ಕರಾವಳಿ

ಸುಳ್ಯ: ತಾರಕಕ್ಕೇರಿದ ನ.ಪಂ‌ ಕಸ ಜಗಳ| ನಟ ಅನಿರುದ್ಧ್ ಮತ್ತು ನ.ಪಂ ಅಧ್ಯಕ್ಷ‌ ವಿನಯ್ ಕುಮಾರ್ ನಡುವೆ ಕಮೆಂಟ್ಸ್ ವಾರ್|

ಸಮಗ್ರ ನ್ಯೂಸ್: ಕಳೆದ ಹಲವಾರು ವರ್ಷಗಳಿಂದ ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯ ಸಮಸ್ಯೆಯಿದ್ದು ಅದಕ್ಕೆ ಮುಕ್ತಿ ಸಿಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಈ ಸಮಸ್ಯೆಯ ಬಗ್ಗೆ ಕನ್ನಡದ ಖ್ಯಾತ ನಟ ಅನಿರುದ್ದ್‌ ಧ್ವನಿಯೆತ್ತಿದ್ದು ಸುದ್ದಿಯಾಗುತ್ತಿದೆ. ಸ್ವಚ್ಛ ಭಾರತ್ ಅಭಿಯಾನಕ್ಕೆ ಪೋಸ್ಟ್ ಹಂಚಿಕೊಂಡಿರುವ ನಟ ಅನಿರುದ್ಧ್ ಗೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಉದ್ದಟತನದ ಉತ್ತರ ಕೊಟ್ಟಿದ್ದಾರೆ. ಅದಕ್ಕೆ ನಟ ಅನಿರುದ್ಧ್ ಅಧ್ಯಕ್ಷರಿಗೆ ಮುಟ್ಟಿ ನೋಡಿಕೊಳ್ಳುವಂತ ಉತ್ತರ ಕೊಟ್ಟಿದ್ದು ,

ಸುಳ್ಯ: ತಾರಕಕ್ಕೇರಿದ ನ.ಪಂ‌ ಕಸ ಜಗಳ| ನಟ ಅನಿರುದ್ಧ್ ಮತ್ತು ನ.ಪಂ ಅಧ್ಯಕ್ಷ‌ ವಿನಯ್ ಕುಮಾರ್ ನಡುವೆ ಕಮೆಂಟ್ಸ್ ವಾರ್| Read More »

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ತಹಶಿಲ್ದಾರ್ ದಿಢೀರ್ ಭೇಟಿ| ಗ್ರಾಮಸ್ಥರಿಂದ ಅಧಿಕಾರಿಗಳ ಮೇಲೆ ತರಾಟೆ| ಗಣಿಗಾರಿಕೆ ಪೂರ್ವನಿಯೋಜಿತ ಬಂದ್!?

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆಯುತ್ತಿರುವ ಜನ ವಿರೋಧಿ ಗಣಿಗಾರಿಕೆ ಪ್ರದೇಶಕ್ಕೆ ಸುಳ್ಯ ತಹಶಿಲ್ದಾರ್ ಭೇಟಿ ನೀಡಿ ಅಲ್ಲಿನ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿದ್ದು, ಈ ವೇಳೆ ತಹಶೀಲ್ದಾರರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸರಿಸುಮಾರು ಒಂದು ವರ್ಷದಿಂದ ಮರ್ಕಂಜ ಗ್ರಾಮದ ಅಳವು ಪಾರೆ ಎಂಬಲ್ಲಿ ಡೆಲ್ಮಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಅಕ್ರಮ ಗಣಿಗಾರಿಗೆ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರಿಂದ ವಿರೋದ ವ್ಯಕ್ತವಾಗಿತ್ತು. ಅದರೆ ಕೆಲವು ಅಕ್ರಮ ದಾಖಲೆಗಳನ್ನು ಸಂಗ್ರಹಿಸಿ ಪರವಾನಿಗೆ

ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ತಹಶಿಲ್ದಾರ್ ದಿಢೀರ್ ಭೇಟಿ| ಗ್ರಾಮಸ್ಥರಿಂದ ಅಧಿಕಾರಿಗಳ ಮೇಲೆ ತರಾಟೆ| ಗಣಿಗಾರಿಕೆ ಪೂರ್ವನಿಯೋಜಿತ ಬಂದ್!? Read More »

ಮಂಗಳೂರು: ನಗರ ಪ್ರದೇಶದಲ್ಲಿ ಹೆಚ್ಚುತ್ತಿದ್ಯಾ ಕಾನ್ಸರ್!?

ಸಮಗ್ರ ನ್ಯೂಸ್: ನಗರಗಳಲ್ಲಿ ಹೆಚ್ಚುತ್ತಿರುವ ವಿಷಕಾರಿ ತ್ಯಾಜ್ಯವಸ್ತುಗಳ ಜೊತೆಗೆ ಕಾರ್ಖಾನೆಗಳಿಂದ ಹೊರಬರುವ ಹೊಗೆಗಳು ಇಡೀ ಪರಿಸರವನ್ನೇ ಆವರಿಸಿಕೊಂಡಿದ್ದು, ನಗರ ಪ್ರದೇಶದ ಸುತ್ತ-ಮುತ್ತಲಿನ ಜನರಲ್ಲಿ ಮಾರಕ ಕ್ಯಾನ್ಸರ್ ರೋಗ ಹೆಚ್ಚಾಗಿರೋದು ಇದೀಗ ಬೆಳಕಿಗೆ ಬಂದಿದೆ. ವಾಯುಮಾಲಿನ್ಯ, ಜಲಮಾಲಿನ್ಯ, ಅಂತರ್ಜಲ ಮಾಲಿನ್ಯದ ಪರಿಣಾಮ ನಗರದ ಎಂಆರ್‍ಪಿಎಲ್ ಸುತ್ತಮುತ್ತಲಿನ ಕಾಟಿಪಳ್ಳ, ಸುರತ್ಕಲ್, ಕುಳಾಯಿ ಪ್ರದೇಶಗಳಲ್ಲಿ ಕ್ಯಾನ್ಸರ್ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಸ್ವತಃ ರಾಜ್ಯ ವಿಧಾನ ಪರಿಷತ್ತಿನ ಭರವಸೆಗಳ ಸಮಿತಿ ಕಳವಳ ವ್ಯಕ್ತಪಡಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ನೀಡಿರುವ ವರದಿಯ ಪ್ರಕಾರ ಈ

ಮಂಗಳೂರು: ನಗರ ಪ್ರದೇಶದಲ್ಲಿ ಹೆಚ್ಚುತ್ತಿದ್ಯಾ ಕಾನ್ಸರ್!? Read More »

ಸುಳ್ಯದ ಕಸ ಸಮಸ್ಯೆ‌ ಕುರಿತು ನಟ ಅನಿರುದ್ಧ್ ಕಳಕಳಿ ಜಾಲತಾಣಗಳಲ್ಲಿ ವೈರಲ್| ಆದರೆ…?

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನ.ಪಂ ವ್ಯಾಪ್ತಿಯ ಕಸ ನ.ಪಂ ಆವರಣದಲ್ಲಿ ಬೃಹದಾಕಾರವಾಗಿ ಬೆಳೆಯುತ್ತಾ ಬಂದಿದೆ. ಅದೇಕೋ ಈ ಕಸದ ರಾಶಿ ಮೇಲೆ ನ.ಪಂ ಆಡಳಿತ ಹಾಗೂ ಅಧಿಕಾರಿ ವರ್ಗಕ್ಕೆ ಬಹಳ ಪ್ರೀತಿ! ಆದ್ದರಿಂದ ಇದುವರೆಗೂ ಈ ಕಸದ ವಾಸನೆಯನ್ನೇ ಸವಿಯುತ್ತಾ ನ.ಪಂ ಅಧಿಕಾರಿಗಳು, ಆಡಳಿತ ವರ್ಗ ದಿನಗಳೆಯುತ್ತಿದೆ. ಇದೀದ ಈ ಕಸದ ಸಮಸ್ಯೆಯ ಕುರಿತು ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಮುಖರಾದ ಸುಪ್ರೀತ್ ಮೋಂಟಡ್ಕರು ಫೋಟೊಗಳನ್ನು ಕ್ಲಿಕ್ಕಿಸಿ ಚಿತ್ರ ನಟ ಅನಿರುದ್ಧ್ ಗೆ ಕಳುಹಿಸಿದ್ದು, .

ಸುಳ್ಯದ ಕಸ ಸಮಸ್ಯೆ‌ ಕುರಿತು ನಟ ಅನಿರುದ್ಧ್ ಕಳಕಳಿ ಜಾಲತಾಣಗಳಲ್ಲಿ ವೈರಲ್| ಆದರೆ…? Read More »

ಸುಳ್ಯ: ಮರ್ಕಂಜದ ಅಳವುಪಾರೆ ಗಣಿಗಾರಿಕೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ| ಪರಿಹಾರ ‌ಕ್ರಮದ ಭರವಸೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ಕಳೆದೊಂದು ವರ್ಷದಿಂದ ಅಕ್ರಮವಾಗಿ ನಡೆಯುತ್ತಿದೆ ಎನ್ನಲಾದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮೀ ದಿಢೀರ್ ಭೇಟಿ ನೀಡಿದ್ದಾರೆ. ತಮ್ಮ ತಂಡದ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದ ಅವರು ಮತ್ತೊಮ್ಮೆ ದಾಖಲೆಗಳ ಕುರಿತು ಪರಿಶೀಲನೆ ‌ನಡೆಸುವುದಾಗಿ ಮಾಹಿತಿ ನೀಡಿದರು. ಅಲ್ಲದೇ ‌ಗಣಿಗಾರಿಕೆಯಿಂದ ಹಾನಿಗೊಳಗಾದ ಸ್ಥಳೀಯ ನಿವಾಸಿಗಳಿಗೆ ಪರಿಹಾರ ಕೊಡಿಸುವ‌ ಬಗ್ಗೆ ತಹಶಿಲ್ದಾರ್ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ…

ಸುಳ್ಯ: ಮರ್ಕಂಜದ ಅಳವುಪಾರೆ ಗಣಿಗಾರಿಕೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ| ಪರಿಹಾರ ‌ಕ್ರಮದ ಭರವಸೆ Read More »

ಮಂಗಳೂರು: ಮೇ.14 ಮತ್ತು 15 ರಂದು ಮಂಗಳೂರು ವಿ.ವಿ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಂಗಳಗಂಗೋತ್ರಿಯ ಕ್ಯಾಂಪಸ್‌ನಲ್ಲಿ ಮೇ 14 ಮತ್ತು 15ರಂದು ಉದ್ಯೋಗ ಮೇಳ ಆಯೋಜಿಸಿವೆ. ಮ್ಯಾಜಿಕ್‌ ಬಸ್‌ನ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ವಲಯದ ಕ್ಲಸ್ಟರ್‌ ಮ್ಯಾನೇಜರ್‌ ಚಿರಂಜೀವಿ ಅಂಬರ್‌ನಾಥ್‌ ಮೇ 14ರಂದು ಬೆಳಿಗ್ಗೆ 10.30ಕ್ಕೆ ಉದ್ಯೋಗ ಮೇಳವನ್ನು ಉದ್ಘಾಟಿಸುವರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು. ಕುಲಸಚಿವ

ಮಂಗಳೂರು: ಮೇ.14 ಮತ್ತು 15 ರಂದು ಮಂಗಳೂರು ವಿ.ವಿ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ Read More »

ಬಿಜೆಪಿ ಸರಕಾರದ 40% ಕಮಿಷನ್‌‌ ಫಲ ಮಲ್ಪೆಯ ತೂಗುವ ಸೇತುವೆ!| ಜಾಲತಾಣಗಳಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ಮಲ್ಪೆ ಬೀಚ್‌ನಲ್ಲಿ ನಿರ್ಮಿಸಿದ ರಾಜ್ಯದ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರದಲ್ಲಿ ಕೊಚ್ಚಿಹೋದ ಘಟನೆ ನಡೆದಿದ್ದು, ಇದು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಫಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮೊದಲ ತೇಲುವ ಸೇತುವೆ ಮೇ 6ರ ಶುಕ್ರವಾರದಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಅವರು ಸಮ್ಮುಖದಲ್ಲಿ ಉದ್ಘಾಟನೆಗೊಂಡಿತ್ತು. 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವಿರುವ ತೇಲುವ

ಬಿಜೆಪಿ ಸರಕಾರದ 40% ಕಮಿಷನ್‌‌ ಫಲ ಮಲ್ಪೆಯ ತೂಗುವ ಸೇತುವೆ!| ಜಾಲತಾಣಗಳಲ್ಲಿ ಆಕ್ರೋಶ Read More »

ಉಡುಪಿ : ಕಡಲಬ್ಬರಕ್ಕೆ ಬಲಿಯಾಯ್ತು‌ ಮಲ್ಪೆಯ ತೇಲುವ ಸೇತುವೆ! 80 ಲಕ್ಷ ರೂಪಾಯಿ ಸಮುದ್ರ ಪಾಲು!?

ಸಮಗ್ರ ನ್ಯೂಸ್: ಪ್ರಮುಖ ಪ್ರವಾಸಿ ತಾಣವಾದ ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ವಾರದ ಒಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಎಂದು ತಿಳಿದು ಬಂದಿವೆ. ಈಚೆಗಷ್ಟೇ ಉದ್ಘಾಟನೆಗೊಂಡಿರುವ ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು ಮತ್ತು ಅನುಭವಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರೂ ಅವಕಾಶ ನೀಡಿರಲಿಲ್ಲ. ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ

ಉಡುಪಿ : ಕಡಲಬ್ಬರಕ್ಕೆ ಬಲಿಯಾಯ್ತು‌ ಮಲ್ಪೆಯ ತೇಲುವ ಸೇತುವೆ! 80 ಲಕ್ಷ ರೂಪಾಯಿ ಸಮುದ್ರ ಪಾಲು!? Read More »

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿ ಪ್ರಯಾಣ| ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಸಮಗ್ರ ನ್ಯೂಸ್: ಮಂಗಳೂರು ನಗರದ ಎಂಜಿ ರಸ್ತೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಒಂದೇ ಬೈಕ್‌ನಲ್ಲಿ ತೆರಳುತ್ತಿರುವ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಶಾಸಕ ವೇದವ್ಯಾಸ್ ಕಾಮತ್, ಸಂಬಂಧಪಟ್ಟ ಅಧಿಕಾರಿಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ‘ಇದು ಅಪಾಯಕಾರಿ!!! ಇದನ್ನು ನೋಡಲೂ ಭಯವಾಗುತ್ತದೆ, ಮಕ್ಕಳ ಪ್ರಾಣವನ್ನೂ ಅಪಾಯಕ್ಕೆ ಸಿಲುಕಿಸಲಾಗಿದೆ. ಐದು ಮಂದಿ ಕುಳಿತಿರುವುದು ಕಾನೂನಿಗೆ ವಿರುದ್ಧವಾಗಿದೆ ಮತ್ತು ಜೀವಕ್ಕೆ ಅಪಾಯವಾಗಿದೆ. ನಡುವೆ ಒಂದು ಮಗು ಮಲಗಿದೆ. ಇಂತಹ

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿ ಪ್ರಯಾಣ| ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ Read More »

ಪಬ್ಲಿಕ್ ಪ್ಲೇಸ್ ಅಲ್ಲಿ ಬುರ್ಖಾ ತೆಗೆದ್ರೆ ಅಲ್ಲೇ ಹೊಡೀತೇವೆ| ಮುಸ್ಲಿಂ ಡಿಫೆನ್ಸ್ ಫೋರ್ಸ್ ಗ್ರೂಪ್ ನಿಂದ ಧಮ್ಕಿ|

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆಯರಿಗೆ ಧಾರ್ಮಿಕ ಬೆದರಿಕೆ ಒಡ್ಡುತ್ತಿದ್ದ ಮುಸ್ಲಿಂ ಡಿಫೆನ್ಸ್​ ಫೋರ್ಸ್​ ಎಂಬ ವಾಟ್ಸ್​ಆಯಪ್​ ಗ್ರೂಪ್​​ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಇದು ಮುಸ್ಲಿಂ ಸಮುದಾಯದ ಗುಂಪೇ ಆಗಿದ್ದು, ತಮ್ಮದೇ ಸಮುದಾಯದ ಮಹಿಳೆಯರಿಗೆ ಬೆದರಿಕೆ ಒಡ್ಡುವ, ಎಚ್ಚರಿಕೆ ನೀಡುವ ಸಂದೇಶಗಳು ಈ ಗ್ರೂಪ್​​ನಲ್ಲಿ ಹರಿದಾಡಿವೆ ಎಂದು ಹೇಳಲಾಗಿದೆ. ಈ ಗ್ರೂಪ್ ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ, ಹಿಜಾಬ್ ತೆಗೆದರೆ ಅಂಥವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಮೆಸೇಜ್​​ಗಳು ಗುಂಪಿನಲ್ಲಿ ಹರಿದಾಡುತ್ತಿವೆ ಎನ್ನಲಾಗಿದೆ. ಈ ಗುಂಪಿನಲ್ಲಿ

ಪಬ್ಲಿಕ್ ಪ್ಲೇಸ್ ಅಲ್ಲಿ ಬುರ್ಖಾ ತೆಗೆದ್ರೆ ಅಲ್ಲೇ ಹೊಡೀತೇವೆ| ಮುಸ್ಲಿಂ ಡಿಫೆನ್ಸ್ ಫೋರ್ಸ್ ಗ್ರೂಪ್ ನಿಂದ ಧಮ್ಕಿ| Read More »