ಕರಾವಳಿ

ಪುತ್ತೂರು : ಬಹುನಿರೀಕ್ಷಿತ ಕಿರುಚಿತ್ರ ‘ಯುವ-2’ ವಿನ ಕಿರುದೃಶ್ಯ ಬಿಡುಗಡೆ| ನಟ ಪುನೀತ್ ರಾಜ್ ಕುಮಾರ್ ಗೆ ಅರ್ಪಣೆ ಮಾಡಿದ ಚಿತ್ರತಂಡ

ಪುತ್ತೂರು : ಬಹುನಿರೀಕ್ಷಿತ ಕಿರುಚಿತ್ರ ‘ಯುವ-2’ ಅನ್ನು ನಿರ್ಮಿಸುತ್ತಿರುವ ಪುತ್ತೂರಿನ ತಂಡವು ಹೊಸವರ್ಷದ ಪ್ರಯುಕ್ತ ಈ ಚಿತ್ರದ ಒಂದು ಕಿರುದೃಶ್ಯವನ್ನು Firstfly creations ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದೆ. ಕರ್ನಾಟಕದ ಕಿರುಚಿತ್ರ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಕಥಾಹಂದರದ ಮೂಲಕ ಹೊಸ ದಾಖಲೆ ನಿರ್ಮಿಸುವತ್ತ ಪುತ್ತೂರಿನ ಈ ತಂಡ ಮುನ್ನಡೆಯುತ್ತಿದೆ. ಯುವ-2 ಈಗಾಗಲೇ ಚಿತ್ರೀಕರಣ ಹಂತದಲ್ಲಿದ್ದು, ಇನ್ನು ಕೆಲವು ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ. ಕನ್ನಡ ಚಿತ್ರರಂಗದ ಅನುಭವಿ ಕಲಾವಿದರನ್ನು ಒಳಗೊಂಡಿರುವ ಈ ತಂಡವು […]

ಪುತ್ತೂರು : ಬಹುನಿರೀಕ್ಷಿತ ಕಿರುಚಿತ್ರ ‘ಯುವ-2’ ವಿನ ಕಿರುದೃಶ್ಯ ಬಿಡುಗಡೆ| ನಟ ಪುನೀತ್ ರಾಜ್ ಕುಮಾರ್ ಗೆ ಅರ್ಪಣೆ ಮಾಡಿದ ಚಿತ್ರತಂಡ Read More »

ಮಂಗಳೂರು:ಸತ್ಯಕ್ಷೇತ್ರಗಳ ಅಪವಿತ್ರಗೊಳಿಸಿದ ದೇಸಾಯಿಗೆ ಶ್ರದ್ಧಾಂಜಲಿ ‌ಬ್ಯಾನರ್ ಅಳವಡಿಸಿದ ಭಜರಂಗದಳ

ಮಂಗಳೂರು: ದೈವ ದೇವಸ್ಥಾನ ಹಾಗೂ ಮಸೀದಿಗಳ ಕಾಣಿಕೆ ಹುಂಡಿಯಲ್ಲಿ ವಿಕೃತಿ ಮೆರೆದ ಆರೋಪಿಯ ಭಾವಚಿತ್ರ ಹಾಕಿ ಬಜರಂಗದಳದ ಶಾಖೆ ಯವರಿಂದ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರು ಹೊರವಲಯದ ಬೀರಿ ಜಂಕ್ಷನ್ ನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ. ಅದೇ ರೀತಿ ದೇವದಾಸ್ ದೇಸಾಯಿ ಹೆಸರನ್ನು ಡೇವಿಡ್ ದೇಸಾಯಿ ಎಂದು ಬ್ಯಾನರ್ ನಲ್ಲಿ ಬಜರಂಗದಳದವರು ಬರೆಸಿದ್ದಾರೆ. ಮಂಗಳೂರು ನಗರದ ಸುಮಾರು 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ ಆರೋಪಿ ದೇವದಾಸ್ ಕ್ರಿಶ್ಚಿಯನ್ ಧರ್ಮದ ಅನುಯಾಯಿ ಆಗಿದ್ದರು ಎಂದು ತಿಳಿದುಬಂದಿದೆ.

ಮಂಗಳೂರು:ಸತ್ಯಕ್ಷೇತ್ರಗಳ ಅಪವಿತ್ರಗೊಳಿಸಿದ ದೇಸಾಯಿಗೆ ಶ್ರದ್ಧಾಂಜಲಿ ‌ಬ್ಯಾನರ್ ಅಳವಡಿಸಿದ ಭಜರಂಗದಳ Read More »

ನಂದಿನಿ ಹಾಲಿನ ಪ್ಯಾಕೆಟ್ ನಲ್ಲಿ ಪುನೀತ್ ಬಾವಚಿತ್ರ| ಬ್ರಾಂಡ್ ಅಂಬಾಸಿಡರ್ ಗೆ ಗೌರವ ಸಲ್ಲಿಸಿದ ಕೆಎಂಎಪ್

ಬೆಂಗಳೂರು : ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ.ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್​ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು

ನಂದಿನಿ ಹಾಲಿನ ಪ್ಯಾಕೆಟ್ ನಲ್ಲಿ ಪುನೀತ್ ಬಾವಚಿತ್ರ| ಬ್ರಾಂಡ್ ಅಂಬಾಸಿಡರ್ ಗೆ ಗೌರವ ಸಲ್ಲಿಸಿದ ಕೆಎಂಎಪ್ Read More »

ಕುಂದಾಪುರ: “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ”| ಹಾಗಿದ್ರೆ ಡೆತ್ ನೋಟ್ ನಲ್ಲಿ ಏನಿದೆ?

ಕುಂದಾಪುರ: ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಈತ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ವಿಘ್ನೇಶ್ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ

ಕುಂದಾಪುರ: “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡ ಸಾಲ”| ಹಾಗಿದ್ರೆ ಡೆತ್ ನೋಟ್ ನಲ್ಲಿ ಏನಿದೆ? Read More »

ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದಾತನಿಗೆ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್ ವ್ಯಕ್ತಿ

ಮಂಗಳೂರು : ದಕ್ಷಿಣಕನ್ನಡ ಹೆಸರಾಂತ ಹಾಗೂ ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ. ಕೊರಗಜ್ಜ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದ ಆರೋಪದ ಮೇಲೆ ಮಿತ್ರನಗರ ನಿವಾಸಿ ದೇವದಾಸ್ ದೇಸಾಯಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಆ ಆರೋಪಿ ವಿರುದ್ಧ ರೋಶನ್ ಡಿಸೋಜ ಎಂಬವರು ಆಕ್ರೋಶ ವ್ಯಕಪಡಿಸಿದ್ದಾರೆ. ಮಂಗಳೂರು ನಗರದ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ್ದ ಆರೋಪಿ ದೇವದಾಸ್,

ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದಾತನಿಗೆ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್ ವ್ಯಕ್ತಿ Read More »

ಸುಳ್ಯ: ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬೈ ಹುಲ್ಲು ಲಾರಿ

ಸುಳ್ಯ: ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶಿಸಿ ಬೈ ಹುಲ್ಲು ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಜಾಲ್ಸೂರು-ಸುಬ್ರಹ್ಮಣ್ಯ ರಸ್ತೆಯ ಕಂದಡ್ಕ ಎಂಬಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದ್ದು, ಲಾರಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಪಾರ ನಷ್ಟವಾಗಿದೆ.

ಸುಳ್ಯ: ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬೈ ಹುಲ್ಲು ಲಾರಿ Read More »

ಹೊಸ ವರ್ಷಾಚರಣೆ ಹಿನ್ನಲೆ: ಅವಳಿ ಜಿಲ್ಲೆಗಳ ಬೀಚ್ ಗಳಿಗೆ ಸಂಜೆ ಪ್ರವೇಶ ನಿಷೇಧ

ಮಂಗಳೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್‌ ಸೇರಿದಂತೆ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಜನ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ.‌ ಆದರೆ

ಹೊಸ ವರ್ಷಾಚರಣೆ ಹಿನ್ನಲೆ: ಅವಳಿ ಜಿಲ್ಲೆಗಳ ಬೀಚ್ ಗಳಿಗೆ ಸಂಜೆ ಪ್ರವೇಶ ನಿಷೇಧ Read More »

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ|

ಸುಳ್ಯ: ಇಲ್ಲಿನ ಗೂನಡ್ಕದ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಆಡಳಿತ ಮಂಡಳಿಯ ಸದಸ್ಯನೋರ್ವ ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರನೆಯ ತರಗತಿಯ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಘಟನೆಯಿಂದ ಬಾಲಕನ ಬೆನ್ನು ಮತ್ತು ಕಾಲಿನ ಭಾಗಗಳಿಗೆ ಏಟಾಗಿದ್ದು, ಗಾಯಗಳು ಕಂಡುಬರುತ್ತಿದೆ. ವಿದ್ಯಾರ್ಥಿ ಶಾಲೆ ಬಿಟ್ಟು ಮನೆಗೆ ತೆರಳಿ ಬಟ್ಟೆ ಬದಲಿಸುವ ವೇಳೆ ಈ ಗಾಯದ ಗುರುತು ಕಾಣಿಸಿದ್ದು ವಿದ್ಯಾರ್ಥಿಯ ತಾಯಿ ಕೇಳಿದಾಗ ಮೊದಲು ಸತ್ಯವನ್ನು ಹೇಳಲು ಹಿಂಜರಿದಿದ್ದು, ಒತ್ತಾಯಿಸಿದಾಗ ಘಟನೆಯ

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ವಿದ್ಯಾರ್ಥಿಗೆ ಹಲ್ಲೆ| ಮನಬಂದಂತೆ ಥಳಿಸಿದ ಆಡಳಿತ ಮಂಡಳಿಯ ಸದಸ್ಯ| Read More »

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು

ಕುಂದಾಪುರ: ಇಲ್ಲಿನ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಟಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್‌ಐ ಸಂತೋಷ್ ಬಿ.ಪಿ‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಈ‌ ಬಗ್ಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು‌ ಮಾಹಿತಿ ನೀಡಿದ್ದು, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್‌ಐ ಅವರನ್ನು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಯವರು ಅಮಾನತು ಮಾಡಿದ್ದಾರೆ

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್| ಪಿಎಸ್ಐ ಅಮಾನತು Read More »

ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್

ಮಂಗಳೂರು:: ಪತ್ರಕರ್ತರು ಬಳಸುವ ಭಾಷೆ ಶುದ್ಧ, ಸರಳವಾಗಿದ್ದಾಗ ವರದಿಗಳು ಜನ ಸಮುದಾಯವನ್ನು ಸುಲಭವಾಗಿ ತಲುಪಲು ಸಾಧ್ಯ. ಇದಕ್ಕೆ ತಿಳಿದುಕೊಳ್ಳುವ ಆಸಕ್ತಿ ಜತೆ ಅಧ್ಯಯನ ಶೀಲತೆ ಅತೀ ಅಗತ್ಯ ಎಂದು ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅಭಿಪ್ರಾಯಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದಜಿಲ್ಲಾ ಪತ್ರಕರ್ತರ ಸಮ್ಮೇಳನ‘ಸಾಧನೆ ಸಂಭ್ರಮ-2021’ ದ ಸರ್ವಾಧ್ಯಕ್ಷರಾಗಿ ಮಾತನಾಡಿದರು.ಭಾಷಾ ಶುದ್ದಿ, ಸರಳ ಭಾಷೆ ಬಗ್ಗೆ ಯುವ ಪತ್ರಕರ್ತರು ಗಮನ ಹರಿಸಬೇಕು ಎಂದು ಹೇಳಿದ ಅವರು ಸಂಘದ ನೇತೃತ್ವದಲ್ಲಿ ಭಾ಼ಷಾ

ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್ Read More »