ಕರಾವಳಿ

ಮರೆಯಲಾಗದ ಮಹಾಪತನ : ಮಂಗಳೂರು ‌ವಿಮಾನ ದುರಂತದ ಕಹಿನೆನಪು

ಬೆಳಿಗ್ಗೆ 5.30 ರ ಸಮಯ ಇರಬಹುದು. ವಿಮಾನದ ಪೈಲಟ್‌ ಇನ್ನು ಅರ್ಧ ಗಂಟೆಯಲ್ಲಿ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ ಎಂದು ಘೋಷಣೆ ಮಾಡಿದರು. ಇನ್ನೇನು ತವರು ನೆಲ ಬಂದೇ ಬಿಟ್ಟಿತು ಎನ್ನುವ ಸಂತಸದಲ್ಲಿದ್ದ ವಿಮಾನ ಪ್ರಯಾಣಿಕರ ಜೀವನದಲ್ಲಿ ಬಹುದೊಡ್ಡ ದುರಂತ ನಡೆದೇ ಹೋಯಿತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಮೇ 22 (ಇಂದು)ರಂದು 11 ವರ್ಷ ಪೂರ್ಣವಾಗುತ್ತಿದೆ. ದೇಶದ ನಾಗರಿಕ ವಿಮಾನಯಾನದ ಇತಿಹಾಸದಲ್ಲಿ ಇದು ಎಂದೆಂದೂ […]

ಮರೆಯಲಾಗದ ಮಹಾಪತನ : ಮಂಗಳೂರು ‌ವಿಮಾನ ದುರಂತದ ಕಹಿನೆನಪು Read More »

ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು, ಮೇ ೨೧: ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್ ಸವಾರನಿಗೆ  ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮಧು ಕೆ. ಮೃತ ಸೈಕಲ್ ಸವಾರ ಎಂದು ಗುರುತಿಸಲಾಗಿದೆ. ಈತ ಹೈರೇಂಜ್ ಸೆಕ್ಯುರಿಟಿ ಸರ್ವಿಸಸ್‌ನ ಉದ್ಯೋಗಿ ಎಂದು ತಿಳಿದುಬಂದಿದೆ.ಈತ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಅತೀ ವೇಗವಾಗಿ, ಅಜಾಗರೂಕತೆಯಿಂದ ಧಾವಿಸಿ ಬಂದ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದ್ದು. ಇದರಿಂದ ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ

ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು Read More »

ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು. ಮೇ20: ಕೊರೊನಾ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹೊಸ ನಿಯಮ ಹೊರಡಿಸಿರುವುದಾಗಿ ಕೆಲವು ನ್ಯೂಸ್ ವೆಬ್ಸೈಟ್ ಗಳು ತಪ್ಪು ವರದಿ ಮಾಡಿರುವ ಬಗ್ಗೆ ಇದೀಗ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ” ದ.ಕ.ಜಿಲ್ಲೆಯಾದ್ಯಂತ ಕೆಲವು ನಿರ್ಬಂಧಗಳೊಂದಿಗೆ ಹೊಸ ಮಾರ್ಗಸೂಚಿ ಜಾರಿಯಾಗುತ್ತದೆ, ವಾರದಲ್ಲಿ ಎರಡು ದಿನ ಮಾತ್ರ ಸಾಮಾಗ್ರಿ ಖರೀದಿಗೆ ಅವಕಾಶ ನೀಡಲಾಗುತ್ತದೆ, ಮೇ. 24 ರಿಂದ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಹಾಗೂ ವೆಬ್ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿತ್ತು. ಈ ಬಗ್ಗೆ ತಕ್ಷಣ

ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ Read More »

ಕೋವಿಡ್ ನಿಯಮ ಉಲ್ಲಂಘನೆ: ಡಾ. ಕಕ್ಕಿಲಾಯ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಮೇ 19: ಇಲ್ಲಿನ ಸೂಪರ್ ಮಾರ್ಕೆಟ್ ಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕದ್ರಿಯಲ್ಲಿ ಕಾರ್ಯಾಚರಿಸುತ್ತಿರುವ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಯಲ್ಲಿ ಕಕ್ಕಿಲಾಯ ವಿರುದ್ಧ ದೂರು ನೀಡಿದ್ದಾರೆ. ಮೇ 18ರ ಬೆಳಗ್ಗೆ ಮಾರ್ಕೆಟ್ ಗೆ ಬಂದಿದ್ದ ವೈದ್ಯರು ಅಲ್ಲಿನ ಸಿಬ್ಬಂದಿ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು

ಕೋವಿಡ್ ನಿಯಮ ಉಲ್ಲಂಘನೆ: ಡಾ. ಕಕ್ಕಿಲಾಯ ವಿರುದ್ದ ಪ್ರಕರಣ ದಾಖಲು Read More »

ತೌಕ್ತೆ ಬಳಿಕ ಬರುತ್ತಿದೆ ಯಾಸ್ ಚಂಡಮಾರುತ..!

ನವದೆಹಲಿ: ಒಂದು ಚಂಡಮಾರುತ ತಂದಂತಹ ಅವಾಂತರವೇ ಇನ್ನು ಮುಗಿದಿಲ್ಲ. ಅಷ್ಟರಲ್ಲೇ ಇದೀಗ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ಮೊದಲನೆಯ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದರೆ ಇದು ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿದೆ. ಮೇ 23ರಂದು ಹೊಸ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಅದಕ್ಕೆ ಯಾಸ್ ಎಂದು  ಹೆಸರಿಡಲು ತೀರ್ಮಾನಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಈ ಚಂಡಮಾರುತ ಮ್ಯಾನ್ಮಾರ್ ಕಡೆ ತೆರಳುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಇದೀಗ ಚಂಡಮಾರುತ ಸೃಷ್ಟಿಗೆ  ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತೌಕ್ತೆ ಬಳಿಕ ಬರುತ್ತಿದೆ ಯಾಸ್ ಚಂಡಮಾರುತ..! Read More »

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? !

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬತ್ತಿದೆ. ಜಿಲ್ಲೆಯಲ್ಲಿ 6 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ಶಂಕಿತ ಈಗಾಗಲೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಇನ್ನೂಳಿದ ಸೋಂಕಿತರು ಸದ್ಯ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? ! Read More »

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು

ಕಾರ್ಕಳ, ಮೇ.18: ರಾಜ್ಯ ಸರಕಾರ  ಹಾಗೂ ಜಿಲ್ಲಾಡಳಿತವು ಹೊರಡಿಸಿದ ಕೊರೊನಾ ಕರ್ಫ್ಯೂ  ಮಾರ್ಗಸೂಚಿಯನ್ನು ಉಲ್ಲಂಘಿಸಿ  ವ್ಯಾಪಾರದಲ್ಲಿ ತೊಡಗಿಸಿದ ವ್ಯಾಪಾರಿಯೊಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಸಾಣೂರು ಗ್ರಾಮದ ಕುಂಟಲ್ಪಾ‌ಡಿ ನಿವಾಸಿ ಪ್ರಕಾಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರು ಕುಂಟಲ್ಪಾಡಿಯಲ್ಲಿ ತನ್ನ ಮಾಲಕತ್ವದಲ್ಲಿರುವ ಅಂಗಡಿಯನ್ನು ಸಂಜೆ 6:30ಕ್ಕೆ ತೆರೆದು ವ್ಯಾಪಾರ ನಡೆಸುತಿದ್ದರು. ಈ  ಬಗ್ಗೆ  ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆ ಬಳಿಕ ಅಂಗಡಿಯನ್ನು ಮುಚ್ಚಿಸಿ ಆರೋಪಿ ಪ್ರಕಾಶ್ ವಿರುದ್ಧ ಪ್ರಕರಣದ ದಾಖಲಿಸಿಕೊಂಡಿದ್ದಾರೆ.

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು Read More »

ಪಡಿತರದಲ್ಲಿ ಕರಾವಳಿ ಜನರಿಗೆ ಸಿಗುತ್ತೆ ಕೆಂಪು ಕುಚಲಕ್ಕಿ!

ಮಂಗಳೂರು, ಮೇ 18: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಭಾಗದ ಜನ ಊಟಕ್ಕೆ ಬಳಸುವ ಕೆಂಪು ಕುಚಲಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ಪೂರೈಸಲು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆಯಲ್ಲಿ ಸಚಿವರು ಈ ವಿಷಯ ತಿಳಿಸಿದ್ದು, ಕೆಂಪು ಕುಚ್ಚಲಕ್ಕಿಯನ್ನು ಸ್ಥಳೀಯ ಗಿರಣಿಗಳ ಮೂಲಕ ಸಂಸ್ಕರಿಸಿ ಪಡಿತರ ಅಂಗಡಿಗಳ ಮೂಲಕ ಗುಣಮಟ್ಟದ ಅಕ್ಕಿ ವಿತರಿಸಲು ಸರ್ಕಾರ ಅಗತ್ಯ ಯೋಜನೆ ರೂಪಿಸುತ್ತಿದೆ. ದಕ್ಷಿಣ ಕನ್ನಡ

ಪಡಿತರದಲ್ಲಿ ಕರಾವಳಿ ಜನರಿಗೆ ಸಿಗುತ್ತೆ ಕೆಂಪು ಕುಚಲಕ್ಕಿ! Read More »

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ: ಕಳೆದು ಎರಡು ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (೨೪) ಮೃತಪಟ್ಟ ಯುವಕ. ಮಾ.೧೦ ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯವಾಗಿದ್ದು, ಅವರು ಕೋಮಾ ಅವಸ್ಥೆಯಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..?

ಅಮೆರಿಕಾದ ಫ್ಲೋರಿಡಾದಲ್ಲಿ ನಡೆದ 69ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉದ್ಯಾವರ ಮೂಲದ ಆ್ಯಡ್ಲಿನ್ ಕ್ಯಾಸ್ಟೆಲಿನೋ ಮೂರನೇ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. 22ರ ಹರೆಯದ ಆ್ಯಡ್ಲಿನ್ ಕ್ಯಾಸ್ಟೆಲಿನೋ, ಉದ್ಯಾವರ ಮೂಲದ ಅಲ್ಫೋನ್ಸಸ್ ಕ್ಯಾಸ್ಟೆಲಿನೊ ಮತ್ತು ಮೀರಾ ಕ್ಯಾಸ್ಟೆಲಿನೊ ದಂಪತಿ ಪುತ್ರಿ. ವಿವಿಧ ಆನ್‌ಲೈನ್ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದ ಅವರು, 2020ರಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ನೇರವಾಗಿ ಮಿಸ್ ಯೂನಿವರ್ಸ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದರು. ಕುವೈತ್ ನಲ್ಲಿ ಹುಟ್ಟಿ ಬೆಳೆದು, ಮುಂಬೈನಲ್ಲಿ ಪ್ರೌಢ

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..? Read More »