ಕೋಮುಗಲಭೆಯ ಪ್ರಯೋಗಶಾಲೆಯಾಗುತ್ತಿರುವ ಕರಾವಳಿ| ಕಡಿವಾಣಕ್ಕೆ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ – ಮಿಥುನ್ ರೈ
ಸಮಗ್ರ ನ್ಯೂಸ್: ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕೋಮು ಗಲಭೆಗೆ ಪ್ರಯೋಗಶಾಲೆಯಾಗಿ ಉಪಯೋಗಿಸುವ ಕೆಲಸವನ್ನು ಮಾಡಲಾಗುತ್ತಿದ್ದು, ಪುಂಡ ಪೋಕರಿಗಳ ಕೆಲಸಕ್ಕೆ ಕಡಿವಾಣ ಹಾಕಬೇಕು. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸೌಹಾರ್ದದ ಕ್ಷೇತ್ರವಾಗಿರುವ ಬಪ್ಪನಾಡು ಜಾತ್ರೋತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶವಿಲ್ಲ ಎಂದು ಹೇಳಿ ಬ್ಯಾನರ್ ಹಾಕಿರುವುದರ ಹಿಂದೆ ಜಿಲ್ಲಾಡಳಿತದ […]










