ಕರಾವಳಿ

ಪುತ್ತೂರು: ಮಗು ಕರುಣಿಸಿ 6 ತಿಂಗಳಾದರೂ ಸಂತ್ರಸ್ತೆಗೆ ಸಿಗದ ನ್ಯಾಯ| ಯುವತಿಯ ಅಳಲು ಕೇಳುವವರಾರು?

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಈಗ ಮತ್ತಷ್ಟು ಜಟಿಲಗೊಂಡಿದೆ. ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿ ತಿಂಗಳುಗಳೇ ಕಳೆದರೂ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಡಿಎನ್​​ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಆತ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಸೇರಿ ಅನೇಕರು ಸಂಧಾನಕ್ಕೆ […]

ಪುತ್ತೂರು: ಮಗು ಕರುಣಿಸಿ 6 ತಿಂಗಳಾದರೂ ಸಂತ್ರಸ್ತೆಗೆ ಸಿಗದ ನ್ಯಾಯ| ಯುವತಿಯ ಅಳಲು ಕೇಳುವವರಾರು? Read More »

ಸುಬ್ರಹ್ಮಣ್ಯ ರೋಡ್ – ಸಕಲೇಶಪುರ ರೈಲ್ವೆ ವಿದ್ಯುದೀಕರಣ ಪೂರ್ಣ

ಸಮಗ್ರ ನ್ಯೂಸ್: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗ ತಿಳಿಸಿದೆ. ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿತ್ತು. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ತೀಕ್ಷ್ಣ ವಕ್ರಗಳು ಇರುವುದರ ಜೊತೆಗೆ, ಹೆಚ್ಚು ಭೂಕುಸಿತ ಪ್ರದೇಶವಾಗಿರುವುದರಿಂದ, ವಿದ್ಯುದೀಕರಣ

ಸುಬ್ರಹ್ಮಣ್ಯ ರೋಡ್ – ಸಕಲೇಶಪುರ ರೈಲ್ವೆ ವಿದ್ಯುದೀಕರಣ ಪೂರ್ಣ Read More »

ಉಪ್ಪಿನಂಗಡಿ: ಬಸ್ ಚಾಲಕನಿಗೆ ಕಾಣಿಸಿಕೊಂಡ ಎದೆನೋವು| ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಚಾಲನೆಯಲ್ಲಿ ವ್ಯತ್ಯಾಸಕಂಡು ಹಿನ್ನಲೆ ಬಸ್ಸಿ ನಲ್ಲಿದ್ದ ಪಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ದುರಂತವನ್ನು ತಪ್ಪಿಸಿದ ಘಟನೆ ಪೆರ್ನೆ ಗ್ರಾಮದ ಬಳಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು

ಉಪ್ಪಿನಂಗಡಿ: ಬಸ್ ಚಾಲಕನಿಗೆ ಕಾಣಿಸಿಕೊಂಡ ಎದೆನೋವು| ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ Read More »

ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ| ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ವಿರೋಧ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಸ್ಪೀಕರ್‌ ಯುಟಿ ಖಾದರ್‌ ಸೇರಿದಂತೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇದನ್ನು ವಿರೋಧಿಸಿ ಇಂದು ಪ್ರತಿಭಟನೆಗೆ ಮುಂದಾಗಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ

ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ| ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ವಿರೋಧ Read More »

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ

ಸಮಗ್ರ ನ್ಯೂಸ್: ಮಕ್ಕಳನ್ನುಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಿಸುವ ವಿಶಿಷ್ಟ ನಂಬಿಕೆ, ಸಂಪ್ರದಾಯವಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ನಡೆಯಿತು. ವಿಟ್ಲ ಡೊಂಬ ಹೆಗ್ಗಡೆ ಅರಮನೆಯ ಬಂಗಾರು ಅರಸರು ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ, ದೇವಿಗೆ ಐದು ಸುತ್ತು ಪಲ್ಲಕ್ಕಿ ಬಲಿ ಉತ್ಸವ ನಡೆಯಿತು. ಬಲಿ ಉತ್ಸವದ ಬಳಿಕ ಪ್ರಧಾನ ದೇವಿ ಹಾಗೂ ಪರಿವಾರ ಶಕ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ಕಜಂಬು

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ Read More »

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಇದೀಗ ಆಯೋಜಕರು ದಫ್ ಪ್ರದರ್ಶನವನ್ನು ಕೈ ಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ Read More »

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ?

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ ಸೋಮವಾರದಿಂದ ಮೊತ್ತ ಜಮೆ ಆಗಲು ಆರಂಭಗೊಂಡಿದೆ. ಈ ನಡುವೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಜಮೆ ಆಗುತ್ತಿರುವ ಬಗ್ಗೆ ರೈತರು ದೂರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಳೆ ವಿಮೆ ಪಾವತಿಯಾದ ಲೆಕ್ಕಚಾರದ ಬಗ್ಗೆಯೇ ವ್ಯಾಪಕ ಚರ್ಚೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಅನ್ವಯವಾಗುವಂತೆ ಬೆಳೆ ವಿಮೆ ಪಾವತಿಸಬಹುದು. ಅಡಿಕೆ ಹೆಕ್ಟರ್‌ಗೆ 6400 ರೂ. ಹಾಗೂ ಕಾಳುಮೆಣಸು ಹೆಕ್ಟರ್‌ಗೆ

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ? Read More »

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು Read More »

ದಿತ್ವಾ ಚಂಡಮಾರುತ ಪರಿಣಾಮ| ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ ವರುಣ

ಸಮಗ್ರ ನ್ಯೂಸ್: ದಿತ್ವಾ ಚಂಡಮಾರುತ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ಹಲವೆಡೆ ಭಾರೀ ಮಳೆಯಾಗಿದೆ. ದ.ಕ ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಹಾಗೂ ಸೆಕೆ ಜೋರಾಗಿತ್ತು. ಸಂಜೆ ವೇಳೆಗೆ ಸುರಿದ ಅನಿರೀಕ್ಷಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ನಾಳೆಯೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ

ದಿತ್ವಾ ಚಂಡಮಾರುತ ಪರಿಣಾಮ| ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ ವರುಣ Read More »

ಕೆಂಪು ಕಲ್ಲು ದರ ಇಳಿಕೆ ಮರಳು ಸಮಸ್ಯೆ ಪರಿಹಾರಕ್ಕೆ 42 ಹೊಸ ಬ್ಲಾಕ್ ಗುರುತು – ಡಿಸಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರದ ಬಹುದೊಡ್ಡ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮರಳು ಅಭಾವ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ, ಈಗಾಗಲೇ 19 ಮರಳು ಬ್ಲಾಕ್‌ಗಳಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇನ್ನೂ 42 ಹೊಸ ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ತಿಂಗಳೊಳಗೆ ಪರವಾನಿಗೆ ನೀಡಲಾಗುವುದು. ಈ ಯೋಜನೆಗಳ ಮೂಲಕ ಮುಂದಿನ

ಕೆಂಪು ಕಲ್ಲು ದರ ಇಳಿಕೆ ಮರಳು ಸಮಸ್ಯೆ ಪರಿಹಾರಕ್ಕೆ 42 ಹೊಸ ಬ್ಲಾಕ್ ಗುರುತು – ಡಿಸಿ ದರ್ಶನ್ ಎಚ್.ವಿ Read More »