ಕರಾವಳಿ

‘ಅಸಾನಿ ಎಫೆಕ್ಟ್’; ರಾಜ್ಯದಲ್ಲಿ ಭಾರೀ ಮಳೆ ಸಂಭವ, ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯ ಹವಾಮಾನ ಇಲಾಖೆ ಸೋಮವಾರ ಸಂಜೆ ನೀಡಿದ ತನ್ನ ಮುನ್ಸೂಚನೆಯಲ್ಲಿ, ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರದವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಳೆ ಸುರಿಯಲಿದೆ. ಗುರುವಾರ ಮತ್ತು ಶುಕ್ರವಾರ […]

‘ಅಸಾನಿ ಎಫೆಕ್ಟ್’; ರಾಜ್ಯದಲ್ಲಿ ಭಾರೀ ಮಳೆ ಸಂಭವ, ಅಲರ್ಟ್ ಘೋಷಣೆ Read More »

ಮಂಗಳೂರು: ಹಿಜಾಬ್ ಹಾಕಲೇಬೇಕೆಂದರೆ ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ – ಕಲ್ಲಡ್ಕ

ಸಮಗ್ರ ನ್ಯೂಸ್: ಹಿಜಾಬ್ ಬೇಕು ಎನ್ನುವ ಎಸ್‍ಡಿಪಿಐಗೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ಹಿಜಾಬ್ ಹಾಕಿಸುವ ತಾಕತ್ತು ಇದೆಯೇ? ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ ಅವರು ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ. ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳದ ಬ್ಯಾರಿಗಳೊಂದಿಗೆ ಸ್ನೇಹ ಬೆಳೆಸುವ ಮೊದಲು ಆಲೋಚನೆ ಮಾಡಬೇಕಾಗಿದೆ. ಹಿಜಾಬ್ ವಿಚಾರದಲ್ಲಿ ಮುಸಲ್ಮಾನರು ನ್ಯಾಯಾಲಯ, ಸಂವಿಧಾನ ಕಡೆಗಣಿಸಿ ಅಗತ್ಯ ಸೇವೆಯನ್ನು ಬಂದ್ ಮಾಡಿದರು. ಇವರು ಹಿಂದೂಗಳ ಜತೆ ಮಾಡುವುದು ಡೋಂಗಿ ದೋಸ್ತಿ ಎಂದು ಆರೆಸೆಸ್ಸ್ ಮುಖಂಡ‌ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ವಿಶ್ವ

ಮಂಗಳೂರು: ಹಿಜಾಬ್ ಹಾಕಲೇಬೇಕೆಂದರೆ ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ – ಕಲ್ಲಡ್ಕ Read More »

ಡಾ ಅನುರಾಧಾ ಕುರುಂಜಿಗೆ ರಾಷ್ಟ್ರೀಯ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ, ಜೆಸಿ ವಲಯ ತರಬೇತುದಾರರಾಗಿರುವ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಫಾರ್ ಹೆಲ್ತ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ‌ ಈ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿಯವರನ್ನು ಆಯ್ಕೆ ಮಾಡಲಾಗಿದೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು

ಡಾ ಅನುರಾಧಾ ಕುರುಂಜಿಗೆ ರಾಷ್ಟ್ರೀಯ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ Read More »

ಮುಂದೊಮ್ಮೆ ಕೇಸರಿ ಧ್ವಜವೇ ರಾಷ್ಟ್ರಧ್ವಜವಾದೀತು- ಕಲ್ಲಡ್ಕ ಪ್ರಭಾಕರ ಭಟ್

ಸಮಗ್ರ ನ್ಯೂಸ್: ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಸಮಾರೋಪ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದ ಭಾರತದ ರಾಷ್ಟ್ರಧ್ವಜ ಇಬ್ಭಾಗವಾಯಿತು. ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣಗಳ ರಾಷ್ಟ್ರಧ್ವಜವನ್ನು

ಮುಂದೊಮ್ಮೆ ಕೇಸರಿ ಧ್ವಜವೇ ರಾಷ್ಟ್ರಧ್ವಜವಾದೀತು- ಕಲ್ಲಡ್ಕ ಪ್ರಭಾಕರ ಭಟ್ Read More »

ಮಡಂತ್ಯಾರ್: ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 17ನೇ ನೂತನ ಶಾಖೆ ಉದ್ಘಾಟನೆ| “ಗ್ರಾಮೀಣ ಭಾಗದ ಆರ್ಥಿಕ ಶಕ್ತಿಯಾಗಿ ಪ್ರೇರಣೆ – ಹರೀಶ್ ಪೂಂಜಾ

ಸಮಗ್ರ ನ್ಯೂಸ್: ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಗ್ರಾಮೀಣ ಭಾಗದಲ್ಲಿ ಆರಂಭಗೊಂಡು‌ ಆರ್ಥಿಕ ಶಕ್ತಿಯಾಗಿ ಬೆಳೆದಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಆರಂಭಗೊಂಡ ಸೊಸೈಟಿಯ ನೂತನ 17ನೇ ಶಾಖೆಯ ಉದ್ಘಾಟನೆ ನಡೆಸಿ ಮಾತನಾಡುತ್ತಿದ್ದರು. ಸೊಸೈಟಿಯು ಗ್ರಾಮೀಣ ಭಾಗದಲ್ಲಿ ಆರ್ಥಿಕ ಸದೃಢತೆಯನ್ನು ಹುಟ್ಟುಹಾಕಿದೆ. ರಾಜ್ಯದಲ್ಲಿ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ಸಂಸ್ಥೆ ಇಂದು ಹಲವರಿಗೆ ಪ್ರೇರಣೆಯಾಗಿದೆ. ಮಡಂತ್ಯಾರ್ ಶಾಖೆ ಉತ್ತಮವಾದ ವ್ಯವಹಾರ ಮಾಡಿ ಆರ್ಥಿಕ ಶಕ್ತಿಯಾಗಿ ಬೆಳೆಯಲಿ,

ಮಡಂತ್ಯಾರ್: ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 17ನೇ ನೂತನ ಶಾಖೆ ಉದ್ಘಾಟನೆ| “ಗ್ರಾಮೀಣ ಭಾಗದ ಆರ್ಥಿಕ ಶಕ್ತಿಯಾಗಿ ಪ್ರೇರಣೆ – ಹರೀಶ್ ಪೂಂಜಾ Read More »

ಮಂಗಳೂರು: ನೈತಿಕ ಪೊಲೀಸ್ ಗಿರಿಗೆ ಬಂದವರಿಗೆ ಮುಖಭಂಗ| ಅನ್ಯಧರ್ಮೀಯ ಜೋಡಿ ಎಂದು ತಿಳಿದು ಪ್ರಶ್ನಿಸಲು ಬಂದವರು ಪೇಚುಮೋರೆ ಹಾಕಿಹೊದರು

ಸಮಗ್ರ ನ್ಯೂಸ್: ಖಾಸಗಿ ಬಸ್​ಒಂದರಲ್ಲಿ ಬಿಹಾರದ ಯುವಕನ ಜೊತೆಗೆ ಮಹಿಳೆಯೊಬ್ಬಳು ಪ್ರಯಾಣಿಸುತ್ತಿದ್ದು, ಇವರನ್ನು ನೋಡಿದ ಕೆಲವರಿಗೆ ತಲೆಯಲ್ಲಿ ಮತೀಯ ವಿಚಾರ ಬಂದಿದೆ. ಇವರಿಬ್ಬರನ್ನು ಅನ್ಯಮತೀಯ ಜೋಡಿ ಎಂದು ಬಸ್ ತಡೆದವರಿಗೇ ಕೊನೆಗೆ ತಾವು ತಪ್ಪು ತಿಳಿದಿರುವುದು ಅರಿವಿಗೆ ಬಂದಿರುವ ಘಟನೆ ಶುಕ್ರವಾರ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ಮಂಗಳೂರಿನ ವಿವಾಹಿತ ಮಹಿಳೆಯೊಬ್ಬಳು ಬಿಹಾರದ ಗೆಳೆಯನೊಂದಿಗೆ ಬಸ್​ನಲ್ಲಿ ಸಂಚರಿಸುತ್ತಿದ್ದಳು. ಮೂಡುಬಿದಿರೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್​ನಲ್ಲಿದ್ದ ಯುವಕ ಮತ್ತು ಗೃಹಿಣಿಯನ್ನು ನೋಡಿದವರು ಅವರು ಅನ್ಯಮತೀಯ ಜೋಡಿ ಎಂದು ಗುರುಪುರದ ಹಿಂದೂ ಸಂಘಟನೆಯ

ಮಂಗಳೂರು: ನೈತಿಕ ಪೊಲೀಸ್ ಗಿರಿಗೆ ಬಂದವರಿಗೆ ಮುಖಭಂಗ| ಅನ್ಯಧರ್ಮೀಯ ಜೋಡಿ ಎಂದು ತಿಳಿದು ಪ್ರಶ್ನಿಸಲು ಬಂದವರು ಪೇಚುಮೋರೆ ಹಾಕಿಹೊದರು Read More »

ಕೌಟುಂಬಿಕ ಕಲಹ; ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಮಗ

ಸಮಗ್ರ ನ್ಯೂಸ್: ಶನಿವಾರ ತಡರಾತ್ರಿ ನಡೆದ ಭೀಕರ ದುರ್ಘಟನೆಯಲ್ಲಿ ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ತಂದೆಯನ್ನು ಸ್ವಂತ ಮಗನೇ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ (74) ಮೃತ ವ್ಯಕ್ತಿ. ಇವರ ಮಗ ರಾಘವೇಂದ್ರ (36) ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹ; ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಮಗ Read More »

ಮಂಗಳೂರು: ಬಸ್ ರಸ್ತೆಯಲ್ಲಿ ಅಡ್ಡವಾಗಿಟ್ಟು ಸಿಬ್ಬಂದಿಯ ಗುಂಪುಘರ್ಷಣೆ| ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ಸಮಯ ಪಾಲನೆಯ ವಿಷಯದಲ್ಲಿ ಎರಡು ಬಸ್‌ಗಳನ್ನು ರಸ್ತೆಯಲ್ಲಿ ಅಡ್ಡವಾಗಿಟ್ಟುಕೊಂಡು ಪರಸ್ಪರ ಜಗಳವಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡಿದ ಆರೋಪದಲ್ಲಿ ಉರ್ವ ಪೊಲೀಸರು ನಾಲ್ಕು ಮಂದಿ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಬಸ್ ಸಿಬ್ಬಂದಿಗಳಾದ ಗುಣರಾಜ್ ಶೆಟ್ಟಿ, ಸ್ಟೀವನ್ ನೆಲ್ಸನ್ ನೊರೊನ್ಹಾ, ಧನರಾಜ್ ಮತ್ತು ಶರತ್ ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಲೇಡಿಹಿಲ್ ಬಸ್ ನಿಲ್ದಾಣದ ಬಳಿ ಶುಕ್ರವಾರ ಎರಡು ಬಸ್‌ಗಳನ್ನು ಪರಸ್ಪರ ಅಡ್ಡವಾಗಿಟ್ಟು ಚಾಲಕ ಮತ್ತು ನಿರ್ವಾಹಕರು ಬೈದಾಡಿ ತಳ್ಳಾಡುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ

ಮಂಗಳೂರು: ಬಸ್ ರಸ್ತೆಯಲ್ಲಿ ಅಡ್ಡವಾಗಿಟ್ಟು ಸಿಬ್ಬಂದಿಯ ಗುಂಪುಘರ್ಷಣೆ| ನಾಲ್ವರು ಅರೆಸ್ಟ್ Read More »

ಮಂಗಳೂರು: ನಾಳೆ ನೇರ ನೇಮಕಾತಿ ಸಂದರ್ಶನ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಉದ್ಯೋಗ ಕೇಂದ್ರದ ವತಿಯಿಂದ ಮುತ್ತೂಟ್ ಫೈನಾನ್ಸ್ ಪ್ರೈ.ಲಿ. ಕೋಜೆಂಟ್ ಇ-ಸರ್ವೀಸಸ್ ಪ್ರೈ.ಲಿ.ಸಂಸ್ಥೆಗಳಿಂದ ಮಾ.21ರ ಬೆಳಗ್ಗೆ 10.30 ರಿಂದ 12.30ರವರೆಗೆ ನೇರ ನೇಮಕಾತಿ ಹಮ್ಮಿಕೊಳ್ಳಲಾಗಿದೆ. ಪಿಯುಸಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡಾಟಾ ದೊಂದಿಗೆ ನೇರ ನೇಮಕಾತಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು: ನಾಳೆ ನೇರ ನೇಮಕಾತಿ ಸಂದರ್ಶನ Read More »

ಮುಂದಿನ ಮೂರು ದಿನ ಮಳೆ ಸಾಧ್ಯತೆ| ಇದು ‘ಅಸನಿ’ ಎಫೆಕ್ಟ್

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ರೂಪಗೊಳ್ಳಲಿರುವ ‘ಅಸನಿ’ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ ‘ಅಸನಿ’ ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ಮಾತನಾಡಿ, “ಚಂಡಮಾರುತದ ಪರಿಣಾಮ ಕರ್ನಾಟಕ,

ಮುಂದಿನ ಮೂರು ದಿನ ಮಳೆ ಸಾಧ್ಯತೆ| ಇದು ‘ಅಸನಿ’ ಎಫೆಕ್ಟ್ Read More »