ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಟ್ಯಾಕ್ಸಿ

ಸಮಗ್ರ ನ್ಯೂಸ್: ಪ್ರಯಾಣಿಕರ ಅನುಕೂಲಕ್ಕಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಓಲಾ ಮತ್ತು ಉಬರ್ ಟ್ಯಾಕ್ಸಿ ಸೇವೆಗಳು ಈ ಸೇವೆಯನ್ನು ನಡೆಸಲು ಆಸಕ್ತಿ ತೋರಿಸಿವೆ ಎಂದು ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಪ್ರತ್ಯೇಕ ಪಾರ್ಕಿಂಗ್ ಸ್ಲಾಟ್‌ಗಳನ್ನು ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಇತರ ಪ್ರಿ-ಪೇಯ್ಡ್ ಟ್ಯಾಕ್ಸಿ ಸೇವೆಗಳು ಮುಂದುವರಿಯಲಿವೆ. ಅವರಿಗೂ ವಿಮಾನ ನಿಲ್ದಾಣದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರು ಪ್ರೀಪೇಯ್ಡ್ ಬೂತ್‌ನಲ್ಲಿ ಟ್ಯಾಕ್ಸಿಗಳನ್ನು ಬುಕ್ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಪ್ ಆಧಾರಿತ ಟ್ಯಾಕ್ಸಿ Read More »

ಬಂಟ್ವಾಳ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು| ಗೆದ್ದ ಸಂಭ್ರಮಕ್ಕೆ ಆಟಗಾರನೇ ಇಲ್ಲ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮನೋಹರ ಪ್ರಭು (45) ಎಂದು ಗುರುತಿಸಲಾಗಿದೆ. ಇನ್ನು ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರು ದಿನದ ಮೂರನೇ ಪಂದ್ಯಕ್ಕೆ ಸಿದ್ದರಾಗುತ್ತಿದ್ದಂತೆ ನೆಲಕ್ಕೆ ಕುಸಿದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರಭು ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ನಿಪುಣ ಕ್ರಿಕೆಟಿಗ. ಪ್ರಭು ಅವರು ಹಲವಾರು ಕ್ರಿಕೆಟ್ ತಂಡಗಳನ್ನು

ಬಂಟ್ವಾಳ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು| ಗೆದ್ದ ಸಂಭ್ರಮಕ್ಕೆ ಆಟಗಾರನೇ ಇಲ್ಲ Read More »

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ

ಸಮಗ್ರ ನ್ಯೂಸ್: ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಟೆಕ್ನಿಕಲ್​​ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್​​ 9, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ.ಹುದ್ದೆಯ ಮಾಹಿತಿ:ಅಮೃತಸರ- 03ಚಂಡೀಗರ್-04ಫಿರೋಜ್​ಪುರ-03ಹೊಶಿಯಾರ್​ಪುರ್-03ಜಲಂಧರ್-04ಲೂಧಿಯಾನ-03ಪಾಟಿಯಾಲ-04ಒಟ್ಟು 24 ಹುದ್ದೆಗಳು ವಿದ್ಯಾರ್ಹತೆ:ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ Read More »

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಸಮಗ್ರ ನ್ಯೂಸ್: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್ Read More »

ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ

ಸಮಗ್ರ ನ್ಯೂಸ್: ಪ್ರಸಿದ್ದ ಉಳ್ಳಾಲ ಮಸೀದಿಯ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಉಮ್ಮರ್ ಫಾರೂಕ್ (42), ಮೊಹಮ್ಮದ್ ತಯ್ಯಬ್ (7), ಮಶಿತಾ (18), ನೂರ್ಜಾನ್ (36), ಸಲೀಕಾ (28) ಮತ್ತು ಸಮೀರ್ (41) ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಉಳ್ಳಾಲದ ಅಲೇಕಲ ಮೂಲದವರು ಎಂದು ತಿಳಿದು ಬಂದಿದೆ.

ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ
Read More »

ಹರ್ಷ ಕುಟುಂಬಕ್ಕಾಗಿ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮತಾಂಧರ ದುಷ್ಕೃತ್ಯಕ್ಕೆ ಇಂದು ನಾವು ನಮ್ಮ ಯುವ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ನಾವು ಮಾಡಬಹುದಾದ ಕನಿಷ್ಠವೆಂದರೆ ಅವರ ಕುಟುಂಬವನ್ನು ಬೆಂಬಲಿಸುವುದು. ನನ್ನ 1 ತಿಂಗಳ ಸಂಬಳ ಮತ್ತು ಭತ್ಯೆಯನ್ನು ಹರ್ಷ ಅವರ ಕುಟುಂಬಕ್ಕೆ ನೀಡುತ್ತಿದ್ದೇನೆ.

ಹರ್ಷ ಕುಟುಂಬಕ್ಕಾಗಿ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಭರತ್ ಶೆಟ್ಟಿ Read More »

ಮಲ್ಪೆ: ಹಿಜಾಬ್ ವಿವಾದ – ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನ ಮೇಲೆ ಹಲ್ಲೆ

ಮಲ್ಪೆ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಫೆಬ್ರವರಿ 21 ರ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಬ್ಬರಾದ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೋಟೆಲ್’ ಮೇಲೆ ಸುಮಾರು 50 ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ತಿಳಿದುಬಂದಿದೆ. ಇದರಿಂದ ರೆಸ್ಟೋರೆಂಟ್‌ನ

ಮಲ್ಪೆ: ಹಿಜಾಬ್ ವಿವಾದ – ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನ ಮೇಲೆ ಹಲ್ಲೆ Read More »

ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ, ಕರಾವಳಿ ಜಿಲ್ಲೆಯಲ್ಲಿ ಕೋಮು ವಿಷ ಬೀಜ ಬಿತ್ತಲು ಮತ್ತೆ ತಲೆಯೆತ್ತಿದ ಮಂಗಳೂರು ಮುಸ್ಲಿಂ ಪೇಜ್, ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೃತ ಹರ್ಷ ವಿರುದ್ದ ಅವಹೇಳನಕಾರಿಯಾದಿ ಬರಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ದ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಮಂಗಳೂರು ಮುಸ್ಲಿಂ ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ ಎಂದು ಉಲ್ಲೇಖಿಸಿದ್ದು, 2015ರಲ್ಲಿ ಹರ್ಷ ಪ್ರವಾದಿಯನ್ನು‌ ನಿಂದನೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಪ್ರವಾದಿ

ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ, ಕರಾವಳಿ ಜಿಲ್ಲೆಯಲ್ಲಿ ಕೋಮು ವಿಷ ಬೀಜ ಬಿತ್ತಲು ಮತ್ತೆ ತಲೆಯೆತ್ತಿದ ಮಂಗಳೂರು ಮುಸ್ಲಿಂ ಪೇಜ್, ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು Read More »

ಮಂಗಳೂರು: ಟೋಲ್‌ಗೇಟ್ ವಿರೋಧಿ ಹೋರಾಟ – ಬಂಧನಕ್ಕೊಳಗಾದ ಆಸಿಫ್ ಆಪತ್ಭಾಂದವ ಬಿಡುಗಡೆ

ಮಂಗಳೂರು: ಸುರತ್ಕಲ್‌ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಟೋಲ್‌ಗೇಟ್ ಪಕ್ಕದಲ್ಲಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದ ಆಸಿಫ್ ಆಪತ್ಭ್ಬಾಂದವರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಇದೀಗ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧನದಿಂದ ಬಿಡುಗಡೆಗೊಳಿಸುವ ವಿಚಾರವಾಗಿ ಎಸ್‌ಡಿಪಿಐ ನಿಯೋಗವು ಪೊಲೀಸ್ ಆಯುಕ್ತರೊಂದಿಗೆ ಮಾತುಕತೆಯ ನಡೆಸಿ ಹೋರಾಟಗಾರ ಆಸಿಫ್ ಆಪತ್ಭ್ಬಾಂದವರನ್ನು ಬಿಡುಗಡೆ ಮಾಡಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಬೂಬಕ್ಕರ್ ಕುಳಾಯಿ, ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ,ಯಾಸೀನ್ ಅರ್ಕುಳ, ದಾವೂದ್, ತೌಸೀಫ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು: ಟೋಲ್‌ಗೇಟ್ ವಿರೋಧಿ ಹೋರಾಟ – ಬಂಧನಕ್ಕೊಳಗಾದ ಆಸಿಫ್ ಆಪತ್ಭಾಂದವ ಬಿಡುಗಡೆ Read More »

ಮಂಗಳೂರು: ಹಿಜಾಬ್ ಸಂಘರ್ಷ – “ತಲೆತಿರುಗಿ ಬಿದ್ದರೂ ಒಬ್ಬ ಶಿಕ್ಷಕರೂ ಬಂದಿಲ್ಲ” – “ಶಿಕ್ಷಕರು ಅಧಿಕ ಪ್ರಸಂಗ ಮಾತಾನಾಡುತ್ತಿದ್ದಾರೆ”

ಮಂಗಳೂರು: ವಿದ್ಯಾರ್ಥಿನಿಯರಿಂದ ಹಿಜಾಬ್ ಗಾಗಿ ಪಟ್ಟು ಹೆಚ್ಚಾಗುತ್ತಿದೆ. ನಾಲ್ಕು ದಿನದಿಂದ ಕಾಲೇಜು ಹೊರಗಡೆ ಇದ್ದೇವೆ. ಹಿಜಾಬ್ ಹಾಕಿದ್ದಕ್ಕೆ ಕಾಲೇಜಿಗೆ ಪ್ರವೇಶ ನೀಡಿಲ್ಲ. ವಿದ್ಯಾರ್ಥಿ‌ನಿ ತಲೆತಿರುಗಿ ಬಿದ್ದರೂ ಒಬ್ಬ ಶಿಕ್ಷಕರೂ ಬಂದಿಲ್ಲ ಎಂದು ಕಾವೂರು ಪಿಯು ಕಾಲೇಜು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ ವಿದ್ಯಾರ್ಥಿನಿಯರು, ಶಿಕ್ಷಕರು ಅಧಿಕ ಪ್ರಸಂಗ ಮಾತಾನಾಡುತ್ತಿದ್ದಾರೆ. ನಮ್ಮನ್ನು ಮನೆಗೆ ಹೋಗಿ ಎಂದು ಹೇಳುತ್ತಿದ್ದಾರೆ. ನಮಗೆ ಪ್ರತ್ಯೇಕ ಕೊಠಡಿ ಕೊಡಿ ಎಂದರು ಕೊಡಲಿಲ್ಲ. ಒಂದು ಕೊಠಡಿ ಇದ್ದರೂ ಕೂಡ ನಮಗೆ ಕೊಟ್ಟಿಲ್ಲ. ಮನೆಯಿಂದ ಕೊಠಡಿ ತಂದು

ಮಂಗಳೂರು: ಹಿಜಾಬ್ ಸಂಘರ್ಷ – “ತಲೆತಿರುಗಿ ಬಿದ್ದರೂ ಒಬ್ಬ ಶಿಕ್ಷಕರೂ ಬಂದಿಲ್ಲ” – “ಶಿಕ್ಷಕರು ಅಧಿಕ ಪ್ರಸಂಗ ಮಾತಾನಾಡುತ್ತಿದ್ದಾರೆ” Read More »