ಕರಾವಳಿ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ 25 ಕೋಟಿ ರೂಪಾಯಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ರಾಜಕೀಯ ಪಕ್ಷಪಾತ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಕಡಬದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಸುಳ್ಯ ಶಾಸಕರ ವಿವೇಚನಾ ಅನುದಾನವನ್ನು ಕ್ಷೇತ್ರದ […]

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ Read More »

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದ ವೈವಿಧ್ಯಮಯ ಆಟ ಮುಂದುವರಿದಿದ್ದು, ಶುಕ್ರವಾರದಂದು ದಿನವಿಡೀ ಮೋಡ ಕವಿದ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಕಂಡುಬಂದಿದೆ. ಬೆಳಗ್ಗಿನ ಜಾವ ಸುರಿದ ದಿಢೀರ್ ಮಳೆ ಸಾರ್ವಜನಿಕರಲ್ಲಿ ಮುಂಗಾರಿನ ಚುರುಕಿನ ಮುನ್ಸೂಚನೆ ನೀಡಿದರೂ, ಮಧ್ಯಾಹ್ನದ ವೇಳೆಗೆ ಬಿಸಿಲಿನ ಬೇಗೆ ಹೆಚ್ಚಾಗಿತ್ತು. ಶುಕ್ರವಾರ ಬೆಳಗ್ಗೆ ಕರಾವಳಿಯ ಪ್ರಮುಖ ಗ್ರಾಮೀಣ ಹಾಗೂ ಘಟ್ಟ ಪ್ರದೇಶಗಳಾದ ಬೆಳ್ತಂಗಡಿ, ಸುಳ್ಯ, ಧರ್ಮಸ್ಥಳ ಮತ್ತು ಚಾರ್ಮಾಡಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಕೊಂಚ ವೇಗ ಸಿಕ್ಕಂತಾಗಿದೆ.

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ Read More »

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ತುಳುನಾಡಿನ ಜನಪದ ಕ್ರೀಡೆಯನ್ನು ಕನ್ನಡಿಗರಿಗೆ ವೀಕ್ಷಣೆಗೆ ಅವಕಾಶ ಮಾಡುವುದರ ಜೊತೆ ವಿಶ್ವದೆಲ್ಲಡೆ ಕಂಬಳವನ್ನು ಪರಿಚಯಿಸುವ ಕೆಲಸವನ್ನು

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ Read More »

ಮಂಗಳೂರು: ವಿಮಾನ ನಿಲ್ದಾಣ ‘ಉಬರ್’ ಟ್ಯಾಕ್ಸಿ ಸೇವೆ ಬಂದ್

ಸಮಗ್ರ ನ್ಯೂಸ್: ಹಲವು ದಿನಗಳಿಂದ ಚಾಲಕರಿಗೆ ಅನ್ಯಾಯ ಮಾಡುತ್ತಿರುವ ಉಬರ್ ಕಂಪನಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಆನ್‌ಲೈನ್‌ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದು, ವಿಮಾನ ನಿಲ್ದಾಣದಲ್ಲಿ ಉಬ‌ರ್ ಟ್ಯಾಕ್ಸಿ ಸೇವೆಯನ್ನು ಬಂದ್‌ ಮಾಡಿದ್ದಾರೆ. ಚಾಲಕರ ಹಲವು ಬೇಡಿಕೆಗಳು, ಸಮಸ್ಯೆಗಳು ಹಾಗೂ ನ್ಯಾಯಯುತ ಹಕ್ಕುಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ, ಉಬರ್ ಕಂಪನಿಯಿಂದ ಯಾವುದೇ ಸಮರ್ಪಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ತಿಳಿಸಿದೆ.ಚಾಲಕರ ಆದಾಯದ

ಮಂಗಳೂರು: ವಿಮಾನ ನಿಲ್ದಾಣ ‘ಉಬರ್’ ಟ್ಯಾಕ್ಸಿ ಸೇವೆ ಬಂದ್ Read More »

“ಕುಡ್ಲದ ಜನಕುಲು ಪೊಲೀಸ್ ಕೆಲ್ಸೊಗು ಸೇರ್ಲೆ”| ತುಳು ಗೊತ್ತಿದ್ರೆ ಪ್ಲಸ್ ಪಾಯಿಂಟ್| ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಂದೇಶ

ಸಮಗ್ರ ನ್ಯೂಸ್: “ಎನ್ನ ವೃತ್ತಿ ಜೀವನಡ್‌ ಕುಡ್ಲ ಎನ್ನ ಇಷ್ಟದ ಊರು. ಎನ್ನ ಸೇವಾವಧಿಡ್‌ ಎಚ್ಚ ಸರ್ವಿಸ್‌ ಮಲ್ತಿನ ಊರುಲ ಉಂದುವೇ. ಕುಡ್ಲದ ಜನಕುಲು ಮಸ್ತ್‌ ಎಡ್ಡೆಂತಿನಕುಲು, ಬೊಕ್ಕ ಮಸ್ತ್‌ ಬುದ್ಧಿವಂತೆರ್‌ ಪೊಲೀಸ್‌ ಇಲಾಖೆಡ್‌ ಕರ್ತವ್ಯ ಮುಲ್ಪುನ ಗೌರವದ ಕೆಲಸ. ಕುಡ್ಲದಕುಲು ಪೊಲೀಸ್‌ ಡಿಪಾರ್ಟ್‌ಮೆಂಟ್‌ ಸೇರ್ಲೆ, ಅವು ಬೊಕ್ಕಲಾತ್‌ ಇಲಾಖೆಗ್‌ ಶಕ್ತಿ ಆಪುಂಡು.” ಮಂಗಳೂರಿನ ಬಗ್ಗೆ ಹಾಗೂ ಇಲ್ಲಿನ ಜನರ ಬಗ್ಗೆ ಮೆಚ್ಚುಗೆಯ ಮಾತುಗಳೊಂದಿಗೆ ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರು ಯುವ ಸಮುದಾಯ

“ಕುಡ್ಲದ ಜನಕುಲು ಪೊಲೀಸ್ ಕೆಲ್ಸೊಗು ಸೇರ್ಲೆ”| ತುಳು ಗೊತ್ತಿದ್ರೆ ಪ್ಲಸ್ ಪಾಯಿಂಟ್| ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಂದೇಶ Read More »

ಪುತ್ತೂರು: ಪ್ರೊಫೆಸರ್‌ ‌ಕೆ.ಎಸ್ ಭಗವಾನ್ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಶ್ರೀರಾಮನ ಕುರಿತು ನಿರಂತರವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ಈ ಕಾನೂನು ಹೋರಾಟ ಆರಂಭವಾಗಿದೆ.ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೂರು: ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಿತಿಯ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯ ಮೂಲಕ ಠಾಣೆಗೆ

ಪುತ್ತೂರು: ಪ್ರೊಫೆಸರ್‌ ‌ಕೆ.ಎಸ್ ಭಗವಾನ್ ವಿರುದ್ಧ ದೂರು ದಾಖಲು Read More »

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

samagra job news : 3,395 ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ ಪುರುಷ, 82 ಸೇವಾನಿರತ ಮಹಿಳಾ, 35 ತೃತೀಯಲಿಂಗ ಅಭ್ಯರ್ಥಿಗಳ ಹುದ್ದೆಗಳು ಖಾಲಿ ಇವೆ. ಜೂನ್ 8 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ. ಶುಲ್ಕ ಪಾವತಿ ಮಾಡಲು ಜು.4 ಕೊನೆ ದಿನವಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ Read More »

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ 

ಸಮಗ್ರ ನ್ಯೂಸ್ : ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮೇ. 27ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮತ್ತೊಂದು

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ  Read More »

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಶಾಕ್‌ನಿಂದ ಯುವಕ ಮೃತಪಟ್ಟ ಘಟನೆ  ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಘಟನೆ ಮೇ 24ರ ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು Read More »

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು

ಸಮಗ್ರ ನ್ಯೂಸ್ : ದುಬೈನಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ. ಮೃತರನ್ನು ಕಿನ್ನಿಗೋಳಿಯ ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು.

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು Read More »