ಕರಾವಳಿ

ಆಕ್ಷೇಪಾರ್ಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಪೇಜ್ ಕುರಿತು ಸಿಐಡಿ‌ ತನಿಖೆ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವೂ ಸೇರಿದಂತೆ ವಿವಾದಾತ್ಮಕ, ಆಕ್ಷೇಪಾರ್ಹ ಬರಹಗಳನ್ನು ಪೋಸ್ಟ್ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಮಂಗಳೂರು ಮುಸ್ಲಿಂ ಫೇಸ್​​ಬುಕ್ ಖಾತೆ ಕುರಿತಾದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಮಂಗಳೂರು ಮುಸ್ಲಿಂ ಪೇಜ್​​​​ನಲ್ಲಿ ಹತ್ಯೆಯಾದ ಹರ್ಷನ ಬಗ್ಗೆ ಆಕ್ಷೇಪಾರ್ಹ ಬರಹವನ್ನು ಪೋಸ್ಟ್ ಮಾಡಿದ್ದಲ್ಲದೆ ಸುದ್ದಿವಾಹಿನಿಯ ನಿರೂಪಕರು, ರಾಜ್ಯದ ಸಚಿವರ ಬಗ್ಗೆ ಆಕ್ಷೇಪಾರ್ಹ ಬರಹವನ್ನು ಪೋಸ್ಟ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ಆದ್ದರಿಂದ ಈ ಪೋಸ್ಟ್‌ ಬಗ್ಗೆ ಮಂಗಳೂರು ಪೊಲೀಸರು

ಆಕ್ಷೇಪಾರ್ಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಪೇಜ್ ಕುರಿತು ಸಿಐಡಿ‌ ತನಿಖೆ Read More »

ಬೆಳ್ತಂಗಡಿ: ಉಕ್ರೇನ್ ನಲ್ಲಿ‌ ಸಿಲುಕಿದ್ದ ಹೀನಾ ದೆಹಲಿಗೆ ವಾಪಾಸ್

ಸಮಗ್ರ ನ್ಯೂಸ್: ಯುದ್ಧ ಭೂಮಿ ಉಕ್ರೇನ್ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯಕೀಯ ವಿದ್ಯಾರ್ಥಿನಿ ಹೀನಾ ಫಾತಿಮಾ ದೆಹಲಿ ಆಗಮಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲಂಡ್ ವಿಮಾನ ಮೂಲಕ ಇಂದು ಬೆಳಗ್ಗೆ 7 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದು, ಇನ್ನೂ ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸಿ ನಂತರ ತನ್ನ ಉಜಿರೆ ಮನೆ ಸೇರಲಿದ್ದಾರೆ ಎಂದು ಹೀನಾ ಫಾತೀಮಾ ತಾಯಿ

ಬೆಳ್ತಂಗಡಿ: ಉಕ್ರೇನ್ ನಲ್ಲಿ‌ ಸಿಲುಕಿದ್ದ ಹೀನಾ ದೆಹಲಿಗೆ ವಾಪಾಸ್ Read More »

ಮಂಗಳೂರು : ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ; ಕಾಲೇಜು ನಿಮ್ಮಪ್ಪಂದಾ? ಎಂದಳಾ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಕಾಲೇಜಿಗೆ ದುಪ್ಪಟ್ಟಾವನ್ನು ಹಾಕಿಕೊಂಡು ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ತಡೆದ ಹಿಂದೂ ವಿದ್ಯಾರ್ಥಿಗೆ ‘ಕಾಲೇಜಿಗೆ ನಾವು ಫೀಸ್ ಕಟ್ಟುತ್ತೇವೆ. ಕಾಲೇಜು ನಿಮ್ಮಪ್ಪಂದಾ?’ ಎಂದು ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ಪ್ರಶ್ನಿಸಿದ್ದು, ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಸಿತ್ತು. ಎರಡು ವಿದ್ಯಾರ್ಥಿ ಗುಂಪುಗಳ

ಮಂಗಳೂರು : ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ; ಕಾಲೇಜು ನಿಮ್ಮಪ್ಪಂದಾ? ಎಂದಳಾ ವಿದ್ಯಾರ್ಥಿನಿ Read More »

ಪುತ್ತೂರು : ಔಷಧಿ ತರಲೆಂದು ಹೋದ ತಾಯಿ ಮಗು ನಾಪತ್ತೆ

ಸಮಗ್ರ ನ್ಯೂಸ್: ಔಷಧಿ ತರಲೆಂದು ಮಗನೊಂದಿಗೆ ಪುತ್ತೂರಿಗೆ ತೆರಳಿದ್ದ ಕಡಿರುದ್ಯಾವರ ಗ್ರಾಮದ ಮಹಿಳೆಯೋರ್ವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ನಿವಾಸಿ ಶಹಜಾದ್ ರವರ ಪತ್ನಿ ರಶೀನಾ ಹಾಗೂ ಅವರ ಪುತ್ರ ಮುಸೈಬ್ ಹಕ್ ಎಂಬವರು ನಾಪತ್ತೆಯಾಗಿದ್ದಾರೆ. ಶಹಜಾದ್ ರವರು ತಮ್ಮ ಪತ್ನಿ ರಶೀನಾ, ಪುತ್ರ ಮುಸೈಬ್ ಹಕ್ ರೊಂದಿಗೆ ಪುತ್ತೂರಿಗೆ ಔಷಧಿ ತರಲೆಂದು ತೆರಳಿದ್ದು, ಅಲ್ಲಿಂದ ಮರಳಿ ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ ಎಂಬುವುದಾಗಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ

ಪುತ್ತೂರು : ಔಷಧಿ ತರಲೆಂದು ಹೋದ ತಾಯಿ ಮಗು ನಾಪತ್ತೆ Read More »

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದೆ ಅಂಗಡಿಯಿಂದ ಅಡಿಕೆ ಕದ್ದೊಯ್ದ ಕಳ್ಳರು ಮರುದಿನ ಅದೇ ಅಂಗಡಿಯ ಮುಂಭಾಗದಲ್ಲಿ ಇಟ್ಟು ಹೋಗಿರುವ ವಿಚಿತ್ರ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ತಿಂಗಳಾಡಿಯ ಶಾಲೆಯ ಬಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಜಗನ್ನಾಥ ರೈ ಎಂಬವರ ಅಂಗಡಿಯ ಹಿಂಬಾಗಿಲ ಚಿಲಕ ಮುರಿದ ಕಳ್ಳರು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 60,000 ರೂ.ಮೌಲ್ಯದ 4 ಗೋಣಿ ಚೀಲ ಅಡಿಕೆಯನ್ನು ಮಾ. 01ರಂದು ರಾತ್ರಿಯ ವೇಳೆ ಕದ್ದೊಯ್ದಿದ್ದರು. ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸ್ಥಳಕ್ಕೆ

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು Read More »

ಬೆಳ್ತಂಗಡಿ: ಉಕ್ರೇನ್ – ರಷ್ಯಾ ಬಿಕ್ಕಟ್ಟು| ಅಪಾಯದ ಸ್ಥಿತಿಯಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ. ಉಜಿರೆಯ ಟಿ.ಬಿ ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಅವರೇ ಯುದ್ಧಗ್ರಸ್ಥ ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ

ಬೆಳ್ತಂಗಡಿ: ಉಕ್ರೇನ್ – ರಷ್ಯಾ ಬಿಕ್ಕಟ್ಟು| ಅಪಾಯದ ಸ್ಥಿತಿಯಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ Read More »

ಉಡುಪಿ: ರಾಜ್ಯ ಹೆಮ್ಮೆಪಡುವಂತೆ ಮೇಕೆದಾಟು ಯೋಜನೆ ಜಾರಿ – ಸಚಿವ ಕೋಟ

ಸಮಗ್ರ ನ್ಯೂಸ್ : ಕಾಂಗ್ರೆಸ್‌ ನಾಯಕರು ಖುಷಿಯಾಗುವಂತೆ, ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಸಚಿವರು, ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿದ್ದು ಕಾನೂನು ತಜ್ಞರ ಜತೆ ಚರ್ಚಿಸಿ ಶೀಘ್ರ ಇತ್ಯರ್ಥಗೊಳಿಸಲಾಗುವುದು. ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ರಾಜಕೀಯ ಪ್ರೇರಿತ ಮೇಕೆದಾಟು ಪಾದಯಾತ್ರೆ ಬಿಟ್ಟು ರಾಜ್ಯದ

ಉಡುಪಿ: ರಾಜ್ಯ ಹೆಮ್ಮೆಪಡುವಂತೆ ಮೇಕೆದಾಟು ಯೋಜನೆ ಜಾರಿ – ಸಚಿವ ಕೋಟ Read More »

ಮಂಗಳೂರು: ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ| ಮೂವರು ಪಿಂಪ್ ಗಳು ಅಂದರ್|

ಸಮಗ್ರ‌ ನ್ಯೂಸ್ : ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್‌ಮೆಂಟ್ ವೊಂದರ ಫ್ಲಾಟ್’ನಲ್ಲಿ ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ವಿಟ್ಲದ ಪರ್ತಿಪಾಡಿಯ ಕೆ.ಪಿ. ಹಮೀದ್(54), ನಂದನಪುರ ನಾಗಬ್ರಹ್ಮ ಕಟ್ಟೆಯ ಅನುಪಮ ಶೆಟ್ಟಿ(46), ವಾಸುಕಿ ನಗರ ಎಕ್ಕೂರಿನ ನಿಶ್ಮಿತ(23) ಎಂದು ತಿಳಿದು ಬಂದಿದೆ. ಮಂಗಳೂರು ನಗರದ ಪೂರ್ವ( ಕದ್ರಿ ) ಪೊಲೀಸ್ ಠಾಣಾ ವ್ಯಾಪ್ತಿಯ

ಮಂಗಳೂರು: ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ| ಮೂವರು ಪಿಂಪ್ ಗಳು ಅಂದರ್| Read More »

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು

ಸಮಗ್ರ ನ್ಯೂಸ್: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನ್ನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್‌ನಲ್ಲಿ ಸಂತೆಕಟ್ಟೆ‌ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು Read More »

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಕಬ್ಬಿಣ ತುಂಡರಿಸುವು ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಐವರ್ನಾಡಿನಿಂದ ವರದಿಯಾಗಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ಕಬ್ಬಿಣ ಕಟ್ಟ್ ಮಾಡುವ ವೇಳೆ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಸಾವು Read More »