ಕರಾವಳಿ

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಳ್ಯ : ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಬಾವಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಜ. 2 ರಂದು ನಡೆದಿದೆ . ಮೃತ ದೇಹವು ಬಾಂಜಿಕೋಡಿ ನಿವಾಸಿ ದಿವಂಗತ ಮಾಧವ ರವರ ಪುತ್ರ ಅರುಣ್ ಕುಮಾರ್ ಬಾಂಜಿಕೋಡಿಯವರದ್ದೆಂದು ಗುರುತಿಸಲಾಗಿದೆ. ಇವರು ಡಿ .31 ರಿಂದ ಮನೆಯಿಂದ ಕಾಣೆಯಾಗಿದ್ದು ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕುಟುಂಬಸ್ಥರಿಗೆ ಕಂಡು ಬಂದಿದೆ. ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ […]

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ. ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ Read More »

ಬಂಟ್ವಾಳ: ರಸ್ತೆ ಬದಿ ಕೊಳೆಯುತ್ತಿದೆ ರಾಶಿ ರಾಶಿ ತ್ಯಾಜ್ಯ| ದುರ್ಗಂಧ, ಗಬ್ಬು ವಾಸನೆಯ ತಾಣವಾಗ್ತಿದೆ ಈ ಊರು| ಇದಕ್ಕೆ ಯಾರು ಹೊಣೆ?

ಬಂಟ್ವಾಳ: ಇಲ್ಲಿನ ಚರ್ಚ್ ಬಳಿ ತ್ಯಾಜ್ಯಗಳ ರಾಶಿಯಿಂದ ಗಬ್ಬು ವಾಸನೆ ಬರುತ್ತಿದ್ದು ಸಾರ್ವಜನಿಕರು ಸಂಚರಿಸುವುದಕ್ಕೆ ತೊಂದರೆಯುಂಟಾಗಿದೆ. ಗೋಳ್ತಮಜಲು ಗ್ರಾಮ ಪಂಚಾಯ್ತ ವ್ಯಾಪ್ತಿಯ ಅಮ್ಟೂರು ಚರ್ಚ್ ಬಳಿ ಸಾರ್ವಜನಿಕರು ಸಂಚಾರಿಸುವ ರಸ್ತೆ ಬದಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಎಸೆದಿದ್ದು ಇಲ್ಲಿನ ಪ್ರದೇಶ ಗಬ್ಬು ವಾಸನೆಯಿಂದ ಬರುತ್ತಿದೆ. ಕಸದ ಬುಟ್ಟಿ ಸೇರಬೇಕಾದ ಗಲೀಜು ವಸ್ತುಗಳು ಸೇರಿದಂತೆ ಎಲ್ಲವನ್ನು ರಸ್ತೆ ಬದಿಯಲ್ಲಿ ಎಸೆಯಲ್ಪಟ್ಟಿದ್ದು ಸಾರ್ವಜನಿಕರು ಈ ರಸ್ತೆಯಲ್ಲಿ ಸಂಚರಿಸುವುದಕ್ಕೆ ಬಹಳ ಹಿಂಜರಿಯುವಂತೆ ಮಾಡಿದೆ. ಇನ್ನೂ ದೇಶದೆಲ್ಲೆಡೆ ಸ್ವಚ್ಚಭಾರತ ಮಂತ್ರ ಪಠಿಸುತ್ತಿದ್ದರೆ ಗೋಳ್ತಮಜಲು ಗ್ರಾಮ

ಬಂಟ್ವಾಳ: ರಸ್ತೆ ಬದಿ ಕೊಳೆಯುತ್ತಿದೆ ರಾಶಿ ರಾಶಿ ತ್ಯಾಜ್ಯ| ದುರ್ಗಂಧ, ಗಬ್ಬು ವಾಸನೆಯ ತಾಣವಾಗ್ತಿದೆ ಈ ಊರು| ಇದಕ್ಕೆ ಯಾರು ಹೊಣೆ? Read More »

ಮಂಗಳೂರು : ಪಾದಚಾರಿಗೆ ಬಸ್ ಢಿಕ್ಕಿ -ದೇಹದ ಭಾಗಗಳು ರಸ್ತೆಯಲ್ಲೆ ಚೆಲ್ಲಾಪಿಲ್ಲಿ

ಮಂಗಳೂರು: ಖಾಸಗಿ‌ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಮೂಳೂರಿನಲ್ಲಿ ನಡೆದಿದೆ. ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65) ಎಂಬವರು ಮೃತ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬಸ್ ನಿಲ್ದಾಣ ದ ಬಳಿ ರಸ್ತೆ ದಾಟುತ್ತಿದ್ದಗ ಅವರಿಗೆ ಮಂಗಳೂರಿನಿಂದ ಉಡುಪಿ‌ ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಮೇಶ್ ಬಂಗೇರ ಅವರ

ಮಂಗಳೂರು : ಪಾದಚಾರಿಗೆ ಬಸ್ ಢಿಕ್ಕಿ -ದೇಹದ ಭಾಗಗಳು ರಸ್ತೆಯಲ್ಲೆ ಚೆಲ್ಲಾಪಿಲ್ಲಿ Read More »

ಪುತ್ತೂರು : ಬಹುನಿರೀಕ್ಷಿತ ಕಿರುಚಿತ್ರ ‘ಯುವ-2’ ವಿನ ಕಿರುದೃಶ್ಯ ಬಿಡುಗಡೆ| ನಟ ಪುನೀತ್ ರಾಜ್ ಕುಮಾರ್ ಗೆ ಅರ್ಪಣೆ ಮಾಡಿದ ಚಿತ್ರತಂಡ

ಪುತ್ತೂರು : ಬಹುನಿರೀಕ್ಷಿತ ಕಿರುಚಿತ್ರ ‘ಯುವ-2’ ಅನ್ನು ನಿರ್ಮಿಸುತ್ತಿರುವ ಪುತ್ತೂರಿನ ತಂಡವು ಹೊಸವರ್ಷದ ಪ್ರಯುಕ್ತ ಈ ಚಿತ್ರದ ಒಂದು ಕಿರುದೃಶ್ಯವನ್ನು Firstfly creations ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದೆ. ಕರ್ನಾಟಕದ ಕಿರುಚಿತ್ರ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಕಥಾಹಂದರದ ಮೂಲಕ ಹೊಸ ದಾಖಲೆ ನಿರ್ಮಿಸುವತ್ತ ಪುತ್ತೂರಿನ ಈ ತಂಡ ಮುನ್ನಡೆಯುತ್ತಿದೆ. ಯುವ-2 ಈಗಾಗಲೇ ಚಿತ್ರೀಕರಣ ಹಂತದಲ್ಲಿದ್ದು, ಇನ್ನು ಕೆಲವು ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ. ಕನ್ನಡ ಚಿತ್ರರಂಗದ ಅನುಭವಿ ಕಲಾವಿದರನ್ನು ಒಳಗೊಂಡಿರುವ ಈ ತಂಡವು

ಪುತ್ತೂರು : ಬಹುನಿರೀಕ್ಷಿತ ಕಿರುಚಿತ್ರ ‘ಯುವ-2’ ವಿನ ಕಿರುದೃಶ್ಯ ಬಿಡುಗಡೆ| ನಟ ಪುನೀತ್ ರಾಜ್ ಕುಮಾರ್ ಗೆ ಅರ್ಪಣೆ ಮಾಡಿದ ಚಿತ್ರತಂಡ Read More »

ಮಂಗಳೂರು:ಸತ್ಯಕ್ಷೇತ್ರಗಳ ಅಪವಿತ್ರಗೊಳಿಸಿದ ದೇಸಾಯಿಗೆ ಶ್ರದ್ಧಾಂಜಲಿ ‌ಬ್ಯಾನರ್ ಅಳವಡಿಸಿದ ಭಜರಂಗದಳ

ಮಂಗಳೂರು: ದೈವ ದೇವಸ್ಥಾನ ಹಾಗೂ ಮಸೀದಿಗಳ ಕಾಣಿಕೆ ಹುಂಡಿಯಲ್ಲಿ ವಿಕೃತಿ ಮೆರೆದ ಆರೋಪಿಯ ಭಾವಚಿತ್ರ ಹಾಕಿ ಬಜರಂಗದಳದ ಶಾಖೆ ಯವರಿಂದ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರು ಹೊರವಲಯದ ಬೀರಿ ಜಂಕ್ಷನ್ ನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ. ಅದೇ ರೀತಿ ದೇವದಾಸ್ ದೇಸಾಯಿ ಹೆಸರನ್ನು ಡೇವಿಡ್ ದೇಸಾಯಿ ಎಂದು ಬ್ಯಾನರ್ ನಲ್ಲಿ ಬಜರಂಗದಳದವರು ಬರೆಸಿದ್ದಾರೆ. ಮಂಗಳೂರು ನಗರದ ಸುಮಾರು 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ ಆರೋಪಿ ದೇವದಾಸ್ ಕ್ರಿಶ್ಚಿಯನ್ ಧರ್ಮದ ಅನುಯಾಯಿ ಆಗಿದ್ದರು ಎಂದು ತಿಳಿದುಬಂದಿದೆ.

ಮಂಗಳೂರು:ಸತ್ಯಕ್ಷೇತ್ರಗಳ ಅಪವಿತ್ರಗೊಳಿಸಿದ ದೇಸಾಯಿಗೆ ಶ್ರದ್ಧಾಂಜಲಿ ‌ಬ್ಯಾನರ್ ಅಳವಡಿಸಿದ ಭಜರಂಗದಳ Read More »

ನಂದಿನಿ ಹಾಲಿನ ಪ್ಯಾಕೆಟ್ ನಲ್ಲಿ ಪುನೀತ್ ಬಾವಚಿತ್ರ| ಬ್ರಾಂಡ್ ಅಂಬಾಸಿಡರ್ ಗೆ ಗೌರವ ಸಲ್ಲಿಸಿದ ಕೆಎಂಎಪ್

ಬೆಂಗಳೂರು : ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ.ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್​ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು

ನಂದಿನಿ ಹಾಲಿನ ಪ್ಯಾಕೆಟ್ ನಲ್ಲಿ ಪುನೀತ್ ಬಾವಚಿತ್ರ| ಬ್ರಾಂಡ್ ಅಂಬಾಸಿಡರ್ ಗೆ ಗೌರವ ಸಲ್ಲಿಸಿದ ಕೆಎಂಎಪ್ Read More »

ಕುಂದಾಪುರ: “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ”| ಹಾಗಿದ್ರೆ ಡೆತ್ ನೋಟ್ ನಲ್ಲಿ ಏನಿದೆ?

ಕುಂದಾಪುರ: ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಈತ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ವಿಘ್ನೇಶ್ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ

ಕುಂದಾಪುರ: “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ”| ಹಾಗಿದ್ರೆ ಡೆತ್ ನೋಟ್ ನಲ್ಲಿ ಏನಿದೆ? Read More »

ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದಾತನಿಗೆ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್ ವ್ಯಕ್ತಿ

ಮಂಗಳೂರು : ದಕ್ಷಿಣಕನ್ನಡ ಹೆಸರಾಂತ ಹಾಗೂ ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ. ಕೊರಗಜ್ಜ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದ ಆರೋಪದ ಮೇಲೆ ಮಿತ್ರನಗರ ನಿವಾಸಿ ದೇವದಾಸ್ ದೇಸಾಯಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಆ ಆರೋಪಿ ವಿರುದ್ಧ ರೋಶನ್ ಡಿಸೋಜ ಎಂಬವರು ಆಕ್ರೋಶ ವ್ಯಕಪಡಿಸಿದ್ದಾರೆ. ಮಂಗಳೂರು ನಗರದ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ್ದ ಆರೋಪಿ ದೇವದಾಸ್,

ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದಾತನಿಗೆ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್ ವ್ಯಕ್ತಿ Read More »

ಸುಳ್ಯ: ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬೈ ಹುಲ್ಲು ಲಾರಿ

ಸುಳ್ಯ: ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶಿಸಿ ಬೈ ಹುಲ್ಲು ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಜಾಲ್ಸೂರು-ಸುಬ್ರಹ್ಮಣ್ಯ ರಸ್ತೆಯ ಕಂದಡ್ಕ ಎಂಬಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದ್ದು, ಲಾರಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಪಾರ ನಷ್ಟವಾಗಿದೆ.

ಸುಳ್ಯ: ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬೈ ಹುಲ್ಲು ಲಾರಿ Read More »