ಕರಾವಳಿ

ಕಡಬ: ಚೂರಿ ಇರಿತಕ್ಕೆ ವ್ಯಕ್ತಿ ಗಂಭೀರ, ಆರೋಪಿಯ ಬಂಧನ

ಕಡಬ: ಇಲ್ಲಿನ ಸಮೀಪದ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದ ವ್ಯಕ್ತಿ. ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ಬರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಚೂರಿ ಇರಿತಕ್ಕೆ ವ್ಯಕ್ತಿ ಗಂಭೀರ, ಆರೋಪಿಯ ಬಂಧನ Read More »

ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು|

ಕುಂದಾಪುರ: ಕೋಟ ತಟ್ಟು ಗ್ರಾಮದ ಕೊರಗ ಸಮುದಾಯದವರ ಮೆಹೆಂದಿ ಮನೆಗೆ ನುಗ್ಗಿ ಕೋಟ ಠಾಣೆಯ ಪೊಲೀಸರು ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಸೋಮವಾರ ಸಂಜೆ ಕೋಟ ತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದವರೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಡಿಜೆ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯರು 112 ಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಕೋಟ ಪೊಲೀಸರು ಸ್ಥಳಕ್ಕೆ ಹೋಗಿ ಕಾರ್ಯಕ್ರಮದಲ್ಲಿ ಇದ್ದವರಿಗೆ ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಮದುಮಗ

ಕುಂದಾಪುರ: ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ದಾಂಧಲೆ| ಲಾಠಿಚಾರ್ಜ್ ಆರೋಪ ಎದುರಿಸುತ್ತಿರುವ ಕೋಟ ಪೊಲೀಸರು| Read More »

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ|

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಗುಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ. ಮಂಗಳೂರಿನ ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ‌ಗುಡಿಯಲ್ಲಿ ಕಾಂಡೋಮ್ ಹಾಕಿರುವುದು ಇಂದು ಬೆಳಕಿಗೆ ಬಂದಿದೆ. ಕೊರಗಜ್ಜನ ಗುಡಿಯ ಕಲ್ಲಿನ ಮೂರ್ತಿ ಮೇಲೆ ದುಷ್ಕರ್ಮಿಗಳು ಉಪಯೋಗಿಸಿದ ಕಾಂಡೋಮ್ ಹಾಕಿದ್ದಾರೆ. ಈ ವಿಚಾರ ತಿಳಿದ ಭಕ್ತರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವರ್ಷದ ಜನವರಿ ಫೆಬ್ರವರಿ ತಿಂಗಳಿ‌ನಲ್ಲಿಯೂ ಇಂತಹದೆ ದುಷ್ಕೃತ್ಯವನ್ನು ಮಂಗಳೂರಿನಲ್ಲಿ ನಡೆಸಲಾಗಿತ್ತು.

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ| Read More »

ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ|

ಮಂಗಳೂರು: ‘ತುಳು ಸಿನಿಮಾ’ ಎಂದ ತಕ್ಷಣ ನೆನಪಾಗುವುದು ಮಂಗಳೂರಿನ ಹೃದಯಭಾಗದಲ್ಲಿದ್ದ ‘ಜ್ಯೋತಿ’ ಚಿತ್ರಮಂದಿರ. ಎಲ್ಲರ ಅಚ್ಚುಮೆಚ್ಚಿನ ಈ ಥಿಯೇಟರ್‌ ಕೋವಿಡ್‌ ಲಾಕ್‌ಡೌನ್‌ ಬಳಿಕ ನೆನಪಿನಂಗಳಕ್ಕೆ ಜಾರಿದೆ. ಬಹುತೇಕ ತುಳು ಸಿನಿಮಾಗಳ ಸೋಲು- ಗೆಲುವಿನಲ್ಲಿ ಪಾಲು ಪಡೆದ ಈ ಒಂಟಿ ಪರದೆ ಮರೆಯಾಗಿರುವುದು ತುಳು ಚಿತ್ರರಂಗಕ್ಕೆ ದೊಡ್ಡ ಹೊಡೆತ. 50 ವರ್ಷಗಳ ಕಾಲ ನಾನಾ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದ ‘ಜ್ಯೋತಿ’, ನಗರದ ಪ್ರಮುಖ ವೃತ್ತವೊಂದರ ಹೆಸರಾಗಿದೆ. ಚಿತ್ರಮಂದಿರದ ಮುಂದಿನ ವೃತ್ತವನ್ನೇ ಜನರು ‘ಜ್ಯೋತಿ’ ವೃತ್ತ ಎನ್ನುತ್ತಿದ್ದರು. ಹೀಗೆ ಕೋಸ್ಟಲ್‌ವುಡ್‌

ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ| Read More »

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ

ಸುಬ್ರಹ್ಮಣ್ಯ: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್‌ ನಝೀರ್‌ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭಾನುವಾರ ರಾತ್ರಿ ಆಗಮಿಸಿ ವಾಸ್ತವ್ಯ ಹೂಡಿದರು. ಸೋಮವಾರ ಬೆಳಗ್ಗೆ ಶ್ರೀ ದೇವಳಕ್ಕೆ ಆಗಮಿಸಿದ ಅವರು, ಶ್ರೀ ದೇವರ ದರುಶನ ಪಡೆದರು. ಬಳಿಕ ಪವಿತ್ರ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಸೋಮವಾರ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯವಾಗಿರುವ ನ್ಯಾಯಧೀಶರು ಇಂದು ಇಲ್ಲಿಂದ ನಿರ್ಗಮಿಸಲಿದ್ದು, ಬಳಿಕ ಜಿಲ್ಲೆಯ ವಿವಿಧೆಡೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ Read More »

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ

ಸುಳ್ಯ: ಇಲ್ಲಿನ ಪೈಚಾರು-ಸೋಣಂಗೇರಿ‌ ರಸ್ತೆಯ ಹೊಸಗದ್ದೆ ಎಂಬಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಮತ್ತೆಯಾಗಿದೆ. ರಸ್ತೆ ಬದಿಯಲ್ಲಿ ‌ಹೆಲ್ಮೆಟ್ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ಇಂದು ಮುಂಜಾನೆ ಕೊಳೆತ ವಾಸನೆ ಬರುತ್ತಿದ್ದು, ಪರಿಶೀಲನೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ‌ ಪೊಲೀಸರು ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ Read More »

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು|

ಸುಳ್ಯ: ರೈಲು ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಂಗಳೂರು – ಬೆಂಗಳೂರು ರೈಲಿನಲ್ಲಿ ಸಂಚರಿಸುತ್ತಿರುವ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಆರೋಪಿ ಸುಳ್ಯದ ಯುವಕನನ್ನು ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು – ಬೆಂಗಳೂರು ಸಂಚರಿಸುವ ರೈಲಿನಿಂದ ಸುಳ್ಯದ ಕಲ್ಲುಮುಟ್ಲು ನಿವಾಸಿ 19 ವರ್ಷದ ಯುವಕ ಅಬ್ದುಲ್ ಅಜೀಜ್ ಎಂಬುವವನು ಮಂಗಳೂರು ರೈಲ್ವೆ ಪೊಲೀಸರು ಬಂದಿಸಿರುವುದಾಗಿ ತಿಳಿದುಬಂದಿದೆ. ಪ್ರಯಾಣಿಕರು ನಿದ್ರೆಯಲ್ಲಿರುವ ಸಂದರ್ಭದಲ್ಲಿ ಕಳವುಗೈಯುತ್ತಿದ್ದ ಎಂದು ವಿಚಾರಣೆ ವೇಳೆ

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು| Read More »

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!?

ಕಡಬ: ಚಿರತೆ ಮರಿಯನ್ನೇ ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಈ ಘಟನೆ ‌ನಡೆದಿದ್ದು ಇಂದು ಬೆಳಿಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ. ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!? Read More »

ಮಂಗಳೂರು: ಕ್ರಿಸ್ಮಸ್ ಹಬ್ಬಕ್ಕೆ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌- 19 ರೂಪಾಂತರಿ ಒಮಿಕ್ರಾನ್‌ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಯನ್ನು ಕೋವಿಡ್‌ ಸಮುಚಿತವರ್ತನೆ ಅನುಸರಿಸಿ ಆಚರಿಸಬೇಕು. ಕ್ರಿಸ್ಮಸ್‌ ಆಚರಣೆ ಅಥವಾ ಪ್ರಾರ್ಥನೆ ನಡೆಸಲು ಯಾವುದೇ ಸಾರ್ವಜನಿಕ ಸ್ಥಳ, ರಸ್ತೆ ಅಥವಾ ಉದ್ಯಾನವನ ಬಳಸುವಂತಿಲ್ಲ ಎಂದು ತಿಳಿಸಿದ್ದಾರೆ. ಕ್ಲಬ್‌, ಪಬ್‌, ರೆಸ್ಟೋರೆಂಟ್‌, ಹೋಟೆಲ್‌, ಉದ್ಯಾನವನ ಅಥವಾ

ಮಂಗಳೂರು: ಕ್ರಿಸ್ಮಸ್ ಹಬ್ಬಕ್ಕೆ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ Read More »

ಸುಳ್ಯ: ಸಿನಿಮೀಯ ಶೈಲಿಯಲ್ಲಿ ರಿಕ್ಷಾ ದರೋಡೆಗೆ ಯತ್ನ| ಆರೋಪಗಳನ್ನು ಬಂಧಿಸಿದ ಕೇರಳ ಪೊಲೀಸರು|

ಸುಳ್ಯ: ಬಾಡಿಗೆಗೆಂದು ಕೊಂಡೊಯ್ದು ರಿಕ್ಷಾವನ್ನು ನಂತರ ಚಾಲಕನಿಗೆ ಥಳಿಸಿ ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕ ಘಟನೆ ಸುಳ್ಯದಲ್ಲಿ ನಡೆದಿದೆ. ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದರು. ಆಟೋ ಅಡ್ಪಂಗಾಯದ ಬಳಿ ತಲುಪುತ್ತಿದ್ದಾಗ ಆಟೋದಲ್ಲಿದ್ದ ವ್ಯಕ್ತಿ ಏಕಾಏಕಿ ಆಟೋ ಚಾಲಕ ಹುಸೈನ್ ಮೇಲೆ ಹಲ್ಲೆ ಮಾಡಿದ್ದಾರೆ. ಆ ಬಳಿಕ ಆಟೋಚಾಲಕನ ಬಳಿಯಲ್ಲಿದ್ದ ಮೊಬೈಲ್ ಹಾಗೂ ಹಣವನ್ನು ಕಿತ್ತು ಕೇರಳದ ಕಡೆಗೆ ಆಟೋ ಸಮೇತ ಪರಾರಿಯಾಗಿದ್ದಾನೆ. ಘಟನೆ ತಿಳಿದ ಸ್ಥಳೀಯರು ಆದೂರು ಪೊಲೀಸ್ ಠಾಣೆಗೆ

ಸುಳ್ಯ: ಸಿನಿಮೀಯ ಶೈಲಿಯಲ್ಲಿ ರಿಕ್ಷಾ ದರೋಡೆಗೆ ಯತ್ನ| ಆರೋಪಗಳನ್ನು ಬಂಧಿಸಿದ ಕೇರಳ ಪೊಲೀಸರು| Read More »