ಮಂಗಳೂರು: ಅಡ್ಯಾರ್ ನಲ್ಲಿ ಎಸ್ಡಿಪಿಐ ಬೃಹತ್ ಜನಾಧಿಕಾರ ಸಮಾವೇಶ| ಸರ್ಕಾರ, ಹಿಂದೂ ಸಂಘಟನೆಗಳ ಮೇಲೆ ಮುಗಿಬಿದ್ದ ನಾಯಕರು|
ಸಮಗ್ರ ನ್ಯೂಸ್: ರಾಜ್ಯ ಸರಕಾರದ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ (ಮೇ.27) ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಸಂಘಪರಿವಾರದ ಚಡ್ಡಿಗಳೇ ಧಂ ಇದ್ರೆ, ತಾಕತ್ತಿದ್ರೆ ಬಳ್ಳಾರಿಯಲ್ಲಿ ನಿಮ್ಮದೇ ನಾಯಕ ಜನಾರ್ದನ ರೆಡ್ಡಿ 200 ವರ್ಷ ಹಳೆಯದಾದ ದೇವಸ್ಥಾನ ಒಡೆದ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಕೇಳಿ. ಇಲ್ಲಿ ವ್ಯಾಪಾರ ಬಹಿಷ್ಕಾರ ಮಾಡಿ, ನಿಮ್ಮ ಗುರು ಬೊಮ್ಮಾಯಿ









