ಕರಾವಳಿ

ಕುಕ್ಕೆ: ಕೋವಿಡ್ ಮಾರ್ಗಸೂಚಿ ಹಿನ್ನೆಲೆ| ಜ.6ರಿಂದ ಎಲ್ಲಾ ಸೇವೆಗಳು ರದ್ದು, ದರ್ಶನಕ್ಕಷ್ಟೇ ಅವಕಾಶ|

ಕುಕ್ಕೆಸುಬ್ರಹ್ಮಣ್ಯ: ರಾಜ್ಯದಲ್ಲಿ ಮತ್ತೆ ಕೋವಿಡ್ ವೈರಸ್​ ತಲ್ಲಣ ಮೂಡಿಸಿದೆ. ಈ ಹಿನ್ನೆಲೆ​ ಸರ್ಕಾರದಿಂದ ಕೋವಿಡ್​ ಮಾರ್ಗಸೂಚಿ ಬಿಡುಗಡೆಯಾದ ಬೆನ್ನಲ್ಲೇ ನಾಳೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸೇವೆಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಕೋವಿಡ್​​ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಆದೇಶದಂತೆ ಜ.6 ರಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳಿಗಾಗಿ ಯಾವುದೇ ಪೂಜಾ ಸೇವೆಗಳನ್ನು ನಡೆಸಲ್ಪಡುವುದಿಲ್ಲ ಎಂದು ದೇಗುಲದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳು ರದ್ದು […]

ಕುಕ್ಕೆ: ಕೋವಿಡ್ ಮಾರ್ಗಸೂಚಿ ಹಿನ್ನೆಲೆ| ಜ.6ರಿಂದ ಎಲ್ಲಾ ಸೇವೆಗಳು ರದ್ದು, ದರ್ಶನಕ್ಕಷ್ಟೇ ಅವಕಾಶ| Read More »

ಪುತ್ತೂರು: ಕ್ರಿಸ್ಮಸ್ ಗೋದಲಿ ಸ್ಫರ್ದೆಯ ಫಲಿತಾಂಶ ಪ್ರಕಟ

ಪುತ್ತೂರು : ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಇದರ ಫಲಿತಾಂಶ ಪ್ರಕಟಗೊಂಡಿದೆ. ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನ, ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು. ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನ ವಿತರಿಸಲಾಯಿತು.

ಪುತ್ತೂರು: ಕ್ರಿಸ್ಮಸ್ ಗೋದಲಿ ಸ್ಫರ್ದೆಯ ಫಲಿತಾಂಶ ಪ್ರಕಟ Read More »

ಉಪ್ಪಿನಂಗಡಿ ಲಾಠಿಚಾರ್ಜ್ ಪ್ರಕರಣ| ಬಂಧಿತ 10 ಮಂದಿಗೆ ಜಾಮೀನು|

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದಿದ್ದ ಪ್ರತಿಭಟನೆ ಮತ್ತು ಲಾಠಿಚಾರ್ಜ್ ವೇಳೆ ದಾಖಲಾದ ಕೇಸ್ ಗಳಲ್ಲಿ ಬಂಧಿತರಾದ 10 ಮಂದಿ ಆರೋಪಿಗಳಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್ ಜಾಮೀನು ನೀಡಿದೆ. ಮೊಹಮ್ಮದ್ ತ್ವಾಹಿರ್, ಸಾಧಿಕ್, ಅಬ್ದುಲ್ ಮುಬಾರಕ್, ಅಬ್ದುಲ್, ಮೊಹಮ್ಮದ್ ಜಾಹಿದ್, ಸ್ವಾಜೀರ್ ಮೊಹಮ್ಮದ್ ಫೈಝಲ್, ಮೊಹಮ್ಮದ್ ಹನೀಫ್, ಎನ್. ಕಾಸಿಂ, ಮೊಹಮ್ಮದ್ ಆಶೀಫ್, ತೌಫೀಲ್ ಮೊಹಮ್ಮದ್, ಜಾಮೀನು ಪಡೆದುಕೊಂಡವರು. ಡಿಸೆಂಬರ್ 14ರಂದು ಉಪ್ಪಿನಂಗಡಿ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾ ನಿರತರ

ಉಪ್ಪಿನಂಗಡಿ ಲಾಠಿಚಾರ್ಜ್ ಪ್ರಕರಣ| ಬಂಧಿತ 10 ಮಂದಿಗೆ ಜಾಮೀನು| Read More »

ಕಾನೂನು ಪ್ರಾಧಿಕಾರ ಮಧ್ಯಸ್ಥಿಕೆ| ಮತ್ತೆ ಒಂದಾದ ಸತಿ-ಪತಿಗಳು|

ಮಂಗಳೂರು: ಕೌಟುಂಬಿಕ ಕಲಹಗಳಿಂದಾಗಿ ಮನನೊಂದು ಬೇರ್ಪಟ್ಟಿದ್ದ ಸತಿ-ಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಒಂದಾದ ಘಟನೆ ಮಂಗಳವಾರ ನಡೆದಿದೆ. ಕೌಟುಂಬಿಕ ಜೀವನದಲ್ಲಿ ಕಂಡುಬಂದ ಹಲವಾರು ಸಮಸ್ಯೆಗಳಿಂದ ಮನನೊಂದಿದ್ದ ನಾರಾಯಣ್‌ (48) (ಹೆಸರು ಬದಲಾಯಿಸಲಾಗಿದೆ) ಮತ್ತು ಸರಳಾ (46) (ಹೆಸರು ಬದಲಾಯಿಸಲಾಗಿದೆ) ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಸಂಸಾರದ ಜವಾಬ್ದಾರಿ, ಅದರ ಮಹತ್ವಗಳನ್ನು ಅರಿತುಕೊಂಡು ಸತಿ-ಪತಿಯ ಮನಪರಿವರ್ತನೆಯಾಗಿ ಪುನಃ ಒಂದಾಗಿದ್ದಾರೆ. ಕೌಟುಂಬಿಕ ಕಲಹಗಳಿಂದಾಗಿ ಮನ ನೊಂದು ಬೇರೆಯಾಗಲು ನಿರ್ಧರಿಸಿದ್ದರು. ನಾರಾಯಣ್‌ ಬಿ.ಫಾರ್ಮ್

ಕಾನೂನು ಪ್ರಾಧಿಕಾರ ಮಧ್ಯಸ್ಥಿಕೆ| ಮತ್ತೆ ಒಂದಾದ ಸತಿ-ಪತಿಗಳು| Read More »

ವಿಟ್ಲದ ಯುವಕ ಬೆಂಗಳೂರಿನಲ್ಲಿ ಸಾವು

ವಿಟ್ಲ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ಅವರು ಜ.5 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪ್ರದೀಪ್ ಅವರು ಪುಣಚ ನಿವಾಸಿಯಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪೂರೈಸಿ, ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

ವಿಟ್ಲದ ಯುವಕ ಬೆಂಗಳೂರಿನಲ್ಲಿ ಸಾವು Read More »

ಸುಳ್ಯ: ಚಿಲ್ಲರೆಗಾಗಿ‌ ನಿರ್ವಾಹಕನಿಗೆ ಹಲ್ಲೆಗೈದ ಪ್ರಯಾಣಿಕ| ದೂರು ದಾಖಲು

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ಚಿಲ್ಲರೆ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ಪ್ರಯಾಣಿಕನೋರ್ವ ಕಂಡಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್ ಗೆ ಐವರ್ನಾಡು ಎಂಬಲ್ಲಿ ಪುರುಷೋತ್ತಮ ಎಂಬವರು ಹತ್ತಿ, ಟಿಕೆಟ್ ಶುಲ್ಕವಾಗಿ ನೂರು ರೂಪಾಯಿಯನ್ನು ಕಂಡಕ್ಟರ್ ಗೆ ನೀಡಿದ್ದರು. ಬಳಿಕ ಟಿಕೆಟ್ ಹಿಂದೆ 90 ರೂ. ಎಂದು ಬರೆದು ನಂತರ ಹಿಂತಿರುಗಿಸುವುದಾಗಿ ತಿಳಿಸಿದ್ದರು. ಬಸ್ ಬೆಳ್ಳಾರೆ ತಲುಪಿದಾಗ ಕಂಡಕ್ಟರ್ ಬಳಿ ಪುರುಷೋತ್ತಮ್ ಅವರು

ಸುಳ್ಯ: ಚಿಲ್ಲರೆಗಾಗಿ‌ ನಿರ್ವಾಹಕನಿಗೆ ಹಲ್ಲೆಗೈದ ಪ್ರಯಾಣಿಕ| ದೂರು ದಾಖಲು Read More »

ಉಪ್ಪಿನಂಗಡಿ ಗಲಭೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಹಿಂದೂ ಮುಖಂಡರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಇಬ್ಬರು ಎಸ್.ಡಿ.ಪಿ.ಐ ನಾಯಕರಿಗೆ ಜಾಮೀನು ಮಂಜೂರಾಗಿದೆ. ಡಿ.6 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಕ್ರಾಸ್ ನ ಅಶೋಕ್ ಶೆಟ್ಟಿ ಮಾಲಕತ್ವದ ಹಸಿ ಮೀನು ಮಾರುಕಟ್ಟೆಗೆ ಆರು ಜನರ ತಂಡ ಬೈಕ್ ನಲ್ಲಿ ಬಂದು ತಲವಾರು ದಾಳಿ ಮಾಡಿದೆ. ಅಂಗಡಿಯಲ್ಲಿದ್ದ ಅಶೋಕ್ ಶೆಟ್ಟಿ ಮೋಹನ್ ದಾಸ್ ಶೆಟ್ಟಿ ಮತ್ತು ಮಹೇಶ್ ಎಂಬ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ತಲವಾರು ದಾಳಿ

ಉಪ್ಪಿನಂಗಡಿ ಗಲಭೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು Read More »

ವಿಟ್ಲ: ನೇಣುಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ವಿಟ್ಲ: 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ: ನೇಣುಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು Read More »

ಆಡಿನ ಮರಿಯ ರಕ್ಷಣೆಗೆಂದು ತೆರಳಿದವನ ಪ್ರಾಣ ಕಸಿದ ರೈಲು| ಏಕೈಕ ಪುತ್ರನ ಕಳೆದುಕೊಂಡ ಕುಟುಂಬ ಅನಾಥ|

ಮಂಗಳೂರು: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ ರೈಲಿನ ಶಬ್ದವಾಗುತ್ತಿತ್ತು. ಆದರೆ ಹಳಿಯಲ್ಲಿ ಮರಿಯ ಕಾಲು ಸಿಲುಕಿ ಒದ್ದಾಡುತ್ತಿತ್ತು. ಅಲ್ಲಿಂದಲೇ ಹೋಗುತ್ತಿದ್ದ 21 ವರ್ಷದ ಜೋಕಟ್ಟೆ ಯುವಕ ಚೇತನ್ ಇದನ್ನು ನೋಡಿದ್ದಾನೆ. ಅವನಿಗೆ ಆಡಿನ ಮರಿಯ ಮೇಲೆ ಕನಿಕರ ಹುಟ್ಟಿದೆ. ಅದನ್ನು ಕಾಪಾಡಲು ಹೋಗಿದ್ದಾನೆ. ಅದನ್ನು ರಕ್ಷಿಸುತ್ತಿರುವಾಗಲೇ ರೈಲು ಬಂದುಬಿಟ್ಟಿದೆ. ಚೇತನ್‌

ಆಡಿನ ಮರಿಯ ರಕ್ಷಣೆಗೆಂದು ತೆರಳಿದವನ ಪ್ರಾಣ ಕಸಿದ ರೈಲು| ಏಕೈಕ ಪುತ್ರನ ಕಳೆದುಕೊಂಡ ಕುಟುಂಬ ಅನಾಥ| Read More »

ಸುಳ್ಯ: ಅಬಕಾರಿ ಇಲಾಖೆಯ ಭರ್ಜರಿ ಬೇಟೆ| 11.5 ಕೆ.ಜಿ ಗಾಂಜಾ ಪತ್ತೆ, ಆರೋಪಿಗಳು‌ ವಶಕ್ಕೆ|

ಮಂಗಳೂರು: ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಸಾಗಾಟ‌ ಮತ್ತು ವ್ಯಸನ ಜಾಸ್ತಿಯಾಗುತ್ತಿದ್ದು ಇಂದು ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಳ್ಯ ನಗರದ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ ಮೊಯಿದ್ದೀನ್ ಕುಂಞಿ ಎಂಬವರು ಕೊಠಡಿ ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರು. ಇಲ್ಲಿ ಗಾಂಜಾ ಸಂಗ್ರಹಿಸಿ‌ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ

ಸುಳ್ಯ: ಅಬಕಾರಿ ಇಲಾಖೆಯ ಭರ್ಜರಿ ಬೇಟೆ| 11.5 ಕೆ.ಜಿ ಗಾಂಜಾ ಪತ್ತೆ, ಆರೋಪಿಗಳು‌ ವಶಕ್ಕೆ| Read More »