ಕರಾವಳಿ

ಸುರತ್ಕಲ್‌ ಟೋಲ್‌ಗೇಟ್‌ ಪ್ರತಿಭಟನೆ – ಆಪತ್ಬಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಆಪತ್ಬಾಂಧವ ಆಸೀಫ್ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು ಫೆಬ್ರವರಿ 14 ರಂದು ಎರಡು ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಕೊಂಡಿದ್ದಾರೆ. ಹಾಗಾಗಿ ಬಿಸಿಲಿನಿಂದಾಗಿ ಅವರ ಆರೋಗ್ಯ ಹದಗೆಟ್ಟಿದ್ದು, ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರೂ ಆಸಿಫ್ […]

ಸುರತ್ಕಲ್‌ ಟೋಲ್‌ಗೇಟ್‌ ಪ್ರತಿಭಟನೆ – ಆಪತ್ಬಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು Read More »

ಮಂಗಳೂರು: ಚೂರಿ ಇರಿತ ಪ್ರಕರಣ – ಐವರ ಬಂಧನ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್‌ನಲ್ಲಿ ಫೆಬ್ರವರಿ 1 ರಂದು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶರೋಜ್ ಚಾರು (24), ಮೊಹಮ್ಮದ್ ಮುಸ್ತಫಾ (22), ಅಬ್ದುಲ್ ಅಮೀನ್ (19), ಹಲ್ಲೆ ನಡೆಸಲು ಕಾರು ಒದಗಿಸಿದ ಸಿದ್ದಿಕ್ ಸಮದ್ (25) ಮತ್ತು ಮೊಹಮ್ಮದ್ ನೌಫಿಲ್ (18) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಫೆ.1ರ ರಾತ್ರಿ ತನ್ನ ಸ್ನೇಹಿತರಾದ ಅಬೂಬಕ್ಕರ್ ಮತ್ತು ಹಾರಿಸ್ ಜತೆ ಮಾತನಾಡುತ್ತಿದ್ದ

ಮಂಗಳೂರು: ಚೂರಿ ಇರಿತ ಪ್ರಕರಣ – ಐವರ ಬಂಧನ Read More »

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ Read More »

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ Read More »

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್

ಸಮಗ್ರ ನ್ಯೂಸ್ ಡೆಸ್ಕ್: ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ 3 ಕಲ್ಲು ಗಣಿಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಚಿವರು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ 2007ರಿಂದ ಈ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಕಾವಳ ಮುಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕರೆ ಮತ್ತು 172/2ಪಿ1 ರಲ್ಲಿ 0.50 ಎಕರೆ ಸಹಿತ

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್ Read More »

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಲ್ಲಿ ಜತೆ ಕಾರ್ಯದರ್ಶಿ ಮೂಲಕ ಸಭೆ ನಡೆಸಲು ಯತ್ನ| ಡಾ. ಕೆ.ವಿ ಚಿದಾನಂದ ಸೇರಿ ಐವರಿಗೆ ನೋಟೀಸ್

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಸಭೆ ಕರೆಯುವ ಮತ್ತು ವ್ಯವಹಾರ ನೋಡಿಕೊಳ್ಳುವ ಪ್ರಧಾನ ಕಾರ್ಯದರ್ಶಿಯ ಅಧಿಕಾರಕ್ಕೆ ತೊಂದರೆ ಕೊಡಬಾರದು ಮತ್ತು ನ್ಯಾಯಾಲಯದಲ್ಲಿ ದಾವೆ ಇತ್ಯರ್ಥವಾಗುವ ವರೆಗೆ ಪ್ರಧಾನ ಕಾರ್ಯದರ್ಶಿಯನ್ನು ಬದಲಾಯಿಸಬಾರದು ಎಂದು ಹೈಕೋರ್ಟ್ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ಜತೆ ಕಾರ್ಯದರ್ಶಿಯ ಮೂಲಕ ಅಕಾಡೆಮಿಯ ಸಭೆ ಕರೆಯಲು ಪ್ರಯತ್ನಿಸಲಾಗಿದೆ ಹಾಗೂ ಜತೆ ಕಾರ್ಯದರ್ಶಿಗೆ ಕಾರ್ಯದರ್ಶಿಯ ಜವಾಬ್ದಾರಿ ನೀಡುವ ಅಜೆಂಡಾವನ್ನು ಇರಿಸಿ ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಕಾಡೆಮಿ ಆಫ್ ಲಿಬರಲ್

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಲ್ಲಿ ಜತೆ ಕಾರ್ಯದರ್ಶಿ ಮೂಲಕ ಸಭೆ ನಡೆಸಲು ಯತ್ನ| ಡಾ. ಕೆ.ವಿ ಚಿದಾನಂದ ಸೇರಿ ಐವರಿಗೆ ನೋಟೀಸ್ Read More »

ಧರ್ಮಸ್ಥಳ:ಮತ್ತೆ ರಾಜಕೀಯ ಪ್ರಹಸನಕ್ಕೆ‌ ಸಾಕ್ಷಿಯಾಯ್ತು‌ ಮಂಜುನಾಥನ ಸನ್ನಿದಿ| ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಆಣೆ ಪ್ರಮಾಣ

ಸಮಗ್ರ ನ್ಯೂಸ್ ಡೆಸ್ಕ್: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದೇವಸ್ಥಾನ ಮತ್ತೆ ಆಣೆ ಪ್ರಮಾಣಕ್ಕೆ ಸಾಕ್ಷಿಯಾಗಿದೆ. ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ‌ ಬೇಳೂರು ಗೋಪಾಲಕೃಷ್ಣ ನಡುವಿನ ಮರಳು ಮಾಫಿಯಾದ ಕಮಿಷನ್ ಪಡೆದ ಆರೋಪ ಪ್ರತ್ಯಾರೋಪ ಈಗ ಶ್ರೀಕ್ಷೇತ್ರ ಧರ್ಮಸ್ಥಳದ ದೇವರ ಕಟಕಟೆಗೆ ಬಂದು ನಿಂತಿದೆ. ಈ ಆರೋಪ ಸುಳ್ಳು ಅಂತಾ ಶಾಸಕ ಹರತಾಳು ಹಾಲಪ್ಪ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿದರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತ್ರ ಹರತಾಳು ಹಾಲಪ್ಪ

ಧರ್ಮಸ್ಥಳ:ಮತ್ತೆ ರಾಜಕೀಯ ಪ್ರಹಸನಕ್ಕೆ‌ ಸಾಕ್ಷಿಯಾಯ್ತು‌ ಮಂಜುನಾಥನ ಸನ್ನಿದಿ| ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಆಣೆ ಪ್ರಮಾಣ Read More »

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಮುಂಜಾನೆ ವೇಳೆಗೆ ಪತ್ತೆ ಹಚ್ಚಿ ಪೋಲಿಸ್ ವಶಕ್ಕೆ ನೀಡಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ವಾಸವಿರುವ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೋರ್ವರು ತಂಗಿರುವ ವಿಚಾರ ಬೆಳಕಿಗೆ ಬಂದಿತ್ತು. ಆತ ಮಹಿಳೆಯನ್ನು ಆಸೆ ಆಮಿಷ ಒಡ್ಡಿ ಮತಾಂತರ ಮಾಡುವ ಉದ್ದೇಶದಿಂದ ಹಲವಾರು ಸಮಯಗಳಿಂದ

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ Read More »

ಹಿಜಾಬ್ ವಿವಾದ ಹಿನ್ನೆಲೆ| ಕಾಲೇಜುಗಳಿಗೆ ಫೆ.16ರ ವರೆಗೂ ರಜೆ ಮುಂದುವರಿಕೆ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಫೆಬ್ರವರಿ 16ವರೆಗೂ ಕಾಲೇಜುಗಳಿಗೆ ರಜೆಯನ್ನ ವಿಸ್ತರಣೆ ಮಾಡಲಾಗಿದೆ. ಬುಧವಾರದವರೆಗೆ ಕಾಲೇಜುಗಳು ರಜೆ ಘೋಷಣೆ ಮಾಡಲಾಗುತ್ತಿದ್ದು, ಮುಂದಿನ ಪರಿಸ್ಥಿತಿ ನೋಡಿಕೊಂಡು ಮತ್ತೆ ನಿರ್ಧಾರ ಮಾಡಲಾಗುವುದು. ಅದರಂತೆ ಪಿಯುಸಿ, ಡಿಗ್ರಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಹಿಜಾಬ್ ವಿವಾದ ಹಿನ್ನೆಲೆ| ಕಾಲೇಜುಗಳಿಗೆ ಫೆ.16ರ ವರೆಗೂ ರಜೆ ಮುಂದುವರಿಕೆ| Read More »

ಮಂಗಳೂರು: ರಾತ್ರೋರಾತ್ರಿ ನಾಪತ್ತೆಯಾದ ಸಹೋದರಿಯರು ಪ್ರಕರಣ ಸುಖಾಂತ್ಯ| ಚಿಕ್ಕಮಗಳೂರಲ್ಲಿ ಪತ್ತೆಯಾದ ಯುವತಿಯರು

ಸಮಗ್ರ ನ್ಯೂಸ್ ಡೆಸ್ಕ್: ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಇಬ್ಬರು ಸಹೋದರಿಯರನ್ನ ಚಿಕ್ಕಮಗಳೂರಿನಲ್ಲಿ ಮಂಗಳೂರಿನ ಬಜಪೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಜಪೆ ಗ್ರಾಮದ ಕೊಂಚಾರು ನಿವಾಸಿ ಮಾಮು ಎಂಬುವರ ಇಬ್ಬರು ಪುತ್ರಿಯರಾದ ಮುಬೀನಾ (22) ಮತ್ತು ಬುಶ್ರಾ (21) ಎಂಬುವರು ನಾಪತ್ತೆಯಾಗಿದ್ದರು. ಫೆಬ್ರವರಿ 7ರಂದು ರಾತ್ರಿ ಊಟ ಮಾಡಿ ಮಲಗಿದ್ದವರು, ಬೆಳಗ್ಗೆ ನೋಡಿದಾಗ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಯುವತಿಯರನ್ನು ನಾಪತ್ತೆಯಾದ ಎರಡು‌ ದಿನದಲ್ಲಿ ಬಜಪೆ

ಮಂಗಳೂರು: ರಾತ್ರೋರಾತ್ರಿ ನಾಪತ್ತೆಯಾದ ಸಹೋದರಿಯರು ಪ್ರಕರಣ ಸುಖಾಂತ್ಯ| ಚಿಕ್ಕಮಗಳೂರಲ್ಲಿ ಪತ್ತೆಯಾದ ಯುವತಿಯರು Read More »