ಕರಾವಳಿ

ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯ| ರೋಗಿಯ ಕಾಲೊಳಗಿನ ಕಲ್ಲು ತೆಗೆಯದೇ ಹೊಲಿದ ವೈದ್ಯರು!!?

ಸಮಗ್ರ ನ್ಯೂಸ್: ಬೈಕ್ ಅಪಘಾತದಲ್ಲಿ ಸವಾರನಿಗೆ ಕಾಲಿಗೆ ಗಾಯವಾಗಿದ್ದು, ಗಾಯದಲ್ಲಿ ಸುಮಾರು 14 ಕಲ್ಲುಗಳಿದ್ದರೂ ಅವನ್ನು ನಿರ್ಲಕ್ಷಿಸಿ, ಹೊಲಿಗೆ ಹಾಕಿದ ಪರಿಣಾಮ ಗಾಯ ಉಲ್ಬಣಗೊಂಡು ಗಾಯಾಳು ಕಂಗಲಾದ ಘಟನೆ ಕಡಬದಲ್ಲಿ ನಡೆದಿದೆ. ಗಾಯ ಊತವಾಗಿ ಪರಿಣಮಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ಮೂಲಕ ಕಲ್ಲುಗಳನ್ನು ಹೊರತೆಗೆಯಲಾಗಿದೆ. ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ, ರೈಲ್ವೇ ಉದ್ಯೋಗಿ ಪುರುಷೋತ್ತಮ ಎಂಬವರು ಏ.25ರಂದು ಕೋಡಿಂಬಾಳ ಸಮೀಪದ ಉಂಡಿಲ ಎಂಬಲ್ಲಿ ಸ್ಕೂಟಿ ಸ್ಕೀಡ್ ಆಗಿ ಬಿದ್ದು ಕಾಲಿಗೆ ಗಾಯವಾಗಿತ್ತು, ಗಾಯಾಳುಗಳನ್ನು ಪುರುಷೋತ್ತಮ

ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯ| ರೋಗಿಯ ಕಾಲೊಳಗಿನ ಕಲ್ಲು ತೆಗೆಯದೇ ಹೊಲಿದ ವೈದ್ಯರು!!? Read More »

ಸುಳ್ಯ: ಅಕ್ರಮ ಸಹಿ ಸಂಗ್ರಹಿಸಿ ಮರ್ಕಂಜದಲ್ಲಿ ಅಕ್ರಮ ಗಣಿಗಾರಿಕೆ!
ದೇವಸ್ಥಾನ, ಮನೆ, ಶಾಲೆಯ ಕಟ್ಟಡಗಳಿಗೆ ತೊಂದರೆಯಾದರೂ ಅಧಿಕಾರಿಗಳ ದಿವ್ಯಮೌನ| ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಪುಟಾಣಿಗಳು|ಪಂಚಸ್ಥಾಪನೆಯ ಉಳಿವಿಗಾಗಿ ನಮ್ಮೊಂದಿಗೆ ಕೈಜೋಡಿಸಿ: ಗ್ರಾಮಸ್ಥರ ಅಳಲು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ “ಡೆಲ್ಮಾ ಎಂಟರ್‌ಪ್ರೈಸಸ್’’ ಹೆಸರಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯು ಅಕ್ರಮ ಸಹಿಗಳನ್ನು ಸಂಗ್ರಹಿಸಿ ಪರವಾನಿಗೆ ಪಡೆದಿರುವ ಆರೋಪ ಕೇಳಿಬಂದಿದೆ. ಗಣಿಗಾರಿಕೆಯಿಂದ ಸ್ಥಳೀಯ ದೇವಸ್ಥಾನ, ಶಾಲೆ, ಮತ್ತು ಮನೆಗೆಳ ಕಟ್ಟಡಗಳಿಗೆ ತೊಂದರೆ ಉಂಟಾಗುತ್ತಿದ್ದು ಗ್ರಾಮಸ್ಥರು ಇದೀಗ ಸರ್ಕಾರಿ ಕಚೇರಿಗಳ ಕದ ತಟ್ಟುತ್ತಿದ್ದಾರೆ. ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ” ಡೆಲ್ಮಾ ಎಂಟರ್‌ಪ್ರೈಸಸ್ ” ಹೆಸರಿನ ಅಕ್ರಮ ಕಲ್ಲುಕೋರೆ ಕೆಲಸ ನಡೆಯುತ್ತಿರುವುದು ಈಗಾಗಲೇ ಸುದ್ದಿಯಲ್ಲಿದೆ. ಈ ಕಲ್ಲು ಕೋರೆ ನಡೆಸಲು ಅಸುಪಾಸಿನ

ಸುಳ್ಯ: ಅಕ್ರಮ ಸಹಿ ಸಂಗ್ರಹಿಸಿ ಮರ್ಕಂಜದಲ್ಲಿ ಅಕ್ರಮ ಗಣಿಗಾರಿಕೆ!
ದೇವಸ್ಥಾನ, ಮನೆ, ಶಾಲೆಯ ಕಟ್ಟಡಗಳಿಗೆ ತೊಂದರೆಯಾದರೂ ಅಧಿಕಾರಿಗಳ ದಿವ್ಯಮೌನ| ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಪುಟಾಣಿಗಳು|ಪಂಚಸ್ಥಾಪನೆಯ ಉಳಿವಿಗಾಗಿ ನಮ್ಮೊಂದಿಗೆ ಕೈಜೋಡಿಸಿ: ಗ್ರಾಮಸ್ಥರ ಅಳಲು
Read More »

ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆ
ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳಿಗೆ
ಚಾಂಪಿಯನ್‌ನೊಂದಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಇಲ್ಲಿನ ಸಿಟಿ ಆಸ್ಪತ್ರೆ ಬಳಿ ಕಾರ‍್ಯಾಚರಿಸುತ್ತಿರುವ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 21 ವಿದ್ಯಾರ್ಥಿಗಳು ಎಪ್ರಿಲ್ 10 ರಂದು ನಡೆದ ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ, ಅರ್ಹತಾ ಅಂಕಗಳನ್ನು ಗಳಿಸುವುದರೊಂದಿಗೆ, 6 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರ ಹೊಮ್ಮುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಪಡೆದು ಪುತ್ತೂರಿಗೆ ಕೀರ್ತಿಯನ್ನು ತಂದಿರುತ್ತಾರೆ.ಈ ಎಲ್ಲಾ ವಿದ್ಯಾರ್ಥಿಗಳು ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 6ತಿಂಗಳಿನಿಂದ ಅಬಾಕಸ್ ತರಬೇತಿಯನ್ನು ಪಡೆದಿರುತ್ತಾರೆ. ಹಾಗೂ ಕಳೆದ ನವಂಬರ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆನ್‌ಲೈನ್ ಅಬಾಕಸ್ ಸ್ಪರ್ಧೆಯಲ್ಲಿ 3

ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆ
ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳಿಗೆ
ಚಾಂಪಿಯನ್‌ನೊಂದಿಗೆ ಸಮಗ್ರ ಪ್ರಶಸ್ತಿ
Read More »

ಮಂಗಳೂರು: ರಾತ್ರಿ ಬಾವಿಯೊಳಗಿಂದ ಕೇಳಿ ಬರ್ತಾ ಇತ್ತು ಯುವಕನ ಅರಚಾಟ| ಸದ್ದು ಕೇಳಿ ಇಣುಕಿ ನೋಡಿದರೆ…!

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಕುಂಟಿಕಾನದ ಬಳಿ ರಾತ್ರಿ ವೇಳೆ ಬಾವಿಗೆ ಬಿದ್ದು ಗಾಯಗೊಂಡಿದ್ದ ಯುವಕನೋರ್ವನನ್ನು ಕದ್ರಿ ಅಗ್ನಿಶಾಮಕ ಸಿಬಂದಿಗಳು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆ ಬದಿಯ ಮನೆಯೊಂದರ ಬಳಿ ಮುಂಜಾನೆಯಿಂದಲೇ ಯುವಕನ ಬೊಬ್ಬೆಕೇಳುತ್ತಿತ್ತು. ಹುಡುಕಾಡಿದಾಗ ಆತ ಬಾವಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕದವರು ಕಾರ್ಯಚರಣೆ ನಡೆಸಿ ಯುವಕನನ್ನು ಮೇಲಕ್ಕೆತ್ತಿದ್ದಾರೆ. ಈತನನ್ನು 25ರಿಂದ 26 ವರ್ಷ ವಯಸ್ಸಿನ ಅಸ್ಸಾಂ ಮೂಲದ ಯುವಕನೆಂದು ಗುರುತಿಸಲಾಗಿದೆ. ಈತ ಅಲ್ಲಿಗೆ ಯಾಕೆ ಬಂದಿದ್ದ, ಹೇಗೆ ಬಾವಿಗೆ ಬಿದ್ದ

ಮಂಗಳೂರು: ರಾತ್ರಿ ಬಾವಿಯೊಳಗಿಂದ ಕೇಳಿ ಬರ್ತಾ ಇತ್ತು ಯುವಕನ ಅರಚಾಟ| ಸದ್ದು ಕೇಳಿ ಇಣುಕಿ ನೋಡಿದರೆ…! Read More »

ಕಡಬ: ಚರ್ಚ್‌ ಗೋಪುರದಲ್ಲಿ ಹಾರಿತು ಕೇಸರಿ ಧ್ವಜ!?

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಸಮೀಪದ ಎನ್ಕಜೆಯಲ್ಲಿನ ಇಮ್ಯಾನ್ಯುವೆಲ್‌ ಎ.ಜಿ. ಚರ್ಚ್‌ನ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ್ದಾರೆ ಎನ್ನುವ ಸುದ್ದಿ ಹಬ್ಬಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರ್ಚ್‌ನಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಕಿಡಿಗೇಡಿಗಳು ಎರಡು ದಿನಗಳ ಹಿಂದೆ ಗೋಪುರದ ಶಿಲುಬೆಯನ್ನು ಕಿತ್ತು ಅಲ್ಲಿ ಕೇಸರಿ ಧ್ವಜ ಅಳವಡಿಸಿ ಚರ್ಚ್‌ನ ಬಾಗಿಲು ಒಡೆದು ಒಳಪ್ರವೇಶಿಸಿ ಹನುಮಂತನ ಫೋಟೋ ಇರಿಸಿ ದೀಪ ಹಚ್ಚಿದ್ದಾರೆ ಎಂದು ಆರೋಪಿಸಿ

ಕಡಬ: ಚರ್ಚ್‌ ಗೋಪುರದಲ್ಲಿ ಹಾರಿತು ಕೇಸರಿ ಧ್ವಜ!? Read More »

‌ಮಂಗಳೂರು: ಶೀಘ್ರದಲ್ಲೇ ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ – ರಮಾನಾಥ್ ರೈ

ಸಮಗ್ರ ನ್ಯೂಸ್: ‘ಬಿಜೆಪಿಯೂ ತಾವು ಧರ್ಮದ ಹೆಸರಿನಲ್ಲಿ ಮತ ಗಳಿಸುತ್ತೇವೆ ಹೊರತು ಅಭಿವೃದ್ಧಿಯಿಂದಲ್ಲ ಎಂಬ ತಪ್ಪು ಕಲ್ಪನೆ ಹೊಂದಿದ್ದು, ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ’ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ. ಮೇ 2 ರ ಸೋಮವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,  “ವಾಣಿಜ್ಯ ಎಲ್‌ಪಿಜಿ ಬೆಲೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರುತ್ತಿದೆ. ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ

‌ಮಂಗಳೂರು: ಶೀಘ್ರದಲ್ಲೇ ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ – ರಮಾನಾಥ್ ರೈ Read More »

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟು‌ನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ ಇವರು ಎ.28 ರಂದು ಸಂಜೆ ವೇಳೆ‌ ಮನೆಯ‌ ಅಂಗಳದಲ್ಲಿದ್ದ ತೆಂಗಿನ ಮರದಿಂದ ಕಾಯಿ ಕೊಯ್ಯಲೆಂದು ಮರ ಏರಿದ್ದವರು, ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ತಕ್ಷಣ‌ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ಮುಖಾಮುಖಿ – ಬೈಕ್ ಸವಾರನಿಗೆ ಗಾಯ

ಸಮಗ್ರ ನ್ಯೂಸ್: ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ತಾಯಿ, ಮಗ ಗಾಯಗೊಂಡಿರುವ ಘಟನೆ ಪುತ್ತೂರಿನ ನೆಹರೂನಗರ ಬಳಿ ನಡೆದಿದೆ. ನೆಹರೂ ನಗರ ವಿವೇಕಾನಂದ ಕಾಲೇಜು ಕ್ಯಾಂಪಸ್ ಬಳಿಯ ಸರ್ವಿಸ್ ಸ್ಟೇಷನ್ ಎದುರು ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ದಾರಂದಕುಕ್ಕು ನಿವಾಸಿ ಅಭಿಷೇಕ್ ಕೆ.ಎಸ್(24ವ)ಮತ್ತು ಹಿಂಬದಿ ಸವಾರೆಯಾಗಿದ್ದ ಅವರ ತಾಯಿ ಭಾರತಿ ಕೆ. ಎಸ್. (49)ರವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ

ಮಿನಿ ಗೂಡ್ಸ್ ಟೆಂಪೊ ಮತ್ತು ಬೈಕ್ ಮುಖಾಮುಖಿ – ಬೈಕ್ ಸವಾರನಿಗೆ ಗಾಯ Read More »

ಮಣಿಪಾಲ: ಬಾಡಿಗೆ ನೆಪದಲ್ಲಿ ಕಾರು ಚಾಲಕನಿಂದ ಸುಲಿಗೆ

ಸಮಗ್ರ ನ್ಯೂಸ್: :  ಕಾರಿನ ಚಾಲಕನನ್ನು ಬಾಡಿಗೆಗೆ ಕರೆದೊಯ್ದು ಬಳಿಕ ಬೆದರಿಸಿ , ಹಲ್ಲೆಗೈದು ಸುಲಿಗೆ ಮಾಡಿದ ಘಟನೆ ನಡೆದಿದೆ. ಬಡಗಬೆಟ್ಟುವಿನ ಶಾಂತಿನಗರದ ಶ್ರೀಧರ ಭಕ್ತ(61) ಕಾರು ಚಾಲಕರಾಗಿದ್ದು, ಎ.27 ರಂದು ರಾತ್ರಿ ಈ ಘಟನೆ ನಡೆದಿದೆ. ಶ್ರೀಧರ್ ಅವರು ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಜೆ ತನ್ನ ಕಾರನ್ನು ಬಾಡಿಗೆಗೆ ನಿಲ್ಲಿಸಿದ್ದು, ಸುಮಾರು 35ರಿಂದ 45 ವರ್ಷ ಪ್ರಾಯದ ತುಳು ಮಾತನಾಡುವ ನಾಲ್ಕು ಮಂದಿ ಬಂದು, ಕಾರವಾರಕ್ಕೆ ಹೋಗಲು ಕಾರನ್ನು ಬಾಡಿಗೆ ಗೊತ್ತು ಮಾಡಿ ಕರೆದುಕೊಂಡು ಹೋಗಿದ್ದರು.

ಮಣಿಪಾಲ: ಬಾಡಿಗೆ ನೆಪದಲ್ಲಿ ಕಾರು ಚಾಲಕನಿಂದ ಸುಲಿಗೆ Read More »

ಮಂಗಳೂರು: ಗುಟ್ಕಾ ಜಗಿದ ಬಸ್ ಚಾಲಕರಿಗೆ 5000 ದಂಡ ವಿಧಿಸಿದ ಆರ್ ಟಿಒ ಅಧಿಕಾರಿಗಳು!

ಸಮಗ್ರ ನ್ಯೂಸ್: ಚಾಲನೆ ವೇಳೆ ಗುಟ್ಕಾ ಜಗಿಯುತ್ತಿದ್ದ ಬಸ್‌ ಚಾಲಕರಿಗೆ‌ ಮಂಗಳೂರು ಆರ್‌ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ.ಬಿಜೈ ಬಳಿ ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್‌ಗಳ ಚಾಲಕರು ಗುಟ್ಕಾ ಜಗಿಯುತ್ತ ಅಧಿಕಾರಿಗಳ ಮುಂದೆ ಬಂದರು. ಇದನ್ನು ಗಮನಿಸಿದ ಆರ್‌ಟಿಒ ಅಧಿಕಾರಿಗಳು ಇಬ್ಬರು ಚಾಲಕರಿಗೂ ತಲಾ 5,000 ರೂ. ದಂಡ ವಿಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್‌ಟಿಒ ಆರ್‌.ಎಂ. ವರ್ಣೇಕರ್‌, “ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಮಾತ್ರವಲ್ಲದೆ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಿ ಚಲಾಯಿಸುವವರ

ಮಂಗಳೂರು: ಗುಟ್ಕಾ ಜಗಿದ ಬಸ್ ಚಾಲಕರಿಗೆ 5000 ದಂಡ ವಿಧಿಸಿದ ಆರ್ ಟಿಒ ಅಧಿಕಾರಿಗಳು! Read More »