ಕರಾವಳಿ

ಮಂಗಳೂರು: ಕ್ರಿಕೆಟ್ ಕಾಮೆಂಟರಿ ನಿರ್ವಹಿಸಿ ಹಿಂದುರಿಗಿದ ಬಾಲಕನ ಶವ ನದಿಯಲ್ಲಿ ಪತ್ತೆ

ಸಮಗ್ರ‌ ನ್ಯೂಸ್: ಭಾನುವಾರದಂದು ನಾಪತ್ತೆಯಾಗಿದ್ದ ಬಾಲಕನ ಶವ ಫೆ.28 ರ ಸೋಮವಾರ ಇಲ್ಲಿನ ಹೊಯಿಗೆ ಬಜಾರ್ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಖಾಸಗಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ದೃಶ್ಯಾಂತ್ (16) ಮೃತಪಟ್ಟವನು. ಇಲ್ಲಿನ ಮಹಾಕಾಳಿ ಪಡ್ಪು ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟಕ್ಕೆ ದೃಶ್ಯಾಂತ್ ಹೋಗಿ ಭಾನುವಾರ ಮಧ್ಯಾಹ್ನ 3.30ರವರೆಗೆ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ ನಿರ್ವಹಿಸುತ್ತಿದ್ದ. ಪಂದ್ಯ ಮುಗಿಯುತ್ತಿದ್ದಂತೆ ಆತನ ಸ್ನೇಹಿತರು ಪಂದ್ಯ ಮುಗಿಸಿ ತೆರಳಿದ್ದರು. ಆದರೆ ದೃಶ್ಯಾಂತ್ ಮಾತ್ರ ಮನೆ ತಲುಪಿಲ್ಲರಲಿಲ್ಲ. ಆತನ ಸ್ನೇಹಿತರು, ಸಂಬಂಧಿಕರು […]

ಮಂಗಳೂರು: ಕ್ರಿಕೆಟ್ ಕಾಮೆಂಟರಿ ನಿರ್ವಹಿಸಿ ಹಿಂದುರಿಗಿದ ಬಾಲಕನ ಶವ ನದಿಯಲ್ಲಿ ಪತ್ತೆ Read More »

ರಾಷ್ಟ್ರಧ್ವಜಕ್ಕೆ ಅವಮಾನ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು|

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರ್.ಎಸ್.ಎಸ್. ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವ ಜತೆಗೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದ ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ

ರಾಷ್ಟ್ರಧ್ವಜಕ್ಕೆ ಅವಮಾನ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು| Read More »

ಧರ್ಮಸ್ಥಳ: ಶಿವರಾತ್ರಿ ಹಿನ್ನೆಲೆ; ಕ್ಷೇತ್ರಕ್ಕೆ ಹರಿದು ಬಂದ ಭಕ್ತರ ಪಾದಯಾತ್ರೆ

ಸಮಗ್ರ ನ್ಯೂಸ್: ಮಹಾ ಶಿವರಾತ್ರಿ ಆಚರಣೆಗೆ ನಾಡಿನೆಲ್ಲೆಡೆ ವಿಶೇಷ ತಯಾರಿ ನಡೆಸಲಾಗುತ್ತಿದ್ದು, ರಾಜ್ಯದ ಪ್ರಸಿದ್ದ ಶಿವಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು ಹರಿದುಬಂದಿದೆ. ಶಿವನ ದೇವಾಲಯಗಳಲ್ಲಿ ಪಾರಾಯಣ ಜಾಗರಣೆ ವಿಶೇಷ ರೀತಿಯಲ್ಲಿ ಆಚರಿಸುತ್ತಾರೆ. ಅದೇ ರೀತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಶಿವರಾತ್ರಿಗೆ ವಿಶೇಷ ಪೂಜೆಗಳು ಜರುಗುತ್ತವೆ. ಶಿವರಾತ್ರಿ ಸಂದರ್ಭ ರಾಜ್ಯದ ವಿವಿಧ ಕಡೆಗಳಿಂದ ಪಾದಯಾತ್ರೆಯ ಮೂಲಕ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಭಾನುವಾರ, ಸೋಮವಾರದಂದು ಚಾರ್ಮಾಡಿ ಕಡೆಯಿಂದ ಹೆಚ್ಚಿನ ಪಾದಯಾತ್ರಿಗಳು ಆಗಮಿಸಿದರು. ಹಗಲಲ್ಲಿ ಒಂದಿಷ್ಟು ಬಿಸಿಲಿನ ತಾಪ ಅಧಿಕ

ಧರ್ಮಸ್ಥಳ: ಶಿವರಾತ್ರಿ ಹಿನ್ನೆಲೆ; ಕ್ಷೇತ್ರಕ್ಕೆ ಹರಿದು ಬಂದ ಭಕ್ತರ ಪಾದಯಾತ್ರೆ Read More »

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ

ಸಮಗ್ರ ನ್ಯೂಸ್: ಮಂಗಳೂರಿನ 64 ವರ್ಷದ ಮಹಿಳಾ ಕ್ರೀಡಾಪಟು ಭವಾನಿ ಜೋಗಿ ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ 35ನೇ ವಾರ್ಷಿಕ ಮಾಸ್ಟರ್ಸ್ (ಒಪನ್) ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರು ಇದುವರೆಗೆ ಫೀಲ್ಡ್ ಮತ್ತು ಟ್ರ್ಯಾಕ್ ಸ್ಪರ್ಧೆಗಳಲ್ಲಿ 200ಕ್ಕೂ ಅಧಿಕ ಪದಕಗಳನ್ನು ಗೆದಿದ್ದಾರೆ. ವೃತ್ತಿಯಲ್ಲಿ ನರ್ಸ್ ಆಗಿರುವ ಭವಾನಿ ಮೂಲತ: ಹಾಸನ ಜಿಲ್ಲೆ ಸಕಲೇಶಪುರದವರಾಗಿದ್ದು, ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಲ್ಯದಿಂದಲೂ ಕ್ರೀಡೆಯಲ್ಲಿ

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ Read More »

ನಾಳೆ ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಫೆ.28ರ ಸೋಮವಾರ ಮಂಗಳೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಫೆ.28ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕೆ ನಗರದ ಕುಲಶೇಖರದ ಕಾರ್ಡೆಲ್ ಹಾಲ್‍ನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ, ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಆಯೋಜಿರುವ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ ಸಮಾರಂಭದಲ್ಲಿ

ನಾಳೆ ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ Read More »

ಬಂಟ್ವಾಳ: ಜೇನು ನೋಣ ದಾಳಿ; 9 ಮಂದಿ ಗಂಭೀರ

ಸಮಗ್ರ ನ್ಯೂಸ್: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48) ಐತಪ್ಪ ಶೆಟ್ಟಿ ( 76) ಅರುಣ್ ಶೆಟ್ಟಿ ( 34) ಲಲಿತಾ ,(49) ಎಂಬವರು ಜೊತೆ ಉಳಿದ ನಾಲ್ವರ ಜೇನು ನೊಣ ಕಚ್ಚಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ನಾಲ್ವರ ಹೆಸರು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು

ಬಂಟ್ವಾಳ: ಜೇನು ನೋಣ ದಾಳಿ; 9 ಮಂದಿ ಗಂಭೀರ Read More »

ಮಂಗಳೂರು: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ

ಸಮಗ್ರ ನ್ಯೂಸ್: ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಫೆ. 28ರಂದು ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 66ರ ಎನ್‌ಎಂಪಿಟಿ ಸಂಪರ್ಕಿಸುವ ಕೆಪಿಟಿ ಜಂಕ್ಷನ್‌ನಲ್ಲಿ 34.61 ಕೋ.ರೂ. ವೆಚ್ಚದಲ್ಲಿ ವಿಯುಪಿ ನಿರ್ಮಾಣ, ರಾ.ಹೆ. 75ರ ಬೆಂಗಳೂರು -ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿ ವರೆಗೆ 442.87 ಕೋ.ರೂ.

ಮಂಗಳೂರು: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ Read More »

‘ಲೇಡಿಗೋಷನ್’ ಆಸ್ಪತ್ರೆಯನ್ನು ‘ರಾಣಿ ಅಬ್ಬಕ್ಕ’ ಆಸ್ಪತ್ರೆಯಾಗಿ‌ ಮರುನಾಮಕರಣಕ್ಕೆ ಪ್ರಸ್ತಾವನೆ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ಕರಾವಳಿ ಭಾಗದ ಬಡ ಗರ್ಭಿಣಿಯರ ಹೆರಿಗೆ ಆಸ್ಪತ್ರೆ ಅಂತಾನೇ ಖ್ಯಾತಿಯಾಗಿರುವ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬ್ರಿಟಿಷ್ ಕಾಲ‌ದ ಲೇಡಿಗೋಷನ್ ಎಂಬ ಹೆಸರನ್ನು ತೆಗೆದು ರಾಣಿ ಅಬ್ಬಕ್ಕ ಆಸ್ಪತ್ರೆ ಎಂಬುವುದಾಗಿ ಮರು ನಾಮಕರಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, “ಮಂಗಳೂರಿನ ಹೆರಿಗೆ ಆಸ್ಪತ್ರೆ ಲೇಡಿಗೋಷನ್‌ನ ಹೆಸರು ಬದಲಾವಣೆಗೆ ಚಿಂತನೆ

‘ಲೇಡಿಗೋಷನ್’ ಆಸ್ಪತ್ರೆಯನ್ನು ‘ರಾಣಿ ಅಬ್ಬಕ್ಕ’ ಆಸ್ಪತ್ರೆಯಾಗಿ‌ ಮರುನಾಮಕರಣಕ್ಕೆ ಪ್ರಸ್ತಾವನೆ – ಸಚಿವ ಸುನಿಲ್ ಕುಮಾರ್ Read More »

ಕಡಬ: ಕ್ಯಾನ್ಸರ್ ಗೆ ಬಲಿಯಾದ ಶಾಲಾ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಆಲಂಕಾರು ದುರ್ಗಾಂಬಾ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೀಕ್ಷಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಾದ ಬಳಿಕ ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದ, ಇವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಕಡಬ: ಕ್ಯಾನ್ಸರ್ ಗೆ ಬಲಿಯಾದ ಶಾಲಾ ವಿದ್ಯಾರ್ಥಿನಿ Read More »

ಬಂಟ್ವಾಳ: ಕಾರಿಂಜದ ಅಕ್ರಮ ಗಣಿಗಾರಿಕೆಗೆ ಶಾಶ್ವತ ಬೀಗ ಜಡಿದ‌ ದ.ಕ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಜನರ ಶ್ರದ್ಧಾ ಭಕ್ತಿಯ ಆರಾಧ್ಯ ಕೇಂದ್ರ ಕಾರಿಂಜ ದೇವಸ್ಥಾನಕ್ಕೆ ಮಾರಕವಾಗಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಶಾಶ್ವತ ಬೀಗ ಜಡಿಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಕ್ರಮ ಕಲ್ಲು ಗಣಿಗಾರಿಕೆಯ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿದ್ದು, ಅಕ್ರಮ ಗಣಿಗಾರಿಕೆಗೆ ಬೀಗ ಹಾಕಿ ಅಕ್ರಮ ಎಸಗಿದವರ ವಿರುದ್ಧ ಲಕ್ಷಾಂತರ ರೂಪಾಯಿ ದಂಡ ಹಾಕಿದ್ದಾರೆ. ಪ್ರಭಾವಿಗಳ ಒತ್ತಡದ ನಡುವೆಯೂ ಜಿಲ್ಲಾಧಿಕಾರಿಗಳು ಕೈಗೊಂಡ ದಿಟ್ಟ ನಿರ್ಧಾರಕ್ಕೆ ಕ್ಷೇತ್ರದ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾವಿರಾರು ವರ್ಷಗಳ

ಬಂಟ್ವಾಳ: ಕಾರಿಂಜದ ಅಕ್ರಮ ಗಣಿಗಾರಿಕೆಗೆ ಶಾಶ್ವತ ಬೀಗ ಜಡಿದ‌ ದ.ಕ ಜಿಲ್ಲಾಧಿಕಾರಿ Read More »