ಕರಾವಳಿ

ಮಂಗಳೂರು: ಹಣಕ್ಕಾಗಿ ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ ದಂಪತಿ| ಸಿಸಿಬಿ ಪೊಲೀಸರಿಂದ ಆರೋಪಿಗಳ ಬಂಧನ

ಮಂಗಳೂರು : ನಗರದ ಪದವಿನಂಗಡಿನ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಪ್ರಮುಖ ಅರೋಪಿಗಳಾದ ಆರೋಪಿಗಳಾದ ಮೇರಿಹಿಲ್ ನಲ್ಲಿರುವ ಕೊಡಗು ಜಿಲ್ಲೆಯ ಶನಿವಾರ ಸಂಜೆ ಮೂಲದ ಭವ್ಯ ( 30 ) ಆಕೆಯ ಪತಿ […]

ಮಂಗಳೂರು: ಹಣಕ್ಕಾಗಿ ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ ದಂಪತಿ| ಸಿಸಿಬಿ ಪೊಲೀಸರಿಂದ ಆರೋಪಿಗಳ ಬಂಧನ Read More »

ಸುಳ್ಯ: ಬೆಳ್ಳಾರೆ ಮೂಲದ ಮಹಿಳೆ ಮಂಗಳೂರಿನಲ್ಲಿ ನಾಪತ್ತೆ

ಸುಳ್ಯ: ಮಂಗಳೂರಿನಲ್ಲಿ ಬ್ಯಾಂಕ್ ವ್ಯವಹಾರಕ್ಕೆಂದು ತೆರಳಿದ್ದ ಬೆಳ್ಳಾರೆಯ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಇಂದು ವರದಿಯಾಗಿದೆ. ನಾಪತ್ತೆಯಾದ ಮಹಿಳೆ ದಿವ್ಯ (29) ಎಂದು ತಿಳಿದು ಬಂದಿದೆ. ಶುಕ್ರವಾರ ಮಧ್ಯಾಹ್ನ ಮಂಗಳೂರಿನ ಉರ್ವಸ್ಟೋರ್ ನಲ್ಲಿ ಬ್ಯಾಂಕಿಗೆ ಹೋಗಿಬರುವುದಾಗಿ ತೆರಳಿರುವ ಅವರು ನಂತರ ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯನ್ನು ಎಲ್ಲಾದರೂ ಕಂಡಲ್ಲಿ ತಿಳಿಸುವಂತೆ ಮಹಿಳೆಯ ಪತಿ ಸಾಮಾಜಿಕ ಜಾಲತಾಣದಲ್ಲಿ ವಿನಂತಿಸಿಕೊಂಡಿದ್ದಾರೆ. ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಬೆಳಗ್ಗೆ ಮಂಗಳೂರಿಗೆ ಬಂದಿದ್ದೆವು. ನಂತರ ಬ್ಯಾಂಕಿಗೆ ಹೋಗಿ ಬರುವುದಾಗಿ

ಸುಳ್ಯ: ಬೆಳ್ಳಾರೆ ಮೂಲದ ಮಹಿಳೆ ಮಂಗಳೂರಿನಲ್ಲಿ ನಾಪತ್ತೆ Read More »

ಸುಳ್ಯ: ಪಾದಾಚಾರಿಗೆ ಡಿಕ್ಕಿ ಹೊಡೆದ ಪಿಕಪ್, ವ್ಯಕ್ತಿ ಸಾವು

ಸುಳ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಕಪ್ ಡಿಕ್ಕಿಯಾದ ಪರಿಣಾಮ ಗಂಭಿರ ಗಾಯಗೊಂಡು ವ್ಯಕ್ತಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಪೈಚಾರಿನ ನವೀನ್ ಕುಮಾರ್ (60) ಎಂದು ಗುರುತಿಸಲಾಗಿದೆ. ಇವರು ಅಡ್ಕಾರಿನಲ್ಲಿ ರೇಷನ್ ಪಡೆಯಲು ತೆರಳಿದ್ದು ಬಸ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ರಸ್ತೆಯಲ್ಲಿ ಬಂದ ಪಿಕಪ್ ಢಿಕ್ಕಿಯಾಯಿತು. ಪರಿಣಾಮ ನವೀನರು ರಸ್ತೆಗೆ ಎಸೆಯಲ್ಪಟ್ಟು ಗಂಭಿರ ಗಾಯಗೊಂಡರು. ಪಿಕಪ್ ನವರೇ ತಕ್ಷಣ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದರಾದರೂ ಅದಾಗಲೇ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಸುಳ್ಯ: ಪಾದಾಚಾರಿಗೆ ಡಿಕ್ಕಿ ಹೊಡೆದ ಪಿಕಪ್, ವ್ಯಕ್ತಿ ಸಾವು Read More »

ಕಡಬ:ಗ್ರಾಮೀಣ ಯುವತಿಯ ಸಾಧನೆ| ಪಿಎಸ್ಸೈ ಪರೀಕ್ಷೆಯಲ್ಲಿ 39ನೇ ರ್ಯಾಂಕ್ ಪಡೆದ ಬದ್ರುನ್ನಿಶಾ

ಕಡಬ: ಗ್ರಾಮೀಣ ಭಾಗದ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಕುಂತೂರು ಸಮೀಪದ ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನ್ನಿಶಾ ಇದೀಗ ಪಿಎಸ್‌ಐ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕಲಿತು ಯಶಸ್ವಿಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಂತೂರಿನಲ್ಲಿ ಪಡೆದಿರುವ ಅವರು, ಪ್ರೌಢಶಾಲಾ ಶಿಕ್ಷಣವನ್ನು ಸಂತ ಜಾರ್ಜ್ ಪ್ರೌಢಶಾಲೆ

ಕಡಬ:ಗ್ರಾಮೀಣ ಯುವತಿಯ ಸಾಧನೆ| ಪಿಎಸ್ಸೈ ಪರೀಕ್ಷೆಯಲ್ಲಿ 39ನೇ ರ್ಯಾಂಕ್ ಪಡೆದ ಬದ್ರುನ್ನಿಶಾ Read More »

ಉಡುಪಿ: ವಾರಾಂತ್ಯ ಕರ್ಪ್ಯೂ ಗೆ ಸೆಡ್ಡು ಹೊಡೆಯಲು ನಿರ್ಧರಿಸಿದ ಉದ್ಯಮಿಗಳು

ಉಡುಪಿ: ವಾರಾಂತ್ಯ ಕರ್ಫ್ಯೂ ರದ್ದು ಮಾಡಬೇಕು ಅಥವಾ ಎಲ್ಲ ಉದ್ಯಮಗಳಿಗೂ ವಾರಾಂತ್ಯದಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಸರಕಾರದ ನಿಯಮ ಉಲ್ಲಂಘಿಸಿ ವಾರಾಂತ್ಯದಲ್ಲಿ ವ್ಯಾಪಾರ ವಹಿವಾಟು ನಡೆಸಲು ಕೆನರಾ ಉದ್ಯಮಿಗಳ ಒಕ್ಕೂಟ ನಿರ್ಧರಿಸಿದೆ. ಉಡುಪಿ ಮತ್ತು ದಕ್ಷಿಣ ಜಿಲ್ಲೆಗಳ ಒಟ್ಟು 40 ವರ್ತಕರ ಸಂಘಟನೆಗಳನ್ನೊಳಗೊಂಡ ಕೆನರಾ ಉದ್ಯಮಿಗಳ ಒಕ್ಕೂಟದ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಒಕ್ಕೂಟದ ಅಧ್ಯಕ್ಷ ಸಂತೋಷ್‌ ಕಾಮತ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ವ್ಯಾಪಾರಿ ವರ್ಗ ಲಾಕ್‌ಡೌನ್‌ನಿಂದ

ಉಡುಪಿ: ವಾರಾಂತ್ಯ ಕರ್ಪ್ಯೂ ಗೆ ಸೆಡ್ಡು ಹೊಡೆಯಲು ನಿರ್ಧರಿಸಿದ ಉದ್ಯಮಿಗಳು Read More »

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿ ಪುಂಡಾಟ ಮೆರೆದಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕನಾಗಿದ್ದು, ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆಯಂಬುಲೆನ್ಸ್​​​ನಲ್ಲಿ ಕೊಂಡೊಯ್ಯುತ್ತಿದ್ದಾಗ ಆರೋಪಿ ಮೋನಿಶ್ ಕಾರು ಅಡ್ಡಾದಿಡ್ಡಿ ಚಲಾಯಿಸಿ ದಾರಿ ಬಿಡದೆ ಸತಾಯಿಸಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಉಡುಪಿಯವರೆಗೆ ಸುಮಾರು 40 ಕಿಲೋಮೀಟರ್ ಈತ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟಿರಲಿಲ್ಲ. KA19 Md 6843 ಎಂಬ ರಿಜಿಸ್ಟ್ರೇಷನ್ ನಂಬರ್​ನ ಕಾರಿನ ಚಾಲಕ ಈ ರೀತಿ ಸತಾಯಿಸಿದ್ದಾನೆ. ಈ ಘಟನೆಯನ್ನು

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ Read More »

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ

ಮಂಗಳೂರು: ನಗರದಿಂದ ಭಟ್ಕಳಕ್ಕೆ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದ ಚಾಲಕ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಘಟನೆ ಬುಧವಾರ ಸಂಜೆ ನಡೆದಿದೆ. ಇದೇ ಕಾರಿನ ಚಾಲಕನು ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಆಯಂಬುಲೆನ್ಸ್‌ಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ವ್ಯಕ್ತವಾಗಿದೆ. ಈ ಮಧ್ಯೆ ಕಾರು ಚಾಲಕನ ಹುಚ್ಚಾಟಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರೋಗಿಯನ್ನು ಬುಧವಾರ ಸಂಜೆ ಭಟ್ಕಳಕ್ಕೆ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸೇರಿ

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ Read More »

ಸುಬ್ರಹ್ಮಣ್ಯ: ಬಿಸ್ಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಸುಬ್ರಹ್ಮಣ್ಯ : ಬಿಸಿಲೆ ಘಾಟ್ ನ ರಸ್ತೆಯ ಬದಿ ಇರುವ ನದಿಯ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷಸೇವಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಈತನನ್ನು ಬದುಕಿಸಲು ಯುವ ತೇಜಸ್ಸು ಸಂಸ್ಥೆಯ ಸದಸ್ಯರ ಗರಿಷ್ಠ ಪ್ರಯತ್ನದ ಹೊರತಾಗಿಯೂ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬಿಸಿಲೆ ಘಾಟ್ ನ ಚೌಡೇಶ್ವರಿ ಅಮ್ಮನವರ ಗುಡಿಯಿಂದ ಸುಮಾರು 100 ಮೀಟರ್ ಇಳಿಜಾರಿನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಗಮನಕ್ಕೆ ಬಂದು ಕೂಡಲೇ ಸುಬ್ರಮಣ್ಯದ ಯುವತೇಜಸ್ಸು ಟ್ರಸ್ಟ್ ಗೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯ: ಬಿಸ್ಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ Read More »

ಸುಳ್ಯ: ಕ್ಯಾಂಟೀನ್ ಪಾತ್ರೆಗಳನ್ನು ಬಾವಿಗೆಸೆದು,‌ಮಗನಿಗೆ ಕತ್ತಿಯಿಂದ ಕಡಿದ ತಂದೆ

ಸುಳ್ಯ: ಮಾನಸಿಕ ಸ್ಥಿರತೆಯನ್ನು ಕಳೆದುಕೊಂಡ ವ್ಯಕ್ತಿಯೋರ್ವರು ಕ್ಯಾಂಟಿನ್ ಒಂದರ ಪಾತ್ರೆಗಳು ಮತ್ತು ಗ್ಯಾಸ್ ಸಿಲಿಂಡರ್ ನ್ನು ಎಸೆದು, ತನ್ನ ಮಗನ ಹೋಟೆಲ್ ಗೆ ನುಗ್ಗಿ ಮಗನಿಗೆ ಕತ್ತಿಯಿಂದ ಕಡಿದ ಘಟನೆ ಮಂಗಳವಾರದಂದು ತಾಲೂಕಿನ ಎಲಿಮಲೆ ಎಂಬಲ್ಲಿ ನಡೆದಿದೆ. ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯನ್ನು ಎಲಿಮಲೆಯ ರಾಜೇಶ್(55) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಎಲಿಮಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಬಾಲಕೃಷ್ಣ ಎಂಬವರ ಕ್ಯಾಂಟಿನ್ ಗೆ ನುಗ್ಗಿ ಪಾತ್ರೆಗಳನ್ನೆಲ್ಲ ಪಕ್ಕದ ಬಾವಿಗೆಸೆದು, ಗ್ಯಾಸ್ ಸಿಲಿಂಡರ್ ನ್ನು ಸುಮಾರು ದೂರ ಹೊತ್ತೊಯ್ದು ಬಿಸಾಡಿದ್ದಾರೆ.

ಸುಳ್ಯ: ಕ್ಯಾಂಟೀನ್ ಪಾತ್ರೆಗಳನ್ನು ಬಾವಿಗೆಸೆದು,‌ಮಗನಿಗೆ ಕತ್ತಿಯಿಂದ ಕಡಿದ ತಂದೆ Read More »

ಪುತ್ತೂರು: ಹಿಂದೂ-ಮುಸ್ಲಿಂ ಯುವಕರ ನಡುವೆ ಹಲ್ಲೆ| ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನಂತರ ಅದು ಪರಸ್ಪರ ಹಲ್ಲೆಗೆ ತಿರುಗಿ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಲಘು ಲಾಠಿ ಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಪುತ್ತೂರಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೆಲ ಯುವಕರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಗಡಿಯಾರದ ಸತ್ತಿಕಲ್ಲು ನಿವಾಸಿ ರಷ್ಪಕ್, ಪೆರ್ನೆ ನಿವಾಸಿಗಳಾದ ಹರ್ಷಿತ್, ಸತೀಶ್, ಜಗದೀಶ್ ಎನ್ನಲಾಗಿದೆ. ಅನ್ಯಕೋಮಿನ ಯುವಕರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಾಗ ಪೊಲೀಸರು

ಪುತ್ತೂರು: ಹಿಂದೂ-ಮುಸ್ಲಿಂ ಯುವಕರ ನಡುವೆ ಹಲ್ಲೆ| ಪೊಲೀಸರಿಂದ ಲಾಠಿ ಪ್ರಹಾರ Read More »