ಕರಾವಳಿ

ಮಂಗಳೂರು: ಮರುವಾಯಿ ತಿಂದು ಅಸ್ವಸ್ಥ

ಮಂಗಳೂರು: ಮರುವಾಯಿ(ಚಿಪ್ಪು ಮೀನು) ತಿಂದು ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಹೊರವಲಯದ ಗುರುಪುರ ಕುಪ್ಪೆಪದವುವಿನಲ್ಲಿ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು ಆರೊಗ್ಯ ಕೇಂದ್ರಕ್ಕೆ ಯಾರೊಬ್ಬರೂ ಚಿಕಿತ್ಸೆಗೆ ಬಂದಿಲ್ಲ. ಫುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ […]

ಮಂಗಳೂರು: ಮರುವಾಯಿ ತಿಂದು ಅಸ್ವಸ್ಥ Read More »

ಬಂಟ್ವಾಳ: ರಾತ್ರೋರಾತ್ರಿ ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ ( 55) ಎಂದು ಗುರುತಿಸಲಾಗಿದೆ.ಇವರು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು. ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ

ಬಂಟ್ವಾಳ: ರಾತ್ರೋರಾತ್ರಿ ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿಗೆ ಮೈಕ್ ಸೆಟ್ ಕೊಡುಗೆ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘದಿಂದ ಕಾಲೇಜಿಗೆ 65 ಸಾವಿರ ಮೌಲ್ಯದ ಮೈಕ್ ಸೆಟ್ ನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಕಾಲೇಜು ಪ್ರಾಂಶುಪಾಲರಾದ ಗೋವಿಂದ ಎಸ್ ಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪಿ ಜಿ ಎಸ್ ಏನ್ ಪ್ರಸಾದ್ , ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ವಿಮಲಾರಂಗಯ್ಯ , ದುಗ್ಗಪ್ಪ ಗೌಡ ನಾರಾಯಣ ಅಗ್ರಹಾರ , ಶ್ರೀಲತಾ ಮತ್ತಿತರರು ಉಪಸ್ಥಿತರಿದ್ದರು

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿಗೆ ಮೈಕ್ ಸೆಟ್ ಕೊಡುಗೆ Read More »

ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗೆ ಕಾರ್ಯಕರ್ತರ ಜಟಾಪಟಿ|

ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಹೊಯ್ ಕೈ ನಡೆದಿರುವ ಘಟನೆ ವರದಿಯಾಗಿದೆ. ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು ಖಂಡಿಸಿ, ಯುವ ಕಾಂಗ್ರೆಸ್ ಹಮ್ಮಿಕೊಂಡಿರುವ “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಮಾನಾಥ ರೈಗಳು ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಮೂಲ್ಕಿ ವಲಯದ ನಾಯಕರೊಬ್ಬರು ರೈಗಳನ್ನು ನಿಂದಿಸಿ ಮಾತನಾಡಿದ್ದೇ

ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗೆ ಕಾರ್ಯಕರ್ತರ ಜಟಾಪಟಿ| Read More »

ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ

ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ Read More »

ಕೊರಗಜ್ಜ ವೇಷಧರಿಸಿದ ಮದುಮಗನ ಮನೆಗೆ ಕಲ್ಲು ತೂರಾಟ

ಕಾಸರಗೋಡು: ಮದುವೆ ಮನೆಯಲ್ಲಿ ತುಳುನಾಡಿನ ದೈವ ಕೊರಗಜ್ಜ ದೇವರಂತೆ ವೇಷಧರಿಸಿ, ವಿಟ್ಲ ಸಾಲೆತ್ತೂರಿನ ವಧುವಿನ ಮನೆಗೆ ತೆರಳಿದ ಆರೋಪ ಹೊತ್ತಿರುವ ಮಂಜೇಶ್ವರದ ಉಪ್ಪಳ ಬೇಕೂರಿನ ಉಮರುಲ್ ಬಾತೀಶ್ ಅವರ ಮನೆಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮನೆಯ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ. ಬೈಕ್ ಬಂದ ದುಷ್ಕರ್ಮಿಗಳು ವರನ ಮನೆಯ ಕಾಂಪೌಂಡ್ ಗೋಡೆಗೆ ಕೇಸರಿ ಬಣ್ಣ ಬಳಿದಿದ್ದಾರೆ ಎನ್ನಲಾಗಿದ್ದು, ಗಾಜು ಒಡೆದ ಸದ್ದು ಕೇಳಿ ಗಾಬರಿಯಿಂದ ಬಾಗಿಲು ತೆರೆದು ಹೊರಗೆ ಬಂದು ನೋಡಿದಾಗ ಇಬ್ಬರು

ಕೊರಗಜ್ಜ ವೇಷಧರಿಸಿದ ಮದುಮಗನ ಮನೆಗೆ ಕಲ್ಲು ತೂರಾಟ Read More »

ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ

ವಿಟ್ಲ: ಮಹಿಳೆಯಿಂದ ಮಹಿಳೆಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಗೆ ದೂರುದಾಖಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಶರವು ಪಡ್ಪು ಎಂಬಲ್ಲಿನ ಹರೀಶ್ ರವರ ಪತ್ನಿ ಪ್ರೇಮ ದೂರುದಾರರಾಗಿದ್ದಾರೆ. ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ನಿವಾಸಿ ರೋಹಿಣಿ ಸಿ ಯಾನೆ‌ ರೂಪ ಪ್ರಕರಣದ ಆರೋಪಿಯಾಗಿದ್ದಾರೆ. ನನ್ನ ಸಬಂಧಿಯಾದ ರೋಹಿಣಿ ಸಿ ಯಾನೆ ರೂಪ ರವರು ನನ್ನಲ್ಲಿ CRR EDUCATION PALANINIG INVESTMENT ನಲ್ಲಿ ಹಣ ಇಡುವಂತೆ ಒತ್ತಾಯ ಮಾಡಿದ್ದರು ಅದರಂತೆ ಬಂಟ್ವಾಳ

ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ Read More »

ಶಿರಾಡಿ‌ ಘಾಟ್ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ – ಮಂಜುನಾಥ್ ಭಂಡಾರಿ

ಮಂಗಳೂರು: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯನ್ನು 6 ತಿಂಗಳು ಬಂದ್ ಮಾಡಲು ಹೋಗಿ ಕೇಂದ್ರ ಬಿಜೆಪಿ ಸರ್ಕಾರ ವಿಶ್ವದಾಖಲೆ ನಿರ್ಮಿಸಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ವ್ಯಂಗ್ಯವಾಡಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್​​ಎಚ್​​​ಎಐ‌ನವರು 10 ಕಿ.ಮೀ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟಿಯನ್ನು 6 ತಿಂಗಳುಗಳ ಕಾಲ ಮುಚ್ಚುವಂತೆ ಆದೇಶ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದು ಗಮನಕ್ಕೆ ಬಂದಿದೆ. ಈ ಹಿಂದೆಯೂ ಎರಡು ಬಾರಿ ಶಿರಾಡಿಯನ್ನು ಮುಚ್ಚಲಾಗಿತ್ತು‌. ಎಂಆರ್​​ಪಿಎಲ್, ಎನ್‌ಎಂಪಿಟಿ ಬಂದರು

ಶಿರಾಡಿ‌ ಘಾಟ್ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ – ಮಂಜುನಾಥ್ ಭಂಡಾರಿ Read More »

ಕಡಬ: ಕಣ್ಣೆದುರಲ್ಲೇ ಹಿಟಾಚಿ ಅಗ್ನಿಗಾಹುತಿ| ಲಕ್ಷಾಂತರ ರೂ.‌ನಷ್ಟ|

ಕಡಬ: ಕಣ್ಣೆದುರಲ್ಲೇ ಹಿಟಾಚಿ ಇಂಜಿನ್ ಒಂದು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟಗೊಂಡ ಘಟನೆ ತಾಲೂಕಿನ ಕೊಂಬಾರು‌ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ಸಂಸ್ಥೆಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ತಕ್ಷಣವೇ ಹಿಟಾಚಿಯ ಸಿಬ್ಬಂದಿ ಹಾಗೂ ಸ್ಥಳೀಯರು ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ, ಬೆಂಕಿ ಅದಾಗಲೇ ವ್ಯಾಪಿಸಿದ್ದರಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

ಕಡಬ: ಕಣ್ಣೆದುರಲ್ಲೇ ಹಿಟಾಚಿ ಅಗ್ನಿಗಾಹುತಿ| ಲಕ್ಷಾಂತರ ರೂ.‌ನಷ್ಟ| Read More »

ಉಪ್ಪಿನಂಗಡಿ: ಬೈಕ್ ಕದ್ದು ಪರಾರಿಯಾಗುತ್ತಿದ್ದಾಗ ಲಾರಿ ಢಿಕ್ಕಿ – ಸವಾರರರಿಬ್ಬರು ಗಂಭೀರ

ಉಪ್ಪಿನಂಗಡಿ: ಗಾಂಧಿಪಾರ್ಕ್ ಬಳಿಯ ಜೈನ ಬಸದಿ ಸಮೀಪದ ಮನೆಯೊಂದರಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ನಕಲಿ ಕೀ ಬಳಸಿ ಕಳವುಗೈದು ತೆರಳುತ್ತಿದ್ದಾಗ ಅಪಘಾತವಾದ ಘಟನೆ ನಡೆದಿದೆ. ಬೈಕನ್ನು ಹಿರೇಬಂಡಾಡಿ ಗ್ರಾಮದ ಕೊಳ್ಳೇಜಾಲ್ ‌ನಿವಾಸಿ ಮುಹಮ್ಮದ್ ಎಂಬವರದು. ಇವರು ಬೈಕ್ ಕಾಲವಾದವಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ಕೂಡಾ ದಾಖಲಿಸಿದ್ದರು. ಆದರೆ ಅಪರಿಚಿತ ಕಳ್ಳರು ಬೈಕ್ ಕದ್ದೊಯ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ಶಿರಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಉಪ್ಪಿನಂಗಡಿ: ಬೈಕ್ ಕದ್ದು ಪರಾರಿಯಾಗುತ್ತಿದ್ದಾಗ ಲಾರಿ ಢಿಕ್ಕಿ – ಸವಾರರರಿಬ್ಬರು ಗಂಭೀರ Read More »