ಕರಾವಳಿ

ಪ್ರತಿಭಟನೆಯ ನಡುವೆಯೂ ಮಾನವೀಯತೆ – ನದಿಯಿಂದ ಶವ ಮೇಲೆತ್ತಿದ ಆಸೀಪ್ ಆಪದ್ಭಾಂದವ

ಹಳೆಯಂಗಡಿ : ಸುರತ್ಕಲ್‌ನ ಎನ್‌ಐಟಿಕೆ ಬಳಿಯ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಕಳೆದ 10 ದಿನಗಳಿಂದ ಹಗಲು ರಾತ್ರಿ ಪ್ರತಿಭಟನೆಯನ್ನು ನಡೆಸುತ್ತಿರುವ ಆಸೀಪ್ ಆಪದ್ಭಾಂದವ ಪ್ರತಿಭಟನೆಯ ನಡುವೆಯೂ ಮಾನವೀಯತೆ ಮೆರೆದಿದ್ದಾರೆ. ಅವರು ಬುಧವಾರ ಪ್ರತಿಭಟನೆಯ ನಡುವೆಯೂ ಪಾವಂಜೆ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸುಚೇಂದ್ರಕುಮಾರ್ ಅವರ ಶವವನ್ನು ಮೇಲೆತ್ತಲು ಆಗಮಿಸಿ ನದಿಗೆ ಹಾರಿ ದೋಣಿಯ ಸಹಾಯದಿಂದ ಶವವನ್ನು ಮೇಲೆತ್ತಿದ್ದಾರೆ. ನಂತರ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯನ್ನು ಮುಂದುವರಿಸಿದ ಘಟನೆ ನಡೆದಿದೆ. ಆಸೀಪ್ ಅವರ ಮಾನವೀಯತೆ

ಪ್ರತಿಭಟನೆಯ ನಡುವೆಯೂ ಮಾನವೀಯತೆ – ನದಿಯಿಂದ ಶವ ಮೇಲೆತ್ತಿದ ಆಸೀಪ್ ಆಪದ್ಭಾಂದವ Read More »

ಬಂಟ್ವಾಳ: ಮಹಡಿಯಿಂದ ಬಿದ್ದು‌ ಯುವಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಮುಡಿಪು ಬಳಿ ಐಟಿ ಸಂಸ್ಥೆಯೊಂದರ ಪ್ಲಂಬಿಂಗ್‌ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂಲ್ಕಿ ಕಿಲ್ಪಾಡಿ ಎಣ್ಣೆಗೇಣಿ ನಿವಾಸಿ ರಾಜೇಶ್‌ ದೇವಾಡಿಗ (32) ಅವರು ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದು ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎಂಟು ವರ್ಷಗಳಿಂದ ಸಂಸ್ಥೆಯ ಪ್ಲಂಬಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್‌ ಮಂಗಳವಾರ ಸಂಜೆ ಖಾಲಿ ಇರುವ ಕಟ್ಟಡಕ್ಕೆ ತೆರಳಿದ್ದು, ವಾಪಸ್‌ ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಕಟ್ಟಡದಿಂದ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ

ಬಂಟ್ವಾಳ: ಮಹಡಿಯಿಂದ ಬಿದ್ದು‌ ಯುವಕ ಸಾವು Read More »

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಉಡುಪಿ: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಗಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ ಎಂದೂ ಅವರು

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ Read More »

ಉಪ್ಪಿನಂಗಡಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ನಿರಾಕರಣೆ| ಕಾಲೇಜಿಗೆ ಎರಡು ದಿನ ರಜೆ

ಪುತ್ತೂರು: ಹಿಜಾಬ್‍ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನೀಡದೇ ಇರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ನಿಂತ ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ ಬಳಿಕ ಇನ್ನಷ್ಟು ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ಪ್ರಾಂಶುಪಾಲರು ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ. ನಂತರ ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು

ಉಪ್ಪಿನಂಗಡಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ನಿರಾಕರಣೆ| ಕಾಲೇಜಿಗೆ ಎರಡು ದಿನ ರಜೆ Read More »

ಸುಳ್ಯ: ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಕಿಚ್ಚು| ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಕಾಲೇಜು ಸಿಬ್ಬಂದಿಯಿಂದ ಹಲ್ಲೆ ಯತ್ನ

ಸಮಗ್ರ ನ್ಯೂಸ್ ಡೆಸ್ಕ್: ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಬಹುದು ಎಂದು ಸರ್ಕಾರದ ಆದೇಶ ‌ಇದ್ದರೂ, ಸುಳ್ಯದ ಎನ್.ಎಂ.ಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಕಾಲೇಜಿನ ಮೈದಾನದಲ್ಲಿ ಬಿರುಬಿಸಿಲಿನಲ್ಲಿ ವಿದ್ಯಾರ್ಥಿನಿಗಳು ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರದಿಗಾರಿಕೆ ಮಾಡಲು ತೆರಳಿದ ಸುಳ್ಯದ ಪತ್ರಿಕಾ ವರದಿಗಾರರಾದ ಹಸೈನಾರ್ ಜಯನಗರ ಮೇಲೆ ಕಾಲೇಜಿನ ಸಿಬ್ಬಂದಿ ಹಲ್ಲೆಗೆ ಯತ್ನಿಸಿ, ತಳ್ಳಾಟ ನಡೆಸಿದ ಘಟನೆ ನಡೆದಿದೆ. ಕಾಲೇಜು ಪುನರಾರಂಭವಾದ ಇಂದು ಸುಳ್ಯದ

ಸುಳ್ಯ: ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಕಿಚ್ಚು| ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಕಾಲೇಜು ಸಿಬ್ಬಂದಿಯಿಂದ ಹಲ್ಲೆ ಯತ್ನ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »

ಸುಳ್ಯ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತೆಯ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಬಂಧಿತನಾಗಿದ್ದ ಯುವಕನಿಗೆ ಫೆ.14 ರಂದು ಪುತ್ತೂರು ಐದನೇ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿಯನ್ನು ಪೆರಾಜೆ ಗ್ರಾಮದ ದೀಕ್ಷಿತ್ ಎಂದು ಗುರುತಿಸಲಾಗಿದೆ. ಈತ ಜ. 31 ರಂದು ಬೆಳ್ಳಾರೆ ಗ್ರಾಮದ ಪೆರುವಾಜೆ ಯ 15 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿಯ ತಾಯಿಯ ದೂರಿನ ಮೇರೆಗೆ ಆರೋಪಿಯ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯಿದೆ

ಸುಳ್ಯ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿಗೆ ಜಾಮೀನು Read More »

ಮಂಗಳೂರು: ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರ ಬಂಧನ

ಮಂಗಳೂರು: ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಡಗು ಜಿಲ್ಲೆಯ ಭಾಗಮಂಡಲ ನಿವಾಸಿ ಜಾಬಿರ್ ಎಂ.ಎ. (35) ಮತ್ತು ಶಬಾದ್ ಎಲ್.ಕೆ. (27) ಹಾಗೂ ಕಾಂಞಂಗಾಡಿನ ಅಸೀರ್ (36) ಮತ್ತು ಶರೀಫ್ ಎನ್.(32) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 2.20 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್, 5 ಮೊಬೈಲ್, 1 ಸ್ವಿಫ್ಟ್ ಕಾರು

ಮಂಗಳೂರು: ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರ ಬಂಧನ Read More »

ಸುಳ್ಯ : ರಬ್ಬರ್ ಸಾಗಾಟದ ಲಾರಿ ಪಲ್ಟಿ

ಸುಳ್ಯ : ತಾಲೂಕಿನ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆ ರಬ್ಬರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಎಂಬಲ್ಲಿ ಪಲ್ಟಿಯಾಗಿದೆ.ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ರಬ್ಬರ್ ಶೀಟ್ ಗಳು ಎಲ್ಲಾ ಕಡೆ ಚದುರಿ ಹೋಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್.ಐ ಆಂಜನೇಯ ರೆಡ್ಡಿ ಹಾಗೂ

ಸುಳ್ಯ : ರಬ್ಬರ್ ಸಾಗಾಟದ ಲಾರಿ ಪಲ್ಟಿ Read More »

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ. ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ Read More »