ಕರಾವಳಿ

ಉಪ್ಪಿನಂಗಡಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ನಿರಾಕರಣೆ| ಕಾಲೇಜಿಗೆ ಎರಡು ದಿನ ರಜೆ

ಪುತ್ತೂರು: ಹಿಜಾಬ್‍ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನೀಡದೇ ಇರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ನಿಂತ ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ ಬಳಿಕ ಇನ್ನಷ್ಟು ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ಪ್ರಾಂಶುಪಾಲರು ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ. ನಂತರ ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು […]

ಉಪ್ಪಿನಂಗಡಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ನಿರಾಕರಣೆ| ಕಾಲೇಜಿಗೆ ಎರಡು ದಿನ ರಜೆ Read More »

ಸುಳ್ಯ: ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಕಿಚ್ಚು| ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಕಾಲೇಜು ಸಿಬ್ಬಂದಿಯಿಂದ ಹಲ್ಲೆ ಯತ್ನ

ಸಮಗ್ರ ನ್ಯೂಸ್ ಡೆಸ್ಕ್: ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಬಹುದು ಎಂದು ಸರ್ಕಾರದ ಆದೇಶ ‌ಇದ್ದರೂ, ಸುಳ್ಯದ ಎನ್.ಎಂ.ಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಕಾಲೇಜಿನ ಮೈದಾನದಲ್ಲಿ ಬಿರುಬಿಸಿಲಿನಲ್ಲಿ ವಿದ್ಯಾರ್ಥಿನಿಗಳು ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರದಿಗಾರಿಕೆ ಮಾಡಲು ತೆರಳಿದ ಸುಳ್ಯದ ಪತ್ರಿಕಾ ವರದಿಗಾರರಾದ ಹಸೈನಾರ್ ಜಯನಗರ ಮೇಲೆ ಕಾಲೇಜಿನ ಸಿಬ್ಬಂದಿ ಹಲ್ಲೆಗೆ ಯತ್ನಿಸಿ, ತಳ್ಳಾಟ ನಡೆಸಿದ ಘಟನೆ ನಡೆದಿದೆ. ಕಾಲೇಜು ಪುನರಾರಂಭವಾದ ಇಂದು ಸುಳ್ಯದ

ಸುಳ್ಯ: ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಕಿಚ್ಚು| ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಕಾಲೇಜು ಸಿಬ್ಬಂದಿಯಿಂದ ಹಲ್ಲೆ ಯತ್ನ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »

ಸುಳ್ಯ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತೆಯ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಬಂಧಿತನಾಗಿದ್ದ ಯುವಕನಿಗೆ ಫೆ.14 ರಂದು ಪುತ್ತೂರು ಐದನೇ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿಯನ್ನು ಪೆರಾಜೆ ಗ್ರಾಮದ ದೀಕ್ಷಿತ್ ಎಂದು ಗುರುತಿಸಲಾಗಿದೆ. ಈತ ಜ. 31 ರಂದು ಬೆಳ್ಳಾರೆ ಗ್ರಾಮದ ಪೆರುವಾಜೆ ಯ 15 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿಯ ತಾಯಿಯ ದೂರಿನ ಮೇರೆಗೆ ಆರೋಪಿಯ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯಿದೆ

ಸುಳ್ಯ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿಗೆ ಜಾಮೀನು Read More »

ಮಂಗಳೂರು: ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರ ಬಂಧನ

ಮಂಗಳೂರು: ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಡಗು ಜಿಲ್ಲೆಯ ಭಾಗಮಂಡಲ ನಿವಾಸಿ ಜಾಬಿರ್ ಎಂ.ಎ. (35) ಮತ್ತು ಶಬಾದ್ ಎಲ್.ಕೆ. (27) ಹಾಗೂ ಕಾಂಞಂಗಾಡಿನ ಅಸೀರ್ (36) ಮತ್ತು ಶರೀಫ್ ಎನ್.(32) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 2.20 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್, 5 ಮೊಬೈಲ್, 1 ಸ್ವಿಫ್ಟ್ ಕಾರು

ಮಂಗಳೂರು: ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರ ಬಂಧನ Read More »

ಸುಳ್ಯ : ರಬ್ಬರ್ ಸಾಗಾಟದ ಲಾರಿ ಪಲ್ಟಿ

ಸುಳ್ಯ : ತಾಲೂಕಿನ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆ ರಬ್ಬರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಎಂಬಲ್ಲಿ ಪಲ್ಟಿಯಾಗಿದೆ.ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ರಬ್ಬರ್ ಶೀಟ್ ಗಳು ಎಲ್ಲಾ ಕಡೆ ಚದುರಿ ಹೋಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್.ಐ ಆಂಜನೇಯ ರೆಡ್ಡಿ ಹಾಗೂ

ಸುಳ್ಯ : ರಬ್ಬರ್ ಸಾಗಾಟದ ಲಾರಿ ಪಲ್ಟಿ Read More »

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ. ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ Read More »

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು

ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು Read More »

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

ನವದೆಹಲಿ : ದೇಶದ ಭದ್ರತೆಯ ಕಾರಣ ನೀಡಿ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿರುವುದಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇಂದು ತಿಳಿಸಿದೆ. ಕಳೆದ ವರ್ಷ ಜೂನ್‌ನಲ್ಲಿ, ರಾಷ್ಟ್ರದ ಸಾರ್ವಭೌಮತ್ವ ಮತ್ತು ಭದ್ರತೆಗೆ ಬೆದರಿಕೆಯನ್ನು ಉಲ್ಲೇಖಿಸಿ ಭಾರತವು ಟಿಕ್‌ಟಾಕ್‌, ವಿಚಾಟ್ ಮತ್ತು ಹೆಲೋನಂತಹ ವ್ಯಾಪಕವಾಗಿ ಬಳಸಲಾಗುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಪಬ್ಜಿಯಂತಹ ಜನಪ್ರಿಯ ಗೇಮಿಂಗ್ ಅಪ್ಲಿಕೇಶನ್‌ಗಳು ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಪ್ರಸ್ತುತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ Read More »

ಸುಳ್ಯ : ಓಮ್ನಿ ಪಲ್ಟಿ ವೇಳೆ ತಲೆಗೆ ಸರಳು ಬಡಿದು ಮಗು ಸಾವು

ಸಮಗ್ರ ನ್ಯೂಸ್ ಡೆಸ್ಕ್: ಓಮ್ನಿ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಮಗುವೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ‌ಗುತ್ತಿಗಾರು ಸಮೀಪ ಸೋಮವಾರದಂದು ನಡೆದಿದೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಕೆದಂಬಾಡಿ ಯತೀಶ್ ಹಾಗೂ ಕುಟುಂಬ ಓಮ್ನಿ ಕಾರೊಂದರಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿ ಬರುತ್ತಿತ್ತು. ಈ ವೇಳೆ ಗುತ್ತಿಗಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಓಮ್ನಿಯಲ್ಲಿದ್ದ ಒಂದು ವರ್ಷದ ಮಗು ಸರಿತ್ ನ ತಲೆಗೆ ಕಾರಿ‌ನಲ್ಲಿನ ರಾಡ್ ಒಂದು ಬಡಿದ ಪರಿಣಾಮ ತೀವ್ರವಾದ ಏಟಾಗಿತ್ತು. ತಕ್ಷಣ

ಸುಳ್ಯ : ಓಮ್ನಿ ಪಲ್ಟಿ ವೇಳೆ ತಲೆಗೆ ಸರಳು ಬಡಿದು ಮಗು ಸಾವು Read More »