ಕರಾವಳಿ

ಮಂಗಳೂರು: ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕಿ ಸುಜಾತಾ ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ಯಾಕ್ಸೋಫೋನ್ ವಾದಕಿ ಸುಜಾತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ತಿನಗರದ ಫ್ಲ್ಯಾಟ್ ವೊಂದರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶಕ್ತಿನಗರದ ಫ್ಲ್ಯಾಟ್ ನಲ್ಲಿ ಪತಿ, ತಂದೆ, ತಾಯಿ ಮತ್ತು ಮಗುವಿನೊಂದಿಗೆ ವಾಸವಿದ್ದ, ಮೂಲತಃ ಮುಲ್ಕಿಯವರಾದ ಸ್ಯಾಕ್ಸೊಫೋನ್ ವಾದಕಿ ಸುಜಾತಾ ದೇವಾಡಿಗ (29) ಆತ್ಮಹತ್ಯೆ ಮಾಡಿಕೊಂಡವರು. ತಲೆ ನೋವು ಅಗುತ್ತಿದೆ ಎಂದು ಹೇಳಿ ಕೋಣೆಗೆ ಹೋದವರು ಹೊರಗೆ ಬಾರದಿದ್ದಾಗ ಮನೆಯವರು ಕೋಣೆಯಲ್ಲಿ ನೋಡಿದಾಗ ಘಟನೆ ಗೊತ್ತಾಗಿದೆ. ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ […]

ಮಂಗಳೂರು: ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕಿ ಸುಜಾತಾ ಆತ್ಮಹತ್ಯೆ Read More »

ಕೊಲ್ಲೂರಿಗೆ ಹೊರಟವರು ತಲುಪಿದ್ದು ಗೋವಾಕ್ಕೆ..!; ದೇವಿ ದರ್ಶನದ ಬದಲು ಕಂಡಿದ್ದು ಬಿಕಿನಿ ಸುಂದರಿಯರು!!

ಕಾಸರಗೋಡು: ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿ ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ನಡೆದಿದೆ. ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ

ಕೊಲ್ಲೂರಿಗೆ ಹೊರಟವರು ತಲುಪಿದ್ದು ಗೋವಾಕ್ಕೆ..!; ದೇವಿ ದರ್ಶನದ ಬದಲು ಕಂಡಿದ್ದು ಬಿಕಿನಿ ಸುಂದರಿಯರು!! Read More »

ಬೈಂದೂರು: ಬೈಕ್ ಸ್ಕಿಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು

ಬೈಂದೂರು: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ ದುರ್ದೈವಿ. ಅವರು ಮೇ.17ರಂದು ಬೆಳಗ್ಗೆ ಗ್ರಾಮ ಪಂಚಾಯತ್ ಗೆ ಬಂದು ಮೀಟಿಂಗ್ ಮುಗಿಸಿಕೊಂಡು ಮಧ್ಯಾಹ್ನ ಊಟಕ್ಕೆ ಮುರೂರು ನಲ್ಲಿ ಇರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿ ಕುಳಿತು ಕೊಂಡು ಹೋಗುವಾಗ ಆಕಸ್ಮಿಕ ವಾಗಿ ಬೈಕ್ ಸ್ಕಿಡ್ ಆಗಿ ಬಿದ್ದು

ಬೈಂದೂರು: ಬೈಕ್ ಸ್ಕಿಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು Read More »

ಉಡುಪಿ: ನಿಶ್ಚಿತಾರ್ಥ ಬಂದಿದ್ದ ತಾಯಿ ಮಗು ನಿಗೂಢ ನಾಪತ್ತೆ

ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿಯೊಂದಿಗೆ ಮೇ 13ರಿಂದ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ

ಉಡುಪಿ: ನಿಶ್ಚಿತಾರ್ಥ ಬಂದಿದ್ದ ತಾಯಿ ಮಗು ನಿಗೂಢ ನಾಪತ್ತೆ Read More »

ವಿಟ್ಲ: ಹೃದಯಾಘಾತದಿಂದ ಹೈಸ್ಕೂಲ್ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅನ್ವಿತ ಹೆಗ್ಡೆ ಎಂದು ಗುರುತಿಸಲಾಗಿದೆ. ಈಕೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇದ್ದ ಓರ್ವ ಮಗಳನ್ನು ಕಳೆದುಕೊಂಡ ಹೆತ್ತವರ ದುಃಖ ಮುಗಿಲುಮುಟ್ಟಿದೆ.

ವಿಟ್ಲ: ಹೃದಯಾಘಾತದಿಂದ ಹೈಸ್ಕೂಲ್ ವಿದ್ಯಾರ್ಥಿನಿ ಸಾವು Read More »

ಬಂಟ್ವಾಳ: ಕಾರಿಂಜೇಶ್ವರ ಬೆಟ್ಟದಿಂದ ಉರುಳಿದ ಬಂಡೆ| ಅಕ್ರಮ ಗಣಿಗಾರಿಕೆ ಪರಿಣಾಮವೆಂದ ಸ್ಥಳೀಯರು|

ಸಮಗ್ರ ನ್ಯೂಸ್: ಮಳೆಗಾಲ ಆರಂಭವಾಗುತ್ತಿದ್ದಂತೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರನ ಸನ್ನಿದಿಯ ಬಲಭಾಗದಿಂದ ಬೃಹತ್ ಗಾತ್ರದ ಬಂಡೆ ಕಲ್ಲೊಂದು ಉರುಳಿ ಕೆಳಗೆ ಬಿದ್ದಿದೆ. ಘಟನೆಯಿಂದ ಕಾರಿಂಜ ರಸ್ತೆಗೆ ಮರ ಉರುಳಿ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರ ನೆರವಿನಿಂದ ರಸ್ತೆಯಲ್ಲಿದ್ದ ಮರಗಳನ್ನು ತೆರವು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಗುಡ್ಡದಲ್ಲಿರುವ ಕೆಲವು ಮರಗಳಿಗೆ ಹಾನಿಯಾಗಿದೆ. ಬೆಳಿಗ್ಗೆ ಸುಮಾರು 9 ಗಂಟೆಯ ಬಳಿಕ ಕಾರಿಂಜೇಶ್ವರನ ದೇವಾಲಯದ ಸಮೀಪದಲ್ಲೇ

ಬಂಟ್ವಾಳ: ಕಾರಿಂಜೇಶ್ವರ ಬೆಟ್ಟದಿಂದ ಉರುಳಿದ ಬಂಡೆ| ಅಕ್ರಮ ಗಣಿಗಾರಿಕೆ ಪರಿಣಾಮವೆಂದ ಸ್ಥಳೀಯರು| Read More »

ಪುತ್ತೂರು: ರೈಲು ಬಡಿದು ಯುವಕ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರು ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಬಡಿದು ಆಲಂಕಾರು ಸಮೀಪದ ಕೊಯಿಲದ ಯುವಕ ಸಾವನ್ನಪ್ಪಿರುವ ಘಟನೆ ಮೇ 15ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ ಹೇಮಾವತಿ ದಂಪತಿ ಪುತ್ರ ಕಾರ್ತಿಕ್(24ವ.)ಮೃತಪಟ್ಟ ದುರ್ದೈವಿ ಯುವಕ. ಮಿತ್ತೂರುನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಬಡಿದು ಯುವಕ ದುರ್ಮರಣ Read More »

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ!

ಸಮಗ್ರ ನ್ಯೂಸ್: ತೈಲದರ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ‌ ಎದುರಾಗಿದೆ. ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಇನ್ನುಳಿದ ನಗರಗಳಲ್ಲೂ ಸಹ 100 ರೂ. ಆಸುಪಾಸಿನಲ್ಲಿದೆ. ಚಂಡಮಾರುತದ ಕಾರಣಕ್ಕೆ ಭಾರಿ ಮಳೆಯಾಗಿರುವ ಕಾರಣ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ರೈತರು ಬೆಳೆದ ಟೊಮೊಟೊ ಬೆಳೆ ಹಾಳಾಗಿದೆ. ಇದೀಗ ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರ ಬೆಲೆ ಮುಗಿಲು

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ! Read More »

ಉಡುಪಿ: ದೇವಾಲಯವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂಮರಿಗೆ ಬಿಟ್ಕೊಡಿ – ಪೇಜಾವರ ಶ್ರೀ

ಸಮಗ್ರ ನ್ಯೂಸ್: ಹಿಂದೆ ದೇವಾಲಯಗಳನ್ನು ಖರೀದಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅದಕ್ಕೆ ಆಕ್ಷೇಪವಿಲ್ಲ. ಆದರೆ, ದೇವಾಲಯಗಳನ್ನು ಅತಿಕ್ರಮಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅವುಗಳ ಮರು ಪರಿವರ್ತನೆ ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ಹಿಂದೆ ಆಗಿಹೋಗಿರುವ ಘಟನೆಗಳ ಪ್ರಕರಣಗಳಲ್ಲಿ ನ್ಯಾಯಾಲಯ ನೀಡುವ ತೀರ್ಪನ್ನು ಹಿನ್ನಡೆ ಎಂದು ಭಾವಿಸದೆ ಪ್ರತಿಯೊಬ್ಬರೂ ಪಾಲಿಸಬೇಕು. ವಿವಾದಿತ ಜಾಗ ಪೂಜಾ ಮಂದಿರ ಎಂದು ಸಾಬೀತಾದರೆ ಹಿಂದೂಗಳಿಗೆ ಬಿಟ್ಟುಕೊಡಬೇಕು. ದರ್ಗಾ ಎಂಬುದು ಸಾಬೀತಾದರೆ ಮುಸಲ್ಮಾನರಿಗೆ ಬಿಟ್ಟುಕೊಡಬೇಕು. ಧರ್ಮ

ಉಡುಪಿ: ದೇವಾಲಯವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂಮರಿಗೆ ಬಿಟ್ಕೊಡಿ – ಪೇಜಾವರ ಶ್ರೀ Read More »

ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರ ಮತ್ತು ನದಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗಳಲ್ಲಿ ಈ ಕುರಿತು ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೇ 17 ಮತ್ತು 19ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 18ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ‌ ಸಹಿತ ಭಾರೀ‌ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಹಿಂಗಾರು

ಕರಾವಳಿಯಲ್ಲಿ ಮೇ.19ರವರೆಗೆ ಭಾರೀ ಮಳೆ ಸಾಧ್ಯತೆ Read More »