ಕರಾವಳಿ

ವಿದ್ಯಾರ್ಥಿನಿಯ ಫೋಟೋ ಜೊತೆಗೆ ಅನ್ಯಧರ್ಮೀಯನ ಫೋಟೋ ಎಡಿಟ್| ದೂರು ದಾಖಲು

ಮಂಗಳೂರು: ನಗರದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯು ತ್ತಿರುವ ವಿದ್ಯಾರ್ಥಿನಿಯ ಫೋಟೋವೊಂದನ್ನು ಅನ್ಯ ಧರ್ಮೀಯ ಯುವಕನ ಜತೆ ಸಂಬಂಧ ಇದೆ ಎಂದು ಆರೋಪಿಸಿ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಲಾಗಿದ್ದು, ಈ ಬಗ್ಗೆ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮೆಡಿಕಲ್‌ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್‌ ಓದುತ್ತಿರುವ ವಿದ್ಯಾರ್ಥಿನಿಯ ಫೋಟೋವನ್ನು ಆರೋಪಿ ಇನ್‌ ಸ್ಟಾಗ್ರಾಮ್‌ನಿಂದ ಡೌನ್‌ಲೊಡ್‌ ಮಾಡಿಕೊಂಡು ಬಳಿಕ ಇನ್ನೋರ್ವ ಯುವಕನ ಫೋಟೋದ ಜತೆ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾನೆ. […]

ವಿದ್ಯಾರ್ಥಿನಿಯ ಫೋಟೋ ಜೊತೆಗೆ ಅನ್ಯಧರ್ಮೀಯನ ಫೋಟೋ ಎಡಿಟ್| ದೂರು ದಾಖಲು Read More »

ರಿಕ್ಷಾದಲ್ಲಿ‌ ಬಿಟ್ಟು ಹೋಗಿದ್ದ ಮನೆಯ ಕೀ ತೆಗೆದು ದರೋಡೆ| ಪರಿಚಿತರಿಂದಲೇ ಕಳವುಗೈದ ಶಂಕೆ| ದೂರು‌ ದಾಖಲು|

ಬೆಳ್ತಂಗಡಿ: ಆಟೋ ರಿಕ್ಷಾ ಚಾಲಕರೊಬ್ಬರು ತನ್ನ ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕದ್ದೊಯ್ದ ಕಳ್ಳರು ಚಾಲಕನ ಮನೆಗೆ ನುಗ್ಗಿ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಿನ್ನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಬಲಿಪಗುಡ್ಡೆ ನಿವಾಸಿ ಅಶೋಕ್ ಎಂಬವರ ಮನೆಯಲ್ಲಿ ಈ ಕೃತ್ಯ‌ ನಡೆದಿದೆ. ಅಶೋಕ್ ರಿಕ್ಷಾವನ್ನು ಕೊಕ್ಕಡದಲ್ಲಿ ನಿಲ್ಲಿಸಿ ಪುತ್ತೂರಿಗೆ ತೆರಳಿದ್ದರು. ಈ ವೇಳೆ ಮನೆಯ ಬೀಗದ ಕೈಯನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದರೆನ್ನಲಾಗಿದೆ. ಅವರು ಪುತ್ತೂರಿನಿಂದ ಹಿಂದಿರುಗಿ ಬಂದು ನೋಡಿದಾಗ

ರಿಕ್ಷಾದಲ್ಲಿ‌ ಬಿಟ್ಟು ಹೋಗಿದ್ದ ಮನೆಯ ಕೀ ತೆಗೆದು ದರೋಡೆ| ಪರಿಚಿತರಿಂದಲೇ ಕಳವುಗೈದ ಶಂಕೆ| ದೂರು‌ ದಾಖಲು| Read More »

ಧರ್ಮಸ್ಥಳ: ಇಂದು ಮೋದಿ ದೀರ್ಘಾಯುಷ್ಯಕ್ಕಾಗಿ ಮಹಾಮೃತ್ಯುಂಜಯ ಯಾಗ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಿ ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯುತ್ತಿದೆ. ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಮಂದಿ ಪುರೋಹಿತರಿಂದ ಧರ್ಮಸ್ಥಳ ದೇಗುಲದ ಆವರಣದಲ್ಲಿ ಏಳು ಹೋಮಕುಂಡಗಳಲ್ಲಿ ಹೋಮ ನಡೆಯುತ್ತಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ

ಧರ್ಮಸ್ಥಳ: ಇಂದು ಮೋದಿ ದೀರ್ಘಾಯುಷ್ಯಕ್ಕಾಗಿ ಮಹಾಮೃತ್ಯುಂಜಯ ಯಾಗ Read More »

ಉಡುಪಿ: ಶಬರಿಮಲೆಗೆ ತೆರಳಿದ್ದ ವೃತಧಾರಿ ಸ್ವಾಮಿಪಾದಕ್ಕೆ..!

ಉಡುಪಿ: ಜಿಲ್ಲೆಯಿಂದ ಶಬರಿಮಲೆ ಸನ್ನಿಧಾನಕ್ಕೆ ತೆರಳಿದ್ದ ಮಾಲಾಧಾರಿಯೋರ್ವರು ಬೆಟ್ಟ ಹತ್ತುವಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ. ಸುರೇಶ್ ಬಂಗೇರ ( 52) ಹೃದಯಾಘಾತದಿಂದ ಸಾವಿಗೀಡಾದ ಮಾಲಾಧಾರಿ. ಜಿಲ್ಲೆಯ ಉದ್ಯಾವರದ ಈ ಮಾಲಾಧಾರಿ ಇಲ್ಲಿಯ ಅಯ್ಯಪ್ಪ ಮಂದಿರದಿಂದ 32 ಸ್ವಾಮಿಗಳ ಜೊತೆ ಇರುಮುಡಿ ಕಟ್ಟಿ ನಿನ್ನೆ‌ ರೈಲು ಮಾರ್ಗದ ಮೂಲಕ ಶಬರಿ ತಲುಪಿದ್ದರು. ಇಂದು ದೇವರ ದರ್ಶನಕ್ಕೆ ಬೆಟ್ಟ ಹತ್ತಿ ಹೊರಟ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ರಿಕ್ಷಾ ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಮಾಲಾಧಾರಿ ಸುರೇಶ್ ಕುಟುಂಬದಲ್ಲಿ ಆಕ್ರಂದನ

ಉಡುಪಿ: ಶಬರಿಮಲೆಗೆ ತೆರಳಿದ್ದ ವೃತಧಾರಿ ಸ್ವಾಮಿಪಾದಕ್ಕೆ..! Read More »

ಬಳ್ಪ: ಆದರ್ಶ ಗ್ರಾಮದ ಬೋಗಾಯನ ಕೆರೆ ಅಭಿವೃದ್ಧಿಗೆ ಕೂಡಿ ಬಂತು ಕಾಲ !

ರೂ. 2 ಕೋಟಿ ಅನುದಾನ ಬಿಡುಗಡೆ | ಇಲ್ಲಿದೆ ಬರಪೂರ ಜಲಮೂಲ ಸುಬ್ರಹ್ಮಣ್ಯ: ಕಡಬ ತಾಲೂಕಿನ ಸಂಸದರ ಆದರ್ಶ ಗ್ರಾಮದ ಬಳ್ಪದ ಐತಿಹಾಸಿಕ ಬೋಗಾಯನ ಕೆರೆ ಅಭಿವೃದ್ಧಿಗೆ ಕೊನೆಗೂ ಅಭಿವೃದ್ಧಿ ಭಾಗ್ಯ ಒದಗಿ ಬಂದಿದೆ. 1.40 ಎಕ್ರೆಯ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 2 ಕೋಟಿ ಅನುದಾನ ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಐತಿಹಾಸಿಕ ಕೆರೆ;ಬಳ್ಪದ ಬೋಗಾಯನ ಕೆರೆ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಕದಂಬರ ತುಂಡರಸ ಬೋಗರಾಯವರ್ಮ ಕಡಬ ಪ್ರದೇಶವನ್ನು ಆಳುತ್ತಿದ್ದ ಕಾಲದಲ್ಲಿ

ಬಳ್ಪ: ಆದರ್ಶ ಗ್ರಾಮದ ಬೋಗಾಯನ ಕೆರೆ ಅಭಿವೃದ್ಧಿಗೆ ಕೂಡಿ ಬಂತು ಕಾಲ ! Read More »

ಮಂಗಳೂರು: ಉದ್ಯಮಿಗೆ ಹಣ ಬೇಡಿಕೆ ಇಟ್ಟು ಜೀವ ಬೆದರಿಕೆ| ಇಬ್ಬರು ರೌಡಿಶೀಟರ್ ಗಳು ಅಂದರ್

ಮಂಗಳೂರು: ಉದ್ಯಮಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟು, ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಇಬ್ಬರು ರೌಡಿ ಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲಂದರ್ ಶರೀಫ್ ಮತ್ತು ಹಸನಬ್ಬ ಎಂದು ಗುರುತಿಸಲಾಗಿದೆ. ಶರೀಫ್ ಮತ್ತು ಹಸನಬ್ಬ ಪುತ್ತೂರಿನ ಉದ್ಯಮಿಗೆ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ ಅವನನ್ನು ಬಿಡಿಸಲು 13,00,000 ತಗಲುತ್ತದೆ. ಅವನನ್ನು ಬಿಡಿಸಲು ನೀನು ಹಣ ಕೊಡಬೇಕು. ಎರಡು ದಿನಗಳೊಳಗೆ 3,50,000 ಹಣ ರೆಡಿ ಮಾಡಬೇಕು.

ಮಂಗಳೂರು: ಉದ್ಯಮಿಗೆ ಹಣ ಬೇಡಿಕೆ ಇಟ್ಟು ಜೀವ ಬೆದರಿಕೆ| ಇಬ್ಬರು ರೌಡಿಶೀಟರ್ ಗಳು ಅಂದರ್ Read More »

ಮಂಗಳೂರು: ಪಿಕಪ್ ಢಿಕ್ಕಿಯಾಗಿ ವೃದ್ದ ಸಾವು

ಮಂಗಳೂರು: ನಗರದ ಶಕ್ತಿನಗರದ ಕಕ್ಕೆಬೆಟ್ಟು ಎಂಬಲ್ಲಿ ಶನಿವಾರ ಪಿಕಪ್ ಲಾರಿಯೊಂದು ಢಿಕ್ಕಿಯಾಗಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿ ನಿವಾಸಿ ಕೊರಗಪ್ಪ (85) ಎಂದು ಗುರುತಿಸಲಾಗಿದೆ. ನೆಲದ ಹೆಂಚುಗಳನ್ನು ತುಂಬಿದ್ದ ಪಿಕಪ್ ಹಿಮ್ಮುಖ ತಿರುವು ತೆಗೆದುಕೊಳ್ಳುತ್ತಿದ್ದಾಗ ಟ್ರಕ್‌ನ ಹಿಂದೆ ನಿಂತಿದ್ದ ಕೊರಗಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಕೊರಗಪ್ಪನವರ ತಲೆಯ ಭಾಗಕ್ಕೆ ಗಾಯಗವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಪಿಕಪ್ ಢಿಕ್ಕಿಯಾಗಿ ವೃದ್ದ ಸಾವು Read More »

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್

ಕಡಬ: ಬಾಲಕಿಗೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ. 28 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್ Read More »

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

ಸುಬ್ರಹ್ಮಣ್ಯ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಿರಂತರ ಆತ್ಯಾಚಾರಗೈದ ಹಾಗೂ ಆ ಕೃತ್ಯವನ್ನೂ ಮೊಬೈಲ್ ನಲ್ಲಿ ಚಿತ್ರಿಕರಿಸಿ ಬ್ಲ್ಯಾಕ್ಮೆಲ್ ಮಾಡಿ ಹಣ ವಸೂಲಿ ಮಾಡಿದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿಯ ಜಾಮೀನನ್ನು ರಾಜ್ಯ ಹೈ ಕೋರ್ಟು ರದ್ದು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ರಾಯಚೂರಿನ ಗುರುರಾಜ್ ಜಾಮೀನು ರದ್ದಾದ ಆರೋಪಿ. ಸದ್ಯ ಈತ ಬಂಧನ ಭೀತಿಯನ್ನು ಎದುರಿಸುತ್ತಿದ್ದಾನೆ. 2021ರ ಅ. 8 ರಂದು

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ Read More »

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ

ಪುತ್ತೂರು : ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಆತನನ್ನು ಗಡಿಪಾರು ಮಾಡಲು ಹಿಂಜಾವೇಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂಬಾತ ಪ್ರಕರಣದ ಆರೋಪಿ. ಕಸಬಾ ಆಶ್ರಯ ಕಾಲನಿಯ ಶ್ರೀಮತಿ ವಿನಯ ಎಂಬವರು ಚಂದ್ರಶೇಖರ ಎಂಬವರ ಜೊತೆ ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ ಗೆ ಪಡೆದುಕೊಂಡ, ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಬ್ದುಲ್ ಮುನಾಫ್

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ Read More »