ಕರಾವಳಿ

ಕರಾವಳಿಗರಿಗೆ ಇನ್ಮುಂದೆ ಕುಚ್ಲಕ್ಕಿ ಭಾಗ್ಯ| ಮುಂದಿನ ತಿಂಗಳಿನಿಂದಲೇ ಪಡಿತರ ವ್ಯವಸ್ಥೆಯಲ್ಲಿ ಜಾರಿಗೆ|

ಉಡುಪಿ: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿಯನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದ್ದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ನಾವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೆವು.ಮನವಿ ಪುರಸ್ಕರಿಸಿದ ಕೇಂದ್ರವು ಉಭಯ ಜಿಲ್ಲೆಗಳಿಗೆ ವಿತರಿಸಲು ಲಕ್ಷ ಕ್ವಿಂಟಾಲ್ ನಷ್ಡು ಅಕ್ಕಿ ನೀಡಲು ಒಪ್ಪಿದೆ. ಇದಕ್ಕಾಗಿ ಕೇಂದ್ರ ಸರಕಾರ ಮತ್ತು ಸಂಬಂಧಪಟ್ಟ ಮಂತ್ರಿಗಳಿಗೆ […]

ಕರಾವಳಿಗರಿಗೆ ಇನ್ಮುಂದೆ ಕುಚ್ಲಕ್ಕಿ ಭಾಗ್ಯ| ಮುಂದಿನ ತಿಂಗಳಿನಿಂದಲೇ ಪಡಿತರ ವ್ಯವಸ್ಥೆಯಲ್ಲಿ ಜಾರಿಗೆ| Read More »

ಕೊರಗಜ್ಜನ ಅವಮಾನಿಸಿದ ಮದುಮಗನಿಂದ ಕ್ಷಮೆಯಾಚನೆ| ದೈವನುಡಿಗೆ ಬೆದರಿದನೇ ಆರೋಪಿ|

ಮಂಗಳೂರು: ಸಾಲೆತ್ತೂರು ಎಂಬಲ್ಲಿ ಮದುಮಗ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮದುಮಗ ಉಮರುಲ್ ಭಾತೀಷ್ ವೀಡಿಯೋ ಮೂಲಕ ಕ್ಷಮೆ ಕೇಳಿದ್ದಾನೆ. ಕಳೆದ ಬುಧವಾರ ನಡೆದ ಮದುವೆ ದಿನ ರಾತ್ರಿ ಅಝೀಝ್ ಮನೆಗೆ ತನ್ನ ಐವತ್ತಕ್ಕೂ ಹೆಚ್ಚು ಸ್ನೇಹಿತರ ಜೊತೆ ಪ್ರಥಮ ರಾತ್ರಿಗೆ ಬಂದ ಮದುಮಗ ಕೊರಗಜ್ಜನ ವೇಷ ಭೂಷಣ ಹಾಕಿ ನಡುರಸ್ತೆಯಲ್ಲೇ ಕುಣಿದು ಕುಪ್ಪಳಿಸುವ ಮೂಲಕ ತುಳುನಾಡಿನ ಹಿಂದೂ ಸಮುದಾಯದ ಆರಾಧ್ಯ ದೈವ ಕೊರಗಜ್ಜನ ನಿಂದನೆ, ಅವಮಾನ ಎಸಗಿದ ವೀಡಿಯೋಗಳು ಭಾರೀ

ಕೊರಗಜ್ಜನ ಅವಮಾನಿಸಿದ ಮದುಮಗನಿಂದ ಕ್ಷಮೆಯಾಚನೆ| ದೈವನುಡಿಗೆ ಬೆದರಿದನೇ ಆರೋಪಿ| Read More »

ನೈಟ್ ಕರ್ಪ್ಯೂ ಹಿನ್ನೆಲೆ| ಅಜಿಲಮೊಗರು ಉರೂಸ್ ಸಮಯದಲ್ಲಿ ಬದಲಾವಣೆ| ಹಗಲು ಹೊತ್ತಿನಲ್ಲೇ ನಡೆಯಲಿದೆ ಧಾರ್ಮಿಕ ಪ್ರಭಾಷಣ|

ಬಂಟ್ವಾಳ: ಜಿಲ್ಲೆಯ ಪ್ರಸಿದ್ಧ ಅಜಿಲಮೊಗರು ಮಾಲಿದ ಉರೂಸ್ ಈ ಬಾರಿ ನೈಟ್ ಕರ್ಫ್ಯೂ ಹಿನ್ನಲೆ ಉದಯಾಸ್ತಮಾನವಾಗಿ ಆಚರಿಸಲಾಗುವುದು ಎಂದು ಬಾಬಾ ಫಕ್ರುದ್ದೀನ್ ಜಮಾಅತ್ ಸಮಿತಿ ಹೇಳಿಕೆ ನೀಡಿದೆ. ಜನವರಿ 14 ರಿಂದ 18 ರ ವರೆಗೆ ಉದ್ದೇಶಿಸಿದ್ದ ಮಾಲಿದ ಉರೂಸ್ ನ ದಿನಾಂಕ ಮತ್ತು ಸಮಯವನ್ನು ಬದಲಾಯಿಸಿದ್ದು ಪೊಲೀಸರು ಅನುಮತಿ ನೀಡಿದರೆ ಯತಾ ಸ್ಥಿತಿಯಲ್ಲೇ ಉರೂಸ್ ಕಾರ್ಯಕ್ರಮ ಮುಂದುವರಿಸಲಾಗುವುದು ಎಂದು ಜಮಾಅತ್ ಸದಸ್ಯ ಇಬ್ರಾಹಿಂ ರವರು ತಿಳಿಸಿದ್ದಾರೆ. ನೈಟ್ ಕರ್ಫ್ಯೂ ಹಿನ್ನಲೆ ದಿನಾಂಕ ಮತ್ತು ಸಮಯಗಳಲ್ಲಿ ಒಂದಷ್ಟು

ನೈಟ್ ಕರ್ಪ್ಯೂ ಹಿನ್ನೆಲೆ| ಅಜಿಲಮೊಗರು ಉರೂಸ್ ಸಮಯದಲ್ಲಿ ಬದಲಾವಣೆ| ಹಗಲು ಹೊತ್ತಿನಲ್ಲೇ ನಡೆಯಲಿದೆ ಧಾರ್ಮಿಕ ಪ್ರಭಾಷಣ| Read More »

ಮಂಗಳೂರು: ವಾರಾಂತ್ಯ ಕರ್ಪ್ಯೂ ಹಿನ್ನೆಲೆ| ಸಾರ್ವಜನಿಕ ಓಡಾಟಕ್ಕೆ ಬ್ರೇಕ್| ಪೊಲೀಸರಿಂದ ಬಿಗಿ ಕ್ರಮ|

ಮಂಗಳೂರು: ರಾಜ್ಯ ಸರಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದೋಬಸ್ತು ಹಾಗೂ ಜನತೆಯ ಅನಗತ್ಯ ಓಡಾಟಕ್ಕೆ ಕಡಿವಾಣ ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಇಬ್ಬರು ಡಿಸಿಪಿ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಶುಕ್ರವಾರ ರಾತ್ರಿ 10ರ ಬಳಿಕ ಓಡಾಟ ನಡೆಸುವವರನ್ನು ವಿಚಾರಣೆ ನಡೆಸಿ ಕಳುಹಿಸುತ್ತಿರುವ ದೃಶ್ಯ ಕಂಡು ಬಂದಿತು. ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ ವಾಹನಗಳಲ್ಲಿ ಓಡಾಟ ನಡೆಸುವವರನ್ನು ಪರಿಶೀಲನೆ ನಡೆಸುತ್ತಿದ್ದ ಪೊಲೀಸರು ವಾಹನಗಳಲ್ಲಿ ಅನಗತ್ಯ ಓಡಾಟ ನಡೆಸುತ್ತಿದ್ದವರನ್ನು ಎಚ್ಚರಿಕೆ ‌ನೀಡಿ ಹಿಂದಕ್ಕೆ ಕಳುಹಿಸಿದ್ದಾರೆ. ನಗರದಲ್ಲಿ ರಾತ್ರಿ 10ಗಂಟೆಯ

ಮಂಗಳೂರು: ವಾರಾಂತ್ಯ ಕರ್ಪ್ಯೂ ಹಿನ್ನೆಲೆ| ಸಾರ್ವಜನಿಕ ಓಡಾಟಕ್ಕೆ ಬ್ರೇಕ್| ಪೊಲೀಸರಿಂದ ಬಿಗಿ ಕ್ರಮ| Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು

ಬೆಳ್ತಂಗಡಿ: ಯುವಕನೋರ್ವ ತನ್ನ ಕೆಲಸದ ವ್ಯಕ್ತಿಯನ್ನು ಮನೆಗೆ ಬಿಟ್ಟು ವಾಪಸ್ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈಯರ್ ಕುತ್ತಿಗೆಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಹೆಡ್ಯಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಜಿರೆಯಲ್ಲಿ ಶ್ರೀ ಗಣೇಶ್ ಹೊಟೇಲ್ ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ರಘು ಎಂದು ಗುರುತಿಸಲಾಗಿದೆ. ಹೇಡ್ಯ ಬಳಿ ಕಳೆದ ರಾತ್ರಿ ಬೈಹುಲ್ಲು ಸಾಗಾಟದ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ

ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು Read More »

ಮೋದಿ ದೀರ್ಘಾಯುಷ್ಯಕ್ಕಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ

ಮಂಗಳೂರು: ಪಂಜಾಬ್‌ನ ಮೇಲ್ಸೇತುವೆ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಕಾರನ್ನು ಇಪ್ಪತ್ತು‌ ನಿಮಿಷ ತಡೆ ಹಿಡಿದ ವಿಚಾರ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿಯವರನ್ನು ಈ ರೀತಿ ಅಡ್ಡಗಟ್ಟಿಸಿರುವುದು ಭದ್ರತಾ ವೈಫಲ್ಯ ಅಂತಾ ಆಡಳಿತ ಪಕ್ಷ ಟೀಕಿಸಿದರೆ, ಕಾಂಗ್ರೆಸ್ ಮಾತ್ರ ಇದು ಚುನಾವಣಾ ಗಿಮಿಕ್, ಮೋದಿ, ಮೆರವಣಿಗೆಯಲ್ಲಿ ಜನ ಸೇರಲಿಲ್ಲ ಎಂಬ ಕಾರಣಕ್ಕಾಗಿ ಮೋದಿ ಈ ಹೈಡ್ರಾಮ ಮಾಡಿದ್ದಾರೆ ಅಂತಾ ಕಾಂಗ್ರೆಸ್ ಟೀಕಿಸಿದೆ. ನರೇಂದ್ರ ಮೋದಿಯವರ ವಾಹನ ಮೇಲ್ಸೇತುವೆ ಮೇಲೆ ಇಪ್ಪತ್ತು‌ ನಿಮಿಷ ಬಾಕಿಯಾಗುತ್ತಿದ್ದಂತೆಯೇ ಪ್ರಧಾನಿ

ಮೋದಿ ದೀರ್ಘಾಯುಷ್ಯಕ್ಕಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ Read More »

ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಕರ್ತವ್ಯ ಲೋಪ| ಐವರು ಸಿಬ್ಬಂದಿ ಅಮಾನತು|

ಮಂಗಳೂರು: ಇಲ್ಲಿನ ಪಾಂಡೇಶ್ವರ ಮಹಿಳಾ ಠಾಣೆಯ ಐವರು ಸಿಬ್ಬಂದಿಯು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮದ್ಯಪಾನ ಮಾಡಿ ಇಲಾಖೆಯ ನಿಯಮಾವಳಿಗೆ ವಿರುದ್ಧವಾಗಿ ವರ್ತಿಸಿದ್ದು ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಸಿಪಿ ಮತ್ತು ಎಸಿಪಿ ನೀಡಿದ ವರದಿಯನ್ನು ಆಧರಿಸಿ ಇಬ್ಬರು ಎಎಸ್ಸೈ, ಇಬ್ಬರು ಹೆಡ್ ಕಾನ್ಸ್ಟೇಬಲ್, ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಹಿತ ಐವರನ್ನು ಪೊಲೀಸ್ ಆಯುಕ್ತರು ಅಮಾನತು ಮಾಡಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮಂಗಳೂರು ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಸಹಿತ ಪೊಲೀಸರು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮಾಡಿದ್ದಾರೆನ್ನಲಾದ ಬ್ರೇಕ್

ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಕರ್ತವ್ಯ ಲೋಪ| ಐವರು ಸಿಬ್ಬಂದಿ ಅಮಾನತು| Read More »

ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಸುಳ್ಯ: ಇಲ್ಲಿನ ಸಮೀಪದ ಪೆರಾಜೆಯ ವ್ಯಕ್ತಿಯೋರ್ವರು 25ರಂದು ತನ್ನ ಮನೆಯ ದುರಸ್ತಿ ಕಾರ್ಯದ ಸಂದರ್ಭ ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಪೆರಾಜೆ ಬಂಗಾರಕೋಡಿಯ ಹರೀಶ್ ಎಂಬ ವ್ಯಕ್ತಿ ತಮ್ಮ ಹಳೆ ಮನೆಯನ್ನು ಕೆಡವಿ ಹೊಸ ಮನೆ ಕಟ್ಟಲು ಜಾಗ ಸಮತಟ್ಟು ಮಾಡಲು ಬಂದ ಜೆಸಿಬಿಯ ಚಾಲಕರಿಗೆ ಕುಡಿಯಲೆಂದು ಬೊಂಡ ತೆಗೆಯಲು ತೆಂಗಿನ ಮರ ಏರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಿಂದ ಆಯತಪ್ಪಿ ಅವರು ಬಿದ್ದು ಗಂಭೀರ ಗಾಯಗೊಂಡರು.

ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು Read More »

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…!

ಕಿನ್ನಿಗೋಳಿ: ಉಡುಪಿ, ಚಿಕ್ಕಮಗಳೂರಿನ ಕಾಲೇಜುಗಳಲ್ಲಿ ಸ್ಕಾರ್ಫ್-ಕೇಸರಿ ಶಲ್ಯ ವಿವಾದಗಳು ಹಸಿಯಾಗಿರುವಾಗಲೇ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಪೊಂಪೈ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ ಪ್ರಾರಂಭವಾಗಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಗಳು ಸ್ಕಾರ್ಪ್ ಹಾಕಿ ತರಗತಿ ಹಾಜರಾದ ಕಾರಣ, ಹಿಂದೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳು ಸ್ಕಾರ್ಪ್ ವಿಚಾರ ಕುರಿತು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ಆಡಳಿತ ಮಂಡಳಿ ಸಭೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…! Read More »

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೀಗಿರಲಿದೆ ವೀಕೆಂಡ್ ಕರ್ಪ್ಯೂ|

ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು. ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಸಾರ್ವಜನಿಕ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೀಗಿರಲಿದೆ ವೀಕೆಂಡ್ ಕರ್ಪ್ಯೂ| Read More »