ಅಕ್ಕಿ ಮೂಟೆ ಎತ್ತಲು ವಿದ್ಯಾರ್ಥಿಗಳ ಬಳಸಿದ ಶಾಲಾ ಅಧ್ಯಾಪಕ ಹಾಗೂ ಸೊಸೈಟಿ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ದೂರು
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅಡ್ಕಾರು ಅನುದಾನಿತ ಶಾಲೆಯೊಂದರ ಅಧ್ಯಾಪಕರು ಪಡಿತರ ಕೇಂದ್ರದಲ್ಲಿ ಶಾಲೆಯ ಅಕ್ಕಿಯನ್ನು ಬದಲಾಯಿಸಲು ವಿದ್ಯಾರ್ಥಿಗಳನ್ನು ಬಳಸಿರುವ ವಿಡಿಯೋ ಚಿತ್ರಣ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಇಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ದೂರು ನೀಡಿದ್ದು ದೂರಿನಲ್ಲಿ ವಿದ್ಯಾರ್ಥಿಗಳನ್ನು ಅಕ್ಕಿ ಚೀಲ ಎತ್ತಲು ಬಳಸಿದ ಅಧ್ಯಾಪಕರು ಮತ್ತು ಸೊಸೈಟಿ ಸಿಬ್ಬಂದಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಉಲ್ಲೇಖಿಸಲಾಗಿದೆ.









