ಕರಾವಳಿ

ಮಂಗಳೂರಿನ ಇಬ್ಬರು ಮುಸ್ಲಿಂಮರಿಗೆ ಗಲ್ಲು ಶಿಕ್ಷೆ

ಮಂಗಳೂರು: ಗುಜರಾತಿನ ಅಹಮದಾಬಾದ್‌ನಲ್ಲಿನ 14ವರ್ಷಗಳ ಹಿಂದಿನ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಇತ್ತೀಚೆಗೆ ಕೋರ್ಟ್ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ವೇಳೆ ಶಿಕ್ಷೆಗೆ ಗುರಿಯಾದವರಲ್ಲಿ ಇಬ್ಬರು ಮಂಗಳೂರಿನವರು ಸೇರಿದ್ದಾರೆ. 56 ಮಂದಿಯನ್ನು ಬಲಿ ಪಡೆದ ಕೇಸ್ ಗೆ ಸಂಬಂಧಿಸಿ 38 ಮಂದಿಗೆ ಇತ್ತೀಚೆಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. 38 ಮಂದಿಯ ಪೈಕಿ ಇಬ್ಬರು ಕನ್ನಡಿಗರು ಮಂಗಳೂರಿನ ಮೊಹಮದ್‌ ನೌಷಾದ್‌ ಹಾಗೂ ಅಹಮದ್‌ ಬಾವಾ ಸೇರಿದ್ದಾರೆ.. ಈ ಇಬ್ಬರೂ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ […]

ಮಂಗಳೂರಿನ ಇಬ್ಬರು ಮುಸ್ಲಿಂಮರಿಗೆ ಗಲ್ಲು ಶಿಕ್ಷೆ Read More »

ಸುಳ್ಯ: ಕಾಲೇಜು ಸಿಬ್ಬಂದಿಯಿಂದ ಪತ್ರಕರ್ತನಿಗೆ ಹಲ್ಲೆ ಯತ್ನ ಪ್ರಕರಣ| ಸ್ಪಷ್ಟನೆ ನೀಡಿದ ಕಾಲೇಜು ಮುಖ್ಯಸ್ಥರು|

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯದ ಖಾಸಗಿ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ್ದನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರಿಗೆ ಹಲ್ಲೆ ಯತ್ನ ನಡೆದಿದೆ ಎನ್ನಲಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದಾರೆ. ಸ್ಥಳೀಯ ಪತ್ರಿಕೆಯೊಂದರ ಪತ್ರಕರ್ತರು ಹಿಜಾಬ್ ಕುರಿತಂತೆ ವರದಿಗೆ ತೆರಳಿದ್ದ ಸಂದರ್ಭದಲ್ಲಿ ಕಾಲೇಜು ಸಿಬ್ಬಂದಿ ಮೊಬೈಲ್ ಕಸಿದು ಹಲ್ಲೆಗೆ ಯತ್ನ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಬೆನ್ನಲ್ಲೇ ಈ ಘಟನೆ

ಸುಳ್ಯ: ಕಾಲೇಜು ಸಿಬ್ಬಂದಿಯಿಂದ ಪತ್ರಕರ್ತನಿಗೆ ಹಲ್ಲೆ ಯತ್ನ ಪ್ರಕರಣ| ಸ್ಪಷ್ಟನೆ ನೀಡಿದ ಕಾಲೇಜು ಮುಖ್ಯಸ್ಥರು| Read More »

ಮಂಗಳೂರು: ಪೊಲೀಸ್ ಕಸ್ಟಡಿಯಲ್ಲೇ ಮೃತಪಟ್ಟ ಆರೋಪಿ| ತನಿಖೆಗೆ ಕಮಿಷನರ್ ಆದೇಶ

ಸಮಗ್ರ ನ್ಯೂಸ್ ಡೆಸ್ಕ್: ಕಳ್ಳತನ ಪ್ರಕರಣದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಮೃತಪಟ್ಟ ಘಟನೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಗಳೂರಿನ ಉರ್ವ ನಿವಾಸಿ ರಾಜೇಶ್ (30) ಮೃತಪಟ್ಟ ಆರೋಪಿ.‌ ಇಬ್ಬರು ಆರೋಪಿಗಳು ಇಂದು ಬೆಳಗ್ಗೆ ನಗರದ ಜ್ಯೋತಿ ಸರ್ಕಲ್ ಬಳಿಯಲ್ಲಿದ್ದ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳುಗಳನ್ನು ಕಳವು ಮಾಡಿ ಓಡುತ್ತಿದ್ದರು. ಈ ಸಂದರ್ಭ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ನಗರದ ಬಂದರು ಪೊಲೀಸ್ ಠಾಣೆಯಲ್ಲಿ ತಂದು ಕೂರಿಸಿದ್ದರು. ಆದರೆ, ಸಂಜೆ ವೇಳೆಗೆ ಆರೋಪಿಗಳಲ್ಲಿ

ಮಂಗಳೂರು: ಪೊಲೀಸ್ ಕಸ್ಟಡಿಯಲ್ಲೇ ಮೃತಪಟ್ಟ ಆರೋಪಿ| ತನಿಖೆಗೆ ಕಮಿಷನರ್ ಆದೇಶ Read More »

ಮಂಗಳೂರು: ಬಲೆಗೆ ಬಿದ್ದ ಹಾರುವ ಮೀನು

ಸಮಗ್ರ ನ್ಯೂಸ್ ಡೆಸ್ಕ್: ಕರಾವಳಿಯಲ್ಲಿ ದಕ್ಕೆಗೆ ಮರಳಿರುವ ಮೀನುಗಾರಿಕೆ ಬೋಟ್‌ನಲ್ಲಿ, ಎರಡು ಅಪರೂಪದ ಹಾರುವ ಮೀನುಗಳು ಬಲೆಗೆ ಬಿದ್ದಿವೆ ಎಂದು ಮೀನುಗಾರ ಲೋಕೇಶ್‌ ಬೆಂಗ್ರೆ ತಿಳಿಸಿದ್ದಾರೆ. ಇಂಗ್ಲಿಷ್‌ನಲ್ಲಿ ಫ್ಲೈಯಿಂಗ್ ಫಿಶ್ ಎನ್ನುವ ಇವು ಆಳ ಸಮುದ್ರದಲ್ಲಿರುವ ಮೀನಿನ ಪ್ರಭೇದಕ್ಕೆ ಸೇರಿದವು. ರೆಕ್ಕೆ, ದೇಹದ ಎಲುಬುಗಳ ಭಿನ್ನ ರಚನೆಯಿಂದ ನೀರಿನಿಂದ ಮೇಲೆ, ಕೆಲ ಹೊತ್ತು ಹಕ್ಕಿಗಳಂತೆಯೇ ಹಾರುವ ಸಾಮರ್ಥ್ಯ ಹೊಂದಿವೆ.

ಮಂಗಳೂರು: ಬಲೆಗೆ ಬಿದ್ದ ಹಾರುವ ಮೀನು Read More »

ವಿಪಕ್ಷ ನಾಯಕನಿಗೆ ಕೊಲೆ ಬೆದರಿಕೆ ಹಾಕಿದ ನಳಿನ್ ಕುಮಾರ್ ಕಟೀಲ್!ಬ್ರಿಟೀಷರ ಗುಂಡಿಗೆ ಹೆದರಿಲ್ಲ ಇನ್ನು ಬಿಜೆಪಿ ನಾಯಕರ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಕೆ.ಹರಿ ಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನಳೀನ್ ಕುಮಾರ್ ಕಟೀಲ್ ನೇರವಾಗಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಬೆದರಿಕೆಗಳಿಗೆ ಹೆದರುವವರಲ್ಲ. ನಮ್ಮ ಪೂರ್ವಜರೇ ಬ್ರಿಟೀಷರ ಗುಂಡಿಗೆ ಹೆದರಿಲ್ಲ ಇನ್ನು ಬಿಜೆಪಿ ನಾಯಕರ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದರು. ಇನ್ನೂ ಬಿಜೆಪಿ ನಾಯಕರ ನಕಲಿ ರಾಷ್ಟ್ರ

ವಿಪಕ್ಷ ನಾಯಕನಿಗೆ ಕೊಲೆ ಬೆದರಿಕೆ ಹಾಕಿದ ನಳಿನ್ ಕುಮಾರ್ ಕಟೀಲ್!ಬ್ರಿಟೀಷರ ಗುಂಡಿಗೆ ಹೆದರಿಲ್ಲ ಇನ್ನು ಬಿಜೆಪಿ ನಾಯಕರ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿ.ಕೆ.ಹರಿಪ್ರಸಾದ್ Read More »

ಪುತ್ತೂರು : ಹಿಜಾಬ್ ಸಂಘರ್ಷ ,ತರಗತಿ ಬಹಿಷ್ಕರಿಸಿ ಹೊರನಡೆದ ವಿದ್ಯಾರ್ಥಿಗಳು – ಕಾಲೇಜ್ ಗೆ ಎರಡು ದಿನ ರಜೆ

ಪುತ್ತೂರು: ರಾಜ್ಯದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದ ಇದೀಗ ದಕ್ಷಿಣ ಕನ್ನಡ ಕೆಲವು ಕಡೆ ಆವರಿಸಿದ್ದು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜೊಂದಕ್ಕೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರ ತಡೆದಿದ್ದಾರೆ. ಹಿಜಾಬ್ ಧರಿಸಿ ತರಗತಿಯೊಳಗೆ ಪ್ರವೇಶ ನೀಡಲು ಕಾಲೇಜು ಪ್ರಾಂಶುಪಾಲರು ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನೀಯರು ತರಗತಿ ಬಹಿಸ್ಕರಿಸಿ ಹೊರನಡೆದಿದ್ದಾರೆ. ಇದನ್ನು ನೋಡಿದ ಕೆಲವು ವಿದ್ಯಾರ್ಥಿಗಳು ಅವರಿಗೆ ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ನೀಡಬೇಕೆಂದು ಕಾಲೇಜು ಆಡಳಿಯವರೊಂದಿಗೆ ಕೇಳಿಕೊಂಡಿದ್ದು ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಕೂಡಲೆ ಸ್ಥಳಕ್ಕೆ

ಪುತ್ತೂರು : ಹಿಜಾಬ್ ಸಂಘರ್ಷ ,ತರಗತಿ ಬಹಿಷ್ಕರಿಸಿ ಹೊರನಡೆದ ವಿದ್ಯಾರ್ಥಿಗಳು – ಕಾಲೇಜ್ ಗೆ ಎರಡು ದಿನ ರಜೆ Read More »

ಸುಳ್ಯ : ಕುಕ್ಕರ್ ಸ್ಫೋಟ

ಸುಳ್ಯ: ತಾಲೂಕಿನ ಕಳಂಜ ಗ್ರಾಮದಲ್ಲಿ ಕುಕ್ಕರ್ ಸ್ಪೋಟಗೊಂಡು ಗೃಹಣಿಯೊಬ್ಬರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕಿಲಂಗೋಡಿಯ ವಾಸುದೇವ ಆಚಾರ್ಯರ ಮನೆಯಲ್ಲಿ ಕುಕ್ಕರ್ ಸ್ಪೋಟಗೊಂಡು, ಸುಮಾ ವಿ. ಆಚಾರ್ಯರು ಎಂಬವರು ಅಪಾಯದಿಂದ ಪಾರಾದ ಗೃಹಣಿ. ಇವರು ಬೆಳಗ್ಗಿನ ತಿಂಡಿಗೆ ಕುಕ್ಕರ್ ನಲ್ಲಿ ಪಲಾವ್ ಇಟ್ಟಿದ್ದರು. ಕುಕ್ಕರ್ ನಲ್ಲಿ ಒಂದು ವಿಷಲ್ ಆಗುವಷ್ಟು ಹೊತ್ತಿಗೆ ಹೊರಗಿನಿಂದ ಯಾರೋ ಕರೆದ ಧ್ವನಿ ಕೇಳಿಸಿ ಹೊರಗೆ ಬಂದಿದ್ದಾರೆ. ಈ ಹೊತ್ತಿನಲ್ಲಿ ಕುಕ್ಕರ್ ಸ್ಪೋಟಗೊಂಡು ಮೇಲ್ಛಾವಣಿಗೆ ತಾಗಿ ಹಾನಿಯಾಗಿರುವುದಲ್ಲದೆ ಅದರ ಒಳಗಿದ್ದ ಆಹಾರ ಎಲ್ಲಾ

ಸುಳ್ಯ : ಕುಕ್ಕರ್ ಸ್ಫೋಟ Read More »

ಪ್ರತಿಭಟನೆಯ ನಡುವೆಯೂ ಮಾನವೀಯತೆ – ನದಿಯಿಂದ ಶವ ಮೇಲೆತ್ತಿದ ಆಸೀಪ್ ಆಪದ್ಭಾಂದವ

ಹಳೆಯಂಗಡಿ : ಸುರತ್ಕಲ್‌ನ ಎನ್‌ಐಟಿಕೆ ಬಳಿಯ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಕಳೆದ 10 ದಿನಗಳಿಂದ ಹಗಲು ರಾತ್ರಿ ಪ್ರತಿಭಟನೆಯನ್ನು ನಡೆಸುತ್ತಿರುವ ಆಸೀಪ್ ಆಪದ್ಭಾಂದವ ಪ್ರತಿಭಟನೆಯ ನಡುವೆಯೂ ಮಾನವೀಯತೆ ಮೆರೆದಿದ್ದಾರೆ. ಅವರು ಬುಧವಾರ ಪ್ರತಿಭಟನೆಯ ನಡುವೆಯೂ ಪಾವಂಜೆ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸುಚೇಂದ್ರಕುಮಾರ್ ಅವರ ಶವವನ್ನು ಮೇಲೆತ್ತಲು ಆಗಮಿಸಿ ನದಿಗೆ ಹಾರಿ ದೋಣಿಯ ಸಹಾಯದಿಂದ ಶವವನ್ನು ಮೇಲೆತ್ತಿದ್ದಾರೆ. ನಂತರ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯನ್ನು ಮುಂದುವರಿಸಿದ ಘಟನೆ ನಡೆದಿದೆ. ಆಸೀಪ್ ಅವರ ಮಾನವೀಯತೆ

ಪ್ರತಿಭಟನೆಯ ನಡುವೆಯೂ ಮಾನವೀಯತೆ – ನದಿಯಿಂದ ಶವ ಮೇಲೆತ್ತಿದ ಆಸೀಪ್ ಆಪದ್ಭಾಂದವ Read More »

ಬಂಟ್ವಾಳ: ಮಹಡಿಯಿಂದ ಬಿದ್ದು‌ ಯುವಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಮುಡಿಪು ಬಳಿ ಐಟಿ ಸಂಸ್ಥೆಯೊಂದರ ಪ್ಲಂಬಿಂಗ್‌ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂಲ್ಕಿ ಕಿಲ್ಪಾಡಿ ಎಣ್ಣೆಗೇಣಿ ನಿವಾಸಿ ರಾಜೇಶ್‌ ದೇವಾಡಿಗ (32) ಅವರು ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದು ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎಂಟು ವರ್ಷಗಳಿಂದ ಸಂಸ್ಥೆಯ ಪ್ಲಂಬಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್‌ ಮಂಗಳವಾರ ಸಂಜೆ ಖಾಲಿ ಇರುವ ಕಟ್ಟಡಕ್ಕೆ ತೆರಳಿದ್ದು, ವಾಪಸ್‌ ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಕಟ್ಟಡದಿಂದ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ

ಬಂಟ್ವಾಳ: ಮಹಡಿಯಿಂದ ಬಿದ್ದು‌ ಯುವಕ ಸಾವು Read More »

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಉಡುಪಿ: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಗಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ ಎಂದೂ ಅವರು

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ Read More »