ಕರಾವಳಿ

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ‌ವಿವಾಹ ಮಾಡಿಸಿದ ಅರ್ಚಕ| ಪ್ರಕರಣದ ಹಿಂದೆ ಪ್ರಭಾವಿ ಹಿಂದೂ ಮುಖಂಡನ ಕೈವಾಡ!?

ಸಮಗ್ರ ನ್ಯೂಸ್: ಬೆಳ್ತಂಗಡಿ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಪ್ರಕರಣ ತಿರುವು‌ ಪಡೆದುಕೊಳ್ಳುತ್ತಿದೆ. ತಾಲೂಕಿನ ನಡ ಎಂಬ ಗ್ರಾಮೀಣ ಭಾಗದಲ್ಲಿನ ಸತ್ಯನಾರಾಯಣ ದೇವಸ್ಥಾನದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ವಿವಾಹವಾಗಿದ್ದರು. ಈ ವಿವಾಹ ಕಾರ್ಯ ನೆರವೇರಿಸಿ ಸಾಮರಸ್ಯ ಕದಡಿದ್ದಾರೆ ಎಂದು ದೇವಾಲಯದ ಅರ್ಚಕ ರಾಧಾಕೃಷ್ಣ ಹೊಳ್ಳ ಅವರ ಮೇಲೆ […]

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ‌ವಿವಾಹ ಮಾಡಿಸಿದ ಅರ್ಚಕ| ಪ್ರಕರಣದ ಹಿಂದೆ ಪ್ರಭಾವಿ ಹಿಂದೂ ಮುಖಂಡನ ಕೈವಾಡ!? Read More »

ಮಂಗಳೂರು: ಹಿಜಾಬ್ ವಿರುದ್ದ ಹೇಳಿಕೆ ನೀಡಿದ ಸುರಯ್ಯಗೆ ಬೆದರಿಕೆ

ಸಮಗ್ರ ನ್ಯೂಸ್: ಹಿಜಾಬ್‌ ಸಂಬಂಧಿಸಿ ಹೇಳಿಕೆ ನೀಡಿದ ಕಾಂಗ್ರೆಸ್‌ ಮುಖಂಡರಾದ ಸುರಯ್ಯ ಅಂಜುಮ್‌ ಅವರಿಗೆ ಅಪರಿಚಿತರು ಜೀವ ಬೆದರಿಕೆಯೊಡ್ಡಿದ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಯ್ಯ ಅಂಜುಮ್‌ ಅವರು ಇತ್ತೀಚೆಗೆ ಹಿಜಾಬ್‌ ಧರಿಸುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಿ ಸಮಾನತೆ ಕಾಪಾಡ ಬೇಕು ಎಂದು ಲೈವ್‌ ವೀಡಿಯೋ ಪ್ರಸಾರ ಮಾಡಿದ್ದರು. ಇದಾದ ಕೆಲವು ದಿನಗಳ ಬಳಿಕ ಅಪರಿಚಿತರ ಫೋನ್‌, ವೀಡಿಯೋ ಮುಖಾಂತರ ಮಾನಕ್ಕೆ

ಮಂಗಳೂರು: ಹಿಜಾಬ್ ವಿರುದ್ದ ಹೇಳಿಕೆ ನೀಡಿದ ಸುರಯ್ಯಗೆ ಬೆದರಿಕೆ Read More »

ಉಕ್ರೇನ್ ನಲ್ಲಿ ಸಿಲುಕಿದ ಉಡುಪಿ ಮೂಲದ ವಿದ್ಯಾರ್ಥಿ

ಸಮಗ್ರ ನ್ಯೂಸ್: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ್ದು, ಅನೇಕ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಇದೀಗ ಉಡುಪಿ ಜಿಲ್ಲೆಯ ವಿದ್ಯಾರ್ಥಿಯೋರ್ವ ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಉಡುಪಿಯ ರೋಹನ್ ಧನಂಜಯ್ ಬಗ್ಲಿ ಅವರು ಸದ್ಯ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಬಗ್ಲಿ ಅವರ ಹಿರಿಯ ಮಗನಾಗಿದ್ದಾರೆ. ಉಕ್ರೇನ್ ನ ಕಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ 5ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು.

ಉಕ್ರೇನ್ ನಲ್ಲಿ ಸಿಲುಕಿದ ಉಡುಪಿ ಮೂಲದ ವಿದ್ಯಾರ್ಥಿ Read More »

ಸುಳ್ಯ : ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಕವಿ ಕಾವ್ಯ ಸಮ್ಮೇಳನ -2022

ಸಾಹಿತಿ,ಜ್ಯೋತಿಷಿ, ಸಂಘಟಕ, ಗಾಯಕ , ನಟ , ಚಿತ್ರ ನಿರ್ದೇಶಕರೂ ಆದ ಎಚ್ ಭೀಮರಾವ್ ವಾಷ್ಠರ್ ಕೋಡಿಹಾಳ ಇವರ 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಚಂದನ ಕವಿ ಕಾವ್ಯ ಸಮ್ಮೇಳನ -2022 ಸಾಹಿತ್ಯ ಸಮಾರಂಭವು ಫೆ20 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಿಂದ ಅರ್ಥಪೂರ್ಣವಾಗಿ ಜರುಗಿತು. ರಾಜ್ಯ ಮಟ್ಟದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಂದನ ಕವಿಗೋಷ್ಠಿ ಹಾಗೂ ಚಂದನ ಸೌರಭ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಿತು .

ಸುಳ್ಯ : ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಕವಿ ಕಾವ್ಯ ಸಮ್ಮೇಳನ -2022 Read More »

ಬೆಳ್ತಂಗಡಿ: ಮಸೀದಿಗೆ ಬಿಯರ್ ಬಾಟಲ್ ಎಸೆದ ದುಷ್ಕರ್ಮಿಗಳು| ಪೊಲೀಸರಿಂದ ತನಿಖೆ

ಸಮಗ್ರ ನ್ಯೂಸ್ ಡೆಸ್ಕ್ : ದುಷ್ಕರ್ಮಿಗಳ ತಂಡವೊಂದು ಮಸೀದಿಗೆ ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ ನಡೆದಿದೆ . ದುಷ್ಕರ್ಮಿಗಳು ಮಸೀದಿಯ ಆವರಣದೊಳಗೆ ಬಿಯರ್ ಬಾಟ್ಲಿ ಎಸೆದಿದ್ದಾರೆ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೇ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಮಸೀದಿಗೆ ಬಿಯರ್ ಬಾಟಲಿ ಎಸೆದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಮಸೀದಿಗೆ ಬಿಯರ್ ಬಾಟಲ್ ಎಸೆದ ದುಷ್ಕರ್ಮಿಗಳು| ಪೊಲೀಸರಿಂದ ತನಿಖೆ Read More »

ಮಂಗಳೂರು: ‘ಜಿಲ್ಲೆಯ ಜನರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್: ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದ್ದು, ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು‌ ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ. ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ‌ ಕೆ.ವಿ ಮನವಿ ಮಾಡಿಕೊಂಡಿದ್ದಾರೆ. ಉಕ್ರೇನ್​ ಮೇಲೆ ರಷ್ಯಾ ಯುದ್ಧ

ಮಂಗಳೂರು: ‘ಜಿಲ್ಲೆಯ ಜನರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ಡಿ.ಸಿ Read More »

ವಿಟ್ಲ : ಮಗನನ್ನೇ ಕೊಲೆಗೈದ ತಂದೆ| ಕಾರಣ?

ಸಮಗ್ರ ನ್ಯೂಸ್: ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ದಿನೇಶ್ (45) ಎಂದು ಗುರುತಿಸಲಾಗಿದೆ. ನೀಲಯ್ಯ ಗೌಡ ಮಗನ ಕೊಲೆ ನಡೆಸಿದ ಆರೋಪಿ. ಮೃತರ ತಂದೆ ವಸಂತ ಗೌಡ ಹಾಗೂ ದಿನೇಶ್ ಅವರು ಮನೆಯಲ್ಲಿ ವಾಸವಾಗಿದ್ದು, ದಿನೇಶ್ ಪ್ರತೀ ದಿನ ಮನೆಗೆ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಮಗನ ಉಪಟಳ ತಾಳಲಾರದೆ ಅಪ್ಪ ದೊಣೆಯಿಂದ ಹೊಡೆದಿದ್ದಾರೆ. ಮೃತರ

ವಿಟ್ಲ : ಮಗನನ್ನೇ ಕೊಲೆಗೈದ ತಂದೆ| ಕಾರಣ? Read More »

ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನ‌ಚಕ್ರವರ್ತಿ’ ಪ್ರಶಸ್ತಿ

ಸಮಗ್ರ ನ್ಯೂಸ್: ಐಕಳಬಾವ ಕಾಂತಾಬಾರೆ ಬೂದಾಬಾರೆ ಕುಂಬಳ ಸಮಿತಿ, ಐಕಳ ಮತ್ತು ಮುಂಬಯಿ ವತಿಯಿಂದ ಫೆ. 26ರಂದು ನಡೆಯುವ ಐಕಳ ಕಂಬಳೋತ್ಸವದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರಿಗೆ “ಸಾಧನ ಚಕ್ರವರ್ತಿ’ ಪ್ರಶಸ್ತಿ ನೀಡಲಾಗುವುದು ಎಂದು ಕಂಬಳ್ಳೋತ್ಸವ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ 28 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆ

ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನ‌ಚಕ್ರವರ್ತಿ’ ಪ್ರಶಸ್ತಿ Read More »

ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ವೈಮನಸ್ಸು ಉಂಟಾಗಿ ಹೆಂಡತಿಯ ಅಣ್ಣ ಬಾವನನ್ನು ಕೊಲೆ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಹಾಗೂ ಆರೋಪಿಯನ್ನು ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ ಪೂಜಾರಿ (45) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದು, ಕಳೆದ ಜ.31ರಂದು ಮನೆಗೆ ಬಂದ ಅವರು ಸಂಬಳದ ಹಣವನ್ನು ಪತ್ನಿ ಪ್ರೇಮಾ

ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ Read More »

“ಹರ್ಷನ ಕತೆ ಮುಗೀತು, ನೆಕ್ಸ್ಟ್ ನಿಮ್ದೇ”| ಪುತ್ತೂರಿನ ಇಬ್ಬರು ಸೇರಿ ಮೂರು ಮಂದಿಗೆ ಕೊಲೆ ಬೆದರಿಕೆ

L ಸಮಗ್ರ ನ್ಯೂಸ್: ದೇಶಾದ್ಯಂತ ಸುದ್ದಿಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಕೋಲಾಹಲ ಸೃಷ್ಟಿಸಿದ ಈ ಕೊಲೆ ನಂತರ ಇದೀಗ ಇದೇ ರೀತಿ ಮತ್ತೆ ಮೂವರಿಗೆ ಕೊಲೆ ಬೆದರಿಕೆ ಬಂದಿದೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದ್ದು, ಹರ್ಷ ಕಥೆ ಮುಗೀತು. ನೆಕ್ಸ್ಟ್ ಹಿಟ್ ಲಿಸ್ಟ್ ನಲ್ಲಿ ನೀನೆ ಇದ್ದೀಯ. ಹರ್ಷನ ಯಾಕೆ ಮರ್ಡರ್ ಯಾಕೆ ಮಾಡಿದ್ವಿ ಎನ್ನುವುದು ಗೊತ್ತಲ್ಲ ? ಇಲ್ಲಿಂದಲೇ ಸ್ಕೆಚ್ ಹಾಕ್ತೀವಿ ಗೊತ್ತಲ್ಲ, ಹಿಜಾಬ್ ತಂಟೆಗೆ ಬಂದರೆ ನಿಮ್ಮ

“ಹರ್ಷನ ಕತೆ ಮುಗೀತು, ನೆಕ್ಸ್ಟ್ ನಿಮ್ದೇ”| ಪುತ್ತೂರಿನ ಇಬ್ಬರು ಸೇರಿ ಮೂರು ಮಂದಿಗೆ ಕೊಲೆ ಬೆದರಿಕೆ Read More »