ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು
ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು Read More »






