ಕರಾವಳಿ

ಬಳ್ಪ: ಆದರ್ಶ ಗ್ರಾಮದ ಬೋಗಾಯನ ಕೆರೆ ಅಭಿವೃದ್ಧಿಗೆ ಕೂಡಿ ಬಂತು ಕಾಲ !

ರೂ. 2 ಕೋಟಿ ಅನುದಾನ ಬಿಡುಗಡೆ | ಇಲ್ಲಿದೆ ಬರಪೂರ ಜಲಮೂಲ ಸುಬ್ರಹ್ಮಣ್ಯ: ಕಡಬ ತಾಲೂಕಿನ ಸಂಸದರ ಆದರ್ಶ ಗ್ರಾಮದ ಬಳ್ಪದ ಐತಿಹಾಸಿಕ ಬೋಗಾಯನ ಕೆರೆ ಅಭಿವೃದ್ಧಿಗೆ ಕೊನೆಗೂ ಅಭಿವೃದ್ಧಿ ಭಾಗ್ಯ ಒದಗಿ ಬಂದಿದೆ. 1.40 ಎಕ್ರೆಯ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 2 ಕೋಟಿ ಅನುದಾನ ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಐತಿಹಾಸಿಕ ಕೆರೆ;ಬಳ್ಪದ ಬೋಗಾಯನ ಕೆರೆ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಕದಂಬರ ತುಂಡರಸ ಬೋಗರಾಯವರ್ಮ ಕಡಬ ಪ್ರದೇಶವನ್ನು ಆಳುತ್ತಿದ್ದ ಕಾಲದಲ್ಲಿ […]

ಬಳ್ಪ: ಆದರ್ಶ ಗ್ರಾಮದ ಬೋಗಾಯನ ಕೆರೆ ಅಭಿವೃದ್ಧಿಗೆ ಕೂಡಿ ಬಂತು ಕಾಲ ! Read More »

ಮಂಗಳೂರು: ಉದ್ಯಮಿಗೆ ಹಣ ಬೇಡಿಕೆ ಇಟ್ಟು ಜೀವ ಬೆದರಿಕೆ| ಇಬ್ಬರು ರೌಡಿಶೀಟರ್ ಗಳು ಅಂದರ್

ಮಂಗಳೂರು: ಉದ್ಯಮಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟು, ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಇಬ್ಬರು ರೌಡಿ ಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲಂದರ್ ಶರೀಫ್ ಮತ್ತು ಹಸನಬ್ಬ ಎಂದು ಗುರುತಿಸಲಾಗಿದೆ. ಶರೀಫ್ ಮತ್ತು ಹಸನಬ್ಬ ಪುತ್ತೂರಿನ ಉದ್ಯಮಿಗೆ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ ಅವನನ್ನು ಬಿಡಿಸಲು 13,00,000 ತಗಲುತ್ತದೆ. ಅವನನ್ನು ಬಿಡಿಸಲು ನೀನು ಹಣ ಕೊಡಬೇಕು. ಎರಡು ದಿನಗಳೊಳಗೆ 3,50,000 ಹಣ ರೆಡಿ ಮಾಡಬೇಕು.

ಮಂಗಳೂರು: ಉದ್ಯಮಿಗೆ ಹಣ ಬೇಡಿಕೆ ಇಟ್ಟು ಜೀವ ಬೆದರಿಕೆ| ಇಬ್ಬರು ರೌಡಿಶೀಟರ್ ಗಳು ಅಂದರ್ Read More »

ಮಂಗಳೂರು: ಪಿಕಪ್ ಢಿಕ್ಕಿಯಾಗಿ ವೃದ್ದ ಸಾವು

ಮಂಗಳೂರು: ನಗರದ ಶಕ್ತಿನಗರದ ಕಕ್ಕೆಬೆಟ್ಟು ಎಂಬಲ್ಲಿ ಶನಿವಾರ ಪಿಕಪ್ ಲಾರಿಯೊಂದು ಢಿಕ್ಕಿಯಾಗಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿ ನಿವಾಸಿ ಕೊರಗಪ್ಪ (85) ಎಂದು ಗುರುತಿಸಲಾಗಿದೆ. ನೆಲದ ಹೆಂಚುಗಳನ್ನು ತುಂಬಿದ್ದ ಪಿಕಪ್ ಹಿಮ್ಮುಖ ತಿರುವು ತೆಗೆದುಕೊಳ್ಳುತ್ತಿದ್ದಾಗ ಟ್ರಕ್‌ನ ಹಿಂದೆ ನಿಂತಿದ್ದ ಕೊರಗಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಕೊರಗಪ್ಪನವರ ತಲೆಯ ಭಾಗಕ್ಕೆ ಗಾಯಗವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಪಿಕಪ್ ಢಿಕ್ಕಿಯಾಗಿ ವೃದ್ದ ಸಾವು Read More »

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್

ಕಡಬ: ಬಾಲಕಿಗೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ. 28 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್ Read More »

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

ಸುಬ್ರಹ್ಮಣ್ಯ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಿರಂತರ ಆತ್ಯಾಚಾರಗೈದ ಹಾಗೂ ಆ ಕೃತ್ಯವನ್ನೂ ಮೊಬೈಲ್ ನಲ್ಲಿ ಚಿತ್ರಿಕರಿಸಿ ಬ್ಲ್ಯಾಕ್ಮೆಲ್ ಮಾಡಿ ಹಣ ವಸೂಲಿ ಮಾಡಿದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿಯ ಜಾಮೀನನ್ನು ರಾಜ್ಯ ಹೈ ಕೋರ್ಟು ರದ್ದು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ರಾಯಚೂರಿನ ಗುರುರಾಜ್ ಜಾಮೀನು ರದ್ದಾದ ಆರೋಪಿ. ಸದ್ಯ ಈತ ಬಂಧನ ಭೀತಿಯನ್ನು ಎದುರಿಸುತ್ತಿದ್ದಾನೆ. 2021ರ ಅ. 8 ರಂದು

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ Read More »

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ

ಪುತ್ತೂರು : ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಆತನನ್ನು ಗಡಿಪಾರು ಮಾಡಲು ಹಿಂಜಾವೇಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂಬಾತ ಪ್ರಕರಣದ ಆರೋಪಿ. ಕಸಬಾ ಆಶ್ರಯ ಕಾಲನಿಯ ಶ್ರೀಮತಿ ವಿನಯ ಎಂಬವರು ಚಂದ್ರಶೇಖರ ಎಂಬವರ ಜೊತೆ ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ ಗೆ ಪಡೆದುಕೊಂಡ, ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಬ್ದುಲ್ ಮುನಾಫ್

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ Read More »

ನೆಲ್ಯಾಡಿ: ಎಲ್ಐಸಿ ಪ್ರತಿನಿಧಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ನೆಲ್ಯಾಡಿ: ವ್ಯಕ್ತಿಯೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಎಲ್‌ಐಸಿ ಪ್ರತಿನಿಧಿ ಶಾಂತಪ್ಪ ಗೌಡ ಎಂದು ತಿಳಿದು ಬಂದಿದೆ. ವೈಯಕ್ತಿಕ ದ್ವೇಷ ಹಾಗೂ ಆಸ್ತಿ ವಿವಾದ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ನೆಲ್ಯಾಡಿ: ಎಲ್ಐಸಿ ಪ್ರತಿನಿಧಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್|

ಮಂಗಳೂರು : ನಗರದಲ್ಲಿ ಕಳ್ಳತನ ನಡೆದ 10 ನಿಮಿಷದಲ್ಲಿ ಪ್ರಕರಣದ ಆರೋಪಿಯನ್ನು ಮಂಗಳೂರಿನ ಪೊಲೀಸ್ ಓರ್ವರು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ಕಳ್ಳತನ ಮಾಡಿ ಓಡಿ ಹೋಗುತ್ತಿದ್ದ ಕಳ್ಳನನ್ನು ರಸ್ತೆಯಲ್ಲಿ ವಾಹನಗಳ ಮಧ್ಯೆಯೇ ಅಟ್ಟಿಸಿಕೊಂಡು ಹೋಗಿ ಹಿಡಿದಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಪೊಲೀಸ್ ಕಾರ್ಯಕ್ಕೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ. ಈ ನಡುವೆ ಪೊಲೀಸ್ ಅಧಿಕಾರಿ ಆರೋಪಿಯನ್ನು ವಿಚಾರಿಸಿದ ಭಾಷೆ ಬಗ್ಗೆ ಜನರಲ್ಲಿ ಪರ

ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್| Read More »

ಲೋನ್ ಆ್ಯಪ್ ಗಳ ಮೂಲಕ ಸಾಲ ಪಡೆಯಲು ಇಚ್ಛಿಸಿದ್ದೀರಾ? ಹಾಗಾದ್ರೆ ಮಂಗಳೂರು ಕಮಿಷನರ್ ನೀಡಿದ ಮಾಹಿತಿ ತಿಳಿದುಕೊಳ್ಳಿ

ಮಂಗಳೂರು: ಲೋನ್ ಆಯಪ್ ಮೂಲಕ ಸಾಲ ಪಡೆದು ಕಿರುಕುಳ ತಡೆಯಲಾರದೆ ಎರಡು ದಿನಗಳ ಹಿಂದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೀಗಾಗಿ, ಸಾರ್ವಜನಿಕರು ಲೋನ್ ಆ್ಯಪ್ ಇನ್ಸ್ಟಾಲ್ ಮಾಡುವಾಗ ಜಾಗ್ರತೆಯಿಂದ ಇರುವಂತೆ ಮಂಗಳೂರು ‌ನಗರ ಪೊಲೀಸ್ ಕಮೀಷನರ್ ಸಲಹೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಸುರತ್ಕಲ್​ನ ಕುಳಾಯಿಯಲ್ಲಿ ಯುವಕನೋರ್ವ ತನ್ನ ಕಚೇರಿಯಲ್ಲಿ ಬಾತ್ ಟವೆಲ್ ಮೂಲಕ ನೇಣು ಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬಗ್ಗೆ ವಿವರಿಸಿದರು. ಯುವಕ

ಲೋನ್ ಆ್ಯಪ್ ಗಳ ಮೂಲಕ ಸಾಲ ಪಡೆಯಲು ಇಚ್ಛಿಸಿದ್ದೀರಾ? ಹಾಗಾದ್ರೆ ಮಂಗಳೂರು ಕಮಿಷನರ್ ನೀಡಿದ ಮಾಹಿತಿ ತಿಳಿದುಕೊಳ್ಳಿ Read More »

ಚೆಕ್ ಬೌನ್ಸ್ ಪ್ರಕರಣ| ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ|

ಉಳ್ಳಾಲ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಕೊಣಾಜೆ ಠಾಣಾ ಪೊಲೀಸರು ಅವರು ತಲೆಮರೆಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿದ್ದಾರೆ. ಈಕೆ ಮಮತಾ ಶೈನಿ ಡಿಸೋಜ ಎಂಬುವರಿಗೆ ಅಂದಾಜು 3 ಲಕ್ಷ ರೂ. ಚೆಕ್ ನೀಡಿದ್ದು, ಇದು ಬೌನ್ಸ್ ಆಗಿದೆ. ಈ ಪ್ರಕರಣದಲ್ಲಿ ಚಂಚಲಾಕ್ಷಿ ಆರೋಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. 2020ರ ಜ.6 ರಂದು ಪ್ರಕರಣ ಸಂಬಂಧ ಕೇಸ್​​ ದಾಖಲಾಗಿತ್ತು. ಆ ಬಳಿಕ ನ್ಯಾಯಾಲಯದಲ್ಲಿ

ಚೆಕ್ ಬೌನ್ಸ್ ಪ್ರಕರಣ| ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ| Read More »