ಕರಾವಳಿ

ಮಂಗಳೂರು: ದಾಖಲೆಯಿಲ್ಲದ 1.5 ಕೋಟಿಗೂ ಮಿಕ್ಕಿ ನಗದು ಮತ್ತು ಚಿನ್ನಾಭರಣ ಪತ್ತೆ

ಮಂಗಳೂರು: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 12223 ದುರಂತ್ ಎಕ್ಸ್​ಪ್ರೆಸ್​​ ರೈಲಿನಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ರೈಲಿನಲ್ಲಿ ಕಪ್ಪು ಬಣ್ಣದ ಬ್ಯಾಗ್ ಕಂಡು ಮಂಗಳೂರು ರೈಲ್ವೆ ಪೊಲೀಸರು ತಪಾಸಣೆ ನಡೆಸಿದ್ದು, ಬ್ಯಾಗ್​ನಲ್ಲಿ 1ಕೋಟಿ 48ಲಕ್ಷದ 58ಸಾವಿರ ನಗದು ಹಾಗೂ 40 ಲಕ್ಷ ಮೌಲ್ಯದ 800ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಯಾವುದೇ ದಾಖಲೆ ಇಲ್ಲದ ಕಾರಣ ಸದ್ಯ ಅಪಾರ ನಗದು ಹಾಗೂ ಚಿನ್ನಾಭರಣವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದು, ಹಣದ ಮೂಲದ

ಮಂಗಳೂರು: ದಾಖಲೆಯಿಲ್ಲದ 1.5 ಕೋಟಿಗೂ ಮಿಕ್ಕಿ ನಗದು ಮತ್ತು ಚಿನ್ನಾಭರಣ ಪತ್ತೆ Read More »

ದೆಹಲಿಯ ರಾಜಪಥದಲ್ಲಿ ರಾರಾಜಿಸಲಿದೆ ಕರಾವಳಿಯ ಕಂಗೀಲು ನೃತ್ಯ

‘ಉಡುಪಿ ಬೀಟ್ಸ್’ ಲಾಂಚನದಡಿಯಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳು ಉಡುಪಿ: ಜ. 26 ರಂದು ದೇಶದ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಶೋತ್ಸವದ ಸಾಂಸ್ಕೃತಿಕ ಕಾರ್ಯಮದಲ್ಲಿ ಕರಾವಳಿಯ ಕಂಗೀಲು ನೃತ್ಯ ಪ್ರದರ್ಶನಗೊಳ್ಳಲಿದೆ. ಉಡುಪಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಎಂ ಜಿ ಎಂ ಕಾಲೇಜು ಹಾಗೂ ಪೂರ್ಣಪ್ರಜ್ಞ ಕಾಲೇಜಿನ 9 ವಿದ್ಯಾರ್ಥಿನಿಯರು ಮತ್ತು _5 ಮಂದಿ ವಿದ್ಯಾರ್ಥಿಗಳನ್ನೊಳಗೊಂಡ ತಂಡವು ಗಣರಾಜ್ಶೋತ್ಸವದ ಪಥಸಂಚಲನದ ಸಂದರ್ಭದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಂಗೀಲು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಈ ವಿದ್ಶಾರ್ಥಿಗಳು ‘ಉಡುಪಿ ಬೀಟ್ಸ್’ ಎಂಬ ಲಾಂಚನದಡಿಯಲ್ಲಿ ಭಾಗವಹಿಸುತ್ತಿದ್ದು, ತುಳುನಾಡಿನ

ದೆಹಲಿಯ ರಾಜಪಥದಲ್ಲಿ ರಾರಾಜಿಸಲಿದೆ ಕರಾವಳಿಯ ಕಂಗೀಲು ನೃತ್ಯ Read More »

ಮಂಗಳೂರು: ಹೆರಿಗೆಗೆ ತೆರಳಿದ ತಾಯಿ, ಮಗು ಸಾವು| ಮಗು ಹೊಟ್ಟೆಯಲ್ಲೇ ಸತ್ತರೂ ಹೊರತೆಗೆಯದ ವೈದ್ಯರು

ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಹೆರಿಗೆಗೆ ತೆರಳಿದ್ದ ತಾಯಿ-ಮಗು ಮೃತಪಟ್ಟ ಘಟನೆ ನಡೆದಿದೆ. ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು. ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಮನೆಯವರ ಗಮನಕ್ಕೆ ತಂದಿದ್ದರು, ಸಂಜೆಯ ವೇಳೆಗೆ ಗರ್ಭಿಣಿ ತಾಯಿ ಮೃತಪಟ್ಟಿದ್ದಾರೆ. ಸವಿತಾ ಕಡೆಯವರು ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ನಡೆದಿದೆ, ವೈದ್ಯರು ಹೊಟ್ಟೆಯಲ್ಲಿದ್ದ ಮಗುವನ್ನು ತೆಗೆಯದೆ ಗರ್ಭಿಣಿ ಮೃತಪಟ್ಟಿದ್ದಾರೆ

ಮಂಗಳೂರು: ಹೆರಿಗೆಗೆ ತೆರಳಿದ ತಾಯಿ, ಮಗು ಸಾವು| ಮಗು ಹೊಟ್ಟೆಯಲ್ಲೇ ಸತ್ತರೂ ಹೊರತೆಗೆಯದ ವೈದ್ಯರು Read More »

ಮಂಗಳೂರು: ಹಣಕ್ಕಾಗಿ ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ ದಂಪತಿ| ಸಿಸಿಬಿ ಪೊಲೀಸರಿಂದ ಆರೋಪಿಗಳ ಬಂಧನ

ಮಂಗಳೂರು : ನಗರದ ಪದವಿನಂಗಡಿನ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಪ್ರಮುಖ ಅರೋಪಿಗಳಾದ ಆರೋಪಿಗಳಾದ ಮೇರಿಹಿಲ್ ನಲ್ಲಿರುವ ಕೊಡಗು ಜಿಲ್ಲೆಯ ಶನಿವಾರ ಸಂಜೆ ಮೂಲದ ಭವ್ಯ ( 30 ) ಆಕೆಯ ಪತಿ

ಮಂಗಳೂರು: ಹಣಕ್ಕಾಗಿ ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ ದಂಪತಿ| ಸಿಸಿಬಿ ಪೊಲೀಸರಿಂದ ಆರೋಪಿಗಳ ಬಂಧನ Read More »

ಸುಳ್ಯ: ಬೆಳ್ಳಾರೆ ಮೂಲದ ಮಹಿಳೆ ಮಂಗಳೂರಿನಲ್ಲಿ ನಾಪತ್ತೆ

ಸುಳ್ಯ: ಮಂಗಳೂರಿನಲ್ಲಿ ಬ್ಯಾಂಕ್ ವ್ಯವಹಾರಕ್ಕೆಂದು ತೆರಳಿದ್ದ ಬೆಳ್ಳಾರೆಯ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಇಂದು ವರದಿಯಾಗಿದೆ. ನಾಪತ್ತೆಯಾದ ಮಹಿಳೆ ದಿವ್ಯ (29) ಎಂದು ತಿಳಿದು ಬಂದಿದೆ. ಶುಕ್ರವಾರ ಮಧ್ಯಾಹ್ನ ಮಂಗಳೂರಿನ ಉರ್ವಸ್ಟೋರ್ ನಲ್ಲಿ ಬ್ಯಾಂಕಿಗೆ ಹೋಗಿಬರುವುದಾಗಿ ತೆರಳಿರುವ ಅವರು ನಂತರ ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯನ್ನು ಎಲ್ಲಾದರೂ ಕಂಡಲ್ಲಿ ತಿಳಿಸುವಂತೆ ಮಹಿಳೆಯ ಪತಿ ಸಾಮಾಜಿಕ ಜಾಲತಾಣದಲ್ಲಿ ವಿನಂತಿಸಿಕೊಂಡಿದ್ದಾರೆ. ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಬೆಳಗ್ಗೆ ಮಂಗಳೂರಿಗೆ ಬಂದಿದ್ದೆವು. ನಂತರ ಬ್ಯಾಂಕಿಗೆ ಹೋಗಿ ಬರುವುದಾಗಿ

ಸುಳ್ಯ: ಬೆಳ್ಳಾರೆ ಮೂಲದ ಮಹಿಳೆ ಮಂಗಳೂರಿನಲ್ಲಿ ನಾಪತ್ತೆ Read More »

ಸುಳ್ಯ: ಪಾದಾಚಾರಿಗೆ ಡಿಕ್ಕಿ ಹೊಡೆದ ಪಿಕಪ್, ವ್ಯಕ್ತಿ ಸಾವು

ಸುಳ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಕಪ್ ಡಿಕ್ಕಿಯಾದ ಪರಿಣಾಮ ಗಂಭಿರ ಗಾಯಗೊಂಡು ವ್ಯಕ್ತಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಪೈಚಾರಿನ ನವೀನ್ ಕುಮಾರ್ (60) ಎಂದು ಗುರುತಿಸಲಾಗಿದೆ. ಇವರು ಅಡ್ಕಾರಿನಲ್ಲಿ ರೇಷನ್ ಪಡೆಯಲು ತೆರಳಿದ್ದು ಬಸ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ರಸ್ತೆಯಲ್ಲಿ ಬಂದ ಪಿಕಪ್ ಢಿಕ್ಕಿಯಾಯಿತು. ಪರಿಣಾಮ ನವೀನರು ರಸ್ತೆಗೆ ಎಸೆಯಲ್ಪಟ್ಟು ಗಂಭಿರ ಗಾಯಗೊಂಡರು. ಪಿಕಪ್ ನವರೇ ತಕ್ಷಣ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದರಾದರೂ ಅದಾಗಲೇ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಸುಳ್ಯ: ಪಾದಾಚಾರಿಗೆ ಡಿಕ್ಕಿ ಹೊಡೆದ ಪಿಕಪ್, ವ್ಯಕ್ತಿ ಸಾವು Read More »

ಕಡಬ:ಗ್ರಾಮೀಣ ಯುವತಿಯ ಸಾಧನೆ| ಪಿಎಸ್ಸೈ ಪರೀಕ್ಷೆಯಲ್ಲಿ 39ನೇ ರ್ಯಾಂಕ್ ಪಡೆದ ಬದ್ರುನ್ನಿಶಾ

ಕಡಬ: ಗ್ರಾಮೀಣ ಭಾಗದ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಕುಂತೂರು ಸಮೀಪದ ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನ್ನಿಶಾ ಇದೀಗ ಪಿಎಸ್‌ಐ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕಲಿತು ಯಶಸ್ವಿಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಂತೂರಿನಲ್ಲಿ ಪಡೆದಿರುವ ಅವರು, ಪ್ರೌಢಶಾಲಾ ಶಿಕ್ಷಣವನ್ನು ಸಂತ ಜಾರ್ಜ್ ಪ್ರೌಢಶಾಲೆ

ಕಡಬ:ಗ್ರಾಮೀಣ ಯುವತಿಯ ಸಾಧನೆ| ಪಿಎಸ್ಸೈ ಪರೀಕ್ಷೆಯಲ್ಲಿ 39ನೇ ರ್ಯಾಂಕ್ ಪಡೆದ ಬದ್ರುನ್ನಿಶಾ Read More »

ಉಡುಪಿ: ವಾರಾಂತ್ಯ ಕರ್ಪ್ಯೂ ಗೆ ಸೆಡ್ಡು ಹೊಡೆಯಲು ನಿರ್ಧರಿಸಿದ ಉದ್ಯಮಿಗಳು

ಉಡುಪಿ: ವಾರಾಂತ್ಯ ಕರ್ಫ್ಯೂ ರದ್ದು ಮಾಡಬೇಕು ಅಥವಾ ಎಲ್ಲ ಉದ್ಯಮಗಳಿಗೂ ವಾರಾಂತ್ಯದಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಸರಕಾರದ ನಿಯಮ ಉಲ್ಲಂಘಿಸಿ ವಾರಾಂತ್ಯದಲ್ಲಿ ವ್ಯಾಪಾರ ವಹಿವಾಟು ನಡೆಸಲು ಕೆನರಾ ಉದ್ಯಮಿಗಳ ಒಕ್ಕೂಟ ನಿರ್ಧರಿಸಿದೆ. ಉಡುಪಿ ಮತ್ತು ದಕ್ಷಿಣ ಜಿಲ್ಲೆಗಳ ಒಟ್ಟು 40 ವರ್ತಕರ ಸಂಘಟನೆಗಳನ್ನೊಳಗೊಂಡ ಕೆನರಾ ಉದ್ಯಮಿಗಳ ಒಕ್ಕೂಟದ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಒಕ್ಕೂಟದ ಅಧ್ಯಕ್ಷ ಸಂತೋಷ್‌ ಕಾಮತ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ವ್ಯಾಪಾರಿ ವರ್ಗ ಲಾಕ್‌ಡೌನ್‌ನಿಂದ

ಉಡುಪಿ: ವಾರಾಂತ್ಯ ಕರ್ಪ್ಯೂ ಗೆ ಸೆಡ್ಡು ಹೊಡೆಯಲು ನಿರ್ಧರಿಸಿದ ಉದ್ಯಮಿಗಳು Read More »

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿ ಪುಂಡಾಟ ಮೆರೆದಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕನಾಗಿದ್ದು, ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆಯಂಬುಲೆನ್ಸ್​​​ನಲ್ಲಿ ಕೊಂಡೊಯ್ಯುತ್ತಿದ್ದಾಗ ಆರೋಪಿ ಮೋನಿಶ್ ಕಾರು ಅಡ್ಡಾದಿಡ್ಡಿ ಚಲಾಯಿಸಿ ದಾರಿ ಬಿಡದೆ ಸತಾಯಿಸಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಉಡುಪಿಯವರೆಗೆ ಸುಮಾರು 40 ಕಿಲೋಮೀಟರ್ ಈತ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟಿರಲಿಲ್ಲ. KA19 Md 6843 ಎಂಬ ರಿಜಿಸ್ಟ್ರೇಷನ್ ನಂಬರ್​ನ ಕಾರಿನ ಚಾಲಕ ಈ ರೀತಿ ಸತಾಯಿಸಿದ್ದಾನೆ. ಈ ಘಟನೆಯನ್ನು

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ Read More »

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ

ಮಂಗಳೂರು: ನಗರದಿಂದ ಭಟ್ಕಳಕ್ಕೆ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದ ಚಾಲಕ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಘಟನೆ ಬುಧವಾರ ಸಂಜೆ ನಡೆದಿದೆ. ಇದೇ ಕಾರಿನ ಚಾಲಕನು ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಆಯಂಬುಲೆನ್ಸ್‌ಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ವ್ಯಕ್ತವಾಗಿದೆ. ಈ ಮಧ್ಯೆ ಕಾರು ಚಾಲಕನ ಹುಚ್ಚಾಟಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರೋಗಿಯನ್ನು ಬುಧವಾರ ಸಂಜೆ ಭಟ್ಕಳಕ್ಕೆ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸೇರಿ

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ Read More »