ ಕಾಲೇಜು ಪ್ರಾಂಶುಪಾಲರು Read More »

ಕಲ್ಲಡ್ಕ: ಮಹಡಿಯಿಂದ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಆಡುತ್ತಿದ್ದಾಗ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಸಿಟಿಪ್ಲಾಜಾ ರೆಸಿಡೆನ್ಸಿಯ ಮೂರನೇ ಮಹಡಿಯ ಸೀಟ್ ಹೌಸ್ ನಲ್ಲಿ ಸಾಹಿಲ್ ಗೆಳೆಯರ ಜೊತೆ ಆಟ ಆಡುತ್ತಿದ್ದ. ಆ ವೇಳೆ ಆಯತಪ್ಪಿ ಮೂರನೇ ಮಹಡಿಯ ಮೇಲಿನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ

ಕಲ್ಲಡ್ಕ: ಮಹಡಿಯಿಂದ ಬಿದ್ದು ಬಾಲಕ ಸಾವು Read More »

ಮಂಗಳೂರು : ಹಿಜಾಬ್ ವಿವಾದಕ್ಕೆ ಡಿಸಿ ಮಧ್ಯಪ್ರವೇಶಿಸಲಿ – ಯು.ಟಿ ಖಾದರ್

ಸಮಗ್ರ ನ್ಯೂಸ್: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್‌ಗೆ ಕೆಲವು ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವ ಪ್ರಕರಣವು ಗಂಭೀರಗೊಳ್ಳುವ ಮುನ್ನ ದ.ಕ. ಜಿಲ್ಲಾಧಿಕಾರಿ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಗುರುವಾರ ರಾಜ್ಯ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ , ಅಬ್ದುಲ್ ಜಬ್ಬಾರ್ ಜೊತೆ ಭೇಟಿಯಾಗಿ ಧಾರ್ಮಿಕ ಸೂಕ್ಷ್ಮ ವಿಷಯಗಳನ್ನು ಎಳೆದು ತಂದು

ಮಂಗಳೂರು : ಹಿಜಾಬ್ ವಿವಾದಕ್ಕೆ ಡಿಸಿ ಮಧ್ಯಪ್ರವೇಶಿಸಲಿ – ಯು.ಟಿ ಖಾದರ್ Read More »

ವಿಟ್ಲ: ವಾಟ್ಸಪ್ ನಲ್ಲಿ ಶಿವಲಿಂಗದ ಕುರಿತು ಅವಹೇಳನ| ಹಿಂಜಾವೆಯಿಂದ ದೂರು

ಸಮಗ್ರ ನ್ಯೂಸ್: ವಾಟ್ಸಾಪ್‌ ಸ್ಟೇಟಸ್‌ನಲ್ಲಿ ಶಿವ ದೇವರನ್ನು ಅವಮಾನಿಸಿ ಬರೆದು ಹಾಕಿದ ಹಿನ್ನಲೆ ಆಕ್ರೋಶಗೊಂಡ ಹಿಂದೂ ಜಾಗರಣ ವೇದಿಕೆ ವಿಟ್ಲ ಪ್ರಖಂಡ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಟ್ಲ ಕಸಬಾದ ಒಕ್ಕೆತ್ತೂರು ಊರುದಂಗಡಿಯ ನಿವಾಸಿ ರಸೀದ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಿಂದೂ ಬಾಂಧವರು ಪೂಜಿಸುವ ಶಿವಲಿಂಗವನ್ನು ಅಸಭ್ಯವಾಗಿ ನಿಂದಿಸಿದ್ದಾನೆ ” ಸಾಬ್ರೆ…. ಒಳ ಉಡುಪುಗಳನ್ನು ಬಿಗಿಯಾಗಿ, ಸರಿಯಾಗಿ ಧರಿಸಿರಿ, ಅಕಸ್ಮಾತ್ “ಅವರ” ಕಣ್ಣಿಗೆ ಆ ಪವಿತ್ರ “ಲಿಂಗ” ನಮ್ಮದೇ

ವಿಟ್ಲ: ವಾಟ್ಸಪ್ ನಲ್ಲಿ ಶಿವಲಿಂಗದ ಕುರಿತು ಅವಹೇಳನ| ಹಿಂಜಾವೆಯಿಂದ ದೂರು Read More »

ಮಂಗಳೂರು: ಮತ್ತೆ ಹಿಜಾಬ್- ಕೇಸರಿ‌ ಕದನ| ಆದೇಶ‌ ಪಾಲಿಸಲು ನಕಾರ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಗಲಾಟೆ ಇದೀಗ ಮತ್ತೆ ಶುರುವಾಗಿದೆ. ಹೈಕೋರ್ಟ್ ತೀರ್ಪು ಬಳಿಕ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಚರ್ಚೆಗೆ ಬಂದಿದ್ದು,ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದೆ. ಹಿಜಾಬ್ ಆದೇಶ ಕಟ್ಟುನಿಟ್ಟು ಪಾಲನೆ ಮಾಡಿ ಇಲ್ಲದಿದ್ದರ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಎಂದು ಒತ್ತಾಯಿಸಿ ಕೆಲವು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಹೈಕೋರ್ಟ್‌ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್‌ ಧರಿಸಿ

ಮಂಗಳೂರು: ಮತ್ತೆ ಹಿಜಾಬ್- ಕೇಸರಿ‌ ಕದನ| ಆದೇಶ‌ ಪಾಲಿಸಲು ನಕಾರ; ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಮಂಗಳೂರು: ಮರಳು ಮಿತ್ರ ಮೂಲಕ ಜಿಲ್ಲೆಗೆ ಮರಳು ಪೂರೈಕೆ – ಡಾ| ರಾಜೇಂದ್ರ ಕೆ.ವಿ

ಸಮಗ್ರ ನ್ಯೂಸ್: ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧವಿದ್ದರೂ ಜಿಲ್ಲೆಯಲ್ಲಿ ಮರಳಿನ ಕೊರತೆ ಎದುರಾಗದು. ಹಲವು ತಿಂಗಳಿಗೆ ಬೇಕಾಗುವಷ್ಟು ಸಂಗ್ರಹವಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಭೂರು ಹಾಗೂ ಮರವೂರಿನ ಅಣೆಕಟ್ಟಿನಲ್ಲಿ ಹೂಳೆತ್ತುವ ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತಿದೆ. ಸಿಹಿ ನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ. “ಮರಳು ಮಿತ್ರ’ ಆಯಪ್‌ನಲ್ಲಿ ಅರ್ಜಿ ಸಲ್ಲಿಸಿ 7,000 ರೂ.ಗೆ 10 ಮೆಟ್ರಿಕ್‌ ಟನ್‌ ಮರಳು ಪಡೆಯಬಹುದು. ಜಿಎಸ್‌ಟಿ ಮತ್ತು

ಮಂಗಳೂರು: ಮರಳು ಮಿತ್ರ ಮೂಲಕ ಜಿಲ್ಲೆಗೆ ಮರಳು ಪೂರೈಕೆ – ಡಾ| ರಾಜೇಂದ್ರ ಕೆ.ವಿ Read More »

ಮಳಲಿ ದರ್ಗಾದಲ್ಲಿ‌ ದೈವೀಶಕ್ತಿ ಗೋಚರ ಹಿನ್ನಲೆ| ಜ್ಯೋತಿಷ ಹೇಳುವವರನ್ನು ಬಂಧಿಸಲು ಡಿ.ಕೆ ಶಿವಕುಮಾರ್ ಆಗ್ರಹ

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳುವ ವಿಚಾರ ಸಂಬಂಧ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವೈಯಕ್ತಿಕ ನಂಬಿಕೆಗಳನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಆದರೆ ಅವು ಅದನ್ನು ಬೇರೆಯವರ ಮೇಲೆ ಹೇರಬಾರದು. ಸಾರ್ವಜನಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಅದು ತಪ್ಪು’ ಎಂದು ಸದಾಶಿವನಗರ ನಿವಾಸದ ಬಳಿ

ಮಳಲಿ ದರ್ಗಾದಲ್ಲಿ‌ ದೈವೀಶಕ್ತಿ ಗೋಚರ ಹಿನ್ನಲೆ| ಜ್ಯೋತಿಷ ಹೇಳುವವರನ್ನು ಬಂಧಿಸಲು ಡಿ.ಕೆ ಶಿವಕುಮಾರ್ ಆಗ್ರಹ Read More »

“ಮಳಲಿ ಮಸೀದಿ ಜಾಗದಲ್ಲಿ ದೈವೀಶಕ್ತಿ ಇದೆ”| ತಾಂಬೂಲ ಪ್ರಶ್ನೆಯಲ್ಲಿ ಹೊರಬಿತ್ತು‌ ಸತ್ಯ!!

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಬಳಿ ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಇಂದು ತಾಂಬೂಲ ಪ್ರಶ್ನೆಗೆ ಮುಂದಾಗಿತ್ತು. ಈ ವೇಳೆ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಇಂದು ಮಳಲಿ ಮಸೀದಿಯ ಸಮೀಪದ ರಾಮಾಂಜನೇಯ ಭಜನೆ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಹಾಕಲಾಗಿದ್ದು, ಈ ವೇಳೆ ಮಸೀದಿ ಇರುವು ಜಾಗದಲ್ಲಿ ದೇವಸ್ಥಾನ ಇದ್ದದ್ದು ನಿಜ. ಸಾಮಾನ್ಯ ತಾಂಬೂಲ

“ಮಳಲಿ ಮಸೀದಿ ಜಾಗದಲ್ಲಿ ದೈವೀಶಕ್ತಿ ಇದೆ”| ತಾಂಬೂಲ ಪ್ರಶ್ನೆಯಲ್ಲಿ ಹೊರಬಿತ್ತು‌ ಸತ್ಯ!! Read More »

ಕರಾವಳಿಯಲ್ಲಿ 18 ಹೊಸ ಪದವಿಪೂರ್ವ ಕಾಲೇಜು ಆರಂಭ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಹಾಗೂ ಉಡುಪಿ ಜಿಲ್ಲೆಯಲ್ಲಿ 4 ಸೇರಿದಂತೆ ಒಟ್ಟು 18 ಹೊಸ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆರಂಭಕ್ಕೆ ಶಿಕ್ಷಣ ಸಂಸ್ಥೆ/ಟ್ರಸ್ಟ್‌ಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸರಕಾರ ಒಪ್ಪಿಗೆ ನೀಡಿದರೆ, ಒಟ್ಟು 14 ಪಿಯು ಕಾಲೇಜುಗಳು ಈ ಶೈಕ್ಷಣಿಕ ವರ್ಷದಿಂದ ಚಟುವಟಿಕೆ ಆರಂಭಿಸುವ ನಿರೀಕ್ಷೆಯಿದೆ. ದ.ಕ. ಜಿಲ್ಲೆಯ ಅಡ್ಡೂರು, ಸೂರಿಂಜೆ, ಬಜಪೆ, ಕಿನ್ನಿಗೋಳಿ, ಪುತ್ತೂರು, ಉಡುಪಿಯ ಕಾಪು, ಕಟಪಾಡಿ, ವಕ್ವಾಡಿ ಒಳಗೊಂಡಂತೆ 18 ಕಡೆಗಳಲ್ಲಿ ಹೊಸ ಪ್ರಸ್ತಾವನೆ ಸಲ್ಲಿಕೆಯಾಗಿದೆ. ದ.ಕ.

ಕರಾವಳಿಯಲ್ಲಿ 18 ಹೊಸ ಪದವಿಪೂರ್ವ ಕಾಲೇಜು ಆರಂಭ!? Read More »

ಮಂಗಳೂರು: ತಾಂಬೂಲ ಪ್ರಶ್ನೆ ಹಿನ್ನಲೆ; ಮಳಲಿ ದರ್ಗಾ ಸುತ್ತಮುತ್ತ ನಿಷೇದಾಜ್ಞೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ತಾಂಬೂಲ ಪ್ರಶ್ನೆ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದ್ದು, ಮಳಲಿ ಜುಮ್ಮಾ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆಯುಕ್ತ ಎನ್.ಶಶಿಕುಮಾರ್ ಖುದ್ದು ನಿಗಾ ವಹಿಸಿದ್ದು, ನಿನ್ನೆ ರಾತ್ರಿ 8 ಗಂಟೆಯಿಂದ ನಾಳೆ ಬೆಳಗ್ಗೆ 8 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಭದ್ರತೆ ನೀಡಲಾಗಿದ್ದು, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ ಬಂದ್ ಮಾಡಲಾಗಿದೆ. ಕೈಕಂಬ ಕಡೆಯಿಂದ ಜೋಡುತಡಮೆ ರಸ್ತೆಯವರೆಗೆ ನಿಷೇಧಿತ ಪ್ರದೇಶವಾಗಿದ್ದು, ಐದು

ಮಂಗಳೂರು: ತಾಂಬೂಲ ಪ್ರಶ್ನೆ ಹಿನ್ನಲೆ; ಮಳಲಿ ದರ್ಗಾ ಸುತ್ತಮುತ್ತ ನಿಷೇದಾಜ್ಞೆ Read More »