ಕರಾವಳಿ

ಮಂಗಳೂರು: ನಿಲ್ಲಿಸಿದ್ದ ಕಾರು ನಿಂತಲ್ಲೇ ದಗದಗ|

ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಾ.28ರ ಮಂಗಳವಾರ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ವಿಹಾರಕ್ಕೆ ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಸ್ಥಳದಲ್ಲಿ ಬೆಂಕಿ ಕಾಣಿಸಿತು. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ನಿಲ್ಲಿಸಿದ್ದ ಕಾರು ನಿಂತಲ್ಲೇ ದಗದಗ| Read More »

ಪುತ್ತೂರು: ಮುಸ್ಲಿಂ ಯುವಕನಿಂದ ಮಾನಭಂಗಕ್ಕೆ ಯತ್ನ

ಸಮಗ್ರ ನ್ಯೂಸ್ : ಆಟೋ ಚಾಲಕನೊಬ್ಬ ತನ್ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕುಪಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಅವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ. ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ್ದಾನೆ. ಈ ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುತ್ತೂರು: ಮುಸ್ಲಿಂ ಯುವಕನಿಂದ ಮಾನಭಂಗಕ್ಕೆ ಯತ್ನ Read More »

ಮಂಗಳೂರು: 2 ಮಕ್ಕಳೊಂದಿಗೆ ತಾಯಿ ನಾಪತ್ತೆ – ದೂರು ದಾಖಲು

ಸಮಗ್ರ ನ್ಯೂಸ್: ನಗರದ ಕಾಟಿಪಳ್ಳ ಗ್ರಾಮದ ಗಣೇಶ ಪುರದಲ್ಲಿ ವಾಸವಿದ್ದ ಭಾರತಿ ಮಾದರ (35) ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ ಇಂತಿದೆ:ಭಾರತಿ ಮಾದರ : ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು

ಮಂಗಳೂರು: 2 ಮಕ್ಕಳೊಂದಿಗೆ ತಾಯಿ ನಾಪತ್ತೆ – ದೂರು ದಾಖಲು Read More »

ಪುತ್ತೂರು ಬಸ್‌ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು| ತುಳುನಾಡ ವೀರರ ಹೆಸರಲ್ಲಿ ರಾರಾಜಿಸಲಿದೆ ದ.ಕ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣ|

ಸಮಗ್ರ ನ್ಯೂಸ್: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದೆ. ಕೆ.ಎಸ್.ಆರ್.ಟಿ.ಸಿ ಯು ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವ ಸಂಬಂಧ ನಿರ್ಣಯ ಕೈಗೊಂಡಿದ್ದು, ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಬೆಂಬಿಡದ ಪ್ರಯತ್ನದ ಫಲವಾಗಿ ಯೋಜನೆ ಕೈಗೂಡಿದ್ದು, ಬಹುತೇಕ ಮುಂದಿನ ತಿಂಗಳು ನಾಮಕರಣ

ಪುತ್ತೂರು ಬಸ್‌ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು| ತುಳುನಾಡ ವೀರರ ಹೆಸರಲ್ಲಿ ರಾರಾಜಿಸಲಿದೆ ದ.ಕ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣ| Read More »

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ| ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ|

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಕೊಡಪಾಲ ಆಯ್ಕೆಯಾಗಿದ್ದಾರೆ.ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ‌ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ – ವಸಂತಿ ಕೊಡಪಾಲ ರವರ ಪುತ್ರ.‌ ಸುಳ್ಯ ತಾಲೂಕು ಎನ್.ಎಸ್.ಯು.ಐ. ಅಧ್ಯಕ್ಷ ರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ| ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ| Read More »

ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸಮಗ್ರ ನ್ಯೂಸ್ : ಶ್ರೀ ಕ್ಷೇತ್ರ‌ ಧರ್ಮಸ್ಥಳ ದೇವಸ್ಥಾನಕ್ಕೆ ಬರುವ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ ಅಂತರಾಜ್ಯ ಚೋರನನ್ನು‌ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ಮಾಡಿ ಆರೋಪಿ ಹಾಗೂ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ‌ ನಾಯರಿ ಎಂಬವರು ಸ್ನಾನ ಮಾಡಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ತಮ್ಮ‌ ಚಿನ್ನಾಭರಣ ಹಾಗೂ ಹಣ ಇದ್ದ ಬ್ಯಾಗ್ ಇಟ್ಟಿದ್ದರು.

ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »

ಮಂಗಳೂರು: ಮೊಮ್ಮಗಳ ಬರ್ತ್ ಡೇ ಪೂಜೆ ಮುಗಿಸಿ ವಾಪಾಸ್ಸಾಗುತ್ತಿದ್ದ ಅಜ್ಜಿ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಕಾಪಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಗಳ ಹುಟ್ಟುಹಬ್ಬಕ್ಕೆ ಚರ್ಚ್ ನಲ್ಲಿ ಪೂಜೆ ಮುಗಿಸಿ ಮನೆಗೆ ಬರುತ್ತಿರುವ ಸಂದರ್ಭ ಅವರು ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋಜ(47)

ಮಂಗಳೂರು: ಮೊಮ್ಮಗಳ ಬರ್ತ್ ಡೇ ಪೂಜೆ ಮುಗಿಸಿ ವಾಪಾಸ್ಸಾಗುತ್ತಿದ್ದ ಅಜ್ಜಿ ಅಪಘಾತದಲ್ಲಿ ಸಾವು Read More »

ಎ.6 ಕ್ಕೆ ಕರ್ನಾಟಕದತ್ತ “ನಮೋ”| ಕರುನಾಡಲ್ಲಿ ಚುನಾವಣಾ ದಂಡಯಾತ್ರೆಗೆ ಸಜ್ಜಾದರಾ ಪ್ರಧಾನಿ?

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿ ಗೆದ್ದು ಉತ್ಸಾಹದಲ್ಲಿರುವ ಕಮಲ ಪಡೆ 2023ರ ರಾಜ್ಯ ಚುನಾವಣೆಯ ಮೇಲೆ ಕಣ್ಣಿಟ್ಟಿದೆ. ಕರುನಾಡಿನಲ್ಲಿ ರಣಕಹಳೆ ಮೊಳಗಿಸಲು ಮೋದಿಯೂ ಸಜ್ಜಾಗಿದ್ದು, ಪ್ರಧಾನಿ ಕರ್ನಾಟಕ ದಂಡಯಾತ್ರೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್​ 6ಕ್ಕೆ ಪ್ರಧಾನಿಗಳ ರಾಜ್ಯ ಪ್ರವಾಸ ಆರಂಭವಾಗಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆಗೆ ಪ್ಲಾನ್ ರೂಪಿಸಲಾಗಿದೆ. ಪ್ರಧಾನಿ ಮೋದಿ ಪ್ರವಾಸದ ಬಗ್ಗೆ ಸಿಎಂ ಬೊಮ್ಮಾಯಿಗೆ ಮಾಹಿತಿ ರವಾನೆಯಾಗಿದ್ದು, ಸಿದ್ಧತೆ ಶುರು ಮಾಡಿಕೊಂಡಿದ್ದಾರೆ. ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಅಮಿತ್​ ಶಾ ಭೇಟಿ ಕೊಡಲಿದ್ದಾರೆ.

ಎ.6 ಕ್ಕೆ ಕರ್ನಾಟಕದತ್ತ “ನಮೋ”| ಕರುನಾಡಲ್ಲಿ ಚುನಾವಣಾ ದಂಡಯಾತ್ರೆಗೆ ಸಜ್ಜಾದರಾ ಪ್ರಧಾನಿ? Read More »

ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ಬಸ್‌ ನೂತನ ಸಂಚಾರ ಆರಂಭ

ಸಮಗ್ರ ನ್ಯೂಸ್: ಪವಿತ್ರ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಿಂದ ತಿರುಪತಿಗೆ ಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮವು ನೂತನವಾಗಿ ರಾಜಹಂಸ ಬಸ್ ಸೌಲಭ್ಯವನ್ನು ಪ್ರಾರಂಭಿಸಿದ್ದು ಮಾ.26ರಿಂದ ಚಾಲನೆ ದೊರೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ನೂತನ ಬಸ್ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಪ್ರತಿದಿನ ಸುಬ್ರಹ್ಮಣ್ಯದಿಂದ ತಿರುಪತಿಗೆ ಸೌಲಭ್ಯವಿದ್ದು ಕುಕ್ಕೆ ಸುಬ್ರಹ್ಮಣ್ಯದಿಂದ ರಾತ್ರಿ 9:00ಕ್ಕೆ ಹೊರಡುವ ಬಸ್ ಹಾಸನ, ಬೆಂಗಳೂರು, ಚಿತ್ತೂರು ಮೂಲಕ ಪ್ರಯಾಣಿಸಿ ಬೆಳಿಗ್ಗೆ 10:30ಕ್ಕೆ

ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ಬಸ್‌ ನೂತನ ಸಂಚಾರ ಆರಂಭ Read More »

ದೇವನಹಳ್ಳಿ ಬಳಿ ಭೀಕರ ರಸ್ತೆ ದುರಂತ| ಲಾರಿ ಚಾಲಕ ಸಜೀವ ದಹನ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ‌ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾಗಿದ್ದಾನೆ. ಭುಕ್ತಿ ಡಾಬಾ ಮುಂದೆ ಇದ್ದ ರಸ್ತೆ ವಿಭಜಕಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಿಮೆಂಟ್ ಹೊತ್ತಿದ್ದ ಲಾರಿವೊಂದು ರಭಸದಿಂದ ಡಿವೈಡರ್‌ಗೆ ಗುದ್ದಿದ ಪರಿಣಾಮ ಡಿವೈಡರ್ ದಾಟಿ ಬೆಂಗಳೂರಿನಿಂದ‌ ಚಿಕ್ಕಬಳ್ಳಾಪುರ ಮಾರ್ಗವಾಗಿ ಸಾಗುತ್ತಿದ್ದ ಮತ್ತೊಂದು

ದೇವನಹಳ್ಳಿ ಬಳಿ ಭೀಕರ ರಸ್ತೆ ದುರಂತ| ಲಾರಿ ಚಾಲಕ ಸಜೀವ ದಹನ Read More »