ಕರಾವಳಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಮೂವರ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮುಡಿಪು ಹತ್ತಿರದ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಗೊಂದಲಮಯ ವಾತಾವರಣ ನಿರ್ಮಾಣವಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಬಾಲಕಿಯ ತಾಯಿ ನೀಡಿರು ದೂರಿನಂತೆ ಪ್ರಕರಣ ದಾಖಲಾಗಿದೆ. ”ಅಪ್ರಾಪ್ತ ವಯಸ್ಸಿನವಳಾಗಿರುವ ಮಗಳಿಗೆ ಆಲ್ಕೋಹಾಲ್ ಕುಡಿಸಿ ಮತ್ತು […]

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಮೂವರ ಬಂಧನ Read More »

ಪರಿಷತ್ ಫಲಿತಾಂಶ| ಕೋಟ ಶ್ರೀನಿವಾಸ ಪೂಜಾರಿ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ವಿಧಾನ ಪರಿಷತ್‍ನ ಏಕೈಕ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು 3,693 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಅವರು ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್‍ನ ಅಭ್ಯರ್ಥಿ ಮಂಜುನಾಥ ಭಂಡಾರಿ 2,077 ಮತಗಳನ್ನು ಪಡೆದಿದ್ದಾರೆ.‌ ಎಸ್‍ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 203 ಮತಗಳನ್ನಷ್ಟೇ ಪಡೆದಿದ್ದಾರೆ. 39 ಮತಗಳು ತಿರಸ್ಕೃತಗೊಂಡಿವೆ

ಪರಿಷತ್ ಫಲಿತಾಂಶ| ಕೋಟ ಶ್ರೀನಿವಾಸ ಪೂಜಾರಿ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು Read More »

ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು

ಸುಳ್ಯ: ತಾಲೂಕಿನಲ್ಲಿ ಸಂಚಾರ ವ್ಯವಸ್ಥೆಗೆ ಮುನ್ನುಡಿ ಬರೆದು ಹೆಸರಾದ ಅವಿನಾಶ್ ಖಾಸಗಿ ಬಸ್ ನ ಮಾಲಕರಾದ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಬಸ್ಸು ವ್ಯವಸ್ಥೆ ಇಲ್ಲದಿದ್ದ ಕಾಲದಲ್ಲಿ ಗ್ರಾಮೀಣ ರಸ್ತೆಗೆ ಖಾಸಗಿ ಬಸ್ ಇಳಿಸಿದ್ದರು. ಅವರ ಈ ಸಾಹಸ ಸುಳ್ಯದ ಸಂಚಾರಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿತ್ತು. ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿ ತೀವ್ರ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು Read More »

ನೆಲ್ಯಾಡಿ: ಲಾರಿ ಮತ್ತು‌ ಬೈಕ್ ನಡುವೆ ಅಪಘಾತ, ಓರ್ವ ಸಾವು, ಮತ್ತೊಬ್ಬ ಗಂಭೀರ

ಉಪ್ಪಿನಂಗಡಿ: ಲಾರಿ ಹಾಗೂ ಬೈಕ್ ಹಾಗೂ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೊಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್ ಹಾಗೂ ಝಾನ್ಸಿ ದಂಪತಿ ಪುತ್ರ ಅಲ್ವಿನ್ (23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಎನ್ನಲಾಗಿದೆ. ಕೊರಿಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸೆಬಿನ್ ಸೋಮವಾರದಂದು ರಾತ್ರಿ ಸೆಬಿನ್

ನೆಲ್ಯಾಡಿ: ಲಾರಿ ಮತ್ತು‌ ಬೈಕ್ ನಡುವೆ ಅಪಘಾತ, ಓರ್ವ ಸಾವು, ಮತ್ತೊಬ್ಬ ಗಂಭೀರ Read More »

ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ|

ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ ಪ್ರದೀಪ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಯತಿನ್ ಗುರುವಾಯನಕೆರೆಯಲ್ಲಿ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ| Read More »

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ| ಆರೋಪಿ ಬಂಧನ

ಬೆಳ್ತಂಗಡಿ: ನಾಲ್ಕನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಆರೋಪಿ ಜಯಾನಂದ ಎಂಬಾತ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಳಿಕ ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ಪೋಷಕರು ಅರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಜಯಾನಂದ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ| ಆರೋಪಿ ಬಂಧನ Read More »

ಉಪ್ಪಿನಂಗಡಿ: ಒಂಟಿ ಮಹಿಳೆ‌ಯ ಮನೆಗೆ ನುಗ್ಗಿ ಹಲ್ಲೆ, ದೂರು

ಬಂಟ್ವಾಳ: ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಶಹನಾಜ್ ಅಬ್ದುಲ್ ರಹಿಮಾನ್ ಎಂಬವರ ಜೊತೆ ಮಾತನಾಡುತ್ತಿದ್ದ ವೇಳೆ ಇಬ್ಬರು ಮಹಿಳೆ ಮತ್ತು ಕೆಲವು ಯುವಕರು ಸೇರಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳಾದ ಹಸೀನಾ ಹಾಗೂ ಅಪ್ರೀದ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಮಹಿಳೆಯ

ಉಪ್ಪಿನಂಗಡಿ: ಒಂಟಿ ಮಹಿಳೆ‌ಯ ಮನೆಗೆ ನುಗ್ಗಿ ಹಲ್ಲೆ, ದೂರು Read More »

ಸುಳ್ಯ: ಹೋರಿ ತಿವಿದು ವ್ಯಕ್ತಿ ಸಾವು

ಸುಳ್ಯ: ಹೋರಿಯೊಂದು ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಲ್ಲಿ ನಡೆದಿದೆ.ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆಗೆ ಹೋರಿಯನ್ನು ಹಟ್ಟಿಗೆ ತರಲು ಕಿಟ್ಟಣ್ಣ ಗೌಡರು ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ.

ಸುಳ್ಯ: ಹೋರಿ ತಿವಿದು ವ್ಯಕ್ತಿ ಸಾವು Read More »

ಮಂಗಳೂರು; ಚಪ್ಪಲಿ‌ ಅಂಗಡಿ ಮಾಲೀಕನಿಂದ ಗ್ರಾಹಕಿ ಜೊತೆ ಅಸಭ್ಯ ವರ್ತನೆ| ಆರೋಪಿಯ ಬಂಧನ|

ಮಂಗಳೂರು: ಚಪ್ಪಲಿ ಖರೀದಿಗೆ ಅಂಗಡಿಗೆ ಬಂದ ಮಹಿಳೆಯ ಮೈಮೇಲೆ ಕೈ ಹಾಕಿ‌ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅಂಗಡಿಯ ಮಾಲೀಕನನ್ನು ಬಂಧಿಸಿರುವ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯೊಂದಕ್ಕೆ ಗ್ರಾಹಕಿಯೊಬ್ಬರು ಚಪ್ಪಲಿ ಖರೀದಿಗಾಗಿ ತೆರಳಿದ್ದರು. ಈ ವೇಳೆ ಅಂಗಡಿಯಲ್ಲಿದ್ದ ಅಂಗಡಿ ಮಾಲಿಕ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು, ಗ್ರಾಹಕಿಗೆ ಆತ ತೋರಿಸಿದ ಚಪ್ಪಲಿ ಇಷ್ಟವಾಗಿರಲಿಲ್ಲ‌. ಆದರೆ ಅಂಗಡಿ ಮಾಲಕ

ಮಂಗಳೂರು; ಚಪ್ಪಲಿ‌ ಅಂಗಡಿ ಮಾಲೀಕನಿಂದ ಗ್ರಾಹಕಿ ಜೊತೆ ಅಸಭ್ಯ ವರ್ತನೆ| ಆರೋಪಿಯ ಬಂಧನ| Read More »

ಮಂಗಳೂರು: ತಡೆಗೋಡೆ ಕುಸಿದು ಮಣ್ಣಿನಡಿ ಹೂತು ಹೋದ ಮಹಿಳೆ ಗಂಭೀರ, ಮಗು ಪಾರು

ಮಂಗಳೂರು: ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ಸಂಭವಿಸಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಕೃಷ್ಣನಗರದಲ್ಲಿ ಮನಪಾದಿಂದ ನಡೆಯುತ್ತಿದ್ದ ಜಲ ಸಿರಿ ಯೋಜನೆ ಕಾಮಗಾರಿ ವೇಳೆ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಉತ್ತರ ಕನ್ನಡ ಮೂಲದ ಕಾರ್ಮಿಕ ಮಹಿಳೆ ಹಾಗೂ ಮಗು ಮಣ್ಣಿನಡಿ ಹೂತು ಹೋಗಿದ್ದರು. ಸ್ಥಳದಲ್ಲಿದ್ದ ಜೆಸಿಬಿ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮಣ್ಣಿನಡಿಯಿಂದ

ಮಂಗಳೂರು: ತಡೆಗೋಡೆ ಕುಸಿದು ಮಣ್ಣಿನಡಿ ಹೂತು ಹೋದ ಮಹಿಳೆ ಗಂಭೀರ, ಮಗು ಪಾರು Read More »