ಕರಾವಳಿ

ಮಂಗಳೂರು: ಜೂ. 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ

ಸಮಗ್ರ ನ್ಯೂಸ್: ಕರಾವಳಿ ಭಾಗಗಳಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ಮೀನುಗಾರರ ಹಿತದೃಷ್ಠಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೊಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದ್ದು ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ […]

ಮಂಗಳೂರು: ಜೂ. 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ Read More »

ಬೆಳ್ತಂಗಡಿ: ಗೊಡಂಬಿ ಆಕಾರದಲ್ಲಿ ಮೊಟ್ಟೆ ಇಟ್ಟ ಕೋಳಿ

ಸಮಗ್ರ ನ್ಯೂಸ್: ಗೊಡಂಬಿ ರೀತಿಯ ಆಕಾರದಲ್ಲಿ ಕೋಳಿಯೊಂದು ಮೊಟ್ಟೆ ಇಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಈ ರೀತಿಯ ಮೊಟ್ಟೆ ಇಡುತ್ತಿದೆ. ಈ ಮೊಟ್ಟೆಗಳನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿವೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಆಶ್ಚರ್ಯ ಪಡುವಂತಾಗಿದೆ.

ಬೆಳ್ತಂಗಡಿ: ಗೊಡಂಬಿ ಆಕಾರದಲ್ಲಿ ಮೊಟ್ಟೆ ಇಟ್ಟ ಕೋಳಿ Read More »

ಮಂಗಳೂರು: ಹೆಚ್ಚುತ್ತಿರುವ ಡೆಂಗ್ಯೂ, ಮಲೇರಿಯಾ| ಮುನ್ನೆಚ್ಚರಿಕೆ ವಹಿಸಲು ಡಿ.ಸಿ ಸೂಚನೆ

ಸಮಗ್ರ ನ್ಯೂಸ್: ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರ ಮಾರ್ಗದರ್ಶನದಂತೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಆರೋಗ್ಯ ಇಲಾಖೆ, ಕೆಎಸ್ಸಾರ್ಟಿಸಿ, ಮೆಸ್ಕಾಂ, ಪಿಡಬ್ಲ್ಯುಡಿ, ಆರ್‌ಟಿಓ, ಮಹಾ ನಗರ ಪಾಲಿಕೆ ಕಚೇರಿ ಸೇರಿದಂತೆ ನಾನಾ ಕಚೇರಿಗಳ ಸುತ್ತಮುತ್ತ ಸ್ವಚ್ಛತಾ, ಲಾರ್ವ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಮಂಗಳೂರು, ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿಯಲ್ಲಿ ಮಳೆಯಾಗಿದೆ. ಕಳೆದ ಎರಡು ವರ್ಷಗಳಿಂದ ಪುತ್ತೂರು, ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ಡೆಂಗ್ಯೂ,

ಮಂಗಳೂರು: ಹೆಚ್ಚುತ್ತಿರುವ ಡೆಂಗ್ಯೂ, ಮಲೇರಿಯಾ| ಮುನ್ನೆಚ್ಚರಿಕೆ ವಹಿಸಲು ಡಿ.ಸಿ ಸೂಚನೆ Read More »

ಸುಳ್ಯ: ಶಾಂತಿನಗರ ತಾಲೂಕು ಕ್ರೀಡಾಂಗಣದಲ್ಲಿ ಬಿರುಕು| ಗುಡ್ಡ ಕುಸಿತದ ಭೀತಿಯಲ್ಲಿ‌ ನಿವಾಸಿಗಳು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನಗರದ ಹೊರವಲಯದ ಶಾಂತಿನಗರ ಎಂಬಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯು ಇದೀಗ ಅಪಾಯವನ್ನು ತಂದೊಡ್ಡಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಕ್ರೀಡಾಂಗಣ ಬಿರುಕು ಬಿಟ್ಟಿದ್ದು ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಳ್ಯ ಶಾಸಕ ಹಾಗೂ ಸಚಿವ ಎಸ್. ಅಂಗಾರ ಅವರ ಮುತುವರ್ಜಿಯಲ್ಲಿ ಈ ಕ್ರೀಡಾಂಗಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.‌ ಈ ಹಿಂದೆ ಇದ್ದಂತಹ ಕ್ರೀಡಾಂಗಣವು ನೆಲ ಮಟ್ಟದಿಂದ ಎತ್ತರದಲ್ಲಿ

ಸುಳ್ಯ: ಶಾಂತಿನಗರ ತಾಲೂಕು ಕ್ರೀಡಾಂಗಣದಲ್ಲಿ ಬಿರುಕು| ಗುಡ್ಡ ಕುಸಿತದ ಭೀತಿಯಲ್ಲಿ‌ ನಿವಾಸಿಗಳು Read More »

ಕುಕ್ಕೆ: ಬೀದಿಗೆ ಬಂದ ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ ನಡುವಿನ ಒಳಜಗಳ| ನಿಂಗಯ್ಯ ವಿರುದ್ದ ದೂರಿನ ಸರಮಾಲೆ ಸಲ್ಲಿಸಿದ ಮೋಹನ್ ರಾಂ ಸುಳ್ಳಿ|

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ನಡುವಿನ ಜಟಾಪಟಿ ತಾರಕಕ್ಕೇರಿದೆ. ಉಭಯ ಬಣಗಳು ಪರಸ್ಪರ ದೂರು ಪ್ರತಿ ದೂರಿನಲ್ಲಿ ತೊಡಗಿವೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರಸಿದ್ಧ ಕ್ಷೇತ್ರ ಮಾತ್ರವಲ್ಲದೆ, ರಾಜ್ಯದಲ್ಲಿ ಅತಿಹೆಚ್ಚು ಆದಾಯ ಬರುವ ಸ್ಥಳವೂ ಹೌದು. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಈ ದೇವಸ್ಥಾನದಲ್ಲಿ ಆಡಳಿತ ಮಂಡಳಿ – ಕಾರ್ಯ ನಿರ್ವಹಣಾಧಿಕಾರಿ ನಡುವಿನ ಜಟಾಪಟಿ ಬೀದಿಗೆ ಬಂದಿದೆ. ಆಡಳಿತ ಮಂಡಳಿ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ವಿರುದ್ಧ

ಕುಕ್ಕೆ: ಬೀದಿಗೆ ಬಂದ ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ ನಡುವಿನ ಒಳಜಗಳ| ನಿಂಗಯ್ಯ ವಿರುದ್ದ ದೂರಿನ ಸರಮಾಲೆ ಸಲ್ಲಿಸಿದ ಮೋಹನ್ ರಾಂ ಸುಳ್ಳಿ| Read More »

ಮಂಗಳೂರು: ಜೊತೆಯಾಗಿ ಬರೆದ ತಾಯಿ- ಮಗಳು ಎಸ್ಎಸ್ಎಲ್ಸಿ ಪಾಸ್

ಸಮಗ್ರ ನ್ಯೂಸ್: ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಜತೆಯಾಗಿ ಬರೆದಿದ್ದ ಮಂಗಳೂರು ತಾಲೂಕಿನ ಉಳ್ಳಾಲದ ತಾಯಿ ಹಾಗೂ ಮಗಳು ಇಬ್ಬರು ಕೂಡ ತೇರ್ಗಡೆಯಾಗಿದ್ದಾರೆ. ಮುನ್ನೂರು ಗ್ರಾಮದ ತೇವುಲ ನಿವಾಸಿ ಮಮತಾ ರಮೇಶ್ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದು, ಈಕೆಯ ಪುತ್ರಿ ಖುಷಿಯೂ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. 21 ವರ್ಷಗಳ ಹಿಂದೆ ವಿದ್ಯಾರ್ಥಿ ಜೀವನದಲ್ಲಿ ಸ್ವಯಂ ನಿರ್ಧಾರದಿಂದ ಎಸ್ ಎಸ್ ಎಲ್ ಸಿ ಕಲಿಯುವ

ಮಂಗಳೂರು: ಜೊತೆಯಾಗಿ ಬರೆದ ತಾಯಿ- ಮಗಳು ಎಸ್ಎಸ್ಎಲ್ಸಿ ಪಾಸ್ Read More »

ಸುಳ್ಯ: ಶಾಂತಿನಗರ ಕ್ರೀಡಾಂಗಣ ಸಮಸ್ಯೆಗೆ ಕಾಂಗ್ರೆಸ್ ಎಂಟ್ರಿ| ಗುಡ್ಡ ಅಗೆದು ದುಡ್ಡು ಮಾಡಲು ಹೊರಟ ಶಾಸಕ ಎಸ್.ಅಂಗಾರ- ಪಿ ಸಿ ಜಯರಾಮ್ ಆರೋಪ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಹೊರವಲಯದ ಶಾಂತಿನಗರ ಎಂಬಲ್ಲಿ ನಢಯುತ್ತಿರುವ ಕ್ರೀಡಾಂಗಣ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಕುರಿತಂತೆ ಕಾಂಗ್ರೆಸ್ ಮುಖಂಡರು ಇಂದು ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಕಾಮಗಾರಿಯ ಅವ್ಯವಸ್ಥೆ ಬಗ್ಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಮೇ 20 ರಂದು ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರುಗಳು ಮೊದಲಿಗೆ ಅಪಾಯದ ಸ್ಥಿತಿಯಲ್ಲಿರುವ ಮಣ್ಣಿನ ರಾಶಿ ಮತ್ತು, ಕ್ರೀಡಾಂಗಣದಿಂದ ಹರಿಯುವ ನೀರು

ಸುಳ್ಯ: ಶಾಂತಿನಗರ ಕ್ರೀಡಾಂಗಣ ಸಮಸ್ಯೆಗೆ ಕಾಂಗ್ರೆಸ್ ಎಂಟ್ರಿ| ಗುಡ್ಡ ಅಗೆದು ದುಡ್ಡು ಮಾಡಲು ಹೊರಟ ಶಾಸಕ ಎಸ್.ಅಂಗಾರ- ಪಿ ಸಿ ಜಯರಾಮ್ ಆರೋಪ Read More »

ಬಂಟ್ವಾಳ : ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರು ಖದೀಮರ ಬಂಧನ

ಸಮಗ್ರ ನ್ಯೂಸ್: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಏಪ್ರಿಲ್ 23 ಮಧ್ಯರಾತ್ರಿ ಬಂಟ್ವಾಳ ತಾಲ್ಲೂಕು ಬಿ ಮೂಡ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಿಲ್ಲಿಸಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಯವರಾದ ಅನೂಫ್ ಎಂಬವರ ಬೈಕ್ ಕಳ್ಳತನವಾಗಿತ್ತು ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಕಳೆದ ಏಪ್ರಿಲ್ ಇಪ್ಪತ್ತ ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ ಗ್ರಾಮದ

ಬಂಟ್ವಾಳ : ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರು ಖದೀಮರ ಬಂಧನ Read More »

ಹಿಜಾಬ್ ವಿವಾದದ ನಡುವೆ ಶಾಲೆಗಳಲ್ಲಿ ಹೋಮಹವನ| ಡಿಡಿಪಿಐ ವರದಿ ಕೇಳಿದ ದ.ಕ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ನಿಷೇಧ ಇರುವ ನಡುವಯೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸರಕಾರಿ ಶಾಲೆಗಳಲ್ಲಿ ಪ್ರಾರಂಭೋತ್ಸವದ ವೇಳೆ ವೈದಿಕ ಆಚರಣೆ ನಡೆಸಲಾಗಿದೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ಬಗ್ಗೆ ವರದಿ ನೀಡಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಡಿಡಿಪಿಐಗೆ ಸೂಚಿಸಿದ್ದಾರೆ. ಮೇ 16 ರಂದು ರಾಜ್ಯಾದ್ಯಂತ ಶಾಲೆಗಳು ಆರಂಭಗೊಂಡಿದ್ದು ಈ ವೇಳೆ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳಲ್ಲಿ ವಿವಿಧ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ವೇಳೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು,

ಹಿಜಾಬ್ ವಿವಾದದ ನಡುವೆ ಶಾಲೆಗಳಲ್ಲಿ ಹೋಮಹವನ| ಡಿಡಿಪಿಐ ವರದಿ ಕೇಳಿದ ದ.ಕ ಜಿಲ್ಲಾಧಿಕಾರಿ Read More »

ದ.ಕ ಇಂದು (ಮೇ. 19) ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್:- ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.ಕ ಇಂದು (ಮೇ. 19) ಶಾಲೆಗಳಿಗೆ ರಜೆ Read More »