ಕರಾವಳಿ

ಪ್ರೇಮ ಪ್ರಕರಣ| ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ| ಪ್ರಿಯಕರ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್ (25) ನೇಣಿಗೆ ಶರಣಾಗಿದ್ದಾಳೆ. ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮ ಪ್ರಕರಣ| ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ| ಪ್ರಿಯಕರ ಅರೆಸ್ಟ್ Read More »

ಸುಳ್ಯ: ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಚಲಾವಣೆ|ಪೋಷಕರಿಗೆ ದಂಡ ವಿಧಿಸಿದ ಕೋರ್ಟ್‌

ಸುಳ್ಯ: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಕೀ ಕೊಟ್ಟು ಪೋಷಕರು ದಂಡ ಕಟ್ಟಿದ ಘಟನೆ ಸುಳ್ಯದಲ್ಲಿ ನಡೆದಿದೆ. ತಾಲೂಕಿನ ದೇವಚಳ್ಳದ ಅಪ್ರಾಪ್ತ ಬಾಲಕನೋರ್ವ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎನ್ನುವವರು ತನ್ನ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅನುಮತಿ ನೀಡಿದ್ದರು. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ

ಸುಳ್ಯ: ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಚಲಾವಣೆ|ಪೋಷಕರಿಗೆ ದಂಡ ವಿಧಿಸಿದ ಕೋರ್ಟ್‌ Read More »

ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ ದ.ಕ ಡಿಸಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ಬಂಧ ವಿಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು -ತುಮಕೂರು ರಸ್ತೆಯ 75 ಕಿಲೋಮೀಟರ್ ಚಾರ್ಮಾಡಿ ಗ್ರಾಮದಿಂದ ದಕ್ಷಿಣಕನ್ನಡ ಜಿಲ್ಲೆ ಗಡಿವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಡಿಸೆಂಬರ್ 18 ರಿಂದ ಮುಂದಿನ ಆದೇಶದವರೆಗೆ ದಿನದ 24 ಗಂಟೆಗಳ ಕಾಲ ಲಘು, ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ ದ.ಕ ಡಿಸಿ ಡಾ. ರಾಜೇಂದ್ರ ಕೆ.ವಿ Read More »

ಜಿಲ್ಲೆಗೊಂದು ಗೋಶಾಲೆ ಇನ್ನೂ ಪ್ರಾರಂಭವಾಗಿಲ್ಲ| ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ| ಗೋಮಾಂಸ ರಪ್ತು ಕಂಪನಿಗಳ ಪರವಾನಗಿ ‌ರದ್ದು‌ ಮಾಡಿಲ್ಲ| ಸದನದಲ್ಲಿ ಸರ್ಕಾರವನ್ನು ತರಾಟೆಗೆತ್ತಿಕೊಂಡ ಯು.ಟಿ‌ ಖಾದರ್

ಬೆಳಗಾವಿ:‌ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕರ್ನಾಟಕ – ಗೋವಾ ಗಡಿಯಲ್ಲಿ ಇರುವ ಗೋಮಾಂಸ ರಫ್ತು ಕಂಪನಿಗಳ ಪರವಾನಗಿ ರದ್ದು ಯಾಕಿಲ್ಲ? ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ಗೋ ಸಂತತಿ ಜಾಸ್ತಿ ಮಾಡಲು ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನೆ ಎತ್ತಿದರು. ಹೈನುಗಾರಿಕೆಗೆ, ಹಾಲಿಗೆ ಸಂಬಂಧಿಸಿದ ಪ್ರೋತ್ಸಾಹ ಧನ‌ ಜಾಸ್ತಿ ನೀಡಿದರೆ ರೈತರು ಜಾಸ್ತಿ ಗೋವುಗಳನ್ನು ಸಾಕುತ್ತಾರೆ. ಆದರೆ

ಜಿಲ್ಲೆಗೊಂದು ಗೋಶಾಲೆ ಇನ್ನೂ ಪ್ರಾರಂಭವಾಗಿಲ್ಲ| ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ| ಗೋಮಾಂಸ ರಪ್ತು ಕಂಪನಿಗಳ ಪರವಾನಗಿ ‌ರದ್ದು‌ ಮಾಡಿಲ್ಲ| ಸದನದಲ್ಲಿ ಸರ್ಕಾರವನ್ನು ತರಾಟೆಗೆತ್ತಿಕೊಂಡ ಯು.ಟಿ‌ ಖಾದರ್ Read More »

ಮಂಗಳೂರಿಗೂ ಕಾಲಿಟ್ಟ ಓಮಿಕ್ರಾನ್| ಐದು ಮಂದಿಯಲ್ಲಿ ಒಂದೇ ದಿನ ಪತ್ತೆಯಾಯ್ತು ರೂಪಾಂತರಿ ವೈರಸ್|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಕರಾವಳಿಯಲ್ಲಿ ಭೀತಿ ಆವರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ. ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ

ಮಂಗಳೂರಿಗೂ ಕಾಲಿಟ್ಟ ಓಮಿಕ್ರಾನ್| ಐದು ಮಂದಿಯಲ್ಲಿ ಒಂದೇ ದಿನ ಪತ್ತೆಯಾಯ್ತು ರೂಪಾಂತರಿ ವೈರಸ್| Read More »

ಕಡಬ: ಮಲಗಿದ್ದಲ್ಲೇ ಶವವಾದ ನಿವೃತ್ತ ಯೋದ

ಕಡಬ: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ನಿವೃತ್ತ ಸೈನಿಕರೋರ್ವರು ಮನೆಯೊಳಗಡೆ ಮಲಗಿದಲ್ಲೆ ಮೃತಪಟ್ಟಿರುವ ಘಟನೆ ಡಿ.17ರಂದು ನಡೆದಿದೆ. ಮೃತರನ್ನು ಮೂಲತ: ನೂಜಿಬಾಳ್ತಿಲ ಕನ್ವರೆ ಸಮೀಪದ ವೇಳಿಕಲ್ ನಿವಾಸಿ ನಿವೃತ್ತ ಸೈನಿಕ ಯೋಹನ್ನಾನ್(50) ಎಂದು ಗುರುತಿಸಲಾಗಿದೆ. ಯೋಹನ್ನಾನ್ ಅವರು ಕಳೆದ ರಾತ್ರಿಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ಇದ್ದು ಮನೆಯ ಎದುರಿನ ಲೈಟ್ ಹಾಕಲಾಗಿದೆ. ಹಗಲು ವೇಳೆ ಲೈಟ್ ಉರಿಯುತ್ತಿದ್ದು ಚಿಲಕ ಹಾಕಿದ್ದರಿಂದ ಸ್ಥಳೀಯರಿಗೆ ಸಂಶಯ ಬಂದು ಬಾಗಿಲು ತೆಗೆದು ನೋಡಿದಾಗ ಮೃತಪಟ್ಟಿರುವುದು

ಕಡಬ: ಮಲಗಿದ್ದಲ್ಲೇ ಶವವಾದ ನಿವೃತ್ತ ಯೋದ Read More »

ಕರಾವಳಿಗೆ ಕಾಲಿಡ್ತಾ ಒಮಿಕ್ರಾನ್? ಘಾನಾದಿಂದ ಮರಳಿದಾತನಿಗೆ ಕೊರೊನಾ ಪಾಸಿಟಿವ್

ಮಂಗಳೂರು: ಘಾನಾದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಒಮಿಕ್ರಾನ್ ಕರಾವಳಿ ಕರ್ನಾಟಕಕ್ಕೆ ತಲುಪುವ ಆತಂಕ ಎದುರಾಗಿದೆ. ಘಾನಾವನ್ನು ಒಮಿಕ್ರಾನ್‌ಗೆ ‘ಹೈ ರಿಸ್ಕ್’ ದೇಶವೆಂದು ಘೋಷಿಸಲಾಗಿದೆ. ಆಗಮನದ ನಂತರ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾದ ಕ್ಷಿಪ್ರ RTPCR ಮಾದರಿಯು ಪಾಸಿಟಿವ್ ಎಂದು ಕಂಡುಬಂದಿದೆ. ನಂತರ, ದಕ್ಷಿಣ ಕನ್ನಡ ಡೆಪ್ಯೂಟಿ ಕಮಿಷನರ್ ಡಾ. ರಾಜೇಂದ್ರ ಕೆ.ವಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ವಿಮಾನ ನಿಲ್ದಾಣ ಅಧಿಕಾರಿ, ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿ

ಕರಾವಳಿಗೆ ಕಾಲಿಡ್ತಾ ಒಮಿಕ್ರಾನ್? ಘಾನಾದಿಂದ ಮರಳಿದಾತನಿಗೆ ಕೊರೊನಾ ಪಾಸಿಟಿವ್ Read More »

ರಾಜ್ಯದಲ್ಲಿ ಜೋರಾಗ್ತಿದೆ ಒಮೆಕ್ರಾನ್ ಹವಾ| ಕ್ರಿಸ್ಮಸ್‌, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ಸಾಧ್ಯತೆ| ಮತ್ತೆ ಟೈಟ್ ರೂಲ್ಸ್ ಗೆ ಚಿಂತನೆ?

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಆರ್ಭಟ ಮುಂದುವರೆದಿದೆ. ನಿನ್ನೆ ಹೊಸದಾಗಿ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೋನಾದಂತೆ ಒಮಿಕ್ರಾನ್ ವೈರಸ್ ಸೋಂಕು ಕಂಟಕವಾಗುವ ಆತಂಕ ಶುರುವಾಗಿದೆ. ನಿನ್ನೆ ಯುಕೆ ಸೇರಿದಂತೆ ವಿವಿಧ ದೇಶಗಳಲ್ಲಿ ಕರ್ನಾಟಕಕ್ಕೆ ಆಗಮಿಸಿದ್ದಂತ ಐವರು ವಿದೇಶಿಗರಿಗೆ ಓಮಿಕ್ರಾನ್ ವೈರಸ್ ಸೋಂಕು ಇರುವುದು ದೃಢಪಟ್ಟಿತ್ತು. ಒಮೆಕ್ರಾನ್ ನಿಂದಾಗಿ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಸರ್ಕಾರ ಪಾಸ್ ವಿತರಣೆ ಮಾಡುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೋವಿಡ್ ಲಸಿಕೆ

ರಾಜ್ಯದಲ್ಲಿ ಜೋರಾಗ್ತಿದೆ ಒಮೆಕ್ರಾನ್ ಹವಾ| ಕ್ರಿಸ್ಮಸ್‌, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ಸಾಧ್ಯತೆ| ಮತ್ತೆ ಟೈಟ್ ರೂಲ್ಸ್ ಗೆ ಚಿಂತನೆ? Read More »

”ಪುತ್ತೂರು ಕಾಲೇಜಿನ ವಿದ್ಯಾರ್ಥಿನಿಯರೇ ಎಚ್ಚರಿಕೆ” ”ಬ್ಯಾರಿಗಳ ಜೊತೆ ಪೆರ್ಚಿ ಕಟ್ಟುವುದು ಗಮನಿಸುತ್ತಿದ್ದೇವೆ”.. ಕಾಲೇಜು ವಿದ್ಯಾರ್ಥಿಗಳ ಗುರಿಯಾಗಿಸಿ ವಾರ್ನಿಂಗ್ |

ಪುತ್ತೂರು : ಇತ್ತೀಚಿನ ದಿನಗಳಲ್ಲಿ ಹಿಂದೂ ವಿದ್ಯಾರ್ಥಿನಿಯರು ಮುಸ್ಲಿಂ ಯುವಕರ ಜೊತೆ ಸುತ್ತಾಡಲು, ಮಾತನಾಡಲು ಹೋಗಿ ಸಿಕ್ಕಿ ಹಾಕಿಕೊಂಡು ಹಿಂದೂ ಸಂಘಟಕರಿಂದ ಹೊಡೆಸಿಕೊಂಡ ಘಟನೆಗಳು ನಡೆದಿವೆ. ಇಂಥಹ ಪರಿಸ್ಥಿತಿಗಳು ಬಾರದಿರಲು ಹಿಂದೂ ಸಂಘಟನೆಯೊಂದರ ಇನ್ಸ್ಟಾಗ್ರಾಂ ಪೇಜ್ ನಲ್ಲಿ ವಿದ್ಯಾರ್ಥಿನಿಯರಿಗೆ ಎಚ್ಚರಿಕೆಯ ವಿಡಿಯೋ ಒಂದನ್ನು ಹರಿಬಿಟ್ಟಿದ್ದಾರೆ. “ಪುತ್ತೂರು ಕಾಲೇಜಿನ ಹಿಂದೂ ವಿದ್ಯಾರ್ಥಿನಿಯರ ಬಸ್ ಸ್ಟಾಂಡ್ ನಲ್ಲಿ ಬ್ಯಾರಿಗಳ ಅಂಗಡಿಯಲ್ಲಿ ಅವರ ಜೊತೆ ಮಾತಾಡುವುದು, ಪೆರ್ಚಿ ಕಟ್ಟುವುದು ಗಮನಿಸುತಿದ್ದೇವೆ. ನೀವಾಗಿಯೆ ಬದಲಾಗುತ್ತೀರಾ ? ಅಥವಾ ನಾವೇ ನಿಮ್ಮನ್ನು ಬದಲಾಯಿಸಬೇಕಾ ..?

”ಪುತ್ತೂರು ಕಾಲೇಜಿನ ವಿದ್ಯಾರ್ಥಿನಿಯರೇ ಎಚ್ಚರಿಕೆ” ”ಬ್ಯಾರಿಗಳ ಜೊತೆ ಪೆರ್ಚಿ ಕಟ್ಟುವುದು ಗಮನಿಸುತ್ತಿದ್ದೇವೆ”.. ಕಾಲೇಜು ವಿದ್ಯಾರ್ಥಿಗಳ ಗುರಿಯಾಗಿಸಿ ವಾರ್ನಿಂಗ್ | Read More »

ಉಪ್ಪಿನಂಗಡಿ ಗಲಬೆ ಪ್ರಕರಣ| ಪಿಎಫ್ಐ ಕಾರ್ಯಕರ್ತರ ಮೇಲೆ ಕೇಸ್ ಜಡಿದ ಪೊಲೀಸರು|

ಉಪ್ಪಿನಂಗಡಿ: ಇಲ್ಲಿನ ಠಾಣೆಯ ಮುಂಭಾಗ ನಡೆದ ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು 10 ಮಂದಿ ಪಿಎಫ್ಐ ಕಾರ್ಯಕರ್ತರ ಮೇಲೆ ದೂರನ್ನು ಪೊಲೀಸರು ಸ್ವಯಂ ದಾಖಲಿಸಿಕೊಂಡಿದ್ದಾರೆ. ತಾಹಿರ್, ಸಾದಿಕ್, ಅಬ್ದುಲ್ ಮುಬಾರಕ್, ಶರೀನ್, ಮೊಹಮ್ಮದ್ ಜಾಹೀರ್, ಪೈಝಲ್, ಹನೀಫ್, ಕಾಸಿಂ , ಆಸಿಫ್, ತುಪೈಲ್ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಇವರ ವಿರುದ್ಧ ಐಪಿಸಿಯ ವಿವಿಧ ಕಲಂ ಮತ್ತು ಆಸ್ತಿ ನಷ್ಠ ಕಾಯ್ದೆಯಡಿಯಲ್ಲೂ ಕೇಸ್ ದಾಖಲಾಗಿದೆ. ಇವರು ಅಕ್ರಮವಾಗಿ ಠಾಣೆ

ಉಪ್ಪಿನಂಗಡಿ ಗಲಬೆ ಪ್ರಕರಣ| ಪಿಎಫ್ಐ ಕಾರ್ಯಕರ್ತರ ಮೇಲೆ ಕೇಸ್ ಜಡಿದ ಪೊಲೀಸರು| Read More »