ಕರಾವಳಿ

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು|

ಸುಳ್ಯ: ರೈಲು ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಂಗಳೂರು – ಬೆಂಗಳೂರು ರೈಲಿನಲ್ಲಿ ಸಂಚರಿಸುತ್ತಿರುವ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಆರೋಪಿ ಸುಳ್ಯದ ಯುವಕನನ್ನು ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು – ಬೆಂಗಳೂರು ಸಂಚರಿಸುವ ರೈಲಿನಿಂದ ಸುಳ್ಯದ ಕಲ್ಲುಮುಟ್ಲು ನಿವಾಸಿ 19 ವರ್ಷದ ಯುವಕ ಅಬ್ದುಲ್ ಅಜೀಜ್ ಎಂಬುವವನು ಮಂಗಳೂರು ರೈಲ್ವೆ ಪೊಲೀಸರು ಬಂದಿಸಿರುವುದಾಗಿ ತಿಳಿದುಬಂದಿದೆ. ಪ್ರಯಾಣಿಕರು ನಿದ್ರೆಯಲ್ಲಿರುವ ಸಂದರ್ಭದಲ್ಲಿ ಕಳವುಗೈಯುತ್ತಿದ್ದ ಎಂದು ವಿಚಾರಣೆ ವೇಳೆ […]

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು| Read More »

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!?

ಕಡಬ: ಚಿರತೆ ಮರಿಯನ್ನೇ ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಈ ಘಟನೆ ‌ನಡೆದಿದ್ದು ಇಂದು ಬೆಳಿಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ. ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!? Read More »

ಮಂಗಳೂರು: ಕ್ರಿಸ್ಮಸ್ ಹಬ್ಬಕ್ಕೆ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌- 19 ರೂಪಾಂತರಿ ಒಮಿಕ್ರಾನ್‌ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಯನ್ನು ಕೋವಿಡ್‌ ಸಮುಚಿತವರ್ತನೆ ಅನುಸರಿಸಿ ಆಚರಿಸಬೇಕು. ಕ್ರಿಸ್ಮಸ್‌ ಆಚರಣೆ ಅಥವಾ ಪ್ರಾರ್ಥನೆ ನಡೆಸಲು ಯಾವುದೇ ಸಾರ್ವಜನಿಕ ಸ್ಥಳ, ರಸ್ತೆ ಅಥವಾ ಉದ್ಯಾನವನ ಬಳಸುವಂತಿಲ್ಲ ಎಂದು ತಿಳಿಸಿದ್ದಾರೆ. ಕ್ಲಬ್‌, ಪಬ್‌, ರೆಸ್ಟೋರೆಂಟ್‌, ಹೋಟೆಲ್‌, ಉದ್ಯಾನವನ ಅಥವಾ

ಮಂಗಳೂರು: ಕ್ರಿಸ್ಮಸ್ ಹಬ್ಬಕ್ಕೆ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ Read More »

ಸುಳ್ಯ: ಸಿನಿಮೀಯ ಶೈಲಿಯಲ್ಲಿ ರಿಕ್ಷಾ ದರೋಡೆಗೆ ಯತ್ನ| ಆರೋಪಗಳನ್ನು ಬಂಧಿಸಿದ ಕೇರಳ ಪೊಲೀಸರು|

ಸುಳ್ಯ: ಬಾಡಿಗೆಗೆಂದು ಕೊಂಡೊಯ್ದು ರಿಕ್ಷಾವನ್ನು ನಂತರ ಚಾಲಕನಿಗೆ ಥಳಿಸಿ ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕ ಘಟನೆ ಸುಳ್ಯದಲ್ಲಿ ನಡೆದಿದೆ. ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದರು. ಆಟೋ ಅಡ್ಪಂಗಾಯದ ಬಳಿ ತಲುಪುತ್ತಿದ್ದಾಗ ಆಟೋದಲ್ಲಿದ್ದ ವ್ಯಕ್ತಿ ಏಕಾಏಕಿ ಆಟೋ ಚಾಲಕ ಹುಸೈನ್ ಮೇಲೆ ಹಲ್ಲೆ ಮಾಡಿದ್ದಾರೆ. ಆ ಬಳಿಕ ಆಟೋಚಾಲಕನ ಬಳಿಯಲ್ಲಿದ್ದ ಮೊಬೈಲ್ ಹಾಗೂ ಹಣವನ್ನು ಕಿತ್ತು ಕೇರಳದ ಕಡೆಗೆ ಆಟೋ ಸಮೇತ ಪರಾರಿಯಾಗಿದ್ದಾನೆ. ಘಟನೆ ತಿಳಿದ ಸ್ಥಳೀಯರು ಆದೂರು ಪೊಲೀಸ್ ಠಾಣೆಗೆ

ಸುಳ್ಯ: ಸಿನಿಮೀಯ ಶೈಲಿಯಲ್ಲಿ ರಿಕ್ಷಾ ದರೋಡೆಗೆ ಯತ್ನ| ಆರೋಪಗಳನ್ನು ಬಂಧಿಸಿದ ಕೇರಳ ಪೊಲೀಸರು| Read More »

ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ|

ಸುಳ್ಯ: ರಾಜ್ಯದಲ್ಲಿ ಹೆಚ್ಚಿನ ಪ್ರಯಾಣಿಕರು ಸಂಪರ್ಕಿಸುವ ರೈಲು ನಿಲ್ದಾಣಗಳ ಸಾಲಿನಲ್ಲಿ ಬರುವ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕುಂಠಿತವಾಗಿ ಪ್ರಯಾಣಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಸಿದ್ಧ ಯಾತ್ರಾ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರೈಲುಮಾರ್ಗದ ಮುಖಾಂತರ ಆಗಮಿಸುವ ಪ್ರವಾಸಿಗರು ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಾಗುತ್ತದೆ. ಆದರೆ ಸರಿಯಾದ ಮೂಲಸೌಕರ್ಯ ಇರದ ಕಾರಣಕ್ಕೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ. ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ

ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ| Read More »

ಬೆಳ್ತಂಗಡಿ: ಪತ್ನಿಯನ್ನು ತವರಿಗೆ ಕಳುಹಿಸಿ ಪತಿ ಹೋಗಿದ್ದೆಲ್ಲಿಗೆ?| ಅನುಮಾನಗೊಂಡ ಪತ್ನಿಯಿಂದ ದೂರು|h

ಬೆಳ್ತಂಗಡಿ. ಹೆಂಡತಿ ತವರು ಮನೆಗೆ ಹೋಗಿದ್ದ ಸಂದರ್ಭ ಪತಿಯೋರ್ವ ಇದ್ದಕ್ಕಿದ್ದಂತೆ ಕಾಣೆಯಾದ ಘಟನೆ ತಾಲೂಕಿನ ಕುವೆಟ್ಟು ಎಂಬಲ್ಲಿ ನಡೆದಿದೆ. ಗ್ರಾಮದ ಸುನ್ನತ್ ಕರೆಯ ಸಂಶುದ್ದೀನ್ ಎಂಬಾತನೇ ಮನೆಬಿಟ್ಟು ಹೋದ ವ್ಯಕ್ತಿ ಪತ್ನಿ ಹಾಗೂ ಎರಡು ಗಂಡು ಮಕ್ಕಳೊಂದಿಗೆ ವಾಸವಾಗಿದ್ದ ಸಂಶುದ್ದೀನ್ ನ ಪತ್ನಿ ಸುಮಾರು ಎರಡು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದು ಪ್ರತೀದಿನ ಪತಿಯೊಂದಿಗೆ ಫೋನ್ ಮೂಲಕ ಮಾತನಾಡುತ್ತಿದ್ದರು ಎನ್ನಲಾಗಿದೆ. ಡಿ.‌ 18ರಂದು ಪತಿ ಯಾವುದೇ ಕರೆ ಮಾಡದೇ ಇದ್ದು, ಡಿ. 19 ರಂದು ಪತ್ನಿ

ಬೆಳ್ತಂಗಡಿ: ಪತ್ನಿಯನ್ನು ತವರಿಗೆ ಕಳುಹಿಸಿ ಪತಿ ಹೋಗಿದ್ದೆಲ್ಲಿಗೆ?| ಅನುಮಾನಗೊಂಡ ಪತ್ನಿಯಿಂದ ದೂರು|h Read More »

ಸುಳ್ಯ: ಸ್ವಂತ ಅಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದ ಮಾಜಿ ಗ್ರಾ.ಪಂ ಸದಸ್ಯನ ಶವ

ಸುಳ್ಯ : ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ತನ್ನ ಅಂಗಡಿಯ ಕೋಣೆಯೊಳಗಡೆ ಮಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ರವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಭೋಜಪ್ಪರವರು ಅಡ್ತಲೆಯಲ್ಲಿ ಅಂಗಡಿ ನಡೆಸುತ್ತಿದ್ದು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡಿರುವುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಭವಾನಿ, ಪುತ್ರಿ ರಕ್ಷಾ, ಪುತ್ರ ಯತಿನ್ ರನ್ನು ಅಗಲಿದ್ದಾರೆ.

ಸುಳ್ಯ: ಸ್ವಂತ ಅಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದ ಮಾಜಿ ಗ್ರಾ.ಪಂ ಸದಸ್ಯನ ಶವ Read More »

ಸುಳ್ಯ: ಅಮಲಿಗಾಗಿ ಫೆವಿಕಾಲ್ ವಾಸನೆಯ ಸೇವನೆ| ಅಪ್ರಾಪ್ತರ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು|

ಸುಳ್ಯ: ಇಲ್ಲಿನ ಜಯನಗರ ಮನೆಯೊಂದರಲ್ಲಿ ಸುಮಾರು 9, 10, ವರ್ಷದ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ವರದಿಯಾಗಿದೆ. ಅಮಲಿಗಾಗಿ ಅಪ್ರಾಪ್ತ‌ ಬಾಲಕರು ಮಾದಕ ನಶೆಯ ಮೊರೆ ಹೋಗಿದ್ದಾರೆಂದು ಹೇಳಲಾಗುತ್ತಿದ್ದು, ಬಾಲಕರನ್ನು ವಿಚಾರಣೆ ಮಾಡಿದ ಪೊಲೀಸರು ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿ ತಿಳಿಹೇಳಿ ಕಳಿಸಿರುವುದಾಗಿ ತಿಳಿದುಬಂದಿದೆ. ಸುಳ್ಯ ನಗರದ ಹಲವೆಡೆ ಗೌಪ್ಯವಾಗಿ ಮಾದಕ ನಶೆಯ ನಂಟು ಹೆಚ್ಚಾಗುತ್ತಿದ್ದು, ಅಪ್ರಾಪ್ತ ಮಕ್ಕಳು ಈ

ಸುಳ್ಯ: ಅಮಲಿಗಾಗಿ ಫೆವಿಕಾಲ್ ವಾಸನೆಯ ಸೇವನೆ| ಅಪ್ರಾಪ್ತರ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು| Read More »

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್

ಮಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ಮಂಗಳೂರಿನ ಸಂದೇಶ್‌ ನೀರುಮಾರ್ಗ ಅವರು ರನ್ನರ್‌ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಅಂತಿಮ ಹಂತ ತಲುಪಿದ್ದ 6 ಸ್ಪರ್ಧಿಗಳ ಪೈಕಿ ನಾಲ್ವರು ಫೈನಲ್‌ ಪ್ರವೇಶಿಸಿದ್ದರು. ಅದರಲ್ಲಿ ಸಂದೇಶ್‌ ಮೊದಲಿಗರು. ಕೊನೆಯ ಎರಡು ಸ್ಥಾನದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ಚಿನ್ಮಯ್‌ ಅವರು ಪಡೆದರೆ ಎರಡನೇ ಸ್ಥಾನ ಸಂದೇಶ್‌ ನೀರುಮಾರ್ಗ ಅವರ ಪಾಲಾಗಿದೆ. ಇದರ ಜತೆ 5 ಲಕ್ಷ ರೂ. ನಗದು ಗೆದ್ದಿದ್ದಾರೆ.

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್ Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ಕೊನೆಗೂ ನ್ಯಾಯಾಲಯಕ್ಕೆ ಶರಣಾದ ವಕೀಲ ರಾಜೇಶ್ ಭಟ್|

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಕೊನೆಗೂ ನ್ಯಾಯಾಲಯಕ್ಕೆ ಡಿ.20ರ ಸೋಮವಾರ ಶರಣಾಗಿದ್ದಾನೆ. ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ಕೆ.ಎಸ್‌.ಎನ್‌. ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ. ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ಕೊನೆಗೂ ನ್ಯಾಯಾಲಯಕ್ಕೆ ಶರಣಾದ ವಕೀಲ ರಾಜೇಶ್ ಭಟ್| Read More »