ಕರಾವಳಿ

ಅರಣ್ಯಾಧಿಕಾರಿ ಸಂಧ್ಯಾ ‌ಸಚಿನ್ ಗೆ ಬೀದರ್ ಗೆ ವರ್ಗಾವಣೆ| ಅಧಿಕೃತ ಆದೇಶ ಜಾರಿಗೊಳಿಸಿದ ಸರ್ಕಾರ

ಸಮಗ್ರ ನ್ಯೂಸ್ ಡೆಸ್ಕ್: ಉಡುಪಿ ವಲಯ ಸಂಚಾರಿ ದಳದ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ. ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾರವರು ಸಂದ್ಯಾ ಸಚಿನ್ ರ ವರ್ಗಾವಣೆಗೆ ಪ್ರಯತ್ನ ನಡೆಸಿದ್ದಾರೆ ಎಂದು ಸಂದ್ಯಾ ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರ ಹರಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಿಲ್ಲವ ಸಂಘಕ್ಕೂ ಸಂದ್ಯಾ ದೂರು ನೀಡಿದ್ದು, ವರ್ಗಾವಣೆ ತಡೆಗಾಗಿ ಪ್ರಯತ್ನಿಸಿದ್ದರು. ಮರಗಳ್ಳರ ರಕ್ಷಣೆಗಾಗಿ ಹರೀಶ್ ಪೂಂಜಾ ದ್ವೇಷ ರಾಜಕಾರಣ ಮಾಡಿ […]

ಅರಣ್ಯಾಧಿಕಾರಿ ಸಂಧ್ಯಾ ‌ಸಚಿನ್ ಗೆ ಬೀದರ್ ಗೆ ವರ್ಗಾವಣೆ| ಅಧಿಕೃತ ಆದೇಶ ಜಾರಿಗೊಳಿಸಿದ ಸರ್ಕಾರ Read More »

ಮಂಗಳೂರು: ಕಾಲೇಜು ಆವರಣದಲ್ಲಿ ತಲವಾರು ಝಳಪಿಸಿದ ಪ್ರಕರಣ, ಓರ್ವ ಅರೆಸ್ಟ್

ಸಮಗ್ರ ನ್ಯೂಸ್ ಡೆಸ್ಕ್: ನಗರದ ಬಲ್ಲಾಳ್‌ಬಾಗ್‌ನ ಖಾಸಗಿ ಕಾಲೇಜೊಂದರ ಬಳಿ ತಲವಾರು ಝಳಪಿಸಿದ ಯುವಕರ ತಂಡದ ಪೈಕಿ ಆರೋಪಿಯೋರ್ವನನ್ನು ಬರ್ಕೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಲ್ಲಾಳ್‌ ಬಾಗ್ ಸಮೀಪದ ವಿವೇಕನಗರ ನಿವಾಸಿ ವಿಶ್ವನಾಥ್ (22) ಬಂಧಿತ ಆರೋಪಿ. ಫೆ.1ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಯುವಕರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಹೋಗುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳು ವಾಹನಗಳನ್ನು ನಿಧಾನವಾಗಿ ಚಲಾಯಿಸುವಂತೆ ಸೂಚಿಸಿದ್ದರು. ಅದೇ ವಿಷಯಕ್ಕೆ ಸಂಬಂಧಿಸಿ ಯುವಕರು ಮತ್ತು ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ ನಡೆದಿದೆ.

ಮಂಗಳೂರು: ಕಾಲೇಜು ಆವರಣದಲ್ಲಿ ತಲವಾರು ಝಳಪಿಸಿದ ಪ್ರಕರಣ, ಓರ್ವ ಅರೆಸ್ಟ್ Read More »

ಉಡುಪಿ ಬಳಿಕ ಕುಂದಾಪುರದಲ್ಲಿ ಹಿಜಾಬ್ ಗಲಾಟೆ| ಶಾಸಕ ಹಾಲಾಡಿ ಶೆಟ್ಟಿ ಸಂಧಾನ ವಿಫಲ| ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್ ಡೆಸ್ಕ್ : ಉಡುಪಿಯಲ್ಲಿ ನ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ. ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಹೊರತಾಗಿ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ

ಉಡುಪಿ ಬಳಿಕ ಕುಂದಾಪುರದಲ್ಲಿ ಹಿಜಾಬ್ ಗಲಾಟೆ| ಶಾಸಕ ಹಾಲಾಡಿ ಶೆಟ್ಟಿ ಸಂಧಾನ ವಿಫಲ| ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು Read More »

ಅನ್ಯಮತೀಯನಿಂದ ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದ ಸ್ಟೇಟಸ್| ಆರೋಪಿ ಕ್ಷೌರಿಕ ಕೊಣಾಜೆ ಪೊಲೀಸರ ವಶಕ್ಕೆ| ನಕಲಿ ಹಿಂದೂ ಕಾರ್ಯಕರ್ತನಿಂದ ಹಣಕ್ಕಾಗಿ ಬ್ಲಾಕ್ ಮೇಲ್.

ಸಮಗ್ರ ನ್ಯೂಸ್ ಡೆಸ್ಕ್: ಉತ್ತರ ಭಾರತ ಮೂಲದ ಕ್ಷೌರಿಕ ನೋರ್ವ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಸ್ಥಳೀಯನೋರ್ವ ಹಿಂದೂ ಸಂಘಟನೆ ಕಾರ್ಯಕರ್ತ ಎಂದು ಹೇಳಿ ಆರೋಪಿಯನ್ನು ಬ್ಲಾಕ್ ಮೇಲ್ ಮಾಡಿ ಹಣ ಪೀಕಿಸಲು ಯತ್ನ ನಡೆಸಿದ್ದಾನೆಂದು ಹೇಳಲಾಗಿದೆ ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಆಯನ್ ಖಾನ್ ಎಂಬಾತನೆ ದೈವದ ತ್ರಿಶೂಲ ಹಿಡಿದು ವಿಕೃತಿ

ಅನ್ಯಮತೀಯನಿಂದ ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದ ಸ್ಟೇಟಸ್| ಆರೋಪಿ ಕ್ಷೌರಿಕ ಕೊಣಾಜೆ ಪೊಲೀಸರ ವಶಕ್ಕೆ| ನಕಲಿ ಹಿಂದೂ ಕಾರ್ಯಕರ್ತನಿಂದ ಹಣಕ್ಕಾಗಿ ಬ್ಲಾಕ್ ಮೇಲ್. Read More »

ಚಲಾಯಿಸುತ್ತಿದ್ದಾಗಲೇ ಕಾರು ಚಾಲಕನಿಗೆ ಹೃದಯಾಘಾತಗೊಂಡು ಸಾವು

ಸಮಗ್ರ ನ್ಯೂಸ್ ಡೆಸ್ಕ್: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಚಾಲಕನನ್ನು ಶರೀಫ್ ಎಂದು ಗುರುತಿಸಲಾಗಿದೆ. ಇವರು ಕಾರನ್ನು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರಣ ಬೈಕ್, ಟೆಂಪೋ ಹಾಗೂ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಲಾಯಿಸುತ್ತಿದ್ದಾಗಲೇ ಕಾರು ಚಾಲಕನಿಗೆ ಹೃದಯಾಘಾತಗೊಂಡು ಸಾವು Read More »

ಮಂಗಳೂರು: ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಮನೆ ಬಾಡಿಗೆ ವಿಚಾರದಲ್ಲಿ ನಡುರಾತ್ರಿ ಅಟ್ಟಾಡಿಸಿ ಹೊಡೆದ ದುಷ್ಕರ್ಮಿಗಳು

ಸಮಗ್ರ ಕ್ರೈಂ ಡೆಸ್ಕ್ : ಕೃಷ್ಣಾಪುರದಲ್ಲಿ ಯುವಕನೊಬ್ಬನ ಮೇಲೆ ನಾಲ್ಕರಿಂದ ಐದು ಮಂದಿಯ ಗುಂಪೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ 12:00 ಗಂಟೆ ಸುಮಾರಿಗೆ ನಡೆದಿದೆ. ಮೊಹಮ್ಮದ್ ಅನಾಸ್ ಎಂಬ 29 ವರ್ಷದ ಯುವಕನ ಮೇಲೆ 4-5 ಮಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ಯುವಕ ಮತ್ತು ಹಲ್ಲೆ ನಡೆಸಿದವರು ಒಂದೇ ಸಮುದಾಯದವರಾಗಿದ್ದಾರೆ. ಚಾರು, ರವೂಫ್, ಅಕ್ಕಿ ಮುಸ್ತಫಾ ಮತ್ತು ಇನ್ನೊಬ್ಬ ಹಲ್ಲೆ ನಡೆಸಿದ್ದಾರೆ ಎಂದು

ಮಂಗಳೂರು: ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಮನೆ ಬಾಡಿಗೆ ವಿಚಾರದಲ್ಲಿ ನಡುರಾತ್ರಿ ಅಟ್ಟಾಡಿಸಿ ಹೊಡೆದ ದುಷ್ಕರ್ಮಿಗಳು Read More »

ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟ ಡಯಾಲಿಸಿಸ್ ಘಟಕ| ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ| ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ|

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟಿರುವ ಡಯಾಲಿಸಿಸ್ ಘಟಕಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಘಟಕದ ಐದು ಯಂತ್ರಗಳೂ ಕೈಕೊಟ್ಟಿದ್ದು, ಇದರಿಂದ ಕಳೆದ ಕೆಲವು ದಿನಗಳಿಂದ ರೋಗಿಗಳಿಗೆ ಸಮಸ್ಯೆಯಾಗಿತ್ತು. ಡಯಾಲಿಸಿಸ್ ಘಟಕದ ನಿರ್ವಹಣೆಯನ್ನು ಹೊರಗುತ್ತಿಗೆ ನೀಡಲಾಗಿದ್ದು, ಗುತ್ತಿಗೆ ಪಡೆದುಕೊಂಡ ‘ಸಂಜೀವಿನಿ’ ಸಂಸ್ಥೆಯು ಘಟಕದ ನಿರ್ವಹಣೆಯನ್ನು ಮಾಡಿರಲಿಲ್ಲ. ಇದರಿಂದ ಆಸ್ಪತ್ರೆಗೆ ಬರುವ ಬಡರೋಗಿಗಳು ಡಯಾಲಿಸಿಸ್ ಮಾಡಿಕೊಳ್ಳಲಾಗದೇ ತೊಂದರೆ ಅನುಭವಿಸಿದ್ದರು. ಈ

ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟ ಡಯಾಲಿಸಿಸ್ ಘಟಕ| ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ| ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ| Read More »

ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ತಾಲೂಕಿನ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಆರಂಭಗೊಂಡಿದೆ. ಫೆ.1 ರಂದು ರಾತ್ರಿ ಧ್ವಜಾರೋಹಣ ನಡೆಯಿತು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ದಿನೇಶ್ ಗರಡಿ,ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ

ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ Read More »

ಕುಕ್ಕೆ: ಸೇವಾ ನಿರ್ಬಂಧಗಳಿಗೆ ತೆರವು| ಮಾರ್ಗಸೂಚಿ ಪಾಲನೆಯೊಂದಿಗೆ ಅನುಮತಿ

ಸಮಗ್ರ ನ್ಯೂಸ್ ಡೆಸ್ಕ್: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನವರಿ 6 ರಿಂದ ಕೋವಿಡ್​ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮತ್ತು ಸೇವೆಗಳಿಗೆ

ಕುಕ್ಕೆ: ಸೇವಾ ನಿರ್ಬಂಧಗಳಿಗೆ ತೆರವು| ಮಾರ್ಗಸೂಚಿ ಪಾಲನೆಯೊಂದಿಗೆ ಅನುಮತಿ Read More »

ಮಂಗಳೂರು: ಕಾಲೇಜು ಆವರಣದಲ್ಲಿ ಝಳಪಿಸಿದ ತಲವಾರ್| ಗುಂಪುಗಳ ನಡುವೆ ದಾಂಧಲೆ

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರಿನ ಬಳ್ಳಾಲ್ ಬಾಗ್ ಸಮೀಪದ ಕಾಲೇಜ್ ಆವರಣದಲ್ಲಿ ಹುಡುಗರ ಗುಂಪೊಂದು ತಲವಾರ್ ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದೆ. ವಿಧ್ಯಾರ್ಥಿಗಳ ವಾಹನಗಳ ನಡುವೆ ಢಿಕ್ಕಿಯಾದ ವಿಚಾರದ ಬಗ್ಗೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ನಂತರ ಸ್ವಲ್ಪಸಮಯದ ನಂತರ ಯುವಕರ ತಂಡವೊಂದು ತಲವಾರು ಸಮೇತ ಕಾಲೇಜು ಬಳಿ ಆಗಮಿಸಿ ಕೆಲವು ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದೆ ಎಂದು ಹೇಳಲಾಗುತ್ತಿದೆ. ತಲವಾರ್ ಹಿಡಿದು ಕಾಲೇಜಿಗೆ ಬಂದ ಕಿಡಿಗೇಡಿಗಳ ವಿಡಿಯೋವನ್ನು ವಿದ್ಯಾರ್ಥಿಗಳು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರು: ಕಾಲೇಜು ಆವರಣದಲ್ಲಿ ಝಳಪಿಸಿದ ತಲವಾರ್| ಗುಂಪುಗಳ ನಡುವೆ ದಾಂಧಲೆ Read More »