ಕರಾವಳಿ

ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ […]

ಮಂಗಳೂರು: 5ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಶಾಲೆ ತಾತ್ಕಾಲಿಕ ಸ್ಥಗಿತ – ಜಿಲ್ಲಾಧಿಕಾರಿ Read More »

ಕೊರಗಜ್ಜ ವೇಷಧರಿಸಿದ ಮದುಮಗನ ಮನೆಗೆ ಕಲ್ಲು ತೂರಾಟ

ಕಾಸರಗೋಡು: ಮದುವೆ ಮನೆಯಲ್ಲಿ ತುಳುನಾಡಿನ ದೈವ ಕೊರಗಜ್ಜ ದೇವರಂತೆ ವೇಷಧರಿಸಿ, ವಿಟ್ಲ ಸಾಲೆತ್ತೂರಿನ ವಧುವಿನ ಮನೆಗೆ ತೆರಳಿದ ಆರೋಪ ಹೊತ್ತಿರುವ ಮಂಜೇಶ್ವರದ ಉಪ್ಪಳ ಬೇಕೂರಿನ ಉಮರುಲ್ ಬಾತೀಶ್ ಅವರ ಮನೆಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮನೆಯ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ. ಬೈಕ್ ಬಂದ ದುಷ್ಕರ್ಮಿಗಳು ವರನ ಮನೆಯ ಕಾಂಪೌಂಡ್ ಗೋಡೆಗೆ ಕೇಸರಿ ಬಣ್ಣ ಬಳಿದಿದ್ದಾರೆ ಎನ್ನಲಾಗಿದ್ದು, ಗಾಜು ಒಡೆದ ಸದ್ದು ಕೇಳಿ ಗಾಬರಿಯಿಂದ ಬಾಗಿಲು ತೆರೆದು ಹೊರಗೆ ಬಂದು ನೋಡಿದಾಗ ಇಬ್ಬರು

ಕೊರಗಜ್ಜ ವೇಷಧರಿಸಿದ ಮದುಮಗನ ಮನೆಗೆ ಕಲ್ಲು ತೂರಾಟ Read More »

ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ

ವಿಟ್ಲ: ಮಹಿಳೆಯಿಂದ ಮಹಿಳೆಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಗೆ ದೂರುದಾಖಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಶರವು ಪಡ್ಪು ಎಂಬಲ್ಲಿನ ಹರೀಶ್ ರವರ ಪತ್ನಿ ಪ್ರೇಮ ದೂರುದಾರರಾಗಿದ್ದಾರೆ. ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ನಿವಾಸಿ ರೋಹಿಣಿ ಸಿ ಯಾನೆ‌ ರೂಪ ಪ್ರಕರಣದ ಆರೋಪಿಯಾಗಿದ್ದಾರೆ. ನನ್ನ ಸಬಂಧಿಯಾದ ರೋಹಿಣಿ ಸಿ ಯಾನೆ ರೂಪ ರವರು ನನ್ನಲ್ಲಿ CRR EDUCATION PALANINIG INVESTMENT ನಲ್ಲಿ ಹಣ ಇಡುವಂತೆ ಒತ್ತಾಯ ಮಾಡಿದ್ದರು ಅದರಂತೆ ಬಂಟ್ವಾಳ

ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ Read More »

ಶಿರಾಡಿ‌ ಘಾಟ್ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ – ಮಂಜುನಾಥ್ ಭಂಡಾರಿ

ಮಂಗಳೂರು: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯನ್ನು 6 ತಿಂಗಳು ಬಂದ್ ಮಾಡಲು ಹೋಗಿ ಕೇಂದ್ರ ಬಿಜೆಪಿ ಸರ್ಕಾರ ವಿಶ್ವದಾಖಲೆ ನಿರ್ಮಿಸಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ವ್ಯಂಗ್ಯವಾಡಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್​​ಎಚ್​​​ಎಐ‌ನವರು 10 ಕಿ.ಮೀ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟಿಯನ್ನು 6 ತಿಂಗಳುಗಳ ಕಾಲ ಮುಚ್ಚುವಂತೆ ಆದೇಶ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದು ಗಮನಕ್ಕೆ ಬಂದಿದೆ. ಈ ಹಿಂದೆಯೂ ಎರಡು ಬಾರಿ ಶಿರಾಡಿಯನ್ನು ಮುಚ್ಚಲಾಗಿತ್ತು‌. ಎಂಆರ್​​ಪಿಎಲ್, ಎನ್‌ಎಂಪಿಟಿ ಬಂದರು

ಶಿರಾಡಿ‌ ಘಾಟ್ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ – ಮಂಜುನಾಥ್ ಭಂಡಾರಿ Read More »

ಕಡಬ: ಕಣ್ಣೆದುರಲ್ಲೇ ಹಿಟಾಚಿ ಅಗ್ನಿಗಾಹುತಿ| ಲಕ್ಷಾಂತರ ರೂ.‌ನಷ್ಟ|

ಕಡಬ: ಕಣ್ಣೆದುರಲ್ಲೇ ಹಿಟಾಚಿ ಇಂಜಿನ್ ಒಂದು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟಗೊಂಡ ಘಟನೆ ತಾಲೂಕಿನ ಕೊಂಬಾರು‌ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ಸಂಸ್ಥೆಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ತಕ್ಷಣವೇ ಹಿಟಾಚಿಯ ಸಿಬ್ಬಂದಿ ಹಾಗೂ ಸ್ಥಳೀಯರು ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ, ಬೆಂಕಿ ಅದಾಗಲೇ ವ್ಯಾಪಿಸಿದ್ದರಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

ಕಡಬ: ಕಣ್ಣೆದುರಲ್ಲೇ ಹಿಟಾಚಿ ಅಗ್ನಿಗಾಹುತಿ| ಲಕ್ಷಾಂತರ ರೂ.‌ನಷ್ಟ| Read More »

ಉಪ್ಪಿನಂಗಡಿ: ಬೈಕ್ ಕದ್ದು ಪರಾರಿಯಾಗುತ್ತಿದ್ದಾಗ ಲಾರಿ ಢಿಕ್ಕಿ – ಸವಾರರರಿಬ್ಬರು ಗಂಭೀರ

ಉಪ್ಪಿನಂಗಡಿ: ಗಾಂಧಿಪಾರ್ಕ್ ಬಳಿಯ ಜೈನ ಬಸದಿ ಸಮೀಪದ ಮನೆಯೊಂದರಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ನಕಲಿ ಕೀ ಬಳಸಿ ಕಳವುಗೈದು ತೆರಳುತ್ತಿದ್ದಾಗ ಅಪಘಾತವಾದ ಘಟನೆ ನಡೆದಿದೆ. ಬೈಕನ್ನು ಹಿರೇಬಂಡಾಡಿ ಗ್ರಾಮದ ಕೊಳ್ಳೇಜಾಲ್ ‌ನಿವಾಸಿ ಮುಹಮ್ಮದ್ ಎಂಬವರದು. ಇವರು ಬೈಕ್ ಕಾಲವಾದವಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ಕೂಡಾ ದಾಖಲಿಸಿದ್ದರು. ಆದರೆ ಅಪರಿಚಿತ ಕಳ್ಳರು ಬೈಕ್ ಕದ್ದೊಯ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ಶಿರಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಉಪ್ಪಿನಂಗಡಿ: ಬೈಕ್ ಕದ್ದು ಪರಾರಿಯಾಗುತ್ತಿದ್ದಾಗ ಲಾರಿ ಢಿಕ್ಕಿ – ಸವಾರರರಿಬ್ಬರು ಗಂಭೀರ Read More »

ವಿದ್ಯಾರ್ಥಿನಿಯ ಫೋಟೋ ಜೊತೆಗೆ ಅನ್ಯಧರ್ಮೀಯನ ಫೋಟೋ ಎಡಿಟ್| ದೂರು ದಾಖಲು

ಮಂಗಳೂರು: ನಗರದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯು ತ್ತಿರುವ ವಿದ್ಯಾರ್ಥಿನಿಯ ಫೋಟೋವೊಂದನ್ನು ಅನ್ಯ ಧರ್ಮೀಯ ಯುವಕನ ಜತೆ ಸಂಬಂಧ ಇದೆ ಎಂದು ಆರೋಪಿಸಿ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಲಾಗಿದ್ದು, ಈ ಬಗ್ಗೆ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮೆಡಿಕಲ್‌ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್‌ ಓದುತ್ತಿರುವ ವಿದ್ಯಾರ್ಥಿನಿಯ ಫೋಟೋವನ್ನು ಆರೋಪಿ ಇನ್‌ ಸ್ಟಾಗ್ರಾಮ್‌ನಿಂದ ಡೌನ್‌ಲೊಡ್‌ ಮಾಡಿಕೊಂಡು ಬಳಿಕ ಇನ್ನೋರ್ವ ಯುವಕನ ಫೋಟೋದ ಜತೆ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾನೆ.

ವಿದ್ಯಾರ್ಥಿನಿಯ ಫೋಟೋ ಜೊತೆಗೆ ಅನ್ಯಧರ್ಮೀಯನ ಫೋಟೋ ಎಡಿಟ್| ದೂರು ದಾಖಲು Read More »

ರಿಕ್ಷಾದಲ್ಲಿ‌ ಬಿಟ್ಟು ಹೋಗಿದ್ದ ಮನೆಯ ಕೀ ತೆಗೆದು ದರೋಡೆ| ಪರಿಚಿತರಿಂದಲೇ ಕಳವುಗೈದ ಶಂಕೆ| ದೂರು‌ ದಾಖಲು|

ಬೆಳ್ತಂಗಡಿ: ಆಟೋ ರಿಕ್ಷಾ ಚಾಲಕರೊಬ್ಬರು ತನ್ನ ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕದ್ದೊಯ್ದ ಕಳ್ಳರು ಚಾಲಕನ ಮನೆಗೆ ನುಗ್ಗಿ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಿನ್ನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಬಲಿಪಗುಡ್ಡೆ ನಿವಾಸಿ ಅಶೋಕ್ ಎಂಬವರ ಮನೆಯಲ್ಲಿ ಈ ಕೃತ್ಯ‌ ನಡೆದಿದೆ. ಅಶೋಕ್ ರಿಕ್ಷಾವನ್ನು ಕೊಕ್ಕಡದಲ್ಲಿ ನಿಲ್ಲಿಸಿ ಪುತ್ತೂರಿಗೆ ತೆರಳಿದ್ದರು. ಈ ವೇಳೆ ಮನೆಯ ಬೀಗದ ಕೈಯನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದರೆನ್ನಲಾಗಿದೆ. ಅವರು ಪುತ್ತೂರಿನಿಂದ ಹಿಂದಿರುಗಿ ಬಂದು ನೋಡಿದಾಗ

ರಿಕ್ಷಾದಲ್ಲಿ‌ ಬಿಟ್ಟು ಹೋಗಿದ್ದ ಮನೆಯ ಕೀ ತೆಗೆದು ದರೋಡೆ| ಪರಿಚಿತರಿಂದಲೇ ಕಳವುಗೈದ ಶಂಕೆ| ದೂರು‌ ದಾಖಲು| Read More »

ಧರ್ಮಸ್ಥಳ: ಇಂದು ಮೋದಿ ದೀರ್ಘಾಯುಷ್ಯಕ್ಕಾಗಿ ಮಹಾಮೃತ್ಯುಂಜಯ ಯಾಗ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಿ ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯುತ್ತಿದೆ. ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಮಂದಿ ಪುರೋಹಿತರಿಂದ ಧರ್ಮಸ್ಥಳ ದೇಗುಲದ ಆವರಣದಲ್ಲಿ ಏಳು ಹೋಮಕುಂಡಗಳಲ್ಲಿ ಹೋಮ ನಡೆಯುತ್ತಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ

ಧರ್ಮಸ್ಥಳ: ಇಂದು ಮೋದಿ ದೀರ್ಘಾಯುಷ್ಯಕ್ಕಾಗಿ ಮಹಾಮೃತ್ಯುಂಜಯ ಯಾಗ Read More »

ಉಡುಪಿ: ಶಬರಿಮಲೆಗೆ ತೆರಳಿದ್ದ ವೃತಧಾರಿ ಸ್ವಾಮಿಪಾದಕ್ಕೆ..!

ಉಡುಪಿ: ಜಿಲ್ಲೆಯಿಂದ ಶಬರಿಮಲೆ ಸನ್ನಿಧಾನಕ್ಕೆ ತೆರಳಿದ್ದ ಮಾಲಾಧಾರಿಯೋರ್ವರು ಬೆಟ್ಟ ಹತ್ತುವಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ. ಸುರೇಶ್ ಬಂಗೇರ ( 52) ಹೃದಯಾಘಾತದಿಂದ ಸಾವಿಗೀಡಾದ ಮಾಲಾಧಾರಿ. ಜಿಲ್ಲೆಯ ಉದ್ಯಾವರದ ಈ ಮಾಲಾಧಾರಿ ಇಲ್ಲಿಯ ಅಯ್ಯಪ್ಪ ಮಂದಿರದಿಂದ 32 ಸ್ವಾಮಿಗಳ ಜೊತೆ ಇರುಮುಡಿ ಕಟ್ಟಿ ನಿನ್ನೆ‌ ರೈಲು ಮಾರ್ಗದ ಮೂಲಕ ಶಬರಿ ತಲುಪಿದ್ದರು. ಇಂದು ದೇವರ ದರ್ಶನಕ್ಕೆ ಬೆಟ್ಟ ಹತ್ತಿ ಹೊರಟ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ರಿಕ್ಷಾ ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಮಾಲಾಧಾರಿ ಸುರೇಶ್ ಕುಟುಂಬದಲ್ಲಿ ಆಕ್ರಂದನ

ಉಡುಪಿ: ಶಬರಿಮಲೆಗೆ ತೆರಳಿದ್ದ ವೃತಧಾರಿ ಸ್ವಾಮಿಪಾದಕ್ಕೆ..! Read More »