ಕರಾವಳಿ

ಮಂಗಳೂರು: ರಾತ್ರಿ ಬಾವಿಯೊಳಗಿಂದ ಕೇಳಿ ಬರ್ತಾ ಇತ್ತು ಯುವಕನ ಅರಚಾಟ| ಸದ್ದು ಕೇಳಿ ಇಣುಕಿ ನೋಡಿದರೆ…!

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಕುಂಟಿಕಾನದ ಬಳಿ ರಾತ್ರಿ ವೇಳೆ ಬಾವಿಗೆ ಬಿದ್ದು ಗಾಯಗೊಂಡಿದ್ದ ಯುವಕನೋರ್ವನನ್ನು ಕದ್ರಿ ಅಗ್ನಿಶಾಮಕ ಸಿಬಂದಿಗಳು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆ ಬದಿಯ ಮನೆಯೊಂದರ ಬಳಿ ಮುಂಜಾನೆಯಿಂದಲೇ ಯುವಕನ ಬೊಬ್ಬೆಕೇಳುತ್ತಿತ್ತು. ಹುಡುಕಾಡಿದಾಗ ಆತ ಬಾವಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕದವರು ಕಾರ್ಯಚರಣೆ ನಡೆಸಿ ಯುವಕನನ್ನು ಮೇಲಕ್ಕೆತ್ತಿದ್ದಾರೆ. ಈತನನ್ನು 25ರಿಂದ 26 ವರ್ಷ ವಯಸ್ಸಿನ ಅಸ್ಸಾಂ ಮೂಲದ ಯುವಕನೆಂದು ಗುರುತಿಸಲಾಗಿದೆ. ಈತ ಅಲ್ಲಿಗೆ ಯಾಕೆ ಬಂದಿದ್ದ, ಹೇಗೆ ಬಾವಿಗೆ ಬಿದ್ದ […]

ಮಂಗಳೂರು: ರಾತ್ರಿ ಬಾವಿಯೊಳಗಿಂದ ಕೇಳಿ ಬರ್ತಾ ಇತ್ತು ಯುವಕನ ಅರಚಾಟ| ಸದ್ದು ಕೇಳಿ ಇಣುಕಿ ನೋಡಿದರೆ…! Read More »

ಕಡಬ: ಚರ್ಚ್‌ ಗೋಪುರದಲ್ಲಿ ಹಾರಿತು ಕೇಸರಿ ಧ್ವಜ!?

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಸಮೀಪದ ಎನ್ಕಜೆಯಲ್ಲಿನ ಇಮ್ಯಾನ್ಯುವೆಲ್‌ ಎ.ಜಿ. ಚರ್ಚ್‌ನ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ್ದಾರೆ ಎನ್ನುವ ಸುದ್ದಿ ಹಬ್ಬಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರ್ಚ್‌ನಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಕಿಡಿಗೇಡಿಗಳು ಎರಡು ದಿನಗಳ ಹಿಂದೆ ಗೋಪುರದ ಶಿಲುಬೆಯನ್ನು ಕಿತ್ತು ಅಲ್ಲಿ ಕೇಸರಿ ಧ್ವಜ ಅಳವಡಿಸಿ ಚರ್ಚ್‌ನ ಬಾಗಿಲು ಒಡೆದು ಒಳಪ್ರವೇಶಿಸಿ ಹನುಮಂತನ ಫೋಟೋ ಇರಿಸಿ ದೀಪ ಹಚ್ಚಿದ್ದಾರೆ ಎಂದು ಆರೋಪಿಸಿ

ಕಡಬ: ಚರ್ಚ್‌ ಗೋಪುರದಲ್ಲಿ ಹಾರಿತು ಕೇಸರಿ ಧ್ವಜ!? Read More »

‌ಮಂಗಳೂರು: ಶೀಘ್ರದಲ್ಲೇ ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ – ರಮಾನಾಥ್ ರೈ

ಸಮಗ್ರ ನ್ಯೂಸ್: ‘ಬಿಜೆಪಿಯೂ ತಾವು ಧರ್ಮದ ಹೆಸರಿನಲ್ಲಿ ಮತ ಗಳಿಸುತ್ತೇವೆ ಹೊರತು ಅಭಿವೃದ್ಧಿಯಿಂದಲ್ಲ ಎಂಬ ತಪ್ಪು ಕಲ್ಪನೆ ಹೊಂದಿದ್ದು, ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ’ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ. ಮೇ 2 ರ ಸೋಮವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,  “ವಾಣಿಜ್ಯ ಎಲ್‌ಪಿಜಿ ಬೆಲೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರುತ್ತಿದೆ. ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ

‌ಮಂಗಳೂರು: ಶೀಘ್ರದಲ್ಲೇ ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ – ರಮಾನಾಥ್ ರೈ Read More »

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟು‌ನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ ಇವರು ಎ.28 ರಂದು ಸಂಜೆ ವೇಳೆ‌ ಮನೆಯ‌ ಅಂಗಳದಲ್ಲಿದ್ದ ತೆಂಗಿನ ಮರದಿಂದ ಕಾಯಿ ಕೊಯ್ಯಲೆಂದು ಮರ ಏರಿದ್ದವರು, ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ತಕ್ಷಣ‌ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ಮುಖಾಮುಖಿ – ಬೈಕ್ ಸವಾರನಿಗೆ ಗಾಯ

ಸಮಗ್ರ ನ್ಯೂಸ್: ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ತಾಯಿ, ಮಗ ಗಾಯಗೊಂಡಿರುವ ಘಟನೆ ಪುತ್ತೂರಿನ ನೆಹರೂನಗರ ಬಳಿ ನಡೆದಿದೆ. ನೆಹರೂ ನಗರ ವಿವೇಕಾನಂದ ಕಾಲೇಜು ಕ್ಯಾಂಪಸ್ ಬಳಿಯ ಸರ್ವಿಸ್ ಸ್ಟೇಷನ್ ಎದುರು ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ದಾರಂದಕುಕ್ಕು ನಿವಾಸಿ ಅಭಿಷೇಕ್ ಕೆ.ಎಸ್(24ವ)ಮತ್ತು ಹಿಂಬದಿ ಸವಾರೆಯಾಗಿದ್ದ ಅವರ ತಾಯಿ ಭಾರತಿ ಕೆ. ಎಸ್. (49)ರವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ

ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ಮುಖಾಮುಖಿ – ಬೈಕ್ ಸವಾರನಿಗೆ ಗಾಯ Read More »

ಮಣಿಪಾಲ: ಬಾಡಿಗೆ ನೆಪದಲ್ಲಿ ಕಾರು ಚಾಲಕನಿಂದ ಸುಲಿಗೆ

ಸಮಗ್ರ ನ್ಯೂಸ್: :  ಕಾರಿನ ಚಾಲಕನನ್ನು ಬಾಡಿಗೆಗೆ ಕರೆದೊಯ್ದು ಬಳಿಕ ಬೆದರಿಸಿ , ಹಲ್ಲೆಗೈದು ಸುಲಿಗೆ ಮಾಡಿದ ಘಟನೆ ನಡೆದಿದೆ. ಬಡಗಬೆಟ್ಟುವಿನ ಶಾಂತಿನಗರದ ಶ್ರೀಧರ ಭಕ್ತ(61) ಕಾರು ಚಾಲಕರಾಗಿದ್ದು, ಎ.27 ರಂದು ರಾತ್ರಿ ಈ ಘಟನೆ ನಡೆದಿದೆ. ಶ್ರೀಧರ್ ಅವರು ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಜೆ ತನ್ನ ಕಾರನ್ನು ಬಾಡಿಗೆಗೆ ನಿಲ್ಲಿಸಿದ್ದು, ಸುಮಾರು 35ರಿಂದ 45 ವರ್ಷ ಪ್ರಾಯದ ತುಳು ಮಾತನಾಡುವ ನಾಲ್ಕು ಮಂದಿ ಬಂದು, ಕಾರವಾರಕ್ಕೆ ಹೋಗಲು ಕಾರನ್ನು ಬಾಡಿಗೆ ಗೊತ್ತು ಮಾಡಿ ಕರೆದುಕೊಂಡು ಹೋಗಿದ್ದರು.

ಮಣಿಪಾಲ: ಬಾಡಿಗೆ ನೆಪದಲ್ಲಿ ಕಾರು ಚಾಲಕನಿಂದ ಸುಲಿಗೆ Read More »

ಮಂಗಳೂರು: ಗುಟ್ಕಾ ಜಗಿದ ಬಸ್ ಚಾಲಕರಿಗೆ 5000 ದಂಡ ವಿಧಿಸಿದ ಆರ್ ಟಿಒ ಅಧಿಕಾರಿಗಳು!

ಸಮಗ್ರ ನ್ಯೂಸ್: ಚಾಲನೆ ವೇಳೆ ಗುಟ್ಕಾ ಜಗಿಯುತ್ತಿದ್ದ ಬಸ್‌ ಚಾಲಕರಿಗೆ‌ ಮಂಗಳೂರು ಆರ್‌ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ.ಬಿಜೈ ಬಳಿ ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್‌ಗಳ ಚಾಲಕರು ಗುಟ್ಕಾ ಜಗಿಯುತ್ತ ಅಧಿಕಾರಿಗಳ ಮುಂದೆ ಬಂದರು. ಇದನ್ನು ಗಮನಿಸಿದ ಆರ್‌ಟಿಒ ಅಧಿಕಾರಿಗಳು ಇಬ್ಬರು ಚಾಲಕರಿಗೂ ತಲಾ 5,000 ರೂ. ದಂಡ ವಿಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್‌ಟಿಒ ಆರ್‌.ಎಂ. ವರ್ಣೇಕರ್‌, “ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಮಾತ್ರವಲ್ಲದೆ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಿ ಚಲಾಯಿಸುವವರ

ಮಂಗಳೂರು: ಗುಟ್ಕಾ ಜಗಿದ ಬಸ್ ಚಾಲಕರಿಗೆ 5000 ದಂಡ ವಿಧಿಸಿದ ಆರ್ ಟಿಒ ಅಧಿಕಾರಿಗಳು! Read More »

ಮಂಗಳೂರು: ಬಾಟಲ್, ಚಾಕುವಿನಿಂದ ತಿವಿದು ರೌಡಿಶೀಟರ್ ನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಂಗಳೂರಿನ‌ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಯುವಕನನ್ನು ತಂಡವೊಂದು ಕೊಲೆಗೈದ ಘಟನೆ ಗುರುವಾರ ನಡೆದಿದೆ. ಕೊಲೆಯಾದ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಎನ್ನಲಾಗುತ್ತಿದ್ದು ವೈಯಕ್ತಿಕ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಾಲ್ಕು ಮಂದಿ ದುಷ್ಕರ್ಮಿಗಳು ಪೂರ್ವದ್ವೇಷದ ಹಿನ್ನೆಲೆಯಲ್ಲಿ ಚಾಕು, ಬಾಟಲಿಯಲ್ಲಿ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಬಾಟಲ್, ಚಾಕುವಿನಿಂದ ತಿವಿದು ರೌಡಿಶೀಟರ್ ನ ಬರ್ಬರ ಹತ್ಯೆ Read More »

ಬಂಟ್ವಾಳ: ಅಕ್ರಮ ದನ ಸಾಗಾಟ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ದನಗಳನ್ನು ಪಿಕಪ್ ವಾಹನದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದಾಗ ರಕ್ಷಣೆ ಮಾಡಿದ ಘಟನೆ ತಿಳಿದು ಬಂದಿದೆ. ಜಾನುವಾರುಗಳನ್ನು ಪಿಕಪ್ ವಾಹನವೊಂದರಲ್ಲಿ ಪುತ್ತೂರಿನ ಸಾಜಾ ಎಂಬಲ್ಲಿಂದ ಅಕ್ರಮವಾಗಿ ಸಾಗಿಸುತ್ತಿದ್ದದರ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ.

ಬಂಟ್ವಾಳ: ಅಕ್ರಮ ದನ ಸಾಗಾಟ Read More »

ಬೆಳ್ತಂಗಡಿ: ವುಡ್ ವರ್ಕ್ಸ್‌ನ ಮಾಲಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಇಲ್ಲಿನ ಪುಂಜಾಲಕಟ್ಟೆಯ ನೆರಳಕಟ್ಟೆಯ ಜಿತೇಶ್ ವುಡ್ ವರ್ಕ್ಸ್‌ನ ಮಾಲಕ ಹರೀಶ್ ಕುಲಾಲ್‌ ಎ. 28 ರಂದು ಬೆಳಿಗ್ಗೆ ತನ್ನ ಅಂಗಡಿಯಲ್ಲಿ ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನೇರಳಕಟ್ಟೆ ಕುಲಾಲು ದರ್ಖಾಸು ನಿವಾಸಿ ಹರೀಶ್(42ವ) ಎಂದು ತಿಳಿದುಬಂದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರು ತನ್ನ ಅಂಗಡಿಯಲ್ಲಿ ಮರದ ವಿವಿಧ ರೀತಿಯ ಪೀಠೋಪಕರಣಗಳನ್ನು ತಯಾರಿಸುತ್ತಿದ್ದರು ಅವರೊಂದಿಗೆ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಬೆಳ್ತಂಗಡಿ: ವುಡ್ ವರ್ಕ್ಸ್‌ನ ಮಾಲಕ ಆತ್ಮಹತ್ಯೆ Read More »