ಕರಾವಳಿ

ಹೊಸ ವರ್ಷಾಚರಣೆ ಹಿನ್ನಲೆ: ಅವಳಿ ಜಿಲ್ಲೆಗಳ ಬೀಚ್ ಗಳಿಗೆ ಸಂಜೆ ಪ್ರವೇಶ ನಿಷೇಧ

ಮಂಗಳೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್‌ ಸೇರಿದಂತೆ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಜನ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ.‌ ಆದರೆ […]

ಹೊಸ ವರ್ಷಾಚರಣೆ ಹಿನ್ನಲೆ: ಅವಳಿ ಜಿಲ್ಲೆಗಳ ಬೀಚ್ ಗಳಿಗೆ ಸಂಜೆ ಪ್ರವೇಶ ನಿಷೇಧ Read More »

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ|

ಸುಳ್ಯ: ಇಲ್ಲಿನ ಗೂನಡ್ಕದ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಆಡಳಿತ ಮಂಡಳಿಯ ಸದಸ್ಯನೋರ್ವ ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರನೆಯ ತರಗತಿಯ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಘಟನೆಯಿಂದ ಬಾಲಕನ ಬೆನ್ನು ಮತ್ತು ಕಾಲಿನ ಭಾಗಗಳಿಗೆ ಏಟಾಗಿದ್ದು, ಗಾಯಗಳು ಕಂಡುಬರುತ್ತಿದೆ. ವಿದ್ಯಾರ್ಥಿ ಶಾಲೆ ಬಿಟ್ಟು ಮನೆಗೆ ತೆರಳಿ ಬಟ್ಟೆ ಬದಲಿಸುವ ವೇಳೆ ಈ ಗಾಯದ ಗುರುತು ಕಾಣಿಸಿದ್ದು ವಿದ್ಯಾರ್ಥಿಯ ತಾಯಿ ಕೇಳಿದಾಗ ಮೊದಲು ಸತ್ಯವನ್ನು ಹೇಳಲು ಹಿಂಜರಿದಿದ್ದು, ಒತ್ತಾಯಿಸಿದಾಗ ಘಟನೆಯ

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ| Read More »

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು

ಕುಂದಾಪುರ: ಇಲ್ಲಿನ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಟಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್‌ಐ ಸಂತೋಷ್ ಬಿ.ಪಿ‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಈ‌ ಬಗ್ಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು‌ ಮಾಹಿತಿ ನೀಡಿದ್ದು, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್‌ಐ ಅವರನ್ನು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಯವರು ಅಮಾನತು ಮಾಡಿದ್ದಾರೆ

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು Read More »

ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್

ಮಂಗಳೂರು:: ಪತ್ರಕರ್ತರು ಬಳಸುವ ಭಾಷೆ ಶುದ್ಧ, ಸರಳವಾಗಿದ್ದಾಗ ವರದಿಗಳು ಜನ ಸಮುದಾಯವನ್ನು ಸುಲಭವಾಗಿ ತಲುಪಲು ಸಾಧ್ಯ. ಇದಕ್ಕೆ ತಿಳಿದುಕೊಳ್ಳುವ ಆಸಕ್ತಿ ಜತೆ ಅಧ್ಯಯನ ಶೀಲತೆ ಅತೀ ಅಗತ್ಯ ಎಂದು ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅಭಿಪ್ರಾಯಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದಜಿಲ್ಲಾ ಪತ್ರಕರ್ತರ ಸಮ್ಮೇಳನ‘ಸಾಧನೆ ಸಂಭ್ರಮ-2021’ ದ ಸರ್ವಾಧ್ಯಕ್ಷರಾಗಿ ಮಾತನಾಡಿದರು.ಭಾಷಾ ಶುದ್ದಿ, ಸರಳ ಭಾಷೆ ಬಗ್ಗೆ ಯುವ ಪತ್ರಕರ್ತರು ಗಮನ ಹರಿಸಬೇಕು ಎಂದು ಹೇಳಿದ ಅವರು ಸಂಘದ ನೇತೃತ್ವದಲ್ಲಿ ಭಾ಼ಷಾ

ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್ Read More »

ಕಡಬ: ಚೂರಿ ಇರಿತಕ್ಕೆ ವ್ಯಕ್ತಿ ಗಂಭೀರ, ಆರೋಪಿಯ ಬಂಧನ

ಕಡಬ: ಇಲ್ಲಿನ ಸಮೀಪದ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದ ವ್ಯಕ್ತಿ. ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ಬರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಚೂರಿ ಇರಿತಕ್ಕೆ ವ್ಯಕ್ತಿ ಗಂಭೀರ, ಆರೋಪಿಯ ಬಂಧನ Read More »

ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು|

ಕುಂದಾಪುರ: ಕೋಟ ತಟ್ಟು ಗ್ರಾಮದ ಕೊರಗ ಸಮುದಾಯದವರ ಮೆಹೆಂದಿ ಮನೆಗೆ ನುಗ್ಗಿ ಕೋಟ ಠಾಣೆಯ ಪೊಲೀಸರು ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಸೋಮವಾರ ಸಂಜೆ ಕೋಟ ತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದವರೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಡಿಜೆ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯರು 112 ಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಕೋಟ ಪೊಲೀಸರು ಸ್ಥಳಕ್ಕೆ ಹೋಗಿ ಕಾರ್ಯಕ್ರಮದಲ್ಲಿ ಇದ್ದವರಿಗೆ ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಮದುಮಗ

ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು| Read More »

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ|

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಗುಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ. ಮಂಗಳೂರಿನ ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ‌ಗುಡಿಯಲ್ಲಿ ಕಾಂಡೋಮ್ ಹಾಕಿರುವುದು ಇಂದು ಬೆಳಕಿಗೆ ಬಂದಿದೆ. ಕೊರಗಜ್ಜನ ಗುಡಿಯ ಕಲ್ಲಿನ ಮೂರ್ತಿ ಮೇಲೆ ದುಷ್ಕರ್ಮಿಗಳು ಉಪಯೋಗಿಸಿದ ಕಾಂಡೋಮ್ ಹಾಕಿದ್ದಾರೆ. ಈ ವಿಚಾರ ತಿಳಿದ ಭಕ್ತರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವರ್ಷದ ಜನವರಿ ಫೆಬ್ರವರಿ ತಿಂಗಳಿ‌ನಲ್ಲಿಯೂ ಇಂತಹದೆ ದುಷ್ಕೃತ್ಯವನ್ನು ಮಂಗಳೂರಿನಲ್ಲಿ ನಡೆಸಲಾಗಿತ್ತು.

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ| Read More »

ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ|

ಮಂಗಳೂರು: ‘ತುಳು ಸಿನಿಮಾ’ ಎಂದ ತಕ್ಷಣ ನೆನಪಾಗುವುದು ಮಂಗಳೂರಿನ ಹೃದಯಭಾಗದಲ್ಲಿದ್ದ ‘ಜ್ಯೋತಿ’ ಚಿತ್ರಮಂದಿರ. ಎಲ್ಲರ ಅಚ್ಚುಮೆಚ್ಚಿನ ಈ ಥಿಯೇಟರ್‌ ಕೋವಿಡ್‌ ಲಾಕ್‌ಡೌನ್‌ ಬಳಿಕ ನೆನಪಿನಂಗಳಕ್ಕೆ ಜಾರಿದೆ. ಬಹುತೇಕ ತುಳು ಸಿನಿಮಾಗಳ ಸೋಲು- ಗೆಲುವಿನಲ್ಲಿ ಪಾಲು ಪಡೆದ ಈ ಒಂಟಿ ಪರದೆ ಮರೆಯಾಗಿರುವುದು ತುಳು ಚಿತ್ರರಂಗಕ್ಕೆ ದೊಡ್ಡ ಹೊಡೆತ. 50 ವರ್ಷಗಳ ಕಾಲ ನಾನಾ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದ ‘ಜ್ಯೋತಿ’, ನಗರದ ಪ್ರಮುಖ ವೃತ್ತವೊಂದರ ಹೆಸರಾಗಿದೆ. ಚಿತ್ರಮಂದಿರದ ಮುಂದಿನ ವೃತ್ತವನ್ನೇ ಜನರು ‘ಜ್ಯೋತಿ’ ವೃತ್ತ ಎನ್ನುತ್ತಿದ್ದರು. ಹೀಗೆ ಕೋಸ್ಟಲ್‌ವುಡ್‌

ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ| Read More »

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ

ಸುಬ್ರಹ್ಮಣ್ಯ: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್‌ ನಝೀರ್‌ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭಾನುವಾರ ರಾತ್ರಿ ಆಗಮಿಸಿ ವಾಸ್ತವ್ಯ ಹೂಡಿದರು. ಸೋಮವಾರ ಬೆಳಗ್ಗೆ ಶ್ರೀ ದೇವಳಕ್ಕೆ ಆಗಮಿಸಿದ ಅವರು, ಶ್ರೀ ದೇವರ ದರುಶನ ಪಡೆದರು. ಬಳಿಕ ಪವಿತ್ರ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಸೋಮವಾರ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯವಾಗಿರುವ ನ್ಯಾಯಧೀಶರು ಇಂದು ಇಲ್ಲಿಂದ ನಿರ್ಗಮಿಸಲಿದ್ದು, ಬಳಿಕ ಜಿಲ್ಲೆಯ ವಿವಿಧೆಡೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ Read More »

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ

ಸುಳ್ಯ: ಇಲ್ಲಿನ ಪೈಚಾರು-ಸೋಣಂಗೇರಿ‌ ರಸ್ತೆಯ ಹೊಸಗದ್ದೆ ಎಂಬಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಮತ್ತೆಯಾಗಿದೆ. ರಸ್ತೆ ಬದಿಯಲ್ಲಿ ‌ಹೆಲ್ಮೆಟ್ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ಇಂದು ಮುಂಜಾನೆ ಕೊಳೆತ ವಾಸನೆ ಬರುತ್ತಿದ್ದು, ಪರಿಶೀಲನೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ‌ ಪೊಲೀಸರು ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ Read More »