ಕರಾವಳಿ

ಎ.6 ಕ್ಕೆ ಕರ್ನಾಟಕದತ್ತ “ನಮೋ”| ಕರುನಾಡಲ್ಲಿ ಚುನಾವಣಾ ದಂಡಯಾತ್ರೆಗೆ ಸಜ್ಜಾದರಾ ಪ್ರಧಾನಿ?

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿ ಗೆದ್ದು ಉತ್ಸಾಹದಲ್ಲಿರುವ ಕಮಲ ಪಡೆ 2023ರ ರಾಜ್ಯ ಚುನಾವಣೆಯ ಮೇಲೆ ಕಣ್ಣಿಟ್ಟಿದೆ. ಕರುನಾಡಿನಲ್ಲಿ ರಣಕಹಳೆ ಮೊಳಗಿಸಲು ಮೋದಿಯೂ ಸಜ್ಜಾಗಿದ್ದು, ಪ್ರಧಾನಿ ಕರ್ನಾಟಕ ದಂಡಯಾತ್ರೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್​ 6ಕ್ಕೆ ಪ್ರಧಾನಿಗಳ ರಾಜ್ಯ ಪ್ರವಾಸ ಆರಂಭವಾಗಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆಗೆ ಪ್ಲಾನ್ ರೂಪಿಸಲಾಗಿದೆ. ಪ್ರಧಾನಿ ಮೋದಿ ಪ್ರವಾಸದ ಬಗ್ಗೆ ಸಿಎಂ ಬೊಮ್ಮಾಯಿಗೆ ಮಾಹಿತಿ ರವಾನೆಯಾಗಿದ್ದು, ಸಿದ್ಧತೆ ಶುರು ಮಾಡಿಕೊಂಡಿದ್ದಾರೆ. ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಅಮಿತ್​ ಶಾ ಭೇಟಿ ಕೊಡಲಿದ್ದಾರೆ.

ಎ.6 ಕ್ಕೆ ಕರ್ನಾಟಕದತ್ತ “ನಮೋ”| ಕರುನಾಡಲ್ಲಿ ಚುನಾವಣಾ ದಂಡಯಾತ್ರೆಗೆ ಸಜ್ಜಾದರಾ ಪ್ರಧಾನಿ? Read More »

ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ಬಸ್‌ ನೂತನ ಸಂಚಾರ ಆರಂಭ

ಸಮಗ್ರ ನ್ಯೂಸ್: ಪವಿತ್ರ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಿಂದ ತಿರುಪತಿಗೆ ಯಾತ್ರೆ ಕೈಗೊಳ್ಳುವ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮವು ನೂತನವಾಗಿ ರಾಜಹಂಸ ಬಸ್ ಸೌಲಭ್ಯವನ್ನು ಪ್ರಾರಂಭಿಸಿದ್ದು ಮಾ.26ರಿಂದ ಚಾಲನೆ ದೊರೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ನೂತನ ಬಸ್ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಪ್ರತಿದಿನ ಸುಬ್ರಹ್ಮಣ್ಯದಿಂದ ತಿರುಪತಿಗೆ ಸೌಲಭ್ಯವಿದ್ದು ಕುಕ್ಕೆ ಸುಬ್ರಹ್ಮಣ್ಯದಿಂದ ರಾತ್ರಿ 9:00ಕ್ಕೆ ಹೊರಡುವ ಬಸ್ ಹಾಸನ, ಬೆಂಗಳೂರು, ಚಿತ್ತೂರು ಮೂಲಕ ಪ್ರಯಾಣಿಸಿ ಬೆಳಿಗ್ಗೆ 10:30ಕ್ಕೆ

ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ಬಸ್‌ ನೂತನ ಸಂಚಾರ ಆರಂಭ Read More »

ದೇವನಹಳ್ಳಿ ಬಳಿ ಭೀಕರ ರಸ್ತೆ ದುರಂತ| ಲಾರಿ ಚಾಲಕ ಸಜೀವ ದಹನ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ‌ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾಗಿದ್ದಾನೆ. ಭುಕ್ತಿ ಡಾಬಾ ಮುಂದೆ ಇದ್ದ ರಸ್ತೆ ವಿಭಜಕಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಿಮೆಂಟ್ ಹೊತ್ತಿದ್ದ ಲಾರಿವೊಂದು ರಭಸದಿಂದ ಡಿವೈಡರ್‌ಗೆ ಗುದ್ದಿದ ಪರಿಣಾಮ ಡಿವೈಡರ್ ದಾಟಿ ಬೆಂಗಳೂರಿನಿಂದ‌ ಚಿಕ್ಕಬಳ್ಳಾಪುರ ಮಾರ್ಗವಾಗಿ ಸಾಗುತ್ತಿದ್ದ ಮತ್ತೊಂದು

ದೇವನಹಳ್ಳಿ ಬಳಿ ಭೀಕರ ರಸ್ತೆ ದುರಂತ| ಲಾರಿ ಚಾಲಕ ಸಜೀವ ದಹನ Read More »

ಕೋಮುಗಲಭೆಯ ಪ್ರಯೋಗಶಾಲೆಯಾಗುತ್ತಿರುವ ಕರಾವಳಿ| ಕಡಿವಾಣಕ್ಕೆ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ – ಮಿಥುನ್ ರೈ

ಸಮಗ್ರ ನ್ಯೂಸ್: ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕೋಮು ಗಲಭೆಗೆ ಪ್ರಯೋಗಶಾಲೆಯಾಗಿ ಉಪಯೋಗಿಸುವ ಕೆಲಸವನ್ನು ಮಾಡಲಾಗುತ್ತಿದ್ದು, ಪುಂಡ ಪೋಕರಿಗಳ ಕೆಲಸಕ್ಕೆ ಕಡಿವಾಣ ಹಾಕಬೇಕು. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ಮಿಥುನ್ ರೈ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸೌಹಾರ್ದದ ಕ್ಷೇತ್ರವಾಗಿರುವ ಬಪ್ಪನಾಡು ಜಾತ್ರೋತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶವಿಲ್ಲ ಎಂದು ಹೇಳಿ ಬ್ಯಾನರ್ ಹಾಕಿರುವುದರ ಹಿಂದೆ ಜಿಲ್ಲಾಡಳಿತದ

ಕೋಮುಗಲಭೆಯ ಪ್ರಯೋಗಶಾಲೆಯಾಗುತ್ತಿರುವ ಕರಾವಳಿ| ಕಡಿವಾಣಕ್ಕೆ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ – ಮಿಥುನ್ ರೈ Read More »

ರಾಜ್ಯದಲ್ಲಿ ಮುಂದುವರಿದ ವ್ಯಾಪಾರ ಧರ್ಮಯುದ್ಧ| ಅನ್ಯಧರ್ಮೀಯರ ಜೊತೆ ವ್ಯವಹರಿಸದಿರಲು ಹಿಂದೂ ಸಂಘಟನೆಗಳಿಂದ ಚಿಂತನೆ| ‘ಹಲಾಲ್’ ವಸ್ತುಗಳ ಖರೀದಿಗೂ ಬ್ರೇಕ್

ಸಮಗ್ರ ನ್ಯೂಸ್: ಮುಸ್ಲಿಂ ಅಂಗಡಿಗಳಲ್ಲಿ ವಸ್ತುಗಳ ಖರೀದಿಗೆ ಬ್ರೇಕ್ ಹಾಕಲು ಹಿಂದೂ ಪರ ಸಂಘಟನೆಗಳು ಚಿಂತನೆ ನಡೆಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಅಂಗಡಿಯಲ್ಲಿ ಖರೀದಿ ನಿಷೇಧ ಹೇರಲಾಗಿದ್ದು, ಜಾತ್ರೆ, ಮಹೋತ್ಸವ ಇತರೆ ಸಮಾರಂಭಗಳಲ್ಲಿ ಮುಸ್ಲಿಂ ಅಂಗಡಿಗಳಿಗೆ ನಿಷೇಧಿಸಲಾಗಿದೆ. ಕರಾವಳಿಯ ಹಲವು ಪ್ರಮುಖ ಜಾತ್ರಾ ಮಹೋತ್ಸವಗಳಲ್ಲಿ ಮುಸಲ್ಮಾನರ ಅಂಗಡಿ, ಮಳಿಗೆಗಳಿಗೆ ನಿಷೇಧ ಹೇರಲಾಗಿದ್ದು, ಧರ್ಮಯುದ್ಧ ವ್ಯಾಪಾರಕ್ಕೂ ‌ಯುದ್ಧವಾಗಿ ಪರಿವರ್ತನೆಗೊಂಡಿದೆ. ಮುಸ್ಲಿಂ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ವಸ್ತುಗಳ ಖರೀದಿ ಮಾಡಬಾರದು ಅಂತ ಹಿಂದೂ ಪರ ಸಂಘಟನೆಗಳು ಕರೆ

ರಾಜ್ಯದಲ್ಲಿ ಮುಂದುವರಿದ ವ್ಯಾಪಾರ ಧರ್ಮಯುದ್ಧ| ಅನ್ಯಧರ್ಮೀಯರ ಜೊತೆ ವ್ಯವಹರಿಸದಿರಲು ಹಿಂದೂ ಸಂಘಟನೆಗಳಿಂದ ಚಿಂತನೆ| ‘ಹಲಾಲ್’ ವಸ್ತುಗಳ ಖರೀದಿಗೂ ಬ್ರೇಕ್ Read More »

ಹರ್ಷ ಹತ್ಯೆ ಪರಿಣಾಮ| ಪುತ್ತೂರು ಜಾತ್ರೆಯಲ್ಲೂ ಅನ್ಯಧರ್ಮೀಯರಿಗೆ ಮಳಿಗೆ ತೆರೆಯಲು ನಿರ್ಬಂಧ| ಆಡಳಿತ ಮಂಡಳಿಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕಾಗಿ ಹಿಂದೂಯೇತರ ಸಮುದಾಯಕ್ಕೆ ತಾತ್ಕಾಲಿಕ ಮಳಿಗೆಗಳ ಹರಾಜನ್ನು ನಿರ್ಬಂಧಿಸಿದೆ. ಏಪ್ರಿಲ್ 10ರಿಂದ 25 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಹಿಂದೂಗಳು ಮಾತ್ರ ತಮ್ಮ ಅಂಗಡಿಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತದೆ. ಈ ವೇಳೆ ನೂರಾರು ಜಾತ್ರಾ ಮಳಿಗೆಗಳು ದೇವಸ್ಥಾನದ ಬಾಕಿ ಮಾರುಗದ್ದೆಯಲ್ಲಿ ಇರಲಿದೆ. ಈ ಜಾತ್ರಾ ಮಳಿಗೆಗಳಲ್ಲೂ ಹಿಂದೂಯೇತರರು ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ. ದೇವಾಲಯದ

ಹರ್ಷ ಹತ್ಯೆ ಪರಿಣಾಮ| ಪುತ್ತೂರು ಜಾತ್ರೆಯಲ್ಲೂ ಅನ್ಯಧರ್ಮೀಯರಿಗೆ ಮಳಿಗೆ ತೆರೆಯಲು ನಿರ್ಬಂಧ| ಆಡಳಿತ ಮಂಡಳಿಯಿಂದ ಪ್ರಕಟಣೆ Read More »

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ

ಸುಳ್ಯ : ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನ್ನು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂದು ಗುರುತಿಸಲಾಗಿದೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು.ಈ ವೇಳೆ

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ Read More »

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಯಲ್ಲಿ ಜರುಗಿತು . ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು . ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ರವರು ಪ್ರಾಸ್ತಾವಿಕ ಮಾತಾಡಿದರು . ಅಧ್ಯಕ್ಷತೆ ವಹಿಸಿದ್ದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯ ಅಧ್ಯಕ್ಷರಾದ ಶ್ರೀ ಸುಂದರ್

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ Read More »

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತನ ಹೈಟೆಕ್ ವೇಶ್ಯಾವಾಟಿಕೆ| ಇದೆಂತಾ ‘ಸಮಾಜಸೇವೆ’ ರಾಝೀಕ್?

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಬಂಧಿತ ಆರೋಪಿ ‘ಸಮಾಜ ಸೇವೆ’ ಹೆಸರಿನಲ್ಲಿ ಹೀನ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು, ಈತನಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಬಂಧಿತ ಆರೋಪಿಯನ್ನು ಅಬ್ದುಲ್ ರಾಝೀಕ್ ಎಂದು ಗುರುತಿಸಲಾಗಿದೆ. ನಗರದ ನಂದಿಗುಡ್ಡೆ ಎಂಬಲ್ಲಿ ಫ್ಲ್ಯಾಟ್​ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತನ ಹೈಟೆಕ್ ವೇಶ್ಯಾವಾಟಿಕೆ| ಇದೆಂತಾ ‘ಸಮಾಜಸೇವೆ’ ರಾಝೀಕ್? Read More »

ಕದ್ರಿ ಮಂಜುನಾಥನ ಕಾಣಿಕೆಗೆ ಟ್ರಸ್ಟಿಯಿಂದಲೇ ಕನ್ನ| ಆಡಳಿತ ಸಮಿತಿಯವರೇ ಅಧಿಕಾರಿಯ ರಕ್ಷಣೆಗೆ ನಿಂತರಾ?| ಕುಪ್ಪಸದೊಳಗೆ ಸೇರಿತ್ತು 500ರ ಬಂಡಲ್!

ಸಮಗ್ರ ನ್ಯೂಸ್: ಕದ್ರಿ ಮಂಜುನಾಥ ಕ್ಷೇತ್ರದ ಕಾಣಿಕೆ ಹುಂಡಿಗೆ ಸರಕಾರದಿಂದ ನೇಮಕವಾದ ಟ್ರಸ್ಟಿಯೇ ಕನ್ನ ಹಾಕಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆಶ್ಚರ್ಯವೆಂದರೆ ‘ದೇವಸ್ಥಾನಗಳ ಹುಂಡಿಗೆ ಹಣ ಹಾಕಬೇಡಿ ಅದು ಹಜ್ ಯಾತ್ರೆಗೆ ಬಳಕೆಗುತ್ತದೆ’ ಎಂದು ಪ್ರಚಾರ ಮಾಡಿ ಗೆದ್ದಿರುವವವರೇ ಶಿಫಾರಸು ಮಾಡಿರುವ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮಹಿಳಾ ಟ್ರಸ್ಟಿ ಈ ಕೆಲಸ ಮಾಡಿದ್ದಾರೆ. ಇಂಥವರ ರಾಜೀನಾಮೆ ಪಡೆದು ಹೊರ ಹಾಕುವ ಬದಲು ರಕ್ಷಿಸುವ ಕಾರ್ಯವನ್ನು ಆಡಳಿತ ಸಮಿತಿಯೇ ಮಾಡುತ್ತಿದೆ. ಸಮಿತಿ ಧೋರಣೆಗೆ ಸಂಘ ಪರಿವಾರದ ಬೆಂಬಲದಿಂದ

ಕದ್ರಿ ಮಂಜುನಾಥನ ಕಾಣಿಕೆಗೆ ಟ್ರಸ್ಟಿಯಿಂದಲೇ ಕನ್ನ| ಆಡಳಿತ ಸಮಿತಿಯವರೇ ಅಧಿಕಾರಿಯ ರಕ್ಷಣೆಗೆ ನಿಂತರಾ?| ಕುಪ್ಪಸದೊಳಗೆ ಸೇರಿತ್ತು 500ರ ಬಂಡಲ್! Read More »