ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು
ಸುಳ್ಯ: ಇಲ್ಲಿನ ಸಮೀಪದ ಪೆರಾಜೆಯ ವ್ಯಕ್ತಿಯೋರ್ವರು 25ರಂದು ತನ್ನ ಮನೆಯ ದುರಸ್ತಿ ಕಾರ್ಯದ ಸಂದರ್ಭ ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಪೆರಾಜೆ ಬಂಗಾರಕೋಡಿಯ ಹರೀಶ್ ಎಂಬ ವ್ಯಕ್ತಿ ತಮ್ಮ ಹಳೆ ಮನೆಯನ್ನು ಕೆಡವಿ ಹೊಸ ಮನೆ ಕಟ್ಟಲು ಜಾಗ ಸಮತಟ್ಟು ಮಾಡಲು ಬಂದ ಜೆಸಿಬಿಯ ಚಾಲಕರಿಗೆ ಕುಡಿಯಲೆಂದು ಬೊಂಡ ತೆಗೆಯಲು ತೆಂಗಿನ ಮರ ಏರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಿಂದ ಆಯತಪ್ಪಿ ಅವರು ಬಿದ್ದು ಗಂಭೀರ ಗಾಯಗೊಂಡರು.
ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು Read More »






